ಹತ್ಯೆ ಕೇಸ್; ಗಲ್ಲುಶಿಕ್ಷೆಗೆ ಗುರಿಯಾದ ಶಬನಂ ಉತ್ತರಪ್ರದೇಶ ಗವರ್ನರ್ ಗೆ ಕ್ಷಮಾದಾನ ಅರ್ಜಿ

ಸ್ವಾತಂತ್ರ್ಯೋತ್ತರ ಕಾಲಘಟ್ಟದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಮರಣದಂಡನೆ ಜಾರಿಯಾದಂತಾಗುತ್ತದೆ.

Team Udayavani, Feb 19, 2021, 12:52 PM IST

ಹತ್ಯೆ ಕೇಸ್; ಗಲ್ಲುಶಿಕ್ಷೆಗೆ ಗುರಿಯಾದ ಶಬನಂ ಉತ್ತರಪ್ರದೇಶ ಗವರ್ನರ್ ಗೆ ಕ್ಷಮಾದಾನ ಅರ್ಜಿ

ನವದೆಹಲಿ: ಉತ್ತರಪ್ರದೇಶದ ಅಮ್ರೋಹಾ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಶಬನಂ ಕ್ಷಮಾದಾನ ಕೋರಿ ಉತ್ತರಪ್ರದೇಶ ಗವರ್ನರ್ ಆನಂದಿಬೆನ್ ಪಟೇಲ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:402 ಕೋ.ರೂ. ಅಕ್ರಮ ಪತ್ತೆ: ಐಟಿ ದಾಳಿ ವೇಳೆ ಭಾರೀ ಅಕ್ರಮ ಬಯಲು

ಶಬನಂ ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ಸಿದ್ಧತೆ ನಡೆಯುತ್ತಿರುವ ನಡುವೆಯೇ ಕ್ಷಮಾದಾನ ಕೋರಿ ಗವರ್ನರ್ ಗೆ ಮನವಿ ಸಲ್ಲಿಸಿರುವುದಾಗಿ ವರದಿ ವಿವರಿಸಿದೆ.

ಏನಿದು ಘಟನೆ:

2008ರ ಏಪ್ರಿಲ್ 14ರಂದು ಶಬನಂ ತನ್ನ ಪ್ರಿಯತಮನ ಜೊತೆ ಸೇರಿ ಉತ್ತರಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿದ್ದ ತನ್ನದೇ ಕುಟುಂಬದ ಏಳು ಜನರನ್ನು ಹತ್ಯೆಗೈದಿದ್ದಳು. ಏಳು ತಿಂಗಳ ಮಗು ಸೇರಿದಂತೆ ಏಳು ಮಂದಿಯನ್ನು ನಿರ್ದಯವಾಗಿ ಕೊಚ್ಚಿ ಹತ್ಯೆಗೈದಿದ್ದರು. ಈ ಪ್ರಕರಣದಲ್ಲಿ ಆಕೆಯ ಅಪರಾಧ ಸಾಬೀತಾಗಿದ್ದು, ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು.

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಈ ಕೊಲೆ ಪ್ರಕರಣ ನಡೆದು ಐದು ದಿನಗಳ ನಂತರ ಶಬನಂ ಹಾಗೂ ಆಕೆಯ ಪ್ರಿಯಕರ ಸಲೀಂನನ್ನು ಪೊಲೀಸರು ಬಂಧಿಸಿದ್ದರು. ಈ ಸಂದರ್ಭದಲ್ಲಿ ಶಬನಂ ಗರ್ಭಿಣಿಯಾಗಿದ್ದಳು. 2008ರ ಡಿಸೆಂಬರ್ ನಲ್ಲಿ ಶಬನಂ ಗಂಡು ಮಗುವಿಗೆ ಜನ್ಮನೀಡಿದ್ದಳು.

2010ರ ಜುಲೈ 14ರಂದು ಜಿಲ್ಲಾ ಸೆಷನ್ಸ್ ಕೋರ್ಟ್ ಶಬನಂ ಹಾಗೂ ಸಲೀಂಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ನಂತರ ಇಬ್ಬರು ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಸೆಷನ್ಸ್ ಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿತ್ತು. ನಂತರ ಇಬ್ಬರು ಹಂತಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂಕೋರ್ಟ್ ಕೂಡಾ 2015ರಲ್ಲಿ ಮರಣದಂಡನೆ ಶಿಕ್ಷೆ ಎತ್ತಿಹಿಡಿದಿತ್ತು.

ಎಲ್ಲಾ ಕಾನೂನು ಅವಕಾಶ ಮುಗಿದ ಬಳಿಕ ಶಬನಂ ಕ್ಷಮಾದಾನ ಅರ್ಜಿಯನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ್ದು, ಈಗ ಗಲ್ಲುಶಿಕ್ಷೆ ವಿಧಿಸುವ ಪ್ರಕ್ರಿಯೆ ಆರಂಭಗೊಂಡಿದೆ. ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ ಜಾರಿಗೊಳಿಸಿದ್ದ ವಧಾಕಾರ ಪವನ್ ಜಲ್ಲಾದ್, ಮಥುರಾ ಕಾರಾಗೃಹಕ್ಕೆ ಬಂದು ವಧಾಸ್ಥಾನವನ್ನು ಪರಿಶೀಲಿಸಿ ಹೋಗಿರುವುದಾಗಿ ವರದಿ ತಿಳಿಸಿದೆ.

ಶಬನಂ ಗಲ್ಲುಶಿಕ್ಷೆಗೆ ಜಾರಿಯಾದರೆ ಭಾರತದಲ್ಲಿ ಸ್ವಾತಂತ್ರ್ಯೋತ್ತರ ಕಾಲಘಟ್ಟದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಮರಣದಂಡನೆ ಜಾರಿಯಾದಂತಾಗುತ್ತದೆ.

ಟಾಪ್ ನ್ಯೂಸ್

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.