“ಜನರ ಲೂಟಿ, ಇಬ್ಬರ ವಿಕಾಸ” : ರಾಹುಲ್ ವಿವಾದಾತ್ಮಕ ಟ್ವೀಟ್
ವರದಿಯೊಂದರ ಫೈಲ್ ಶಾಟ್ ನೊಂದಿಗೆ “ಜನತಾ ಸೆ ಲೂಟ್, ಸಿರ್ಫ್ “ದೋ” ಕಾ ವಿಕಾಸ್” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ ಗಾಂಧಿ
Team Udayavani, Feb 15, 2021, 2:31 PM IST
ನವ ದೆಹಲಿ : ಎಲ್ ಪಿ ಜಿ ಗ್ಯಾಸ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 50ರೂ. ಏರಿಕೆಯಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಬ್ಬರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ ಎಂದು ಗಾಂಧಿ ತಮ್ಮ ಟ್ವೀಟ್ ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಓದಿ : ‘ನಾವು ಜನರ ಗೌಪ್ಯತೆಯನ್ನು ಕಾಪಾಡಬೇಕು’ : ವಾಟ್ಸ್ಯಾಪ್, ಫೇಸ್ ಬುಕ್ ಗೆ “ಸುಪ್ರೀಂ” ಸಲಹೆ
ಎಲ್ ಪಿ ಜಿ ಗ್ಯಾಸ್ ಏರಿಕೆಯಾಗಿರು ಬಗೆಗಿನ ವರದಿಯೊಂದರ ಫೈಲ್ ಶಾಟ್ ನೊಂದಿಗೆ “ಜನತಾ ಸೆ ಲೂಟ್, ಸಿರ್ಫ್ “ದೋ” ಕಾ ವಿಕಾಸ್” ಎಂದು ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಮೋದಿ ಸರ್ಕಾರದ ಅಚ್ಛೇ ದಿನ್ ಹಾಗೂ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಯೋಜನೆಯನ್ನು ಕೇರಳದ ವಯನಾಡಿನ ಸಂಸದ ರಾಹುಲ್ ಗಾಂಧಿ ಖಾರವಾಗಿ ಕುಟುಕಿದ್ದಾರೆ.
जनता से लूट,
सिर्फ़ ‘दो’ का विकास।#LPGPriceHike pic.twitter.com/GHdNcQJFYq— Rahul Gandhi (@RahulGandhi) February 15, 2021
ಇಬ್ಬರ ವಿಕಾಸಕ್ಕಾಗಿ ಎಂದು ರಾಹುಲ್ ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದು, ಅವರ ಹೆಸರನ್ನು ಹೇಳಿಲ್ಲ.
ಈ ಹಿಂದೆ ರಾಹುಲ್ ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸುವ ಸಂದರ್ಭದಲ್ಲಿ ಅಂಬಾನಿ ಹಾಗೂ ಅದಾನಿಯವರ ಹೆಸರನ್ನು ಉಲ್ಲೇಖಿಸಿದ್ದರು.
ಓದಿ : ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪ ಕುಟುಂಬದ ಸರ್ಕಾರ: ಎಚ್ ಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!