ರಾತ್ರಿಯೂ ಮುಂದುವರಿಯಲಿದೆ ಡಿಸಿ ಗ್ರಾಮವಾಸ್ತವ್ಯ


Team Udayavani, Feb 16, 2021, 11:06 PM IST

ರಾತ್ರಿಯೂ ಮುಂದುವರಿಯಲಿದೆ ಡಿಸಿ ಗ್ರಾಮವಾಸ್ತವ್ಯ

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಪೈಲಟ್‌ ಯೋಜನೆಯಾಗಿ ಆರಂಭಗೊಂಡ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮ ಈ ತಿಂಗಳ ಮೂರನೇ ಶನಿವಾರದಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಹಗಲಷ್ಟೇ ಅಲ್ಲ ರಾತ್ರಿಯೂ ವಾಸ್ತವ್ಯ ಹೂಡಲಿದೆ.

ಪೈಲಟ್‌ ಯೋಜನೆ
ಬ್ರಹ್ಮಾವರ ತಾಲೂಕಿನ ನಂಚಾರು, ನಾಲ್ಕೂರು ಗ್ರಾಮದಲ್ಲಿ ಜನವರಿ ತಿಂಗಳಲ್ಲಿ ಉಡುಪಿ ಡಿಸಿ ಜಿ.ಜಗದೀಶ್‌ ಅವರು ವಿವಿಧ ಅಧಿಕಾರಿಗಳ ತಂಡದೊಂದಿಗೆ ಪೈಲಟ್‌ ಯೋಜನೆ ಅಂಗವಾಗಿ ಗ್ರಾಮವಾಸ್ತವ್ಯ ಮಾಡಿದ್ದರು. ಇದರ ಸಾಧಕ ಬಾಧಕಗಳನ್ನು ಅವರು ಇದೀಗ ಸರಕಾರಕ್ಕೆ ಮಂಡಿಸಿದ್ದಾರೆ. ಇಲ್ಲಿ ಗ್ರಾಮಸ್ಥರಿಂದ ವಿವಿಧ ಬೇಡಿಕೆಗಳ 160 ಅರ್ಜಿಗಳು ಬಂದಿದ್ದವು. ಡೀಮ್ಡ್ ಫಾರೆಸ್ಟ್‌ ವ್ಯಾಪ್ತಿಯಲ್ಲಿ ಹಕ್ಕುಪತ್ರಕ್ಕೆ ಸಂಬಂಧಿಸಿದ ಅರ್ಜಿಗಳು ಮಾತ್ರ ಬಾಕಿ ಆಗಿವೆ. ಡೀಮ್ಡ್ ಫಾರೆಸ್ಟ್‌ನಲ್ಲಿ ಪ್ರಸ್ತುತ ಹಕ್ಕುಪತ್ರ ನೀಡಲು ಅವಕಾಶ ಇಲ್ಲದ ಕಾರಣ ಅರ್ಜಿಗಳು ಬಾಕಿಯಾಗಿವೆ. ಉಳಿದಂತೆ ಎಲ್ಲ ಅರ್ಜಿಗಳೂ ವಿಲೇವಾರಿಯಾಗಿವೆ.

ತಲೆಮಾರಿನಿಂದ ಬಾಕಿ
ಕುಡುಬಿ ಜನಾಂಗದವರು ಇರುವ ಎರಡು ಕಾಲನಿಗಳಿಗೆ ಡಿಸಿ ಭೇಟಿ ನೀಡಿದ್ದರು. ಅಲ್ಲಿ ಮೂರು ತಲೆಮಾರುಗಳಿಂದ ಆಸ್ತಿ ದಾಖಲೆ ಸರಿಯಿಲ್ಲದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇಂತಹ ಪಹಣಿ, ಪೌತಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

ಬೇಡಿಕೆ
ಮಂಗಳವಾರ ಕಂದಾಯ ಸಚಿವ ಆರ್‌. ಅಶೋಕ್‌, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್‌ ಮಾಡಿದ್ದರು. ಇದರಲ್ಲಿ ಉಡುಪಿ ಡಿಸಿ ಪೈಲಟ್‌ ಯೋಜನೆಯ ವರದಿ ಸಲ್ಲಿಸಿದ್ದಷ್ಟೇ ಅಲ್ಲದೆ ವಾಚಿಕವಾಗಿಯೂ ಸಾಧಕ ಬಾಧಕಗಳ ಕುರಿತು ವಿವರಿಸಿದ್ದರು. ಇದರಲ್ಲಿ ಜಿಲ್ಲಾಧಿಕಾರಿಗಳ ಫ‌ಂಡ್‌ ನೀಡಲು ಬೇಡಿಕೆ ಇಟ್ಟಿದ್ದಾರೆ. ವಾಸ್ತವ್ಯ ಸಂದರ್ಭ ಶಾಲೆ, ಹಾಸ್ಟೆಲ್‌ ತುರ್ತು ದುರಸ್ತಿ ಇತ್ಯಾದಿಗಳ ಬೇಡಿಕೆ ಬಂದಾಗ ಮಂಜೂರಾತಿಗೆ ಅನುವಾಗುವಂತೆ ಫ‌ಂಡ್‌ ಸ್ಥಾಪನೆಗೆ ಬೇಡಿಕೆ ಇಟ್ಟಿದ್ದಾರೆ. ಕಂದಾಯ ಇಲಾಖೆಯ ಕಡತಗಳಿಗೆ ಸಂಬಂಧಿಸಿದ ಅರ್ಜಿಗಳು, ಹಕ್ಕುಪತ್ರ, ಪಹಣಿ ತಿದ್ದುಪಡಿ ಸೇರಿದಂತೆ ಸ್ಥಳದಲ್ಲಿ ಇತ್ಯರ್ಥಪಡಿಸಬಹುದಾದ ಅನೇಕ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ. ಅಂತಹ ಫ‌ಲಾನುಭವಿಗಳಿಗೆ ಪತ್ರ ವಿತರಿಸಲು ಸಂಜೆ ಆ ಪ್ರದೇಶದ ಶಾಸಕರು ಭೇಟಿ ನೀಡಿ ಸಭೆಯೊಂದನ್ನು ಆಯೋಜಿಸುವಂತೆ ಬೇಡಿಕೆ ಇಡಲಾಗಿದೆ. ಇವೆರಡೂ ಬೇಡಿಕೆಗೆ ಕಂದಾಯ ಸಚಿವರು ಸ್ಪಂದಿಸಿದ್ದಾರೆ.

ರಾತ್ರಿ ವಾಸ್ತವ್ಯ
ಪೈಲಟ್‌ ಯೋಜನೆಯಂತೆ ಹಗಲು ವಾಸ್ತವ್ಯ ಮಾತ್ರ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ರಾತ್ರಿಯೂ ವಾಸ್ತವ್ಯ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಕಂದಾಯ ಸಚಿವ ಆರ್‌. ಅಶೋಕ್‌ ಅವರೇ ಬೆಂಗಳೂರು ಗ್ರಾಮಾಂತರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಪಲಿಮಾರಿನಲ್ಲಿ
ಈ ಶನಿವಾರ ಕಾಪು ತಾಲೂಕಿನ ಪಲಿಮಾರು ಗ್ರಾಮದಲ್ಲಿ ಡಿಸಿ ವಾಸ್ತವ್ಯ ಹೂಡಲಿದ್ದಾರೆ. ಕಾಪು ತಹಶೀಲ್ದಾರ್‌ ಹೊರತಾಗಿ ಉಳಿದಂತೆ ಎಸಿ, ಎಲ್ಲ ತಹಶೀಲ್ದಾರ್‌ಗಳು ಅವರ ತಾಲೂಕಿನಲ್ಲಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಪ್ರದೇಶ ಇನ್ನೂ ನಿಶ್ಚಯವಾಗಿಲ್ಲ.

ಮನೆಮನೆಗೆ ಪಿಂಚಣಿ
ಮನೆ ಮನೆಗೆ ಪಿಂಚಣಿ ಯೋಜನೆಯನ್ನು ಉಡುಪಿ ಜಿಲ್ಲೆಯಲ್ಲಿ ಜಿ. ಜಗದೀಶ್‌ ನೇತೃತ್ವ ದಲ್ಲಿ ಆರಂಭಿಸಿದ್ದು ಇದರ ಯಶಸ್ಸಿನಿಂದ ರಾಜ್ಯಾದ್ಯಂತ ಇದೇ ಮಾದರಿಯಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ. ಅದೇ ಕಾರಣಕ್ಕಾಗಿ ಡಿಸಿ ಗ್ರಾಮವಾಸ್ತವ್ಯಕ್ಕೂ ಪೈಲಟ್‌ ಯೋಜನೆಗೆ ಉಡುಪಿಯನ್ನೇ ಆಯ್ಕೆ ಮಾಡಲಾಗಿತ್ತು.

ವಾಸ್ತವ್ಯ
ಈ ಶನಿವಾರ ಪಲಿಮಾರಿನಲ್ಲಿ ಗ್ರಾಮವಾಸ್ತವ್ಯ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆದಿವೆ. ಬ್ರಹ್ಮಾವರ ತಾಲೂಕಿನಲ್ಲಿ ನಡೆದ ಪೈಲಟ್‌ ಯೋಜನೆಯ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಯಾವುದೇ ನ್ಯೂನತೆಗಳು ಕಂಡುಬಂದಿಲ್ಲ, ಹೆಚ್ಚುವರಿ ಸೇರ್ಪಡೆಗೆ ಬೇಡಿಕೆ ಇಡಲಾಗಿದೆ.

-ಜಿ.ಜಗದೀಶ್‌, ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.