ಯತ್ನಾಳ್ ಮುಂದೆಯೂ ಹೀಗೆ ಮಾತನಾಡಿ ನೋಡಲಿ, ನಮ್ಮದು ಶಿಸ್ತಿನ ಪಕ್ಷ: ಶಾಸಕ ಶಿವರಾಜ್ ಪಾಟೀಲ್
Team Udayavani, Feb 15, 2021, 1:11 PM IST
ರಾಯಚೂರು: ಬಿಜೆಪಿಯ ಯಾವ ಶಾಸಕರಿಗೂ ಅಸಮಾಧಾನವಿಲ್ಲ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೀಗೆಲ್ಲ ಮಾತನಾಡುವುದನ್ನು ನಿಲ್ಲಿಸಲಿ ಎಂದು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಪಕ್ಷ ಅವರಿಗೆ ನೋಟಿಸ್ ನೀಡಿದೆ. ಪಕ್ಷದಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಅವರು, ಮುಂದಿನ ದಿನಗಳಲ್ಲಿ ಹೀಗೆ ಮಾತಾಡಿ ನೋಡಲಿ. ಏನಾಗುತ್ತದೆ ಎಂದು ಗೊತ್ತಾಗುತ್ತದೆ. ನಮ್ಮದು ಶಿಸ್ತಿನ ಪಕ್ಷ ಎಂದರು.
ಇದನ್ನೂ ಓದಿ:ಶಾಸಕ ಬಸನಗೌಡ ಯತ್ನಾಳ್ ಗೆ ಮತ್ತೆ ಪೊಲೀಸ್ ಭದ್ರತೆ ಆರಂಭ
ಬಿಪಿಎಲ್ ಕಾರ್ಡಿಗೆ ಟಿವಿ, ಫ್ರಿಡ್ಜ್ ಹಾಗೂ ಬೈಕ್ ಮಾನದಂಡ ಆಗಬಾರದು. ನಾನು ಆ ವಿಷಯವನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ. ನನಗೆ ಅದರ ಬಗ್ಗೆ ಸಮಗ್ರ ಮಾಹಿತಿ ಇಲ್ಲ. ಟಿವಿ ಹಾಗೂ ಬೈಕ್ ವಿಲಾಸಿ ವಸ್ತುಗಳಾಗಿ ಉಳಿದಿಲ್ಲ. ಮೊಬೈಲ್, ಟಿವಿ ಹಾಗೂ ಬೈಕ್ ಜೀವನದ ಭಾಗವಾಗಿದೆ. ಹಾಗಾಗಿ ಈ ರೀತಿಯ ಮಾನದಂಡಗಳು ಸರಿ ಅಲ್ಲ. ಇದರ ಬಗ್ಗೆ ನಾನು ವಿರೋಧಿಸುತ್ತೇನೆ ಎಂದು ಡಾ.ಶಿವರಾಜ್ ಪಾಟೀಲ್ ಹೇಳಿದರು .
ಇದನ್ನೂ ಓದಿ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ ಸಿಎಂ ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ