ಇಂಧನ ಬೆಲೆ ಏರಿಕೆ, ತಗ್ಗಲಿ ರಾಜ್ಯ-ಕೇಂದ್ರಗಳ ತೆರಿಗೆ


Team Udayavani, Feb 16, 2021, 7:30 AM IST

ಇಂಧನ ಬೆಲೆ ಏರಿಕೆ, ತಗ್ಗಲಿ ರಾಜ್ಯ-ಕೇಂದ್ರಗಳ ತೆರಿಗೆ

ಒಂದು ಉತ್ಪನ್ನದ ಬೇಡಿಕೆ ಹೆಚ್ಚಾದಾಗ, ಪೂರೈಕೆಯ ಮೇಲೆ ಭಾರ ಬೀಳುವುದು, ದರ ಏರಿಕೆಯಾಗುವುದು ಸಹಜ. ಅದೇ ವೇಳೆಯಲ್ಲೇ ಉತ್ಪನ್ನದ ಲಭ್ಯತೆ ಹೆಚ್ಚಾಗಿ, ಬೇಡಿಕೆಯಲ್ಲಿ ಹೆಚ್ಚಳವಾಗದಿದ್ದರೆ ದರಗಳು ಕುಸಿಯುವುದು ಸಹಜ. ಆದರೆ ಈ ಸಂಗತಿ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯ ವಿಚಾರಕ್ಕೆ ಅನ್ವಯವಾದದ್ದು ಕಡಿಮೆಯೇ. ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದಾಗಿ ವಿಶ್ವಾದ್ಯಂತ ತರಲಾದ ಲಾಕ್‌ಡೌನ್‌ಗಳು ಹಾಗೂ ಸಂಚಾರ ನಿರ್ಬಂಧಗಳಿಂದಾಗಿ ಅಂತಾ ರಾಷ್ಟ್ರೀಯ ಸ್ತರದಲ್ಲಿ ಕಚ್ಚಾ ತೈಲದ ದರದಲ್ಲಿ ಗಣನೀಯ ಇಳಿಕೆ ಯಾಗಿದ್ದರೂ ಭಾರತದಲ್ಲಿ ಇಂಧನ ದರ ಕಡಿಮೆಯಾಗುವ ಬದಲು ಹೆಚ್ಚಾಗುತ್ತಲೇ ಸಾಗಿದೆ.

ರವಿವಾರ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ 91.70 ರೂಪಾಯಿ ತಲುಪಿದರೆ, ಇನ್ನೊಂದೆಡೆ ಡೀಸೆಲ್‌ ದರ 83.81 ರೂಪಾಯಿ ತಲುಪಿತ್ತು. ಮಹಾರಾಷ್ಟ್ರದ ಪರ್ಬನಿಯಲ್ಲಂತೂ ಪೆಟ್ರೋಲ್‌ ದರ 100 ರೂಪಾಯಿ ದಾಟಿದ್ದು ಸುದ್ದಿಯಾಯಿತು. ಕೋವಿಡ್‌ ಕಾರಣದಿಂದಾಗಿ ತತ್ತರಿಸಿರುವ ಭಾರತೀಯರಿಗೆ ನಿಸ್ಸಂಶಯ ವಾಗಿಯೂ ಪೆಟ್ರೋಲ್‌, ಡೀಸೆಲ್‌ ಮೇಲಿನ ದರ ಏರಿಕೆ ಬಹಳ ಒತ್ತಡ ಸೃಷ್ಟಿಸುತ್ತಿದೆ.

ಆರ್ಥಿಕತೆ ಸಹಜತೆಯತ್ತ ಮರಳಬೇಕೆಂದರೆ, ಬೇಡಿಕೆ ಹೆಚ್ಚಾಗಬೇಕು ಎನ್ನುತ್ತಾರೆ ವಿತ್ತ ಪರಿಣತರು. ಗ್ರಾಹಕರು ಹೆಚ್ಚು ವಸ್ತುಗಳನ್ನು ಕೊಳ್ಳುವಂತಾದರೆ, ವಿತ್ತೀಯ ಸ್ಥಿತಿ ಸುಧಾರಿಸುತ್ತದೆ ಎನ್ನುವ ದೃಷ್ಟಿಯಿಂದ ಕೇಂದ್ರ ಸರಕಾರವೂ ತನ್ನ ಬಜೆಟ್‌ನಲ್ಲಿ ಪೂರಕ ಕ್ರಮಗಳನ್ನು ಘೋಷಿಸಿದೆ. ಆದರೆ ಕೇಂದ್ರ ಬಜೆಟ್‌ನ ಆಶಯಕ್ಕೆ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಅಡ್ಡಗಾಲಾಗಿ ಪರಿಣಮಿಸುತ್ತಿದೆ. ಇಂಧನ ಬೆಲೆ ಏರಿಕೆಯು ದೇಶದಲ್ಲಿ ಉಳಿದೆಲ್ಲ ಉತ್ಪನ್ನಗಳ ಮೇಲಿನ ಬೆಲೆಯೂ ಹೆಚ್ಚುವಂತೆ ಮಾಡುತ್ತಿದೆ. ದವಸ -ಧಾನ್ಯ, ತರಕಾರಿ ಸೇರಿದಂತೆ ಅನೇಕ ಅಗತ್ಯ ವಸ್ತುಗಳ ಬೆಲೆಗಳೂ ಇಂಧನದ ಬೆಲೆಯನ್ನು ಅವಲಂಬಿಸಿರುತ್ತವೆ. ಇಂಧನ ದರ ಹೆಚ್ಚಾ ದಂತೆಲ್ಲ ಸರಕು-ಸಾಗಣೆಯ ಖರ್ಚೂ ಹೆಚ್ಚಾಗುತ್ತದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುವುದು ಸಹಜ. ಹೀಗಾದಾಗ, ಜನರು ವಸ್ತುಗಳ ಖರೀದಿಯ ವಿಚಾರದಲ್ಲಿ ಹಿಂದೆ ಮುಂದೆ ನೋಡುವ ಸಾಧ್ಯತೆ ಅಧಿಕವಾಗುತ್ತದೆ. ಹೀಗಾಗಿ ಬೇಡಿಕೆ ಹೆಚ್ಚಬೇಕೆಂಬ ಆಶಯಕ್ಕೇ ಪೆಟ್ಟು ಬೀಳುತ್ತದಲ್ಲವೇ? ಇದೊಂದೇ ವಲಯವೆಂದಷ್ಟೇ ಅಲ್ಲ, ತೈಲ ದರ ಏರಿಕೆಯಿಂದಾಗಿ ಹೊಟೇಲ್‌ಗ‌ಳು, ಆಟೋ ಚಾಲಕರು, ಓಲಾ ಉಬರ್‌ನಂಥ ಸಂಚಾರ ವಲಯಕ್ಕೂ ಕಷ್ಟವಾಗುತ್ತಿದೆ.

ಸಮಸ್ಯೆಯೇನೆಂದರೆ, ಭಾರತದಲ್ಲಿ ಪೆಟ್ರೋಲ್‌ ಡೀಸೆಲ್‌ ದರಗಳ ಮೇಲೆ 69 ಪ್ರತಿಶತದಷ್ಟು ತೆರಿಗೆ ವಿಧಿಸಲಾಗುತ್ತದೆ. ಇದರಲ್ಲಿ ರಸ್ತೆ ಮೂಲಸೌಕರ್ಯ ಸೆಸ್‌, ಕೃಷಿ ಮೂಲ ಸೌಕರ್ಯ ಸೆಸ್‌ನಂಥ ಅಭಿವೃದ್ಧಿ ಯೋಜನೆಗೆ ಪೂರಕವಾದ ಸೆಸ್‌ ಇವೆ. ಆದರೆ ಬೇರೆಲ್ಲೋ ಆಗಿರುವ ಕೊರತೆಯನ್ನು ಇಂಧನ ಬೆಲೆ ಏರಿಕೆಯ ಮೂಲಕ ತುಂಬಿಕೊಳ್ಳುವ ಪ್ರಯತ್ನ ಆಗಬಾರದು. ಈ ಕಾರಣಕ್ಕಾಗಿಯೇ, ಕರ್ನಾಟಕ ಸರಕಾರ ಮುಂಬರುವ ಬಜೆಟ್‌ನಲ್ಲಿ ಇಂಧನದ ಮೇಲಿನ ರಾಜ್ಯದ ಪಾಲಿನ ತೆರಿಗೆಯನ್ನು ಕಡಿತಗೊಳಿಸಿ ಜನರು ನಿರಾಳರಾಗುವಂತೆ ಮಾಡಲು ಮುಂದಾಗಬೇಕಿದೆ.

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.