ಬಸ್‌ ಸಂಚಾರವಿಲ್ಲದ ಊರಲ್ಲಿ ಡಿಸಿ ವಾಸ್ತವ್ಯ

ವಾಸ್ತವ್ಯಕ್ಕೆ ಗಡಿ ಗ್ರಾಮ ಅಗಸನಹಳ್ಳಿ ಆಯ್ಕೆ ! ­ಸಾರಿಗೆ ವ್ಯವಸ್ಥೆ, ರಸ್ತೆ ಅಭಿವೃದ್ಧಿ ನಿರೀಕ್ಷೆಯಲ್ಲಿ ಗ್ರಾಮಸ್ಥರು

Team Udayavani, Feb 17, 2021, 4:26 PM IST

DC Mahantesh Bilagi

ದಾವಣಗೆರೆ: ಇದೊಂದು ಪುಟ್ಟ ಊರು. ಜಿಲ್ಲಾ ಕೇಂದ್ರದಿಂದ ಬಲು ದೂರು. ಇನ್ನೂ ಸಾರಿಗೆ ಬಸ್‌ ಕಂಡಿಲ್ಲ ಈ ಊರು. ಇಲ್ಲಿಯ ಜನ ನಡೆಯಲೇ ಬೇಕು ಕನಿಷ್ಟ ಕಿಲೋಮೀಟರ್‌ ಮೂರು. ಮಕ್ಕಳ ಶಿಕ್ಷಣಕ್ಕೆ ತೊಂದರೆ ನೂರಾರು… ಇದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಂಡಿರುವ ಜಗಳೂರು ತಾಲೂಕಿನ ಅಗಸನಹಳ್ಳಿ ಗ್ರಾಮಸ್ಥರ ದೂರು.

ಫೆ. 20ರಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯವರು ತಮ್ಮ ಊರಲ್ಲಿ “ಗ್ರಾಮ ವಾಸ್ತವ್ಯ’  ಮಾಡಲಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಸ್‌ ಕಾಣದ ಗ್ರಾಮಕ್ಕೆ ಬಸ್‌ ವ್ಯವಸ್ಥೆಯಾಗಬಹುದು, ಉತ್ತಮ ರಸ್ತೆ ನಿರ್ಮಾಣವಾಗಬಹುದು ಹಾಗೂ ಗ್ರಾಮದ ಮಕ್ಕಳ ಶಿಕ್ಷಣಕ್ಕೆ ವಿಶೇಷ ವ್ಯವಸ್ಥೆಯಾಗಬಹುದು ಎಂಬ ಗ್ರಾಮಸ್ಥರ ನಿರೀಕ್ಷೆಗಳು ಗರಿಗೆದರಿವೆ.

ಅಗಸನಹಳ್ಳಿ ಪರಿಚಯ: ಜಗಳೂರು ತಾಲೂಕು ಬಸವನಕೋಟೆ ಗ್ರಾಪಂ ವ್ಯಾಪ್ತಿಯ ಅಗಸನಹಳ್ಳಿ ಜಿಲ್ಲಾ ಕೇಂದ್ರದಿಂದ ಅಂದಾಜು 75 ಕಿಮೀ ದೂರದಲ್ಲಿರುವ ಗಡಿ ಗ್ರಾಮ. ಇಲ್ಲಿಂದ ತಾಲೂಕು ಕೇಂದ್ರ ಜಗಳೂರು 36 ಕಿಮೀ ದೂರದಲ್ಲಿದೆ. (ಕೇವಲ 20 ಕಿಮೀ ದೂರದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಇದೆ). ಅಂದಾಜು ಇಲ್ಲಿ 50-60 ಮನೆಗಳಿದ್ದು ಸರಾಸರಿ 300ರಷ್ಟು ಜನಸಂಖ್ಯೆ ಇದೆ. ಫೆ. 20ರಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯವರು ಗ್ರಾಮಕ್ಕೆ ಬರಲಿದ್ದು ಸ್ಥಳೀಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಯಾತ್ರಿ ನಿವಾಸದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬಸವನಕೋಟೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟನೆ ನಡೆಯಲಿದ್ದು, ಬಳಿಕ ಅಗಸನಹಳ್ಳಿ ಗ್ರಾಮಸ್ಥರ ಸಮಸ್ಯೆ, ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ.

ಬಸ್‌ ಸಮಸ್ಯೆ: ಗ್ರಾಮಸ್ಥರನ್ನು ಕಾಡುತ್ತಿರುವ ಮುಖ್ಯ ಸಮಸ್ಯೆ ಎಂದರೆ ಸಾರಿಗೆ ಬಸ್‌ ಸಮಸ್ಯೆ. ಬಸ್‌ ಇಲ್ಲದೇ ಇರುವುದರಿಂದ ಇಲ್ಲಿಯ ಜನರು ನಿತ್ಯ ಮೂರು ಕಿ.ಮೀ. ದೂರ ನಡೆಯಲೇ ಬೇಕಾಗಿದೆ. ಇಲ್ಲಿಯ ಜನರು ಎಲ್ಲಿಗೇ ಹೋಗಬೇಕೆಂದರೂ ಮೂರು ಕಿಮೀ ದೂರದ ಬಸವನಕೋಟೆಗೆ ಹೋಗಬೇಕು. ಪ್ರಸ್ತುತ ಕೆಲವರು ಓಡಾಟಕ್ಕೆ ಬೈಕ್‌ನಂಥ ಸಣ್ಣ ವಾಹನಗಳನ್ನು ಅವಲಂಬಿಸಿದ್ದರೆ, ಬಡವರು ಸಂಚಾರಕ್ಕೆ ತಮ್ಮ ಕಾಲುಗಳನ್ನೇ ನಂಬಿಕೊಂಡಿದ್ದಾರೆ.

ಮಕ್ಕಳ ಶಿಕ್ಷಣಕ್ಕೆ ಸಮಸ್ಯೆ: ಗ್ರಾಮದಲ್ಲಿ ಕಿರಿಯ ಪ್ರಾಥಮಿಕ ಶಾಲೆ ಮಾತ್ರ ಇದ್ದು ಐದನೇ ತರಗತಿಯಿಂದ ಹಿಡಿದು ಮುಂದಿನ ಶಿಕ್ಷಣ ಪಡೆಯಲು ಇಲ್ಲಿಯ ಮಕ್ಕಳು ದೂರದ ಬಸವನಕೋಟೆ ಗ್ರಾಮಕ್ಕೆ ಹೋಗಬೇಕು. ಗ್ರಾಮದಲ್ಲಿ 25-30ಶಾಲಾ ಮಕ್ಕಳಿದ್ದಾರೆ. ಕೆಲವರು ತಮ್ಮ ಮಕ್ಕಳನ್ನು ಬೇರೆ ಊರಲ್ಲಿರುವ ಸಂಬಂಧಿಕರ ಮನೆಯಲ್ಲಿರಿಸಿ ಓದಿಸುತ್ತಿದ್ದರೆ, ಮತ್ತೆ ಕೆಲವರು ಮಕ್ಕಳಿಗೆ ಹಾಸ್ಟೆಲ್‌ನಲ್ಲಿಟ್ಟು ಓದಿಸುತ್ತಿದ್ದಾರೆ.

ಅನೇಕರು ನಡೆದುಕೊಂಡು ಹೋಗುವ ಕಾರಣ ಕ್ಕಾಗಾಗಿಯೇ ಅರ್ಧಕ್ಕೆ ಶಾಲೆ ಬಿಡುತ್ತಿದ್ದು ಇದರಲ್ಲಿ ಹೆಣ್ಣುಮಕ್ಕಳ ಸಂಖ್ಯೆಯೇ ಅಧಿಕವಾಗಿದೆ. ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಿಂದ ಗ್ರಾಮಕ್ಕೆ ಬಸ್‌ ವ್ಯವಸ್ಥೆಯ ಜತೆಗೆ ಹತ್ತಿರದ ಹಾಸ್ಟೆಲ್‌ ಗಳಲ್ಲಿ ಈ ಗ್ರಾಮದ ಮಕ್ಕಳಿಗೆ ವಿಶೇಷ ಪ್ರವೇಶ ಕಲ್ಪಿಸುವ ವ್ಯವಸ್ಥೆಯಾಗಬಹುದು. ಅಗಸನಕಟ್ಟೆ-ಬಸವಕೋಟೆ-ಕೊಟ್ಟೂರು ನಡುವಿನ ಐದು ಕಿಮೀ ರಸ್ತೆ, ಗ್ರಾಮದೊಳಗಿನ ಮೂರು ಮುಖ್ಯ ರಸ್ತೆಗಳು ಅಭಿವೃದ್ಧಿಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ ಗ್ರಾಮಸ್ಥರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.