ಕೋವಿಡ್‌ ಎರಡನೇ ಅಲೆಯ ಅಪಾಯದ ಹಿನ್ನೆಲೆ : ಆತಿಥ್ಯ ತಾಣಗಳಿಗೆ ಮುನ್ನೆಚ್ಚರಿಕೆ ಸುತ್ತೋಲೆ

ಆರೋಗ್ಯ ಇಲಾಖೆ ಎಚ್ಚರಿಕೆ

Team Udayavani, Feb 21, 2021, 11:42 AM IST

ಕೋವಿಡ್‌ ಎರಡನೇ ಅಲೆಯ ಅಪಾಯದ ಹಿನ್ನೆಲೆ : ಆತಿಥ್ಯ ತಾಣಗಳಿಗೆ ಮುನ್ನೆಚ್ಚರಿಕೆ ಸುತ್ತೋಲೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ರಾಜ್ಯದ ಆತಿಥ್ಯ ತಾಣಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಂಟೈನ್ಮೆಂಟ್‌ ವಲಯಗಳಲ್ಲಿ ಆಹಾರ ನಿರ್ವಹಣೆ ಹಾಗೂ ಅಡುಗೆ ಸೇವೆಗಳನ್ನು ಮುಚ್ಚ ಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿವಾಹ, ರಾಜಕೀಯ ಸಮಾವೇಶ ಸೇರಿ ವಿವಿಧ ಸಮಾರಂಭಗಳಿಗೆ ಅಡುಗೆ ಸೇವೆ ನೀಡುವವರು ಹಾಗೂ ಹೋಟೆಲ್‌, ರೆಸ್ಟೋರೆಂಟ್‌, ಡಾಬಾಗಳಲ್ಲಿ ಕಾರ್ಯ ನಿರ್ವಹಿ ಸುವವರು ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಡುಗೆ ಸೇವೆಯಲ್ಲಿ ಕೆಲಸ ಮಾಡುವವರು ಹಾಗೂ ಆಹಾರ ನಿರ್ವಹಿಸುವವರು ಕನಿಷ್ಠ ಆರು ಅಡಿ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸಬೇಕು. ಕಡ್ಡಾಯವಾಗಿ ಮುಖಗವಸನ್ನು ಧರಿಸಿರಬೇಕು. ಕೈಗಳನ್ನು ಆಗಿಂದಾಗೇ ಸಾಬೂನಿನಿಂದ ತೊಳೆದುಕೊಳ್ಳಬೇಕು. ಸೋಂಕು ನಿವಾರಕ ದ್ರಾವಣದಿಂದ ಕೈಗಳನ್ನು ಸ್ವಚ್ಛಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.

ಆರೋಗ್ಯ ಇಲಾಖೆ ನಿರ್ದೇಶನ: ಕೆಮ್ಮುವಾಗ ಮತ್ತು ಸೀನುವಾಗ ಮೂಗು ಬಾಯಿಯನ್ನು ಕರವಸ್ತ್ರ, ಮೊಣಕೈ ಅಥವಾ ಟಿಶ್ಯೂ ಪೇಪರ್‌ಗಳಿಂದ ಮುಚ್ಚಿಕೊಳ್ಳಬೇಕು. ದಿಢೀರ್‌ ಅನಾರೋಗ್ಯ ಕಾಣಿಸಿಕೊಂಡಲ್ಲಿ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ತಪಾಸಣೆ ಮಾಡಿಸಿಕೊಳ್ಳಬೇಕು. ಆಹಾರವನ್ನು ತಯಾರಿಸುವಾಗ ಹಾಗೂ ಆಹಾರ ಪದಾರ್ಥವನ್ನು ಬಡಿಸುವಾಗ ಕೈಗವಸುಗಳನ್ನು ಧರಿಸಬೇಕು. ಲಕ್ಷಣ ರಹಿತ ಸಿಬ್ಬಂದಿಗೆ ಮಾತ್ರ ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಬೇಕು ಮತ್ತು ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಥರ್ಮಲ್‌ ಸ್ಕ್ರೀನಿಂಗ್‌ ಮೂಲಕ ದೇಹದಲ್ಲಿನ ಉಷ್ಣಾಂಶವನ್ನು ಪ್ರತಿನಿತ್ಯ ತಪಾಸಣೆ ಮಾಡಬೇಕು. ಸೋಂಕು ನಿವಾರಕ ದ್ರಾವಣವನ್ನು ಇಡಬೇಕು. ಗ್ರಾಹಕರು ಸರಿಯಾಗಿ ಅಂತರವನ್ನು ಕಾಯ್ದುಕೊಳ್ಳುವಂತೆ ಆತಿಥ್ಯ ಕೇಂದ್ರಗಳ ಮುಖ್ಯಸ್ಥರು ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ.

ತಿಂಡಿ , ಊಟಗಳಿಗೆ ಬಳಸಿ ಬಿಸಾಡಬಹುದಾದ ತಟ್ಟೆಗಳು, ಚಮಚಗಳನ್ನು ಹೆಚ್ಚಾಗಿ ಬಳಸಬೇಕು. ನೈಸರ್ಗಿಕ ಗಾಳಿ, ಬೆಳಕಿನ ವ್ಯವಸ್ಥೆ ಸೂಕ್ತವಾಗಿ ಇರುವಂತೆ ನೋಡಿಕೊಳ್ಳಬೇಕು. ಕೈತೊಳೆಯುವ ಸ್ಥಳ, ಶೌಚಾಲಯಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಕುರ್ಚಿ, ಟೇಬಲ್‌ಗ‌ಳು, ಬಾಗಿಲುಗಳು, ನೆಲವನ್ನು ಸೋಂಕು ನಿವಾರಕದಿಂದ ಪ್ರತಿನಿತ್ಯ ಸ್ವಚ್ಛಮಾಡಬೇಕು ಎಂದು ಸೂಚನೆ ನೀಡಿದೆ.

ವಿದೇಶ ಪ್ರಯಾಣಿಕರಿಗೆ ಪರೀಕ್ಷೆ ಕಡ್ಡಾಯ :

ರೂಪಾಂತರ ವೈರಾಣು ಕಾಣಿಸಿಕೊಂಡ ಕಾರಣ ಬ್ರಿಟನ್‌, ಯುರೋಪ್‌ ಮತ್ತು ಮಧ್ಯಪ್ರಾಚ್ಯದ ದೇಶಗಳಿಂದ ವಿಮಾನದ ಮೂಲಕ ಕರ್ನಾಟಕಕ್ಕೆ ಬರುವವರು ಪ್ರಯಾಣಕ್ಕೂ 72 ಗಂಟೆಗೂ ಮೊದಲು ಕೋವಿಡ್‌ ಆರ್‌ಟಿ ಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ತರಬೇಕು. ಅವರಿಗೆ ಇಲ್ಲಿನ ವಿಮಾನ ನಿಲ್ದಾಣಗಳಲ್ಲಿ ಕೂಡ ಆರ್‌ಟಿ ಪಿಸಿಆರ್‌ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆಯ ವರದಿ ಬಂದ ಬಳಿಕವೇ ವಿಮಾನ ನಿಲ್ದಾಣದಿಂದ ಕಳುಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸೋಂಕಿತರಾದಲ್ಲಿ ಅವರನ್ನು 14 ದಿನಗಳು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಸೋಂಕಿತರಾಗಿರದವರು 14 ದಿನಗಳು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಪಡಬೇಕು. 7ನೇ ದಿನಕ್ಕೆ ಮತ್ತೂಮ್ಮೆ ಆರ್‌ಟಿ ಪಿಸಿಆರ್‌ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.