ಬಾಕಿ ಮರುಪಾವತಿ ಹಣ ವಿದ್ಯಾರ್ಥಿಗಳ ಕೈ ಸೇರುತ್ತಿಲ್ಲ

ವಿವಿಯಿಂದ ಬರುವ ಕಾಲೇಜಲ್ಲೇ ಉಳಿಯುತ್ತಿದೆ ಎಂಬ ಆರೋಪ

Team Udayavani, Feb 15, 2021, 2:15 PM IST

ಬಾಕಿ ಮರುಪಾವತಿ ಹಣ ವಿದ್ಯಾರ್ಥಿಗಳ ಕೈ ಸೇರುತ್ತಿಲ್ಲ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯವು ನಿರ್ದಿಷ್ಟ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಮರುಪಾವತಿಗೆನೀಡಬೇಕಾಗಿರುವ ಬಾಕಿ ಹಣವನ್ನುಕಾಲೇಜುಗಳು ತಮ್ಮಲ್ಲೇ ಉಳಿಸಿಕೊಂಡು  ವಿದ್ಯಾರ್ಥಿಗಳಿಗೆ ವಿತರಣೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ವಿವಿ ವ್ಯಾಪ್ತಿಯ ಸ್ನಾತಕೋತ್ತರ ಕಾಲೇಜಿನ ಎಂ.ಕಾಂ. ಕೋರ್ಸ್‌ಗೆ ಪ್ರವೇಶ ಪರೀಕ್ಷೆ ಹಾಗೂ ಕೌನ್ಸೆಲಿಂಗ್‌ಮೂಲಕ ಸೀಟು ಹಂಚಿಕೆ ನಡೆಯುತ್ತದೆ.ಸೀಟು ಪಡೆದ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿ ಮಾಡುತ್ತಾರೆ. ಆನ್‌ ಲೈನ್‌ ಮೂಲಕವೇ ಶುಲ್ಕ ಪಾವತಿಸುವವ್ಯವಸ್ಥೆ ಇರುವುದರಿಂದ ಶುಲ್ಕಪಾವತಿಯ ನಂತರ ವಿವಿಯು ತನ್ನ ಶುಲ್ಕವನ್ನು ಉಳಿಸಿಕೊಂಡು(ವಿವಿಶುಲ್ಕ), ಉಳಿದ ಹಣವನ್ನು ಕಾಲೇಜಿಗೆಶುಲ್ಕ ಮರುಪಾವತಿಗಾಗಿ ನೀಡುತ್ತದೆ.ಹಾಗೆಯೇ ಕಾಲೇಜುಗಳು ದಾಖಲಾತಿವೇಳೆ ವಿದ್ಯಾರ್ಥಿಗಳಿಂದಲೂ ಶುಲ್ಕಪಾವತಿಸಿಕೊಳ್ಳುತ್ತವೆ. ಆದರೆ, ವಿವಿಯಿಂದ ಬರುವ ಮರು ಪಾವತಿ ಹಣವನ್ನು ಮಾತ್ರ ಕೆಲವೊಂದುಕಾಲೇಜುಗಳು ವಿದ್ಯಾರ್ಥಿಗಳಿಗೆ ವಿತರಣೆ ಮಾಡುತ್ತಿಲ್ಲ. ತಮ್ಮಲ್ಲಿಯೇ ಉಳಿಸಿಕೊಳ್ಳುತ್ತಿದ್ದಾರೆ ಎಂದು ಎಂ.ಕಾಂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕಾಲೇಜುಗಳಲ್ಲಿ ಶುಲ್ಕ ಮರುಪಾವತಿ ಮಾಡದೇ ಇರುವ ಬಗ್ಗೆ ವಿವಿ ಸಂಬಂಧ ಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ,ಮಾಹಿತಿ ಸಂಗ್ರಹ ಮಾಡಿದ್ದೇವೆ. ಅದರೆ, ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಸ್ಪಷ್ಟವಾಗಿ ನೀಡುತ್ತಿಲ್ಲ. ಏನೇ ಇದ್ದರೂ ಕಾಲೇಜಿನಲ್ಲೇ ಕೇಳಬೇಕು ಎನ್ನುತ್ತಿದ್ದಾರೆ. ವಿವಿಯಲ್ಲಿ ಈ ಸಂಬಂಧ ಯಾವುದೇ ಬಾಕಿ ಇಲ್ಲ ಎನ್ನುತ್ತಿದ್ದಾರೆ. ಕಾಲೇಜಿನಲ್ಲೂ ಸ್ಪಂದನೆ ಸಿಗುತ್ತಿಲ್ಲ. ವಿವಿ ಶುಲ್ಕಕ್ಕಿಂತ ಹೆಚ್ಚು ಹಣ ಪಾವತಿ ಮಾಡಿದ್ದೇವೆ. ಅದನ್ನು ವಿವಿ ವಾಪಾಸ್‌ ಕಾಲೇಜಿಗೆ ನೀಡುತ್ತಿದೆ. ಆದರೆ, ಕಾಲೇಜಿನಿಂದ ಮಾತ್ರ ನಮಗೆ ಮರುಪಾವತಿ ಆಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ವ್ಯವಸ್ಥೆ:

ಸರ್ಕಾರದಿಂದ ಬರುವ ವಿದ್ಯಾರ್ಥಿ ವೇತನಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ವಿದ್ಯಾರ್ಥಿ ವೇತನಕ್ಕೆಸರ್ಕಾರವೇ ರೂಪಿಸಿರುವ ನಿರ್ದಿಷ್ಟ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ, ಅದು ನೇರವಾಗಿ ನಮ್ಮ ಖಾತೆಗೆ ಬರಲಿದೆ.ಆದರೆ, ವಿವಿಯಿಂದ ನಮ್ಮ ದಾಖಲಾತಿ ಶುಲ್ಕದ ಹಣವನ್ನು ಕಾಲೇಜಿಗೆ ನೀಡುವುದರಿಂದ ಕಾಲೇಜಿನವರು ನಮಗೆ ನೀಡುತ್ತಿಲ್ಲ. ಕಾಲೇಜಿಗೂ ನಾವುಪ್ರತ್ಯೇಕವಾಗಿ ಪಾವತಿ ಮಾಡುತ್ತೇವೆ. ಹೀಗಾಗಿ ಎರಡು ಕಡೆ ಹೊರೆಯಾಗುತ್ತದೆ.ವಿವಿ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ನೇರ ಹಣವರ್ಗಾವಣೆಯಾಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ರೀತಿಯಲ್ಲಿಕಾಲೇಜುಗಳ ಅನ್ಯಾಯ ಮಾಡುವುದುಸರಿಯಲ್ಲ. ಶುಲ್ಕ ಮರುಪಾವತಿಯ ಹಣವನ್ನು ಆಗಿಂದಾಗೇ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಡುವ ವ್ಯವಸ್ಥೆಆಗಬೇಕು. ಕೆಲವು ಕಾಲೇಜಿನಲ್ಲಿ ಹಣ ವರ್ಗಾವಣೆ ಆಗುತ್ತಿದೆ. ಇನ್ನು ಕೆಲವು ಕಾಲೇಜುಗಳು ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡುತ್ತಿಲ್ಲ ಎಂದು ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.

ವಿವಿಯು ಯಾವುದೇ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರು ಪಾವತಿ ಮಾಡುವುದನ್ನು ಉಳಿಸಿಕೊಳ್ಳುವುದಿಲ್ಲ. ಆಯಾ ಕಾಲೇಜುಗಳಿಗೆ ನೇರವಾಗಿ ಕಳುಹಿಸುತ್ತೇವೆ. ಈಗ ಎಲ್ಲವೂ ಆನ್‌ಲೈನ್‌ ಆಗಿರುವುದರಿಂದ ನೇರ ವಿದ್ಯಾರ್ಥಿಗಳ ಖಾತೆಗೆ ಹೋಗುತ್ತದೆ. ಕಾಲೇಜುಗಳು ಆ ರೀತಿ ಮರುಪಾವತಿ ಹಣವನ್ನು ಉಳಿಸಿಕೊಳ್ಳಲು ಬರುವುದಿಲ್ಲ. ಪ್ರೊ.ಕೆ.ಆರ್‌.ವೇಣುಗೋಪಾಲ್‌, ಬೆಂವಿವಿ ಕುಲಪತಿ

 

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.