ಅಂದುಕೊಂಡಂತಾದರೆ ಘನತ್ಯಾಜ್ಯದಿಂದ ಬಯೋಗ್ಯಾಸ್‌ ಉತ್ಪಾದನೆ

ಪುತ್ತೂರು: ನಗರದ ಘನ ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಮಾದರಿ

Team Udayavani, Feb 17, 2021, 4:50 AM IST

ಅಂದುಕೊಂಡಂತಾದರೆ ಘನತ್ಯಾಜ್ಯದಿಂದ ಬಯೋಗ್ಯಾಸ್‌ ಉತ್ಪಾದನೆ

ಪುತ್ತೂರು: ಘನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆಗೈದು ಪೆಟ್ರೋಲಿಯಂ ಅನಿಲಕ್ಕೆ ಪರ್ಯಾಯವಾಗಿ ಬಯೋ ಗ್ಯಾಸ್‌ ಉತ್ಪಾದಿಸುವ ಮೆಗಾ ಯೋಜನೆ ಯೊಂದನ್ನು ಪುತ್ತೂರು ನಗರದಲ್ಲಿ ಅನು ಷ್ಠಾನಗೊಳಿಸಲು ಸಿದ್ಧತೆ ನಡೆದಿದೆ.

ನಗರದ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ರೋಟರಿ ಕ್ಲಬ್‌ ಪುತ್ತೂರು ಪೂರ್ವ ನೇತೃತ್ವದಲ್ಲಿ ಬೆಂಗಳೂರಿನ ಸೈನೋಡ್‌ ಬಯೋಸಯನ್ಸ್‌ ಕಂಪೆನಿ ಸಲಹೆಯಡಿ ನಗರಸಭೆಗೆ ಸೇರಿದ ಬನ್ನೂರು ಡಂಪಿಂಗ್‌ ಯಾರ್ಡ್‌ ನಲ್ಲಿ ಕಾರ್ಯಗತಗೊಳಿಸುವ ಪ್ರಸ್ತಾವಕ್ಕೆ ನಗರಸಭೆ ಕೌನ್ಸಿಲ್‌ ಒಪ್ಪಿಗೆ ನೀಡಿದ್ದು ಅನುಮೋದನೆಗಾಗಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಕಳುಹಿಸಿದೆ.

4.15 ಕೋ.ರೂ.ವೆಚ್ಚ
ಸುಮಾರು 4.15 ಕೋ.ರೂ. ವೆಚ್ಚದ ಯೋಜನೆ ಇದಾಗಿದೆ. ರೋಟರಿ ಸಂಸ್ಥೆ ಪೂರ್ಣ ಬಂಡವಾಳ ಹೂಡಲಿದೆ. ನಗರಸಭೆಯು ಡಂಪಿಂಗ್‌ ಯಾರ್ಡ್‌ನಲ್ಲಿ 2 ಎಕ್ರೆ ಜಾಗ, ದಿನಂಪ್ರತಿ 20 ಟನ್‌ನಷ್ಟು ಹಸಿ ತ್ಯಾಜ್ಯ ನಿರ್ವಹಣೆ ಜವಾಬ್ದಾರಿ ವಹಿಸಬೇಕಿದೆ. ಮುಂದಿನ 15 ವರ್ಷಗಳ ಕಾಲ ಯೋಜನೆಗೆ ಜಾಗ ಬಳಸಿಕೊಳ್ಳುವ ಬಗ್ಗೆ ರೋಟರಿ ಸಂಸ್ಥೆಯೊಂದಿಗೆ ನಗರಸಭೆ ಕರಾರು ಒಪ್ಪಂದ ಮಾಡಿಕೊಳ್ಳಬೇಕಿದೆ. ಅವಧಿ ಮುಗಿದ ಬಳಿಕ ಒಪ್ಪಂದ ನವೀಕರಣ ನಡೆಯಲಿದೆ. ಇದಕ್ಕೆ ಪ್ರತಿಫಲವಾಗಿ ನಿರ್ವಹಣೆ ಸಂಸ್ಥೆ ಜೈವಿಕ ಅನಿಲದ ಪ್ರಮಾಣ ಆಧರಿಸಿ ರಾಜಧನವನ್ನು ನಗರಸಭೆಗೆ ಪಾವತಿಸಲಿದೆ.

ಏನಿದು ಬಯೋಗ್ಯಾಸ್‌ ಪ್ಲಾಂಟ್‌?
ಕರ್ನಾಟಕ ರಾಜ್ಯದಲ್ಲಿ ದೊಡ್ಡಬಳ್ಳಾಪುರದಲ್ಲಿ ಬಯೋಗ್ಯಾಸ್‌ ಉತ್ಪಾದನಾ ಘಟಕವಿದೆ. ಎಲ್ಲವು ನಿರೀಕ್ಷೆಯಂತೆ ಸಾಗಿದರೆ ರಾಜ್ಯದ ಎರಡನೆ ಘಟಕ ಪುತ್ತೂರಿನಲ್ಲಿ ತಲೆ ಎತ್ತಲಿದೆ. ಮೊದಲಿಗೆ ಘನತ್ಯಾಜ್ಯದಿಂದ ಬಯೋಗ್ಯಾಸ್‌ ಉತ್ಪಾದಿಸಿ ಅದನ್ನು ಇಂಧನವಾಗಿ ಬಳಸುವುದು ಇಲ್ಲಿನ ಉದ್ದೇಶ.

ಆಹಾರ ಮತ್ತು ತರಕಾರಿ, ಶೌಚಾಲಯ, ಕೋಳಿ ಮತ್ತು ಮಾಂಸ, ಹಸಿ ಹುಲ್ಲು ತ್ಯಾಜ್ಯವನ್ನು ಸಂಸ್ಕರಿಸಿ ಬಯೋಗ್ಯಾಸ್‌ ಉತ್ಪಾದಿಸಲಾಗುತ್ತದೆ. ಸಂಗ್ರಹಿತ ತ್ಯಾಜ್ಯದಲ್ಲಿ ಹಸಿ ಮತ್ತು ಕೊಳೆಯುವ ತ್ಯಾಜ್ಯ ಬಹುಪಾಲು ಇದ್ದು ಇದನ್ನು ಸೂಕ್ತ ಪ್ರಮಾಣದಲ್ಲಿ ವ್ಯವಸ್ಥೆಗೊಳಿಸಿ ಸಂಕುಚಿತ ಜೈವಿಕ ಅನಿಲ ಉತ್ಪಾದಿಸಲಾಗುತ್ತದೆ. ಬಯೋಗ್ಯಾಸ್‌ ಉತ್ಪಾದನೆಯಿಂದ ಪರಿಸರಕ್ಕೆ ಸೇರುವ ಮಿಥೇನ್‌ ಪ್ರಮಾಣ ಕಡಿಮೆಗೊಳಿಸಲು ಸಾಧ್ಯವಿದೆ. ಬಯೋಗ್ಯಾಸ್‌ ಉತ್ಪಾದನೆ ಸಂದರ್ಭ ಪರಿಸರಕ್ಕೆ ಯಾವುದೇ ರೀತಿಯ ಹಾನಿಕಾರಕ ಪದಾರ್ಥಗಳು ಬಿಡುಗಡೆ ಆಗುವುದಿಲ್ಲ. ಎಲ್ಲ ರೀತಿಯಲ್ಲಿ ಸುರಕ್ಷತೆ ಕ್ರಮವನ್ನು ಅನುಸರಿಸಿ ಅನುಷ್ಠಾನಿಸಲಾಗುವುದು ಎನ್ನುತ್ತಾರೆ ಯೋಜನೆಯ ಸಲಹೆಗಾರ ಡಾ| ರಾಜೇಶ್‌ ಬೆಜ್ಜಂಗಳ.

ನಗರಸಭೆಗೆ ಪ್ರಸ್ತಾವನೆ
ರೋಟರಿ ಕ್ಲಬ್‌ ಪುತ್ತೂರು ಪೂರ್ವ ವೈಜ್ಞಾನಿಕ ಮಾದರಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಯೋಜನೆ ರೂಪಿಸಿ ನಗರಸಭೆಗೆ ಪ್ರಸ್ತಾವನೆ ಕಳುಹಿಸಿದೆ. ಇದಕ್ಕೆ ಕೌನ್ಸಿಲ್‌ ಸಭೆ ಒಪ್ಪಿಗೆ ನೀಡಿ ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಕಳುಹಿಸಲಿದೆ.
-ಜೀವಂಧರ್‌ ಜೈನ್‌, ಅಧ್ಯಕ್ಷರು, ಪುತ್ತೂರು ನಗರಸಭೆ

ಲಾಭಗಳೇನು?
ಇದು ಪರಿಸರ ಸ್ನೇಹಿ ಯೋಜನೆ. ಜತಗೆ ಇಂಧನ ವಲಯಕ್ಕೆ ಮಹತ್ವದ ಕೊಡುಗೆ ನೀಡಲಿದೆ. ಇಲ್ಲಿ ಉತ್ಪಾದಿತ ಗ್ಯಾಸ್‌ ಅನ್ನು ವಾಹನಗಳಿಗೆ, ವಾಣಿಜ್ಯ ಆಧಾರಿತವಾಗಿ ಬಳಸುವ ಸಿಲಿಂಡರ್‌ಗಳಿಗೆ ಪರ್ಯಾಯವಾಗಿ ಬಳಸಲು ಸಾಧ್ಯವಿದೆ. ಈಗಿನ ಸಿಲಿಂಡರ್‌ ಗ್ಯಾಸ್‌ಗಳಿಗೆ ಹೋಲಿಸಿದರೆ ಇದರ ದರವು ಕಡಿಮೆ. ಬಯೋಗ್ಯಾಸ್‌ ಉತ್ಪಾದನೆ ವೇಳೆ ದೊರೆಯುವ ಉಪ ಉತ್ಪನ್ನ ಜೈವಿಕ ಗೊಬ್ಬರ ರಾಸಾಯನಿಕ ರಹಿತವಾಗಿದ್ದು, ಇದನ್ನು ತರಕಾರಿ, ಹಣ್ಣಿನ ಬೆಳೆಗಳಿಗೆ ಗೊಬ್ಬರವಾಗಿ ಬಳಸಿದರೆ ಸಾವಯವ ಸಹಿತ ಉತ್ಪನ್ನಗಳು ದೊರೆಯಲು ಸಾಧ್ಯವಿದೆ ಎನ್ನುತ್ತಾರೆ ಯೋಜನೆಯ ರೂವಾರಿ ರೋಟರಿ ಕ್ಲಬ್‌ ಪುತ್ತೂರು ಪೂರ್ವ ಅಧ್ಯಕ್ಷ ಕೃಷ್ಣ ನಾರಾಯಣ ಮುಳಿಯ.

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.