ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸೋಣ: ಮಂಜು


Team Udayavani, Feb 17, 2021, 1:11 PM IST

ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸೋಣ: ಮಂಜು

ಮಾಗಡಿ: ನಾನು ಯಾರ ಮರ್ಜಿಗೂ ಕೆಲಸ ಮಾಡಲ್ಲ. ನಾವು, ನೀವು ಸೇರಿ ಜನರ ಸಮಸ್ಯೆ ಬಗೆಹರಿಸುವ ಕೆಲಸ ಮಾಡೋಣ ಎಂದು ಶಾಸಕ ಎ.ಮಂಜುನಾಥ್‌ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ನೇರವಾಗಿ ಉತ್ತರ ಸಿಗಬೇಕು. ಫ‌ಲಾನುಭವಿಗಳು ಹಕ್ಕು ಪತ್ರ ಪಡೆದು 25 ವರ್ಷಗಳಾಗಿದ್ದರೂ, ಅವರ ಹೆಸರಿಗೆ ಖಾತೆ, ಪಹಣೆಯಾಗಿಲ್ಲ. ಜನಪ್ರತಿನಿಧಿಗಳು, ಅಧಿಕಾರಿವರ್ಗ ಒಟ್ಟಾಗಿ ಕ್ಷೇತ್ರದ ಜನರ ಸಮಸ್ಯೆ ನಿವಾರಿಸಲು ಪ್ರಾಮಾಣಿಕ ಕೆಲಸ ಮಾಡೋಣ ಎಂದರು.

ಸರ್ಕಾರಿ ಕೆಚೇರಿಯಲ್ಲಿ ವಿಭಾಗ ಪತ್ರ, ಖಾತೆ, ಪಹಣಿ ಮಾಡದೆ ಸಣ್ಣಪುಟ್ಟ ಸಮಸ್ಯೆಗಳನ್ನು ತೋರಿಸಿ ವಿಳಂಬ ನೀತಿ ಅನುಸರಿಸಿ, ಜನರನ್ನು ಅಲೆಸುತ್ತಿದ್ದಾರೆ ಎಂಬ ಆರೋಪಕೇಳಿ ಬಂದಿದೆ. ಒಂದೆರಡು ಬಾರಿ ಕ್ಷಮೆ ಇರು ತ್ತದೆ.ಮೂರನೇ ಬಾರಿ ಕ್ಷಮೆಯಿಲ್ಲ. ಅರ್ಥ ಮಾಡಿ ಕೊಂಡು ಅಧಿಕಾರಿಗಳು ಕೆಸಲ ಮಾಡಬೇಕು. ಇದಕ್ಕಾ ಗಿಯೇ ಎಲ್ಲಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಮ್ಮುಖ ದಲ್ಲಿಯೇಪರಿಹಾರ ದೊರಕಿಸಿಕೊಡಲು ಜನ ಸ್ಪಂದನಾ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದರು.

ಕಳ್ಳರು, ದರೋಡೆಕೋರರನ್ನು ಹಿಡಿಯಿರಿ: ಪಟ್ಟಣದಲ್ಲಿ ಇತ್ತೀಚೆಗೆ ಕಳ್ಳತನ ಹೆಚ್ಚುತ್ತಿದೆ. ರಾತ್ರಿ ಬೀಟ್‌ ಮಾಡುತ್ತಿಲ್ಲ. ತರಕಾರಿ, ಹೂ, ತರಲು ಮಾರುಕಟ್ಟೆ ಬರುವ ಬೈಕ್‌ ಸವಾರರಿಗೆ ಸುಮ್ಮನೇ 500 ರೂ. ದಂಡ ವಿಧಿಸಲಾಗುತ್ತಿದೆ ಎಂದು ಅನೇಕ ದೂರು ಕೇಳಿ ಬರುತ್ತಿದೆ. ದಂಡ ವಿಧಿಸುವುದು ಬಿಡಿ. ಕಳ್ಳರು, ದರೋಡೆಕೋರರನ್ನು ಹಿಡಿದು ಸೂಕ್ತ ಕಾನೂನು ಕ್ರಮಜರುಗಿಸಿ ಎಂದು ಪಿಎಸ್‌ಐಗೆ ತಾಕೀತು ಮಾಡಿದರು.

ಹಕ್ಕುಪತ್ರಗಳ ವಿತರಣೆ: ಯಾರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆಯೋ, ಅಂತವರಿಗೆ ದಾಖಲೆ ನೀಡಲು ಸರ್ಕಾರ ಆದೇಶದ 94(ಸಿ) ಹಕ್ಕುಪತ್ರ ವಿತರಿಸಲಾಗಿದೆ. ತಾಲೂಕಿನಲ್ಲಿಅರ್ಹರಿಗೆ 80 ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕಸಬಾ ಹೋಬಳಿ 24, ಮಾಡಬಾಳ್‌ ಹೋಬಳಿ 16, ಕುದೂರು ಹೋಬಳಿ 36, ತಿಪ್ಪಸಂದ್ರ ಹೋಬಳಿ ನಾಲ್ಕು ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದರು. ನೂರಾರು ಸಾರ್ವಜನಿಕರು ಶಾಸಕರಿಗೆ ತಮ್ಮ ಅಹವಾಲು ಸಲ್ಲಿಸಿದರು. ಹೆಚ್ಚು ಜನ ಸೇರಿದೆ ಎಂದು ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ವಾರಕ್ಕೊಮ್ಮೆ ಹೋಬಳಿ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ರೂಪಿಸಲಾಗಿದೆ. ಜನರು ಅಲ್ಲಿಯೇ ತಮ್ಮ ದೂರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ತಹಶೀಲ್ದಾರ್‌ ಬಿ.ಜಿ.ಶ್ರೀನಿವಾಸ್‌ ಪ್ರಸಾದ್‌, ತಾಪಂ ಇಒ ಟಿ.ಪ್ರದೀಪ್‌,ಶಿರಸ್ತೇದಾರ್‌ ಜಗದೀಶ್‌, ಪಿಎಸ್‌ಐ ಶ್ರೀಕಾಂತ್‌, ವಲಯಆರಣ್ಯಾಧಿಕಾರಿ ಪುಷ್ಪ ಲತಾ, ತೋಟಗಾರಿಕೆ ಸಹಾಯಕ ನಿರ್ದೇಶಕ ಬಿ.ಎನ್‌. ನಾಗರಾಜು, ಪುರಸಭಾಧ್ಯಕ್ಷೆಭಾಗ್ಯಮ್ಮ ನಾರಾಯಣಪ್ಪ, ಸದಸ್ಯ ರಾದ ಎಂ.ಎನ್‌. ಮಂಜುನಾಥ್‌, ಅನಿಲ್‌ಕುಮಾರ್‌, ಕೆ.ವಿ.ಬಾಲರಘು,ಕಾಂತರಾಜು, ನಾಗರತ್ನಮ್ಮ, ಹೇಮಲತಾ, ತಾಲೂಕು ಜೆಡಿಎಸ್‌ ಯುವಾಧ್ಯಕ್ಷ ವಿಜಯಕುಮಾರ್‌, ಉಮೇಶ್‌, ರಂಗಣ್ಣ, ನರಸಿಂಹಯ್ಯ ಇದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.