ಪಶು ಪಾಲಕರಿಗೆ ಅಂಬ್ಯುಲೆನ್ಸ್‌ ಸಂಜೀವಿನಿ; | 1962ಕ್ಕೆ ಕರೆ ಮಾಡಿದ್ರೆ ವೈದ್ಯರು ಹಾಜರ್‌

ಪ್ರತಿ ಪಾಲಿಕ್ಲಿನಿಕ್‌ನ ಒಬ್ಬರು ಶಸ್ತ್ರ ಚಿಕಿತ್ಸಾ ತಜ್ಞರು ಮತ್ತು ಸಹಾಯಕರನ್ನು ನೇಮಕ ಮಾಡಲಾಗಿದೆ.

Team Udayavani, Feb 17, 2021, 5:38 PM IST

ಪಶು ಪಾಲಕರಿಗೆ ಅಂಬ್ಯುಲೆನ್ಸ್‌ ಸಂಜೀವಿನಿ; | 1962ಕ್ಕೆ ಕರೆ ಮಾಡಿದ್ರೆ ವೈದ್ಯರು ಹಾಜರ್‌

ಬೀದರ: ಜಾನುವಾರುಗಳಲ್ಲಿ ಎದುರಾಗುವ ಅರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ, ಮೂಕ ರೋಧನೆ ತಪ್ಪಿಸಲು ಸರ್ಕಾರ ಜಾರಿಗೊಳಿಸಿರುವ “ಪಶು ಸಂಜೀವಿನಿ’ ಸೇವೆಗೆ ಗಡಿ ಜಿಲ್ಲೆ ಬೀದರನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ರೈತರ ಮನೆ ಬಾಗಿಲಿಗೆ ಪಶು ವೈದ್ಯಕೀಯ ಸೇವೆ ನೀಡುತ್ತಿರುವ ಪಶು ಶಸ್ತ್ರ ಚಿಕಿತ್ಸಾ ವಾಹನ ಪಶು ಪಾಲಕರಿಗೆ “ಸಂಜೀವಿನಿ’ಯಾಗಿಯೇ ಪರಿಣಿಮಿಸುತ್ತಿದೆ.

ರೋಗಗ್ರಸ್ಥ ಜಾನುವಾರುಗಳಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ದೂರದ ಪಶು ಆಸ್ಪತ್ರೆಗಳಿಗೆ ಸಾಗಿಸಲು ರೈತರಿಗೆ ಅನಾನುಕೂಲದ ಜತೆಗೆ ಆರ್ಥಿಕ ಹೊರೆ ಆಗುತ್ತಿದ್ದು, ಸಮಯಕ್ಕೆ ಚಿಕಿತ್ಸೆ ಲಭ್ಯವಾಗದೇ ಅಸುನೀಗುತ್ತಿವೆ. ಇದನ್ನು ತಪ್ಪಿಸಿ ತುರ್ತು ಆರೋಗ್ಯ ಸೇವೆ ಒದಗಿಸಲು ಸರ್ಕಾರ ಬೀದರ ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ತಲಾ ಒಂದರಂತೆ ಪಶು ಸಂಜೀವಿನಿ ಅಂಬ್ಯುಲೆನ್ಸ್‌ ಸೇವೆ ಜಾರಿಗೊಳಿಸಿದೆ. ಬೀದರ ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಕಾಯಿಲೆಗಳಿಗೆ ತುತ್ತಾಗಿದ್ದ 40ಕ್ಕೂ ಹೆಚ್ಚು ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡಿದೆ. ರೈತರ ಮನೆ ಬಾಗಿಲಿಗೆ ತೆರಳಿ ಅವಶ್ಯಕ ಹಾಗೂ ತುರ್ತು ಚಿಕಿತ್ಸೆ ಒದಗಿಸಿದೆ.

ಅಂಬ್ಯುಲೆನ್ಸ್‌ ವಿಶೇಷತೆಗಳು: ಸುಸಜ್ಜಿತ ಅಂಬ್ಯುಲೆನ್ಸ್‌ ವಾಹನ ಆಧುನಿಕ ಪಶು ವೈದ್ಯಕೀಯ ಸೇವೆಗಳಾದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್‌ ಉಪಕರಣ ಅಳವಡಿಸಲಾಗಿದೆ. ಪ್ರಸೂತಿ ಮತ್ತು ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್‌, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್‌, ವಾಶ್‌ ಬೇಸಿನ್‌, ಆಮ್ಲಜನಕ ಸಪೋರ್ಟ್‌ ಸಿಸ್ಟಮ್‌ ಒಳಗೊಂಡಿದ್ದು, ಪ್ರತಿ ಪಾಲಿಕ್ಲಿನಿಕ್‌ನ ಒಬ್ಬರು ಶಸ್ತ್ರ ಚಿಕಿತ್ಸಾ ತಜ್ಞರು ಮತ್ತು ಸಹಾಯಕರನ್ನು ನೇಮಕ ಮಾಡಲಾಗಿದೆ.

ಪಶು ಪಾಲಕರು ಸಹಾಯವಾಣಿ ಸಂಖ್ಯೆ-1962ಕ್ಕೆ ಕರೆ ಮಾಡಿದರೆ ರೋಗಗ್ರಸ್ತ ಜಾನುವಾರು ಸ್ಥಳಕ್ಕೆ ವಾಹನ ತೆರಳಿ ವೈದ್ಯಕೀಯ ಸೇವೆ ನೀಡಲಿದೆ. ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆಯುಬ್ಬರ, ಉಸಿರುಗಟ್ಟುವುದು, ಅಪಘಾತ, ಮೂಳೆಮುರಿತ ಸೇರಿದಂತೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಜಾನುವಾರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯುವ ಸಮಸ್ಯೆಗಳಿಗೆ ಪರಿಹಾರ ಸಿಕ್ಕಂತಾಗಿದೆ. ಈ ಮೂಲಕ ಜಾನುವಾರುಗಳ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟ ತಪ್ಪಿಸಲು ಅನುಕೂಲ ಆಗುತ್ತಿದೆ.

ಬೀದರ, ರಾಯಚೂರು, ಕಲುಬುರ್ಗಿ, ಧಾರವಾಡ, ವಿಜಯಪುರ, ಬೆಳಗಾವಿ, ಮಂಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ,
ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಪಶು ವೈದ್ಯಕೀಯ ಪಾಲಿಕ್ಲಿನಿಕ್‌ಗಳಿಗೆ ನೀಡಲಾಗಿದೆ. ಸದ್ಯ ರಾಜ್ಯದ 15 ಜಿಲ್ಲೆಗಳಲ್ಲಿ “ಪಶು ಸಂಜೀವಿನಿ’ ಕಾರ್ಯಾರಂಭ ಮಾಡಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೆ ಈ ಸೇವೆಯನ್ನು ವಿಸ್ತರಿಸುವ ಸಾಧ್ಯತೆ ಇದೆ.

“ವೈದ್ಯ ಸಿಬ್ಬಂದಿ ನೇಮಿಸಲಿ’
ಜಾನುವಾರುಗಳ ತುರ್ತು ಆರೋಗ್ಯ ಸೇವೆಗಾಗಿ ಪಶು ಸಂಜೀವಿನಿ ಜಾರಿಗೊಳಿಸಿರುವ ಸರ್ಕಾರ, ಚಿಕಿತ್ಸೆಗೆ ಅಗತ್ಯವಾಗಿರುವ ವೈದ್ಯ ಸಿಬ್ಬಂದಿಗಳ ನೇಮಕದಲ್ಲಿ ನಿರ್ಲಕ್ಷ ವಹಿಸಿದೆ. ಸದ್ಯ ಪಾಲಿಕ್ಲಿನಿಕ್‌ನ ಸಿಬ್ಬಂದಿಗಳನ್ನೇ ನಿಯುಕ್ತಿ ಮಾಡಿರುವುದರಿಂದ ರೈತರಿಗೆ 24×7 ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಅಡ್ಡಿಯಾಗುತ್ತಿದೆ. ಪಶುಗಳಿಗೆ ಸಮಯಕ್ಕೆ ಚಿಕಿತ್ಸೆ ಸೌಲಭ್ಯ ಸಿಗದಂತಾಗಿದೆ. ಪಶು ಸಂಜೀವಿನಿ ವಾಹನಗಳಿಗೆ ಪ್ರತ್ಯೇಕ ಶಸ್ತ್ರ ಚಿಕಿತ್ಸಾ ತಜ್ಞರು, ಸಹಾಯಕರ ಜತೆಗೆ ಅಗತ್ಯ ಚಾಲಕರ ನೇಮಕಾತಿಯ ಅಗತ್ಯವಿದೆ.

ಪಶು ಸಂಜೀವಿನಿ ಅಂಬ್ಯುಲೆನ್ಸ್‌ ಸೇವೆಗೆ ಬೀದರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ರೈತರು, ಪಶು ಪಾಲಕರಿಗೆ ಹೆಚ್ಚು ಅನುಕೂಲ ಆಗುತ್ತಿದೆ. ರೋಗಗ್ರಸ್ತ
ಜಾನುವಾರುಗಳನ್ನು ಪಶು ಆಸ್ಪತ್ರೆಗೆ ತರಬೇಕಾದರೆ 2-3 ಸಾವಿರ ರೂ. ವೆಚ್ಚವಾಗುತ್ತದೆ. ಈಗ ರೋಗಪೀಡಿತ ಜಾನುವಾರುಗಳ ಸ್ಥಳಕ್ಕೆ ತಜ್ಞ ವೈದ್ಯರು ಮತ್ತು ಉಪಕರಣಗಳನ್ನು ಒಳಗೊಂಡ ವಾಹನ ತೆರಳಿ ಚಿಕಿತ್ಸಾ ಸೇವೆ ನೀಡುತ್ತಿದೆ.
ಡಾ| ರವೀಂದ್ರ ಭೂರೆ, ಪ್ರಭಾರ ಉಪ ನಿರ್ದೇಶಕರು ಪಶು ಪಾಲಿಕ್ಲಿನಿಕ್‌, ಬೀದರ

 ಶಶಿಕಾಂತ ಬಂಬುಳಗೆ

 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.