ನಿಗೂಢ ಕಾಡಲ್ಲೊಂದು ಹಾರರ್‌ ಸ್ಟೋರಿ! ಸ್ಕೇರಿ ಫಾರೆಸ್ಟ್


Team Udayavani, Feb 15, 2021, 9:25 AM IST

ನಿಗೂಢ ಕಾಡಲ್ಲೊಂದು ಹಾರರ್‌ ಸ್ಟೋರಿ! ಸ್ಕೇರಿ ಫಾರೆಸ್ಟ್

ಕನ್ನಡದಲ್ಲಿ ಇತ್ತೀಚೆಗೆ ಹಾರರ್‌ – ಥ್ರಿಲ್ಲರ್‌ ಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ತಿಂಗಳು ಅಂಥದ್ದೇ ಮತ್ತೂಂದು ಚಿತ್ರ ” ಸ್ಕೇರಿ ಫಾರೆಸ್ಟ್’ ತೆರೆಗೆ ಬರಲು ರೆಡಿಯಾಗುತ್ತಿದೆ. “ಜೆ.ಪಿ ಎಂಟರ್‌ ಟೈನ್ ಮೆಂಟ್ ವರ್ಲ್ಡ್’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಸ್ಕೇರಿ ಫಾರೆಸ್ಟ್‌’ ಚಿತ್ರದಲ್ಲಿ ಜಯಪ್ರಭು ಆರ್‌. ಲಿಂಗಾಯತ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಚಿತ್ರದಲ್ಲಿ ಟೀನಾ ಪೊನ್ನಪ್ಪ, ಆಮ್‌ ರೀನ್‌, ಕಲ್ಪನಾ ಚಿತ್ರದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ಈಗಾಗಲೇ ಬಹುತೇಕ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿರುವ “ಸ್ಕೇರಿ ಫಾರೆಸ್ಟ್‌’ ಚಿತ್ರ ಇದೇ ಫೆ. 26ಕ್ಕೆ ರಿಲೀಸ್‌ ಆಗಲಿದೆ. ಚಿತ್ರದ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿತು.

ಇದನ್ನೂ ಓದಿ:ಏ.09ಕ್ಕೆ ಅಜೇಯ್‌ ರಾವ್ ‘ಕೃಷ್ಣ ಟಾಕೀಸ್‌’ ಬಿಡುಗಡೆ

ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಾಯಕ ಜಯಪ್ರಭು ಆರ್‌. ಲಿಂಗಾಯತ್‌, “ಕಳೆದ ಹಲವು ವರ್ಷಗಳಿಂದ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದು, ಸಿನಿಮಾ ಕ್ಷೇತ್ರದಲ್ಲಿ ಏನಾದರೂ ಮಾಡಬೇಕು ಎಂಬ ಕನಸು ಈ ಸಿನಿಮಾದ ಮೂಲಕ ಈಡೇರುತ್ತಿದೆ. ಕನ್ನಡ ಮತ್ತು ಹಿಂದಿ ಎರಡೂ ಭಾಷೆಯಲ್ಲೂ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಬಾಲಿವುಡ್‌ನ‌ ಅನೇಕರು ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಇಲ್ಲಿ ನಾನು ಜೈ ಎಂಬ ಕಾಲೇಜು ಸ್ಟುಡೆಂಟ್‌ ಪಾತ್ರ ನಿರ್ವಹಿಸಿದ್ದೇನೆ. ರಿಸರ್ಚ್‌ ಮಾಡಲು ಕಾಡಿಗೆ ಹೋಗುವ ಯುವಕರು ಏನೆಲ್ಲ ವಿಚಿತ್ರಗಳನ್ನು ಅನುಭವಿಸುತ್ತಾರೆ ಎಂಬುದು ಸಿನಿಮಾದ ಕಥೆಯ ಒಂದು ಎಳೆ. ಹಾರರ್‌ ಕಂಟೆಂಟ್‌ ಜೊತೆಗೆ ಟ್ರೈಯಾಂಗಲ್‌ ಲವ್‌ಸ್ಟೋರಿ ಸಿನಿಮಾದಲ್ಲಿದೆ’ ಎಂದು ಚಿತ್ರದ ಕಥಾಹಂದರ ತೆರೆದಿಟ್ಟರು.

ಚಿತ್ರದ ಬಗ್ಗೆ ಮಾತನಾಡಿ ದ ನಾಯಕಿ ಟೀನಾ ಪೊನ್ನಪ್ಪ , “ಈ ಸಿನಿಮಾದಲ್ಲಿ ನಟನೆಗೆ ಹೆಚ್ಚಿನ ಪ್ರಾಧಾನ್ಯತೆ ಇರುವ ಪಾತ್ರ ಸಿಕ್ಕಿದೆ. ಇದು ಲವ್‌ ಜತೆಗೆ ಹಾರರ್‌ ಸಿನಿಮಾ. ಹಿಂದಿ ಜತೆಗೆ ಕನ್ನಡದಲ್ಲಿ ಬರುತ್ತೆ ಅಂದಾಗ ಖುಷಿ ಆಯಿತು. ಚಿತ್ರದ ಶೇ.90 ಭಾಗದ ಶೂಟಿಂಗ್‌ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದಿದೆ’ ಎಂದರು.

ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಬರ್ತ್ ಡೇ ಗೆ ಸಿಡಿಪಿ ರಿಲೀಸ್‌

ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿರುವ “ಸ್ಕೇರಿ ಫಾರೆಸ್ಟ್‌’ ಚಿತ್ರವನ್ನು ಸಂಜಯ್‌ ಅಭೀರ್‌ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಸಂಜಯ್‌ ಅಭೀರ್‌, “ಇದು ಪಕ್ಕಾ ಮನರಂಜಾನಾತ್ಮಕ ಸಿನಿಮಾ, ಹಾರರ್‌, ಕಾಮಿಡಿ, ಲವ್‌, ಸೆಂಟಿಮೆಂಟ್‌ ಎಲ್ಲವನ್ನೂ ಮಿಶ್ರಣ ಮಾಡಿ ಸಿನಿಮಾ ಮಾಡಿದ್ದೇವೆ’ ಎಂದರು.

ಈ ಹಿಂದೆ ಕನ್ನಡದ‌ಲ್ಲಿ “ಪ್ರೇಮಬರಹ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಜೀತ್‌ ರಾಯ್‌ದತ್‌ ಈ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬಂದಿದ್ದು, “ಸ್ಕೇರಿ ಫಾರೆಸ್ಟ್‌’ ಚಿತ್ರದಲ್ಲಿ ಎರಡನೇ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ “ಸ್ಕೇರಿ ಫಾರೆಸ್ಟ್‌’ ಚಿತ್ರದಲ್ಲಿ ಎರಡನೇ ನಾಯಕಿಯಾಗಿ ಕಲ್ಪನಾ, ಯಶ್‌ ಪಾಲ್‌ ಶರ್ಮ, ಬೇಬಿ ಪೂಜಾ ಮೊದಲಾದವರು ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಆದಿ ಹಾಗೂ ಎಲ್.ಕೆ. ಲಕ್ಷ್ಮೀಕಾಂತ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ನರೇನ್‌ ಗೇಡಿಯಾ ಛಾಯಾಗ್ರಹಣ, ರಾಜೇಶ್‌ ಶಾ ಸಂಕಲನವಿದೆ. ಒಟ್ಟಾರೆ “ಸ್ಕೇರಿ ಫಾರೆಸ್ಟ್‌’ ಹೇಗಿದೆ ಅನ್ನೋದು ಇದೇ ಫೆ. 26ಕ್ಕೆ ಗೊತ್ತಾಗಲಿದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.