ಮೂಲ ಸೌಕರ್ಯಕ್ಕೆ ಆಗ್ರಹಿಸಿ ಗ್ರಾಪಂ ಎದುರು ಪ್ರತಿಭಟನೆ


Team Udayavani, Feb 22, 2021, 12:40 PM IST

ಮೂಲ ಸೌಕರ್ಯಕ್ಕೆ ಆಗ್ರಹಿಸಿ ಗ್ರಾಪಂ ಎದುರು ಪ್ರತಿಭಟನೆ

ಕನಕಪುರ: ಮೂಲ ಸೌಕರ್ಯ ನೀಡದೇ ಗ್ರಾಪಂ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಟಿ.ಹೊಸಹಳ್ಳಿಯ ಮಾದಿಗ ಸಮುದಾಯದ ಜನರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಲೂಕಿನ ಟಿ.ಹೊಸಹಳ್ಳಿ ಗ್ರಾಪಂ ಕಚೇರಿ ಮುಂದೆ ಜಾಮಾವಣೆಗೊಂಡ ಗ್ರಾಮದ ಮಹಿಳೆಯರು, ಮಕ್ಕಳು, ಯುವಕರು ಗ್ರಾಪಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ನೀರಿನ ಹಾಹಾಕಾರ ಉಂಟಾಗಿದೆ. ಮೇಲ್ಜಾತಿ ಸಮುದಾಯದ ಪ್ರತಿ ಮನೆಗಳಿಗೂ, ಕೊಳಾಯಿ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಆದರೆ, ದಲಿತರಿಗೆ ಮಾತ್ರ ಕೊಳಾಯಿ ಸಂಪರ್ಕ ಕಲ್ಪಿಸಿಲ್ಲ. ಕುಡಿಯುವ ನೀರಿನ ಬವಣೆ ನೀಗಿಸಲು ನಿರ್ಮಿಸಿದ್ದ ಓವರ್‌ ಹೆಡ್‌ ಟ್ಯಾಂಕ್‌ನಿಂದ ಕಳೆದ 15 ವರ್ಷದಿಂದ ಹನಿ ನೀರನ್ನು ಕೊಡದೆ, ಇತರೆ ಸಮುದಾಯಗಳಿಗೆ ಮಾತ್ರ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಸಮಸ್ಯೆ ಹೇಳಿಕೊಳ್ಳಲು ನಾಯಕರಿಲ್ಲ: ಆದಿ ಜಾಂಬವ ಸಂಘಟನೆ ತಾಲೂಕು ಅಧ್ಯಕ್ಷ ವರದರಾಜು ಮಾತನಾಡಿ, ದಲಿತರು ಮನುಷ್ಯರೇ ಎಂಬ ಭಾವನೆ ಯಾರಲ್ಲೂ ಇಲ್ಲ. ಊರ ಹಬ್ಬ ಆಚರಿಸುವಾಗ ಗ್ರಾಮದ ಮುಖ್ಯರಸ್ತೆಯಲ್ಲಿ ಮೆರ ವಣಿಗೆ ಮಾಡಲು ಬಿಡುವುದಿಲ್ಲ. ಕಾಲೋನಿಯಲ್ಲಿ ಯಾರಾದರೂ ಮೃತಪಟ್ಟರೇ, ಶವ ಸಂಸ್ಕಾರ ಮಾಡುವುದು ಒಂದು ಸವಾಲಿನ ಕೆಲಸ. ನಮ್ಮ ಸಮಸ್ಯೆ ಹೇಳಿಕೊಳ್ಳಲು ರಾಜಕೀಯ ನಾಯಕರಿಲ್ಲ. ಗ್ರಾಮದಲ್ಲಿ 80 ಮಾದಿಗ ಕುಂಟುಂಬಗಳಿದ್ದು, 15 ವರ್ಷದಿಂದ ಗ್ರಾಪಂ ಸದಸ್ಯರಾಗಲು ಮೀಸಲಾತಿಯೇ ಸಿಕ್ಕಿಲ್ಲ ಎಂದು ಬೇಸರಿಸಿದರು.

ಪಿಡಿಒ ವರ್ಗಾವಣೆಗೆ ಆಗ್ರಹ: ವಸತಿ ವ್ಯವಸ್ಥೆಗಾಗಿ ಸರ್ಕಾರದಿಂದ ಆರು ಎಕರೆ ಭೂಮಿ ಮಂಜೂರಾಗಿದೆ. ಆ ಜಾಗದಲ್ಲಿ ಮಾದಿಗರಿಗೆ ನಿವೇಶನ ಸಿಗಬಾರದು ಎಂದು ದೇಗುಲ ನಿರ್ಮಿಸುವ ಹುನ್ನಾರ ನಡೆದಿದ್ದು,ಇದಕ್ಕೆಲ್ಲ ಪಿಡಿಒ ಸಹಕಾರ ನೀಡುತ್ತಿದ್ದಾರೆ. ಸರ್ಕಾರಿಅಧಿಕಾರಿಯಾಗಿ ಒಂದು ಸಮುದಾಯದ ಪರವಾಗಿ ನಿಲ್ಲುವುದು ಎಷ್ಟು ಸರಿ. ಇಂತಹ ಅಧಿಕಾರಿಗಳಿಂದನಮಗೆ ಎಂದೂ ನ್ಯಾಯ ಸಿಗುವದಿಲ್ಲ. ಇವರನ್ನುಶೀಘ್ರ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ, ಜಿಲ್ಲಾಕೇಂದ್ರದ ಎದುರು ತಮಟೆ ಚಳುವಳಿನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಅಂಬೇಡ್ಕರ ಯುವಕ ಸಂಘದ ಅಧ್ಯಕ್ಷ ಪ್ರದೀಪ್‌, ಮಂಜುನಾಥ್‌, ಮಹದೇಶ್‌, ಗಿರೀಶ್‌, ಮುತ್ತುರಾಜು, ವೆಂಕಟೇಶ್‌,ಶ್ರೀನಿವಾಸ್‌, ಕಾಂತು, ಹನುಮಂತು, ಮಹಲಿಂಗಯ್ಯ, ಗಂಗಮಾಳಮ್ಮ, ಭಾಗ್ಯಮ್ಮ, ಗೌರಮ್ಮ, ಶಿವರತ್ಮಮ್ಮ, ತುಳಸಮ್ಮ, ಕಾಳಪ್ಪ, ಗ್ರಾಮಸ್ಥರಿದ್ದರು.

ಸರ್ವಾಧಿಕಾರಿಯಂತೆ ವರ್ತಿಸುವ ಪಿಡಿಒ  :  ಗ್ರಾಪಂ ಪಿಡಿಒ ಪಕ್ಕದ ಗ್ರಾಮದವರು. ಬಿಲ್‌ ಕಲೆಕ್ಟರ್‌ ಹುದ್ದೆಯಿಂದ ಪಿಡಿಒ ಆಗಿ ಬಡ್ತಿ ಪಡೆದು ದಶಕಗಳಿಂದ ತಮ್ಮ ಪ್ರಭಾವ ಬಳಸಿ, ಇಲ್ಲಿಯೇ ಟಿಕಾಣಿ ಹೂಡಿದ್ದಾರೆ. ಸರ್ವಾಧಿಕಾರಿ ಯಂತೆ ವರ್ತಿಸುತ್ತಾರೆ. ಪ್ರತಿ ಪಿಡಿಒಗಳಿಗೂ ಒಂದೆರಡು ವರ್ಷಗಳ ನಂತರ ವರ್ಗಾವಣೆ ಮಾಡುವ ಇಲಾಖೆ ಅಧಿಕಾರಿಗಳು, ಇವರ ವಿಷಯದಲ್ಲಿ ಮಾತ್ರ ಯಾಕೆ ಮೀನಾಮೇಷ ಎಣಿಸುತ್ತಿದ್ದಾರೆ. ಒಬ್ಬ ಪಿಡಿಒ ಒತ್ತಡಕ್ಕೆ ಇಡೀ ಇಲಾಖೆಯೇ, ಮಂಡಿಯೂರಿರುವುದು ವಿಪರ್ಯಾಸ ಎಂದು ವರದರಾಜು ಆರೋಪಿಸಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.