ಆಸ್ಪತ್ರೆ ಆವರಣ ಅನೈತಿಕ ಚಟುವಟಿಕೆ ತಾಣ


Team Udayavani, Feb 16, 2021, 1:04 PM IST

Untitled-2

ಆನೇಕಲ್‌: ಸರ್ಜಾಪುರ ಗ್ರಾಮದಲ್ಲಿ ಪ್ರಾಣಿಗಳಿಗೆ ಚಿಕಿತ್ಸೆ ನೀಡಬೇಕಾದ ಪಶು ವೈದ್ಯಕೀಯ ಆಸ್ಪತ್ರೆ ಆವರಣ, ಈಗ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ತಾಲೂಕಿನ ಸರ್ಜಾಪುರ ಬಸ್‌ ನಿಲ್ದಾಣದ ಮುಂಭಾಗದ ಪಶು ವೈದ್ಯಕೀಯ ಆಸ್ಪತ್ರೆ ಇದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾತಿ ಇರುವುದಿಲ್ಲ. ಆಸ್ಪತ್ರೆಯ ಸುತ್ತಲಿನ ಆವರಣವನ್ನು ಸ್ವಚ್ಛ, ಸಂರಕ್ಷಣೆ ಮಾಡಿಕೊಳ್ಳುವಲ್ಲಿ ಇಲಾಖೆವಿಫ‌ಲವಾಗಿದ್ದು, ರಾತ್ರಿ ಆಗುತ್ತಿದ್ದಂತೆ ಪುಂಡ-ಪೋಕರಿಗಳ ನೆಚ್ಚಿನ ತಾಣವಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ದೂರು ನೀಡಿದರೂ, ಕ್ಯಾರೆ ಎನ್ನುತ್ತಿಲ್ಲವೆಂದು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಸೌಲಭ್ಯ ವಂಚಿತ: ಸುತ್ತಮುತ್ತಲಿನ ಗ್ರಾಮದಲ್ಲಿ ರೈತಾಪಿ ಕುಟುಂಬ ವಾಸಿಸುತ್ತಿದ್ದು, ಹೈನುಗಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ, ರಾಸು, ಆಡು, ಕುರಿ, ಮೇಕೆ, ನಾಯಿ ಮುಂತಾದಪ್ರಾಣಿಗಳಿಗೆ ಖಾಯಿಲೆ ಉದ್ಭವಗೊಂಡರೆ ಸೂಕ್ತ ಚಿಕಿತ್ಸೆ ಸಿಗದೆ ಎಷ್ಟೋ ಪ್ರಾಣಿಗಳು ಜೀವ ಬಿಟ್ಟಿವೆ. ಎಲ್ಲ ಸೌಕರ್ಯ ಇದ್ದರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ರೈತರು ಸೌಲಭ್ಯ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಮನೆಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಆಸ್ಪತ್ರೆ ಆವರಣದೊಳಗೆ ಎಸೆಯು ತ್ತಿದ್ದಾರೆ. ಆಸ್ಪತ್ರೆ ಆವರಣವನ್ನು ಶೌಚಾಲಯವನ್ನಾಗಿ ಉಪಯೋಗಿಸುತ್ತಿದ್ದಾರೆ. ಇದಕ್ಕೆಲ್ಲ ಮೂಲ ಕಾರಣ ಕಾಂಪೌಂಡ್‌ ವ್ಯವಸ್ಥೆ ಇಲ್ಲದಿರುವುದು.

ಆವರಣದಲ್ಲಿ ಪಾರ್ಕಿಂಗ್‌: ಬೆಂಗಳೂರು ನಗರದಲ್ಲಿ ಮತ್ತು ಬೊಮ್ಮಸಂದ್ರ, ಅತ್ತಿಬೆಲೆ, ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ಸುತ್ತಮುತ್ತಲಿನ ಹಳ್ಳಿ ಜನರು ತಮ್ಮ ವಾಹನಗಳನ್ನು ಆಸ್ಪತ್ರೆ ಆವರಣದಲ್ಲೇ ಪಾರ್ಕಿಂಗ್‌ ಮಾಡುತ್ತಾರೆ. ಇದರಿಂದ ರಾಸುಗಳಿಗೆ, ಆಸ್ಪತ್ರೆಗೆ ಬರುವಂತಹ ರೈತರಿಗೆ ತೊಂದರೆಯಾಗುತ್ತಿದೆ.

ಎರಡು ಆಸ್ಪತ್ರೆಗಳ ಜವಾಬ್ದಾರಿ: ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿ ಸರ್ಜಾಪುರ ಪಶು ವೈದ್ಯಕೀಯ ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರಾಜಶೇಖರ್‌, ಅತ್ತಿಬೆಲೆ ಪಶು ವೈದ್ಯಕೀಯ ಆಸ್ಪತ್ರೆಗೆ ಪ್ರಭಾರಿಯಾಗಿ ನೇಮಕವಾಗಿದ್ದು, ಗ್ರಾಪಂಚುನಾವಣೆಯ ಚುನಾವಣಾಧಿಕಾರಿಯಾಗಿ ಸಾಕಷ್ಟು ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರಿಂದಕೆಲಸದ ಒತ್ತಡ ಹೆಚ್ಚಿದ್ದು, ಒಂದೇ ಸಮಯದಲ್ಲಿ ಎರಡು ಆಸ್ಪತ್ರೆಗಳ ಜವಾಬ್ದಾರಿ ಹೆಚ್ಚಾಗಿದೆ. ಶುಚಿತ್ವ ಮತ್ತು ಆಸ್ಪತ್ರೆಯ ಸಂರಕ್ಷಣೆ ಬಗ್ಗೆ ಸರ್ಜಾಪುರಗ್ರಾಪಂ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕೆಲಸ ಮಾಡಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆಂದು ತಿಳಿಸಿದರು.

ಗ್ರಾಮದಲ್ಲಿ ನೂರಾರು ರೈತರು ಹೈನುಗಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ರಾಸುಗಳಿಗೆ ಆರೋಗ್ಯದಲ್ಲಿ ಏರುಪೇರಾದರೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದೆ. ಸಾರ್ವಜನಿಕರು ಆರೋಪಿ ಸುತ್ತಿದ್ದಂತೆ ಆಸ್ಪತ್ರೆ ಆವರಣ ಸಂಪೂರ್ಣ ಕಸಮಯವಾಗಿದೆ. ಗ್ರಾಪಂ ಸಭೆಯಲ್ಲಿ ಚರ್ಚಿಸಿ ಅನೈತಿಕ ಚಟುವಟಿಕೆಗೆ ಅವಕಾಶವಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಕಲಾವತಿ, ಸರ್ಜಾಪುರ ಗ್ರಾಪಂ ಸದಸ್ಯೆ

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.