ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ ಸ್ಪಷ್ಟನೆ
Team Udayavani, Feb 15, 2021, 2:52 PM IST
ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್, ಐದು ಎಕರೆ ಜಮೀನು ಇರುವವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದಿದ್ದ ಸಚಿವ ಉಮೇಶ್ ಕತ್ತಿ ತಮ್ಮ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ಎದುರಾದ ಹಿನ್ನಲೆಯಲ್ಲಿ ಇದೀಗ ‘ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ’ ಎಂದಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡು ನೀಡಲು ಇರುವ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇದನ್ನೂ ಓದಿ:ತುಂಬಾ ದುಬಾರಿ ‘‘ರಾಧೆ ಶ್ಯಾಮ್’… ಪ್ರಭಾಸ್ ಕಾಸ್ಟ್ಯೂಮ್ ಗೆ ಎಷ್ಟು ಕೋಟಿ ಗೊತ್ತಾ ?
ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿತ್ತು. ‘ಟಿವಿ ಇದ್ದ ಮಾತ್ರಕ್ಕೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಸರಿಯಲ್ಲ. ಸಚಿವರ ಇಂಥಹ ನಿರ್ಧಾರದ ಬಗ್ಗೆ ಅವರ ಬಳಿಯೇ ನಾನು ಚರ್ಚೆ ನಡೆಸುತ್ತೇನೆ’ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದರು.
ಇದನ್ನೂ ಓದಿ:ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪ ಕುಟುಂಬದ ಸರ್ಕಾರ: ಎಚ್ ಡಿಕೆ
ಯಾವುದೇ ನಿರ್ಧಾರವನ್ನು ಏಕಾಏಕಿ ಜಾರಿ ಮಾಡುವ ಮೊದಲು ಸಚಿವ ಸಂಪುಟದಲ್ಲಿ ಚರ್ಚೆ ಮಾಡಬೇಕು. ಟಿವಿ, ಫ್ರಿಡ್ಜ್ ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಇರುತ್ತದೆ. ಬೈಕ್ ನ್ನು ಸಾಲ ಮಾಡಿ ಕೂಡ ಕೊಂಡುಕೊಳ್ಳುತ್ತಾರೆ. ಹೀಗಿರುವಾಗ ಬಿಪಿಎಲ್ ಕಾರ್ಡ್ ನ್ನೇ ರದ್ದು ಮಾಡುವುದು ತಪ್ಪು. ನಿಜವಾದ ಬಡತನವನ್ನು ಜನರ ಆರ್ಥಿಕ ಮಟ್ಟದಿಂದ ಗುರುತಿಸಬೇಕು ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ