ಬ್ರಹ್ಮೇಶ್ವರ ದೇಗುಲದಲ್ಲಿ ಕಳ್ಳತನಕ್ಕೆ ಯತ್ನ
Team Udayavani, Feb 19, 2021, 7:59 PM IST
ಕಿಕ್ಕೇರಿ: ಹೊಯ್ಸಳರ ಕಾಲದ ಬ್ರಹ್ಮೇಶ್ವರ ದೇಗುಲಕ್ಕೆ ದುಷ್ಕರ್ಮಿಗಳು ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಿಕ್ಕೇರಿಯಲ್ಲಿ ನಡೆದಿದೆ. ಇದೇ ರೀತಿ ಕುರುಹಿನಶೆಟ್ಟಿ ಸಮಾಜದ
ಸಿದ್ಧಾರೂಢಸ್ವಾಮಿ ಮಠ, ನವಗ್ರಹ ದೇಗುಲದಲ್ಲಿ ಕಳ್ಳತನಕ್ಕೆ ಯತ್ನಿಸಿ, ಹುಂಡಿಯಲ್ಲಿದ್ದ ಹಣ ದೋಚಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಬ್ರಹ್ಮೇಶ್ವರ ದೇಗುಲದ ಭಾರಿ ಗಾತ್ರದ ಮರದ ಬಾಗಿಲು ಮುರಿದಿದ್ದಾರೆ. ಬ್ರಹ್ಮೇಶ್ವರ ದೇಗುಲದ ದ್ವಾರ ಬಾಗಿಲಿನಲ್ಲಿದ್ದ ಮರದ ಬಾಗಿಲು, ಬೀಗ ಮುರಿದು, ಮತ್ತೂಂದು ಕಬ್ಬಿಣದ ಬಾಗಿಲು ಮುರಿಯಲು ಸಾಧ್ಯವಾಗದೆ ವಾಪಸ್ಸಾಗಿದ್ದಾರೆ. ನವಗ್ರಹ ಹಾಗೂ ಸಿದ್ಧಾರೂಢ ಸ್ವಾಮಿ ದೇವಾಲಯದ ಕಬ್ಬಿಣದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.
ಪದೇ ಪದೆ ದೇಗುಲದಲ್ಲಿ ಕಳ್ಳತನ ಆಗುತ್ತಿದ್ದು, ರಕ್ಷಣೆಗಾಗಿ ಸೂಕ್ತ ಕಾವಲುಗಾರರು, ಸಿಸಿ ಕ್ಯಾಮೆರಾ ಅಳವಡಿಸಲು ಭಕ್ತರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಕಿಕ್ಕೇರಿ ಪಿಎಸ್ಐ ಎಚ್.ಕೆ. ನವೀನ್ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ