ಕುಸಿಯುವ ಹಂತದಲ್ಲಿ ಮರ್ಣೆ ಓವರ್‌ ಹೆಡ್‌ ಟ್ಯಾಂಕ್‌ : ಬಿರುಕುಬಿಟ್ಟ ಕಾಂಕ್ರೀಟ್‌


Team Udayavani, Feb 22, 2021, 5:40 AM IST

ಕುಸಿಯುವ ಹಂತದಲ್ಲಿ ಮರ್ಣೆ ಓವರ್‌ ಹೆಡ್‌ ಟ್ಯಾಂಕ್‌ : ಬಿರುಕುಬಿಟ್ಟ ಕಾಂಕ್ರೀಟ್‌

ಅಜೆಕಾರು: ಮರ್ಣೆ ಗ್ರಾಮ ಪಂಚಾಯತ್‌ ಕಟ್ಟಡಕ್ಕೆ ಹೊಂದಿಕೊಂಡಂತೆ ಇರುವ ಓವರ್‌ ಹೆಡ್‌ ಟ್ಯಾಂಕ್‌ ಸಂಪೂರ್ಣ ಬಿರುಕು ಬಿಟ್ಟಿದ್ದು ಆಧಾರ ಸ್ತಂಭಗಳ ಕಾಂಕ್ರೀಟ್‌ ಬಿರುಕು ಬಿಟ್ಟು ಸಂಪೂರ್ಣವಾಗಿ ಕುಸಿದು ಕೇವಲ ತುಕ್ಕು ಹಿಡಿದ ಕಬ್ಬಿಣದ ರಾಡ್‌ಗಳ ಆಧಾರದಲ್ಲಿ ನಿಂತಿದೆ.

ದಶಕಗಳಿಂದ ಕುಸಿಯುವ ಭೀತಿಯಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ಗೆ ಪರ್ಯಾಯ ಟ್ಯಾಂಕ್‌ ನಿರ್ಮಾಣ ಮಾಡಿ ಅಪಾಯಕಾರಿ ಸ್ಥಿತಿಯಲ್ಲಿರುವ ಈ ಟ್ಯಾಂಕ್‌ ತೆರವು ಮಾಡುವಂತೆ ಸ್ಥಳೀಯರು ನಿರಂತರವಾಗಿ ಮನವಿ ಮಾಡಿದರು ಓವರ್‌ ಹೆಡ್‌ ಟ್ಯಾಂಕ್‌ಗೆ ಮುಕ್ತಿಯಾಗಿಲ್ಲ.

50 ಸಾವಿರ ಲೀಟರ್‌ ನೀರು ಶೇಖರಣೆ ಸಾಮಾರ್ಥ್ಯ
ಟ್ಯಾಂಕ್‌ ಸುಮಾರು 50 ಸಾವಿರ ಲೀಟರ್‌ ನೀರು ಶೇಖರಣೆ ಸಾಮರ್ಥ್ಯ ಹೊಂದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಾಣಗೊಂಡಿದೆ. ಈ ಬೃಹತ್‌ ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ಮರ್ಣೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 600ಕ್ಕೂ ಅಧಿಕ ಮನೆಗಳಿಗೆ ನೀರು ಒದಗಿಸಲಾಗುತ್ತದೆ.

ರಾಡ್‌ಗಳಿಗೆ ತುಕ್ಕು
ಈ ಓವರ್‌ ಹೆಡ್‌ ಟ್ಯಾಂಕ್‌ನ ಸ್ಲಾಬ್‌ಗಳು ಹಾಗೂ ಪಿಲ್ಲರ್‌ಗಳು ಬಿರುಕುಬಿಟ್ಟಿದ್ದು ಸಿಮೆಂಟ್‌ ತುಂಡು ತುಂಡಾಗಿ ಬೀಳುತ್ತಿದೆ. ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಸಂದರ್ಭ ಬಳಸಲಾದ ಕಬ್ಬಿಣದ ರಾಡ್‌ ಸಂಪೂರ್ಣವಾಗಿ ತುಕ್ಕು ಹಿಡಿದಿವೆ. ಪಂಚಾಯತ್‌ ಕಟ್ಟಡಕ್ಕೆ ಹೊಂದಿಕೊಂಡಂತೆ ಇರುವ ಈ ಓವರ್‌ ಹೆಡ್‌ ಟ್ಯಾಂಕ್‌ ಕುಸಿತಗೊಂಡಲ್ಲಿ ಅಪಾರ ಪ್ರಮಾಣದ ಹಾನಿಯಾಗುವ ಜತೆಗೆ ಜೀವ ಹಾನಿಯೂ ಸಂಭವಿಸಬಹುದಾಗಿದೆ. ಅಲ್ಲದೆ ಪಂಚಾಯತ್‌ ವ್ಯಾಪ್ತಿಯ ಅಜೆಕಾರು ಪೇಟೆ, ಕೊಂಬಗುಡ್ಡೆ, ಕೈಕಂಬ, ನೂಜಿ ವಠಾರ, ಕುರ್ಪಾಡಿ ಪ್ರದೇಶ, ಪ.ಜಾತಿ, ಪ.ಪಂಗಡದ ಹಲವು ಕಾಲನಿಗಳ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಸಂಕಷ್ಟಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಳ್ಳಲಿದೆ.

ಇನ್ನೊಂದು ಟ್ಯಾಂಕ್‌ಗೂ ಹಾನಿ
ಸುಮಾರು 50 ಅಡಿ ಎತ್ತರದಲ್ಲಿರುವ ಈ ಓವರ್‌ ಹೆಡ್‌ ಟ್ಯಾಂಕ್‌ ಕುಸಿತಗೊಂಡರೆ ಸಮೀಪದಲ್ಲಿರುವ ಸುಮಾರು 30,000 ಲೀಟರ್‌ ಸಾಮರ್ಥ್ಯದ ಇನ್ನೊಂದು ಓವರ್‌ ಹೆಡ್‌ ಟ್ಯಾಂಕ್‌ಗೂ ಹಾನಿಯಾಗುವ ಜತೆಗೆ ಪಂಚಾಯತ್‌ ಕಟ್ಟಡ, ಪಂಚಾಯತ್‌ ವಾಣಿಜ್ಯ ಮಳಿಗೆಗಳು, ಗ್ರಾಮ ಕರಣಿಕರ ಕಚೇರಿ ಕಟ್ಟಡಗಳಿಗೆ ಭಾರೀ ಪ್ರಮಾಣದ ಹಾನಿ ಭೀತಿಯಿದೆ.

ಶೀಘ್ರ ಬದಲಿ ವ್ಯವಸ್ಥೆ ಅಗತ್ಯ
ಮರ್ಣೆ ಪಂಚಾಯತ್‌ ವ್ಯಾಪ್ತಿಯ ಬಹುತೇಕ ಪ್ರದೇಶಕ್ಕೆ ಈ ಓವರ್‌ ಹೆಡ್‌ ಟ್ಯಾಂಕ್‌ ಮೂಲಕವೇ ನೀರು ಒದಗಿಸಲಾಗುತ್ತಿದ್ದು ಈ ಟ್ಯಾಂಕ್‌ ಬದಲಿಗೆ ಹೊಸ ಬೃಹತ್‌ ಟ್ಯಾಂಕ್‌ ನಿರ್ಮಾಣ ಮಾಡಿ ಕುಸಿಯುವ ಹಂತದಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ ತೆರವುಗೊಳಿಸಬೇಕಿದೆ.

ಗ್ರಾಮ ಸಭೆಯಲ್ಲಿ ನಿರ್ಣಯ
ಗ್ರಾಮ ಸಭೆಯಲ್ಲಿ ಈ ಓವರ್‌ ಹೆಡ್‌ ಟ್ಯಾಂಕ್‌ ದುರಸ್ತಿ ಅಥವಾ ತೆರವು ಮಾಡುವಂತೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದು ಪಂಚಾಯತ್‌ ಆಡಳಿತ ನಿರ್ಣಯ ಮಾಡಿ ಸಂಬಂಧ ಪಟ್ಟ ಇಲಾಖೆಗೆ ಕಳುಹಿಸಿತ್ತು. ಆದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ.

ಟ್ಯಾಂಕ್‌ ತೆರವಿಗೆ ಸೂಕ್ತ ಕ್ರಮ
ಪಂಚಾಯತ್‌ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಂಚಾಯತ್‌ ವ್ಯಾಪ್ತಿಯ ಕೈಕಂಬದಲ್ಲಿ ನಿರ್ಮಾಣವಾದ ಓವರ್‌ ಹೆಡ್‌ ಟ್ಯಾಂಕ್‌ ಹಾಗೂ ಇತರೆ ಟ್ಯಾಂಕ್‌ ಮೂಲಕ ನೀರು ಒದಗಿಸಲಾಗುವುದು. ಕುಸಿಯುವ ಹಂತದಲ್ಲಿರುವ ಟ್ಯಾಂಕ್‌ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಜ್ಯೋತಿ ಪೂಜಾರಿ, ಅಧ್ಯಕ್ಷರು, ಮರ್ಣೆ ಗ್ರಾಮ ಪಂಚಾಯತ್‌

ಇಲಾಖೆಗೆ ಮನವಿ
ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ ತೆರವು ಶೀಘ್ರವಾಗಿ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಜಲಜೀವನ್‌ ಮಿಷನ್‌ ಯೋಜನೆಯಡಿ ಹೊಸ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಮಾಡಿ ಪ್ರಸ್ತುತ ಇರುವ ಟ್ಯಾಂಕ್‌ ತೆರವಿಗೆ ಸಂಬಂಧಪಟ್ಟ ಇಲಾಖೆಗೆ ಪುನಃ ಮನವಿ ಮಾಡಲಾಗುವುದು.
-ತಿಲಕ್‌ರಾಜ್‌, ಪಿಡಿಒ ಮರ್ಣೆ ಗ್ರಾಮ ಪಂಚಾಯತ್‌

ಸೂಕ್ತ ಕ್ರಮ
ಪಂಚಾಯತ್‌ ಆಡಳಿತ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರ ಈ ಬಗ್ಗೆ ಪರಿಶೀಲನೆ ನಡೆಸಿ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ರವಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಉಪವಿಭಾಗ ಕಾರ್ಕಳ

– ಜಗದೀಶ್‌ ಅಂಡಾರು

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.