ವ್ಯಾಪಿಸುತ್ತಿದೆ ವಂಚಕರ ಜಾಲ! ನಕಲಿ ಫೇಸ್‌ಬುಕ್‌, ಟ್ವಿಟರ್‌ ಖಾತೆ ಬಗ್ಗೆ ಇರಲಿ ಎಚ್ಚರ


Team Udayavani, Feb 16, 2021, 6:50 AM IST

ವ್ಯಾಪಿಸುತ್ತಿದೆ ವಂಚಕರ ಜಾಲ! ನಕಲಿ ಫೇಸ್‌ಬುಕ್‌, ಟ್ವಿಟರ್‌ ಖಾತೆ ಬಗ್ಗೆ ಇರಲಿ ಎಚ್ಚರ

ಸಾಂದರ್ಭಿಕ ಚಿತ್ರ

ಬೆಂಗಳೂರು : ತಂತ್ರಜ್ಞಾನ ಮತ್ತು ತಾಂತ್ರಿಕತೆ ಬೆಳೆದಂತೆ ಅವುಗಳ ಹೆಸರಿನಲ್ಲಿ ನಡೆಯುವ ವಂಚನೆಗಳೂ ಹೆಚ್ಚುತ್ತಿವೆ. ಸಾಮಾಜಿಕ ಜಾಲತಾಣಗಳ ದೈತ್ಯ ಎಂದೇ ಕರೆಸಿಕೊಳ್ಳುವ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲೂ ನಕಲಿ ಖಾತೆಗಳ ಹಾವಳಿ ಅಧಿಕವಾಗುತ್ತಿದೆ.

ಪೊಲೀಸರು ಸೈಬರ್‌ ಅಪರಾಧದ ಬಗ್ಗೆ ಜಾಗೃತಿ ಮೂಡಿಸಿದ್ದರೂ ಯಾವುದೇ ಫ‌ಲ ನೀಡುತ್ತಿಲ್ಲ.
ಇತ್ತೀಚೆಗೆ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌, ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.  ಸಂತೋಷ್‌, ಅಂಕಣಕಾರ ಮತ್ತು ರಮಣಶ್ರೀ ಗ್ರೂಪ್‌ನ ಷಡಕ್ಷರಿ ಮತ್ತಿತರ ಗಣ್ಯರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆಗಳನ್ನು  ತೆರೆದು ಸಾರ್ವಜನಿಕರಿಗೆ ವಂಚಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳೆದ ಎರಡೂವರೆ ವರ್ಷಗಳಿಂದ ಇಂಥ ಅನೇಕ ಪ್ರಕರಣಗಳು ವರದಿಯಾಗಿದ್ದು, ಇತ್ತೀಚೆಗೆ ಮತ್ತೆ ವೇಗ ಪಡೆದುಕೊಂಡಿದೆ. ಇಂತಹ ಪ್ರಕರಣಗಳಲ್ಲಿ ಇತ್ತೀಚೆಗೆ ರಾಜಸ್ಥಾನ ಮೂಲದ ನಾಲ್ವರು ಸಿಐಡಿ ಸೈಬರ್‌ ಕ್ರೈಂ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಯಾರ ಹೆಸರಿನಲ್ಲಿ ವಂಚನೆ?
ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಸಂಸದೆ ಸುಮಲತಾ ಅಂಬರೀಶ್‌, ಲೈಂಗಿಕ ತಜ್ಞೆ ಡಾ| ಪದ್ಮಿನಿ ಪ್ರಸಾದ್‌, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್‌, ನಟ ವಿನೋದ್‌ ರಾಜ್‌, ಸಹಾಯಕ ಆಯುಕ್ತ ಸಂತೋಷ್‌ ಕಾಮಗೌಡ ಮತ್ತು ಐಪಿಎಸ್‌ ಅಧಿಕಾರಿಗಳಾದ ಪಿ. ಹರಿಶೇಖರನ್‌, ರಮೇಶ್‌ ಬಾನೊತ್‌, ಜಿನೇಂದ್ರ ಖಣಗಾವಿ, ಡಾ| ಚಂದ್ರಗುಪ್ತಾ, ಡಾ| ಎಸ್‌.ಡಿ. ಶರಣಪ್ಪ, ರವಿ ಡಿ. ಚೆನ್ನಣ್ಣನವರ್‌, ಉತ್ತರ ಕರ್ನಾಟಕ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳ ಡಿವೈಎಸ್ಪಿಗಳು, ಇನ್‌ಸ್ಪೆಕ್ಟರ್ಗಳು, ಎಸ್‌ಐಗಳು, ಬೆಂಗಳೂರು ನಗರ ಪೊಲೀಸರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆಯಲಾಗಿತ್ತು. ಟ್ವಿಟರ್‌ನಲ್ಲಿ ಮೈಸೂರು ರಾಜಮನೆತನದ ಯದುವೀರ್‌ ಒಡೆಯರ್‌, ಮಾಜಿ ಸಿಎಂ ಸಿದ್ದರಾಮಯ್ಯ, ನಟ ಅಭಿಷೇಕ್‌ ಅಂಬರೀಶ್‌, ಐಪಿಎಸ್‌ ಅಧಿಕಾರಿ ರೂಪಾ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದರು.

ವಾಟ್ಸ್‌ಆ್ಯಪ್‌ನಲ್ಲೂ ವಂಚನೆ
ಈಗ ವಾಟ್ಸ್‌ಆ್ಯಪ್‌ ಕೂಡ ಈಗ ವಂಚಕರಿಗೆ “ಅಸ್ತ್ರ’ವಾಗಿ ಮಾರ್ಪಟ್ಟಿದೆ. ಇಲ್ಲೂ “ಒಟಿಪಿ ಸ್ಕ್ಯಾಮ್‌’, “ನಕಲಿ ಗಿಫ್ಟ್ ಕಾರ್ಡ್‌’ ಸಹಿತ ಹಲವು ರೀತಿ ವಂಚನೆ ನಡೆಯುತ್ತಿವೆ. ನಿಮ್ಮ ಮೊಬೈಲ್‌ ಸಂಖ್ಯೆಯನ್ನು ಬಳಸಿಕೊಂಡು ವಂಚಕರು ತಮ್ಮ ಮೊಬೈಲಲ್ಲಿ ವಾಟ್ಸ್‌ ಆ್ಯಪ್‌ ಖಾತೆ ತೆರೆದು, “ಅಕಸ್ಮಾತಾಗಿ ನಿಮ್ಮ ನಂಬರ್‌ಗೆ ಒಟಿಪಿ ರವಾನೆ ಯಾಗಿದೆ. ದಯವಿಟ್ಟು ನನಗೆ ಕಳುಹಿಸಿಕೊಡಿ’ ಎಂದು ನಿಮಗೇ ಸಂದೇಶ ಕಳುಹಿಸುತ್ತಾರೆ. ಅದನ್ನು ನಂಬಿ ಒಟಿಪಿ ರವಾನಿಸಿದರೆ, ನಿಮ್ಮ ಇಡೀ “ವಾಟ್ಸ್‌ಆ್ಯಪ್‌ ಲೋಕ’ ಅವರ ಪಾಲಾಗುತ್ತದೆ. ಅದನ್ನು ಬಳಸಿಕೊಂಡು ನಿಮ್ಮ ಸ್ನೇಹಿತರಿಂದ ಹಣ ದೋಚುತ್ತಾರೆ. ವ್ಯಾಲಂಟೈನ್‌ ಡೇ ಗಿಫ್ಟ್ ಕಾರ್ಡ್‌, ಪ್ರತಿಷ್ಠಿತ ಹೊಟೇಲ್‌ನ ಗಿಫ್ಟ್ ಕಾರ್ಡ್‌ ಹೆಸರಲ್ಲೂ ವಂಚಿಸುತ್ತಾರೆ.

ಫೇಸ್‌ಬುಕ್‌, ಟ್ವಿಟರ್‌ಗಳಲ್ಲಿ ಖಾತೆ ಹೊಂದಿರುವವರು ಖಾತೆಯನ್ನು ಖಾಸಗಿ (ಪ್ರೈವೇಟ್‌) ಮಾಡಿಕೊಳ್ಳಬೇಕು. ಆಗಾಗ ತಮ್ಮ ಖಾತೆಗಳನ್ನು ಪರಿಶೀಲಿಸಿಕೊಳ್ಳಬೇಕು. ಜತೆಗೆ ತಮ್ಮ ಸ್ನೇಹಿತರಿಗೆ ಈ ಬಗ್ಗೆ ಎಚ್ಚರಿಕೆ ನೀಡಬೇಕು.
– ಎಂ.ಡಿ. ಶರತ್‌, ಎಸ್ಪಿ ಸಿಐಡಿ ಸೈಬರ್‌ ವಿಭಾಗ

ಉದಯವಾಣಿ ಎಚ್ಚರಿಸಿತ್ತು
ಫೇಸ್‌ಬುಕ್‌ನಲ್ಲಿ ಖಾತೆ ಹ್ಯಾಕ್‌ ಮಾಡಿ ಸ್ನೇಹಿತರ ಹಣ ಲೂಟಿ ಮಾಡುವ ವಂಚನೆಯ ಜಾಲ ಸಕ್ರಿಯವಾಗುತ್ತಿರುವುದರ ಬಗ್ಗೆ ಜ. 27ರಂದು ಉದಯವಾಣಿ ಮುಖಪುಟದಲ್ಲಿ ಪ್ರಕಟಿಸುವ ಮೂಲಕ ಎಚ್ಚರಿಸಿತ್ತು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.