ಪೆಟ್ರೋಲಿಯಂ ಉತ್ಪಾದನಾ ಮಟ್ಟ ಕಡಿಮೆಯಾಗಿರುವುದೆ ಬೆಲೆ ಏರಿಕೆಗೆ ಕಾರಣ :ಧರ್ಮೇಂದ್ರ ಪ್ರಧಾನ್

"ಉತ್ಪಾದನಾ ದೇಶಗಳು ಹೆಚ್ಚಿನ ಲಾಭ ಗಳಿಸಲು ಕಡಿಮೆ ಇಂಧನ ಉತ್ಪಾದನೆ”ಯೇ ಬೆಲೆ ಏರಿಕೆಯ ಹಿಂದಿನ ಒಂದು ಕಾರಣ

Team Udayavani, Feb 22, 2021, 10:26 AM IST

Petrol, diesel prices burning a hole in the pocket, here’s why fuel prices are increasing so much

ನವ ದೆಹಲಿ : ಫೆಬ್ರವರಿ 9 ರಿಂದ ಸತತ 12 ದಿನಗಳವರೆಗೆ ದರ ಏರಿಕೆ ಕಂಡ ನಂತರ, ತೈಲ ಕಂಪನಿಗಳು ಸೋಮವಾರ ಸತತ ಎರಡನೇ ದಿನವೂ ತೈಲದ ಬೆಲೆಯನ್ನು ಸ್ಥಿರವಾಗಿರಿಸಿಕೊಂಡಿವೆ. ದೆಹಲಿಯ ಪೆಟ್ರೋಲ್ ಈಗಾಗಲೇ ಲೀಟರ್‌ಗೆ 90 ರೂ.ಗಳನ್ನು ದಾಟಿದ್ದರೆ, ಮುಂಬೈಯಲ್ಲಿ ಇದನ್ನು ಲೀಟರ್‌ಗೆ 97 ರೂ.ಗೆ ಮಾರಾಟ ಮಾಡಲಾಗುತ್ತಿದೆ, ಇನ್ನು ಪೆಟ್ರೋಲ್ ನಾಲ್ಕು ಮೆಟ್ರೋ ನಗರಗಳಲ್ಲಿ ಅತ್ಯಂತ ದುಬಾರಿಯಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಮಧ್ಯೆ, “ಉತ್ಪಾದನಾ ದೇಶಗಳು ಹೆಚ್ಚಿನ ಲಾಭ ಗಳಿಸಲು ಕಡಿಮೆ ಇಂಧನ ಉತ್ಪಾದನೆ”ಯೇ ಬೆಲೆ ಏರಿಕೆಯ ಹಿಂದಿನ ಒಂದು ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ(ಫೆ.21) ಹೇಳಿದ್ದಾರೆ.

ಓದಿ: ಕೋವಿಡ್-19: ಒಂದೇ ದಿನ 14,199 ಹೊಸ ಪ್ರಕರಣ, ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣ

ಪೆಟ್ರೋಲಿಯಂ ಉತ್ಪಾದನಾ ದೇಶಗಳು ಲಾಭ ಗಳಿಸುವುದಕ್ಕಾಗಿ ಉತ್ಪಾದನಾ ಮಟ್ಟವನ್ನು ಕಡಿಮೆಗೊಳಿಸುವುದರಿಂದ ಪೆಟ್ರೋಲಿಯಂ ಖರೀದಿಸುವ ರಾಷ್ಟ್ರಗಳಿಗೆ ಹೊಡೆತ ಬಿದ್ದಿದೆ ಎಂದು ಪ್ರಧಾನ್ ಎ ಎನ್ ಐ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

“ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC) ಯೊಂದಿಗೆ ಈ ರೀತಿಯ ಪರಿಸ್ಥಿತಿ  ಸಂಭವಿಸಬಾರದು ಎಂದು ನಾವು ನಿರಂತರವಾಗಿ ಒತ್ತಾಯಿಸುತ್ತಿದ್ದೇವೆ. ಬದಲಾವಣೆಯಾಗಬಹುದೆಂದು ನಾವು ಭಾವಿಸುತ್ತೇವೆ.” ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 10 ದಿನಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಹೆಚ್ಚುತ್ತಿವೆ ಮತ್ತು ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುವ ತೆರಿಗೆಯನ್ನು ಸಮರ್ಥಿಸುತ್ತಾ, ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯಗಳು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿವೆ ಎಂದು ಹೇಳಿದರು.

ಪೆಟ್ರೋಲ್ ಬೆಲೆ ಏರಿಕೆಯಾಗುವುದಕ್ಕೆ ಕೋವಿಡ್ ಪರಿಸ್ಥಿತಿಯೂ ಒಂದು ಕಾರಣ. ನಾವು ಅಭಿವೃದ್ಧಿ ಕಾರ್ಯಗಳನ್ನು ದೇಶದಲ್ಲಿ ಮಾಡಬೇಕಾಗಿದೆ. ಹಾಗಾಗಿ ಜನರಿಂದ ತೆರಿಗೆಯನ್ನು ಸಂಗ್ರಹಿಸಲೇಬೇಕಾಗಿದೆ. ಇದರಿಂದ ಉದ್ಯೋಗವು ಸೃಷ್ಟಿಯಾಗುತ್ತದೆ. ತೆರಿಗೆ ಸಂಗ್ರಹಿಸುವುದರೊಂದಿಗೆ  ಸಮತೋಲನದ ಅವಶ್ಯಕತೆಯೂ ಇದೆ. ಹಣಕಾಸು ಸಚಿವರು ಮತ್ತು ರಾಜ್ಯ ಸರ್ಕಾರಗಳು ಒಂದು ಮಾರ್ಗವನ್ನು ಕಂಡುಕೊಳ್ಳಬಹುದು ಎಂದು ನಾನು ನಂಬುತ್ತೇನೆ “ಎಂದು ಸಚಿವರು ಹೇಳಿದ್ದಾರೆ.

ಓದಿ: ಮಧ್ಯಪ್ರದೇಶ: 10 ಅಡಿ ಕೆಳಕ್ಕೆ ಬಿದ್ದ ಮಾಜಿ ಸಿಎಂ ಕಮಲ್ ನಾಥ್ ಪ್ರಯಾಣಿಸುತ್ತಿದ್ದ ಲಿಫ್ಟ್

 

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.