ಗ್ರಾಮ ಸುತ್ತಾಡಿ ಸಮಸ್ಯೆ ಆಲಿಸಿದ ಡೀಸಿ


Team Udayavani, Feb 21, 2021, 2:08 PM IST

ಗ್ರಾಮ ಸುತ್ತಾಡಿ  ಸಮಸ್ಯೆ ಆಲಿಸಿದ ಡೀಸಿ

ಹುಣಸೂರು: ತಾಲೂಕು ತರಿಕಲ್‌ನಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಭೂಮಿ ಒತ್ತುವರಿ, ಪಕ್ಕಾಪೋಡು, ದುರಸ್ತಿ, ನಿವೇಶನ ಮನೆ ಸಮಸ್ಯೆ ಬಗ್ಗೆಯೇ ಆರಂಭದಿಂದ ಕೊನೆಯವರೆಗೆ ಚರ್ಚೆಗೆ ಬಂದರೆ, ಕೆಲ ಮುಖಂಡರು ತಮ್ಮೂರಿನ ಕೆರೆ ಒತ್ತುವರಿ ತೆರವುಗೊಳಿಸಲು ಮನವಿ ಮಾಡಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಳ್ಳಿ ಭೇಟಿಯಲ್ಲಿ ಶಾಲೆ- ಅಂಗನವಾಡಿ, ಗಿರಿಜನ ಹಾಡಿಗಳ ಭೇಟಿ, ಸಾವಿರ ಕಂಬದ ಪುರಾತನ ಕಾಶಿಲಿಂಗೇಶ್ವರ ದೇವಾಲಯ ಜೀರ್ಣೋದ್ಧಾರ ಕಾಮಗಾರಿಪರಿಶೀಲನೆ, ತರಿಕಲ್‌ನ ಬೀದಿಗಳಲ್ಲಿ ಅಧಿಕಾರಿಗಳ ತಂಡದೊಂದಿಗೆ ಸಂಚಾರ ನಡೆಸಿ ಸಮಸ್ಯೆಯನ್ನರಿತರು.

ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಗ್ರಾಮಸ್ಥರು, ಶಾಲಾ ಮಕ್ಕಳು ಸ್ವಾಗತಿಸಿದರು. ನಂತರ ಶಾಲಾ ಆವರಣದಲ್ಲಿ ಗಿಡನೆಟ್ಟು ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು. ತರಿಕಲ್‌ನ ನಿರ್ಮಾಣ ಹಂತದ ಕಾಶಿ ಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದು ಕೊಂಡರು. ತರಿಕಲ್‌ನ ಗ್ರಾಮಪರಿಮಿತಿಯ ರಸ್ತೆಗಳಲ್ಲಿ ಅಧಿ ಕಾರಿಗಳ ತಂಡದೊಂದಿಗೆ ವೀಕ್ಷಿಸಿದ ವೇಳೆ ಗ್ರಾಮಸ್ಥರು ಗ್ರಾಮದ ಅನುಕೂಲಕ್ಕಾಗಿ ಸರ್ಕಾರಿ ನಿವೇಶನವಿದ್ದು, ಮಂಜೂರು ಮಾಡಬೇಕೆಂಬ ಕೋರಿಕೆಗೆ ಪರಿಶೀಲಿಸುವಂತೆ ಇಒ ಗಿರೀಶ್‌, ಪಿಡಿಒ ರೂಪಶ್ರೀಗೆ ಸೂಚಿಸಿದರು.

ಹಲವು ಮಹಿಳೆಯರು ಮನೆ, ನಿವೇಶನಕ್ಕೆ ಬೇಡಿಕೆ ಇಟ್ಟರು. ಧರ್ಮಾಪುರ ಗ್ರಾಪಂ ವ್ಯಾಪ್ತಿಯ ತರಿಕಲ್‌ ರಂಗಯ್ಯನಕೊಪ್ಪಲು ಹಾಡಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳಿಗೆ ಹಾಡಿಯ ಮುಖ್ಯಸ್ಥೆ ಜಯಶೀಲ, ಗ್ರಾಪಂ ಸದಸ್ಯ ಮಹದೇವ ಮತ್ತಿತರರು, ನಮಗೆ ಸರ್ಕಾರ ಮಂಜೂರು ಮಾಡಿದ್ದ ಭೂಮಿ ಸಾಕಷ್ಟು ಒತ್ತುವರಿಯಾಗಿದೆ. ಪೌತಿ ಖಾತೆಗಳಾಗದೆ ಮೂರು ತಲೆಮಾರಾಗಿದ್ದು, ಭೂ ಸಮಸ್ಯೆ ಸಾಕಷ್ಟಿದ್ದುಬಗೆಹರಿಸಬೇಕೆಂಬ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ನೀವೇ ಮಾರಿಕೊಂಡಿದ್ದೀರಾ. ಮೊದಲು ಅದಾಲತ್‌ ಮೂಲಕ ಮರಣ ದೃಢೀಕರಣಪತ್ರ ಮಾಡಿಸಿಕೊಳ್ಳಿ. ನಂತರ ಪೌತಿಖಾತೆ ಮಾಡಿಕೊಟ್ಟು ದುರಸ್ತು ಮಾಡಿಸಿಕೊಡಲಾಗುವುದೆಂದು ಭರವಸೆ ನೀಡಿದರು.

ಇದೇ ವೇಳೆ ತೆಕ್ಕಲು ಹಾಡಿಯ ಮಂದಿ ಕಾಡುವಡ್ಡರಗುಡಿ ಸರ್ವೆ ನಂ.33ರ ಆದಿವಾಸಿ ಭೂಮಿಯನ್ನು ಇತರರು ಒತ್ತುವರಿ ಮಾಡಿದ್ದು. ಕ್ರಮವಹಿಸಬೇಕೆಂದು ಮುಖ್ಯಸ್ಥೆ ಮಹದೇವಮ್ಮರ ಕೋರಿಕೆಗೆ ದಾಖಲಾತಿ ಅನುಸಾರ ಕ್ರಮವಹಿಸಲಾಗುವುದೆಂದರೆ, ಬುಡ ಕಟ್ಟು ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ.ರಾಮು ಅರಣ್ಯಹಕ್ಕು ಮಾನ್ಯತಾ ಕಾಯ್ದೆಯನ್ವಯ ಅರ್ಜಿ ವಜಾಗೊಳಿಸಿರುವುದನ್ನು ಪುನರ್‌ ಪರಿಶೀಲಿಸಬೇಕೆಂಬ ಕೋರಿಕೆಗೆ ಪರಿಶೀಲಿಸುವ ಭರವಸೆ ನೀಡಿದರು.ಶಾಲಾ ಆವರಣದಲ್ಲಿ ಮಧ್ಯಾಹ್ನ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ ತರಿಕಲ್‌ ಭಾಗದಲ್ಲಿ ಸರ್ಕಾರಿ ಭೂಮಿ, ಕೆರೆ-ಕಟ್ಟೆಗಳು ಸಾಕಷ್ಟು ಒತ್ತುವರಿಯಾಗಿದೆ, ಭೂಮಿ ದುರಸ್ತು ಆಗಿಲ್ಲ, ಶಾಲಾ ಆವರಣದಲ್ಲಿರುವ ನೀರಿನ ಟ್ಯಾಂಕ್‌ ತೆರವುಗೊಳಿಸಿರಿ, ನಿವೇಶನ, ಗುಂಪುಮನೆ ಬೇಡಿಕೆ ಬಂತು. ಬಿಜೆಪಿ ತಾಲೂಕು ಅಧ್ಯಕ್ಷ ನಾಗಣ್ಣಗೌಡ, ತರಿಕಲ್‌ನಿಂದ ಕರೀ ಮುದ್ದನ ಹಳ್ಳಿ ರಸ್ತೆಗೆ ಸೇರುವ ರಸ್ತೆ ಸಾಕಷ್ಟು ಒತ್ತುವರಿಯಾಗಿದ್ದು ತೆರವುಗೊಳಿಸಿ ಎಂದರು.

ಜಿಲ್ಲಾಧಿಕಾರಿಗಳು ಆದ್ಯತೆ ಮೇರೆಗೆ ಈ ಭಾಗದ ಜಮೀನಿನ ದುರಸ್ತು ಮಾಡಲಾಗುತ್ತಿದೆ. ಒತ್ತುವರಿ ತೆರವಿಗೆ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುವುದೆಂದರು. ಹಳ್ಳದಕೊಪ್ಪಲುಹಾಡಿಯ ವೃದ್ಧೆ ಮಾಕಮ್ಮ, ತಮ್ಮ ಜಮೀನು ಕಾಣೆಯಾಗಿದ್ದು ಹುಡುಕಿಕೊಡಿ, ದನ ಮೇಯಿಸಲು ತೊಂದರೆಯಾಗಿದೆ, ಓದಿರುವ

ಮಕ್ಕಳಿದ್ದಾರೆ ಕೆಲಸವಿಲ್ಲ, ಹಾಡಿಯ ಹಲವರಿಗೆ ಭೂಮಿ ಇಲ್ಲ. ಜಮೀನು ನೀಡುವಂತೆ ಕೋರಿದರು. ಆದರೆ ಇವರಿಗೆ ಯಾವುದೇ ಉತ್ತರ ಸಿಗಲಿಲ್ಲ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಸರ್ಕಾರದ ಸೂಚನೆಯಂತೆ ಮೊದಲ ಗ್ರಾಮ ವಾಸ್ತವ್ಯ ನಡೆದಿದ್ದು, ಇಲ್ಲಿ ಪೋಡಿ ಪ್ರಕರಣ, ಒತ್ತುವರಿ ಸೇರಿದಂತೆ ಭೂ ಸಮಸ್ಯೆಗಳೆ ಹೆಚ್ಚಿವೆ. ಸ್ವ ಮಿತ್ರ ಯೋಜನೆಯಡಿ ಕ್ರಮವಹಿಸಲಾಗುವುದು. ಜಿಲ್ಲೆಯಲ್ಲಿ 3 ಸಾವಿರ ಕೆರೆಗಳಿದ್ದು, ಹಂತಹಂತವಾಗಿ ಒತ್ತುವರಿ ತೆರವುಗೊಳಿಸ ಲಾಗುವುದು ಎಂದರು.

ಸ್ವಚ್ಛವಾದ ಗ್ರಾಮ: ಜಿಲ್ಲಾಧಿಕಾರಿ ಭೇಟಿಯಿಂದ ಶಾಲಾ ಆವರಣ, ಗ್ರಾಮವು ಸ್ವಚ್ಛಗೊಂಡಿತು. ಶಾಲೆಗೆ ಶೌಚಾಲಯ ನಿರ್ಮಾಣವಾಯಿತು. ಆಧಾರ್‌ ಕಾರ್ಡ್‌ ತಿದ್ದುಪಡಿ, ಪಡಿತರ ಕಾರ್ಡ್‌ಗೆ ಅರ್ಜಿ ಸ್ವೀಕಾರ ಹಾಗೂ ಮಾಸಾಶನ ಮಂಜೂರು ವ್ಯವಸ್ಥೆ ಜೊತೆಗೆ 20 ವರ್ಷಗಳಿಂದ ನೆನೆಗುದಿಗೆ ಬಿದಿದ್ದ ನಿವೇಶನ ವಿತರಣೆಗೂ ಚಾಲನೆ ದೊರೆಯಿತು.

625 ಅರ್ಜಿಗಳಿಗೆ ಪರಿಹಾರ: ಗ್ರಾಮ ವಾಸ್ತವ್ಯದಲ್ಲಿ ಒಟ್ಟಾರೆ 685 ಅರ್ಜಿಗಳು ಬಂದಿದ್ದು, ಈ ಪೈಕಿ 261 ಆಧಾರ್‌ ಕಾರ್ಡ್‌, 21 ಪಡಿತರ ಕಾರ್ಡ್‌, 30 ಮಸಾಶನ ಪತ್ರ, 161 ವಿವಿಧ ಮಸಾಶನ ಪತ್ರಗಳು 32 ಮಂದಿಗೆ ನಿವೇಶನ ಹಕ್ಕು ಪತ್ರ ವಿತರಣೆ ಸರ್ವೆ ನಂ.43ರಲ್ಲಿ 90 ಮಂದಿಯ ಜಮೀನು ದುರಸ್ತು ಕಾರ್ಯ ನಡೆದಿದೆ. ವಿವಿಧ ಹಾಡಿಗಳಿಗೆ ಸಂಬಂಧಿಸಿದಂತೆ 54ಅರ್ಜಿಗಳು ಬಂದಿವೆ ಎಂದು ತಹಶೀಲ್ದಾರ್‌ ಬಸವರಾಜು ಮಾಹಿತಿ ನೀಡಿದ್ದಾರೆ. ಈ ವೇಳೆ ತಾಪಂ ಇಒ ಗಿರೀಶ್‌, ಗ್ರಾಮ ವಾಸ್ತವ್ಯದಸಂಪೂರ್ಣ ಜವಾಬ್ದಾರಿ ಹೊತ್ತು ಎಲ್ಲವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಜಿಪಂ ಸಿಇಒ ಯೋಗೇಶ್‌, ಸದಸ್ಯ ಸುರೇಂದ್ರ, ಧರ್ಮಾಪುರ ಗ್ರಾಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷೆ ತುಳಸಮ್ಮ, ಪಿಡಿಒ ರೂಪಶ್ರೀ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜು, ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ಪೋಸ್ಟ್‌ ಮ್ಯಾನ್‌ ಕೆಲಸ ಬೇಡ: ಶಾಸಕ :

ಶಾಸಕ ಎಚ್‌.ಪಿ.ಮಂಜುನಾಥ್‌ ತರಿಕಲ್‌ ಗ್ರಾಮದಲ್ಲಿ 20 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಿವೇಶನದ ಹಕ್ಕುಪತ್ರವನ್ನು ವಿತರಿಸಿ ಮಾತನಾಡಿ, ಸರ್ಕಾರ ಉತ್ತಮ ಯೋಜನೆ ಜಾರಿಗೆ ತಂದಿದೆ. ಆದರೆ, ಈ ಕಾರ್ಯಕ್ರಮ ಕೇವಲ ಪೋಸ್ಟ್‌ ಮ್ಯಾನ್‌ ಕೆಲಸ ಆಗಬಾರದು. ಜಿಲ್ಲಾಧಿಕಾರಿಗಳು ಭೇಟಿ ನೀಡಿರುವುದರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿತ್ತು. ಈ ಯೋಜನೆಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದೆ. ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಗ್ರಾಮವನ್ನು ಆಯ್ಕೆಮಾಡಬೇಕಿತ್ತು. ತಾವು ಪ್ರತಿ ಪಂಚಾಯ್ತಿ ಕೇಂದ್ರದಲ್ಲೂ ತಾಲೂಕು ಆಡಳಿತ ಮನೆಬಾಗಿಲಿಗೆ ಕಾರ್ಯಕ್ರಮ ರೂಪಿಸಿದ್ದಾಗಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಇದೀಗ ಜಿಲ್ಲಾಧಿಕಾರಿ ಭೇಟಿಯಿಂದ ಶಾಲೆ ಮತ್ತಿತರ ಕೆಲಸಗಳು ಆಗುತ್ತವೆ ಎನ್ನುವುದಾದರೆ ವರ್ಷಪೂರ್ತಿ ಆಗಾಗ ಭೇಟಿ ನೀಡಿ ಎಂದು ಸಲಹೆ ನೀಡಿದರು.

 ಹಾಡಿ ಜನರ ಸಮಸ್ಯೆಗೆ ಪರಿಹಾರದ ಭರವಸೆ :

ತರೀಕಲ್ಲು ಗ್ರಾಮದ ಸಮೀಪದಲ್ಲಿರುವ ರಂಗಯ್ಯನಕೊಪ್ಪಲು ಹಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಹಾಡಿಯಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆಯನ್ನು ಸುದೀರ್ಘ‌ವಾಗಿ ಆಲಿಸಿದರು. ಈ ವೇಳೆ ಮನೆ ನಿರ್ಮಾಣ, ಪಡಿತರ ಚೀಟಿ, ವಿದ್ಯುತ್‌ ಸಂಪರ್ಕ ಕೊರತೆ, ಕುಡಿಯುವ ನೀರಿನ ಸಮಸ್ಯೆ, ಚುನಾವಣೆ ಗುರುತಿನ ಚೀಟಿ, ಆಧಾರ್‌ ಕಾರ್ಡ್‌ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಆದಿವಾಸಿಗಳು ಮನವಿ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಸ್ಥಳದಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಗಳನ್ನುಪಟ್ಟಿಮಾಡಿ, ಶೀಘ್ರವೇ ಸಮಸ್ಯೆ ಬಗೆಹರಿಸಿ ವರದಿ ನಿಡುವಂತೆ ಸೂಚನೆ ನೀಡಿದರು. ನಂತರ ತರಿಕಲ್ಲು ಗ್ರಾಮದ ಸಾರ್ವಜನಿಕ ಸ್ಮಾಶಾನಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ, ಗ್ರಾಮದಲ್ಲಿ ವಾಸಿಸುವ ಜನಸಂಖ್ಯೆ ಅನುಗುಣವಾಗಿ ಸ್ಮಶಾನದ ಜಾಗ ನೀಡಬೇಕು. ಸ್ಮಶಾನದ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಕೂಡಲೇ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಓದಲು ತಡವರಿಸಿದ ಮಕ್ಕಳು :

ತರಿಕಲ್‌ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ಮಕ್ಕಳನ್ನು ಗಣಿತದ ಪ್ರಶ್ನೆ ಕೇಳಿದರು. ಕನ್ನಡ, ಇಂಗ್ಲಿಷ್‌ನ್ನು ಓದಲು ತಡವರಿಸಿದ್ದರಿಂದ ಜಿಲ್ಲಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು ಕಂಡು ಬಂತು. ಇನ್ನು ಮೊರಾರ್ಜಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರೌಢಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಮಕ್ಕಳಿಗೆ ಗಣಿತದ ಪಾಠ ಹೇಳಿಕೊಟ್ಟರು.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.