ಮಹಿಳೆಯರಲ್ಲಿದೆ ಉದ್ಯಮಿಯಾಗುವ ಸಾಮರ್ಥ್ಯ

ತಿಂಗಳಿಗೊಮ್ಮೆಯಾದರೂ ಇಂತಹ ಮೇಳಗಳನ್ನು ಆಯೋಜಿಸಿ ವಸ್ತುಗಳ ಪ್ರದರ್ಶನಕ್ಕೆ ಅನುವು ಮಾಡಿಕೊಡಲಾಗುವುದು

Team Udayavani, Feb 15, 2021, 5:57 PM IST

ಮಹಿಳೆಯರಲ್ಲಿದೆ ಉದ್ಯಮಿಯಾಗುವ ಸಾಮರ್ಥ್ಯ

ಬೀದರ: ಜವಾಬ್ದಾರಿಗೆ ಅನುಗುಣವಾಗಿ ಕುಟುಂಬದಲ್ಲಿ ಹಲವು ವಿಧದ ಪಾತ್ರ ಯಶಸ್ವಿಯಾಗಿ ನಿರ್ವಹಿಸುವ ಮಹಿಳೆ ಕುಟುಂಬದ ಏಳ್ಗೆಗೆ ಆಧಾರವಾಗಿದ್ದಾಳೆ. ಮನೆ ನಿರ್ವಹಿಸುವ ಗೃಹಿಣಿಯಾಗಿಯೂ ಕುಟುಂಬಕ್ಕೆ ಆರ್ಥಿಕ ಬಲ ನೀಡುವ ಉದ್ಯಮಿಯಾಗಿಯೂ ಸೇವೆ ಸಲ್ಲಿಸುವ ಅಸಾಧರಣ ಸಾಮರ್ಥ್ಯ ಮಹಿಳೆ ಹೊಂದಿದ್ದಾಳೆ ಎಂದು ಕೌಶಲ್ಯ ಕರ್ನಾಟಕ ಅಧಿಕಾರಿ ಶಿವಲೀಲಾ ಬಂಡೆ ಹೇಳಿದರು. ನೂಪುರ ನೃತ್ಯ ಅಕಾಡೆಮಿಯಿಂದ ನಗರದಲ್ಲಿ ನಡೆದ ಕರಕುಶಲ ಮೇಳ ಮತ್ತು ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನೆಯಲ್ಲಿಯೇ ವಿವಿಧ ಬಗೆಯ ಕರಕುಶಲ ವಸ್ತುಗಳ ತಯಾರಿಯನ್ನು ಹವ್ಯಾಸವಾಗಿ ಹೊಂದಿರುವ ಅನೇಕ ಗೃಹಿಣಿಯರು ಅತ್ಯುತ್ತಮ ವಸ್ತುಗಳನ್ನು ತಯಾರಿಸುತ್ತಿದ್ದಾರೆ. ಆದರೆ ಮಾರುಕಟ್ಟೆಗೆ ಬಂದು ವ್ಯವಹಾರ ಮಾಡುವಲ್ಲಿ ಸಮಸ್ಯೆ ಹೊಂದಿದ್ದಾರೆ. ಮುಖ್ಯವಾಗಿ ಕೌಟುಂಬಿಕ ಸಹಾಯ ಮತ್ತು ಉಪೇಕ್ಷೆಗಳಿಂದ ಹಿಂದುಳಿದಿರುವುದು ಕಂಡುಬರುತ್ತದೆ ಎಂದರು.

ಕುಟುಂಬ ಮತ್ತು ವ್ಯವಹಾರ ಎರಡನ್ನೂ ನಿಭಾಯಿಸುವ ಅಸಾಧಾರಣ ಸಾಮರ್ಥ್ಯ ಗುರುತಿಸದೇ ಹೆಣ್ಣು ಎಂದಾಕ್ಷಣ ಅಸಡ್ಡೆ ತೋರುವ ಸಾಮಾಜಿಕ ಚಿಂತನೆ, ವಿಚಾರಧಾರೆ ನಾವಿಂದು ಬದಲಿಸಬೇಕು. ಮಹಿಳೆಯರೆಲ್ಲರೂ ತಮ್ಮ ಮನೆಗಳಿಂದಲೇ ಹೊಸ ಚಿಂತನೆ ಬಿತ್ತುವ ಕಾರ್ಯ ಆರಂಭಿಸಬೇಕು. ಬೀದರಿನಲ್ಲಿ ಇಂದು ದ್ಯೋಗವಕಾಶಗಳು ಹೆಚ್ಚಾಗುತ್ತಿವೆ. ಸಣ್ಣ ಕೈಗಾರಿಕೆಗಳಿಗೆ ಗೃಹೋದ್ಯಮಗಳಿಗೆ ಅತ್ಯುತ್ತಮ ಬೇಡಿಕೆಯಿದ್ದು ಸರ್ಕಾರದ ಸಹಾಯ ಸೌಲಭ್ಯ, ನೆರವು ಬಳಸಿಕೊಳ್ಳಬೇಕು ಎಂದರು.

ಹಿರಿಯ ಜೀವಿ ಜಗದೇವಿ ಪೊಲೀಸ್‌ ಪಾಟೀಲ ಚಾಲನೆ ನೀಡಿ ಮಾತನಾಡಿ, ಮಹಿಳೆ ಎಂದೂ ಅಬಲೆಯಲ್ಲ. ಅವಳೂ ಔದ್ಯೋಗಿಕ ರಂಗದಲ್ಲೂ ಮಿಂಚಬಹುದು. ಅದಕ್ಕಾಗಿ ದೃಢ ಮನಸ್ಸು ಮಾಡಬೇಕು ಎಂದರು. ದಂತ ವೈದ್ಯೆ ಡಾ| ಶ್ವೇತಾ ಮೇಗೂರು ಮಾತನಾಡಿ, ಮಹಿಳೆಯರು ಪ್ರಭಾವ ಶಾಲಿಯಾಗಿ ಬೆಳೆಯಲು ಸಾಧ್ಯವಿದೆ. ಪ್ರತಿಭಾನ್ವಿತ ಮಹಿಳೆ ಸಮಾಜಕ್ಕೆ ಅಂಜಬೇಕಿಲ್ಲ. ತಮ್ಮ ನಡೆ-ನುಡಿಯಿಂದ ಸಂಸ್ಕಾ ರಯುತವಾಗಿ ಬದುಕುವುದರಿಂದ ಗೌರವಾನ್ವಿತ ವ್ಯಕ್ತಿಗಳಾಗಿ
ಬದುಕಬಹುದು ಎಂದರು.

ಸಾಧಕ ಮಹಿಳೆ ಸಿರಿಗನ್ನಡ ವೇದಿಕೆ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, ನೃತ್ಯ, ಸಂಗೀತ ಕಲೆಗಳು ಸಾಮರ್ಥ್ಯ ವೃದ್ಧಿಗೆ ಸಹಕಾರಿ ಎಂದರು. ಅಕಾಡೆಮಿಯ ಉಷಾ ಪ್ರಭಾಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಲ್ಲಿನ ಪ್ರತಿಭೆ ಪ್ರದರ್ಶಿಸಲು ಅವಕಾಶಗಳು ಒದಗಿ ಬರಬೇಕು. ಅದಕ್ಕಾಗಿ ನೃತ್ಯ ವಿದ್ಯಾರ್ಥಿಗಳ ಪಾಲಕರಿಗಾಗಿ ಕರಕುಶಲ ಮೇಳ ಆಯೋಜಿಸಿ ಅವರ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಒದಗಿಸುವ ಸಣ್ಣ ಪ್ರಯತ್ನ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ತಿಂಗಳಿಗೊಮ್ಮೆಯಾದರೂ ಇಂತಹ ಮೇಳಗಳನ್ನು ಆಯೋಜಿಸಿ ವಸ್ತುಗಳ ಪ್ರದರ್ಶನ-ಮಾರಾಟಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ಆಹಾರ ವಸ್ತುಗಳ ಪ್ರದರ್ಶನ ಮಾರಾಟದಲ್ಲಿ ಸಂಧ್ಯಾ ಸಹಿನಾಳೆ ಪ್ರಥಮ, ರಾಜೇಶ್ವರಿ ವಾಸಿ ದ್ವಿತೀಯ ಹಾಗೂ ಕರಕುಶಲ ವಿಭಾಗದಲ್ಲಿ ರೋಹಿಣಿ ಸಂತೋಷ, ಪವಿತ್ರಾ ಪವನಕುಮಾರ ಪ್ರಶಸ್ತಿ ಪಡೆದರು. ಈ ವೇಳೆ ರಘುರಾಮ ಉಪಾಧ್ಯಾಯ, ಉಮೇಶ ನಾಯಕ, ಸತೀಶ ಕೋಟ್ಯಾನ, ಅನಿತಾ ಶೆಟ್ಟಿ ಇತರರು ಇದ್ದರು. ಸುಬ್ರಹ್ಮಣ್ಯ ಪ್ರಭು ಕಾರ್ಯಕ್ರಮ ನಿರ್ವಹಿಸಿದರು. ಪ್ರಥಮ ಪ್ರಭು ಸಂಚಾಲನೆ ಮಾಡಿದರು. ಪ್ರಭಾಕರ ಎ.ಎಸ್‌ ಸ್ವಾಗತಿಸಿದರು. ಮಂಗಳಾ ಭಾಗವತ ವಂದಿಸಿದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.