ಮರ ಕಿತ್ತು ಸಸಿ ನೆಡುವ ಅರಣ್ಯಾಧಿಕಾರಿಗಳು!

ರಾಮಪ್ಪನಕೆರೆ ಸುತ್ತಮುತ್ತಲ ನೂರಾರು ಎಕರೆ ಅರಣ್ಯದಲ್ಲಿ ಮರಗಳು ನಾಶ | ಆರೋಪ ತಳ್ಳಿ ಹಾಕಿದ ಅಧಿಕಾರಿಗಳು

Team Udayavani, Feb 17, 2021, 4:55 PM IST

ಮರ ಕಿತ್ತು ಸಸಿ ನೆಡುವ ಅರಣ್ಯಾಧಿಕಾರಿಗಳು!

ಹುಳಿಯಾರು: ಹೋಬಳಿಯ ದಸೂಡಿ ಸಮೀಪದ ರಾಮಪ್ಪನಕೆರೆ ಸುತ್ತಮುತ್ತಲ ನೂರಾರು ಎಕರೆಅರಣ್ಯದಲ್ಲಿ ಅರಣ್ಯಾಧಿಕಾರಿಗಳೇ ಮರಗಳನ್ನು ಕಡಿದು ಅದೇ ಸ್ಥಳದಲ್ಲಿ ಪುನಹ ಅರಣ್ಯೀಕರಣ ಮಾಡಲು ಹೊರಟಿದ್ದಾರೆ ಎಂದು ಗಾಣಧಾಳು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಾಣಿ ಪಕ್ಷಿಗಳಿಗೆ ಹಣ್ಣು ಸಿಗುತ್ತಿತ್ತು: ಬುಕ್ಕಾಪಟ್ಟಣ ವಲಯ ಅರಣ್ಯ ಪ್ರದೇಶಕ್ಕೆ ಸೇರಿದ ದಸೂಡಿ ಸರ್ಕಾರಿಸರ್ವೆ ನಂಬರ್‌ 100, 101, 104, 106 ರಲ್ಲಿ ಸುಮಾರು290 ಎಕರೆ ಅರಣ್ಯದಲ್ಲಿ ಈ ಹಿಂದೆ ಜಾಣೆ, ಕಮರಸೇರಿದಂತೆ ಅನೇಕಗಿಡಗಳನ್ನು ಅರಣ್ಯ ಇಲಾಖೆನೆಟ್ಟು 5-6 ವರ್ಷ ಟ್ಯಾಂಕರ್‌ಗಳಲ್ಲಿ ನೀರುಣಿಸಿಬೆಳೆಸಿತ್ತು. ಆದರೆ, ಈಗ ಈ ಎಲ್ಲಾ ಮರಗಳುಹೆಮ್ಮರವಾಗಿ ಬೆಳೆದು ಪ್ರಾಣಿ ಪಕ್ಷಿಗಳಿಗೆ ನೆರಳು, ಹಣ್ಣು ನೀಡುತ್ತಿರುವ ಸಂದರ್ಭದಲ್ಲಿ ನಿರ್ದಾಕ್ಷಿಣ್ಯವಾಗಿ ಕಡಿದು ಧರೆಗುರುಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾವಿರಾರು ಮರಗಳು ನಾಶ: ಮುಂಬೈ, ಕರ್ನಾಟಕ ಹಾಗೂ ಗೋವಾ ರಾಜ್ಯಗಳಲ್ಲಿ ಹಾದು ಹೋಗುವರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಹಾಳಾಗಿರುವಅರಣ್ಯ ನಾಶದ ಪರ್ಯಾಯವಾಗಿ ಅರಣ್ಯ ಬೆಳೆಸಲುಬುಕ್ಕಾಪಟ್ಟಣ ಅರಣ್ಯ ಇಲಾಖೆಗೆ ಲಕ್ಷಾಂತರ ರೂ.ಬಿಡುಗಡೆಯಾಗಿದೆ. ಈ ಹಣವನ್ನು ಖರ್ಚು ಮಾಡುವ ಸಲುವಾಗಿ ಈಗಾಗಲೇ ಸರ್ವೆ ನಂಬರ್‌104ರಲ್ಲಿ ಹಿಟಾಚಿ ಯಂತ್ರದಿಂದ ಸಾವಿರಾರುಮರಗಳನ್ನು ನೆಲಕ್ಕೆ ಉರುಳಿಸಿದ್ದಾರೆ ಎಂದು ಚಿತ್ರ ಸಹಿತ ಗ್ರಾಪಂ ಸದಸ್ಯ ಗುರುವಾಪುರ ಶ್ರೀನಿವಾಸ್‌ ಆರೋಪಿಸಿದ್ದಾರೆ.

ಜನಪ್ರತಿನಿಧಿಗಳು ಮತ್ತು ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕಠಿಣ ಕ್ರಮ ಕೈಗೊಳ್ಳದಿದ್ದರೆ,ಉಳಿದಿರುವ ಮರಗಳನ್ನೂ ಕಡಿದು ನೆಲಸಮಮಾಡುತ್ತಾರೆ. ಹೀಗಾಗಿ ಎಚ್ಚೆತ್ತು ಇಂತಹ ಕೃತ್ಯನಡೆಸಿರುವ ಬುಕ್ಕಾಪಟ್ಟಣ ವಲಯ ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮರ ಉ‌ರುಳಿಸಿ ಸಸಿ ನೆಡುವುದು ಸರಿಯೇ? :

ಬುಕ್ಕಾಪಟ್ಟಣ ಅರಣ್ಯ ಪ್ರದೇಶಲ್ಲಿ ಅರಣ್ಯೀಕರಣಗೊಳಿಸಲು ಸಾಕಷ್ಟು ಅರಣ್ಯ ಪ್ರದೇಶವಿದ್ದರೂ ಮರಗಳನ್ನು ಕಡಿದು ಪುನಃ ಅದೇ ಸ್ಥಳದಲ್ಲಿ ನೆಡಲು ಹೊರಟಿರುವುದರ ಹಿಂದಿರುವ ರಹಸ್ಯವಾದರೂ ಏನು. ಅರಣ್ಯೀಕರಣ ಮಾಡುವ ಮೊದಲು ಸ್ಥಳೀಯ ಸಭೆ ನಡೆಸಬೇಕಿದೆ. ಆದರೆ, ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ಹುಲುಸಾಗಿ ಬೆಳೆದಿರುವ ಮರಗಳನ್ನು ತೆರವುಗೊಳಿಸಿ ಮತ್ತೆ ಗಿಡಗಳನ್ನು ನೆಡಲು ತೀರ್ಮಾನಿಸಿರುವುದು ಆಕ್ಷೇಪಾರ್ಹ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹಿಟಾಚಿ ಓಡಾಡುವಾಗ ಮುರಿದಿವೆ :

ಕುಂದಾಪುರ, ಹೊನ್ನಾವರದ ಮಾರ್ಗದಲ್ಲಿ ಅರಣ್ಯ ಜಾಗ ಬಿಟ್ಟುಕೊಡಲಾಗಿತ್ತು. ಅದಕ್ಕೆ ಪರ್ಯಾಯವಾಗಿ ಜಿಲ್ಲೆಯಲ್ಲಿ 300 ಹೆಕ್ಟೇರ್‌ ಅರಣ್ಯೀಕರಣ ಮಾಡಲು 2010ರಲ್ಲಿ ನಿರ್ಧರಿಸಿ ದಸೂಡಿ ಭಾಗದ 120 ಹೆಕ್ಟೇರ್‌ ಅನ್ನು ಆಯ್ಕೆ ಮಾಡಲಾಗಿತ್ತು. ಈಗ ಅನುಮೋದನೆ ದೊರೆತಿದ್ದು ಹೊಸ ಸಸಿ ನೆಡಲು ಟ್ರಂಚ್‌ ತೆಗೆಯಲು ಹಿಟಾಚಿ ಬಳಸಲಾಗಿತ್ತು. ಟ್ರಂಚ್‌ ತೆಗೆಯಲು ಹಿಟಾಚಿ ಓಡಾಡುವಾಗ ಕೆಲ ಉದಯದ ಗಿಡಗಳು ಮುರಿದಿವೆಯೇ ವಿನಃ ಉದ್ದೇಶ ಪೂರ್ವಕವಾಗಿ ಗಿಡಗಳನ್ನು ಕೀಳಲಾಗಿಲ್ಲ. ಇದನ್ನು ಗಮನಿಸಿ ಕೆಲಸ ನಿಲ್ಲಿಸಿದ್ದು ಹಿಟಾಚಿ ಸಹ ಅಲ್ಲಿಯೇ ನಿಲ್ಲಿಸಲಾಗಿದೆ. ಪಂಚಾಯ್ತಿಯವರು ಬಯಲು ಸ್ಥಳದಲ್ಲಿ ಕೂಲಿಯವರಿಂದ ಕೆಲಸ ಮಾಡಿಸಿ ಸಸಿ ನೆಡಲುತಿಳಿಸಿದ್ದಾರೆ. ಮೇಲಧಿಕಾರಿಗಳ ಅನುಮತಿಪಡೆದು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.