ತಲಪಾಡಿಯಲ್ಲಿ ಕೋವಿಡ್ ಚೆಕ್ ಪೋಸ್ಟ್: ಗಡಿನಾಡ ಕನ್ನಡಿಗರಿಂದ ರಸ್ತೆ ತಡೆದು ಪ್ರತಿಭಟನೆ


Team Udayavani, Feb 22, 2021, 1:01 PM IST

ತಲಪಾಡಿಯಲ್ಲಿ ಕೋವಿಡ್ ಚೆಕ್ ಪೋಸ್ಟ್: ಗಡಿನಾಡ ಕನ್ನಡಿಗರಿಂದ ರಸ್ತೆ ತಡೆದು ಪ್ರತಿಭಟನೆ

ಉಳ್ಳಾಲ: ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಗಳ ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಆರ್ ಟಿಪಿಸಿಆರ್ ವರದಿ ಕೈಯಲ್ಲಿದ್ದಲ್ಲಿ ಮಾತ್ರ ಮಂಳವಾರದಿಂದ ಕರ್ನಾಟಕ ಪ್ರವೇಶಕ್ಕೆ ಅವಕಾಶ ಎಂದು ಅಧಿಕಾರಿಗಳು ತಿಳಿಸಿದರು.

ಆದರೆ ಗಡಿನಾಡು ಕನ್ನಡಿಗರು ವಾಹನಗಳ ಮಂಗಳೂರಿನಿಂದ ಹೊರಡುವ ವಾಹನಗಳಿಗೂ ತಡೆಯೊಡ್ಡಿ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ 7 ರಿಂದ ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ ಬಾಯರಿ, ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ತಲಪಾಡಿ ಗಡಿಭಾಗದಲ್ಲಿ ನಿಂತು ಕೇರಳದಿಂದ ಬರುವವರನ್ನು ತಡೆದು ಟೆಸ್ಟ್ ರೊಪೋರ್ಟ್ ನೀಡುವಂತೆ ಸೂಚಿಸಿದರು.  ಬರುವವರ ಪೈಕಿ ಯಾರಲ್ಲಿಯೂ ರಿಪೋರ್ಟ್ ಇಲ್ಲದೇ ಇದ್ದು, ನಾಳೆಯಿಂದ ಕಡ್ಡಾಯವಾಗಿ ಆರ್ ಟಿ ಪಿಸಿಆರ್ ವರದಿ ತರುವಂತೆ ಸೂಚಿಸಿದರು. ನಾಳೆಯಿಂದ ವರದಿ ಇಲ್ಲದೇ ಇದ್ದಲ್ಲಿ ಮಂಗಳೂರು ಪ್ರವೇಶ ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಇದನ್ನೂ ಓದಿ:ಮತ್ತೆ ಕೋವಿಡ್ ಕಾಟ: ತಲಪಾಡಿ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಪುನರಾರಂಭ

ಒಂದು ಗಂಟೆ ಕಾಲ ರಸ್ತೆ ತಡೆ

ಕೇರಳದಿಂದ ಬರುವ ವಾಹನಗಳಿಗೆ ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೇರಳಕ್ಕೆ ತೆರಳುವ ವಾಹನಗಳನ್ನು ಗಡಿನಾಡು ಪ್ರದೇಶದ ಮಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ಪ್ರತಿಭಟಿಸಿದರು. ಪ್ರತಿಭಟನಾಕಾರರು ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದರು.

ಈ ನಡುವೆ ರಾ.ಹೆ ತಡೆಯದಂತೆ ಉಳ್ಳಾಲ ಠಾಣಾಧಿಕಾರಿ ಸಂದೀಪ್ ಎಸ್. ಮುಂದಾದರೂ, ಪ್ರತಿಭಟನಾಕಾರರು ‘ ಕರ್ನಾಟಕ ಪೊಲೀಸ್ ಗೋ ಬ್ಯಾಕ್ ‘ ಎಂದು ಕೂಗಿ ವಾಪಸ್ಸು ಕಳುಹಿಸಿದ್ದಾರೆ. ಬಳಿಕ ಒಂದು ಗಂಟೆಯವರೆಗೂ ಮುಂದುವರಿದ ಪ್ರತಿಭಟನಾ ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿದರು.

ಪ್ರತಿಭಟನಾಕಾರರ ಜತೆಗೆ ಮಾತನಾಡಿದ ಮಂಜೇಶ್ವರ ಸಿ.ಐ ಅರುಣ್ ದಾಸ್ ಕಾಸರಗೋಡು ಜಿಲ್ಲಾಡಳಿತದ ಜತೆಗೆ ಮಾತುಕತೆ ನಡೆಸುವ ಭರವಸೆ ನೀಡಿದರು. ನಾಳೆ ಮತ್ತೆ ಕರ್ನಾಟಕದವರಿಂದ ತೊಂದರೆಯಾದಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಇದನ್ನೂ ಓದಿ: ಅಕ್ರಮ ಕಟ್ಟಡ ತೆರವಿಗೆ ಆಗ್ರಹಿಸಿ ಗಂಗೊಳ್ಳಿ ಗ್ರಾ.ಪಂ ಎದುರು ಬೃಹತ್ ಪ್ರತಿಭಟನೆ

ನ್ಯಾಯಾಲಯಕ್ಕೆ ಹೋಗುತ್ತೇವೆ: ಹರ್ಷಾದ್ ವರ್ಕಾಡಿ

ಕೇಂದ್ರ ಸರಕಾರ ಜನವರಿ ತಿಂಗಳಲ್ಲಿ ಜಾರಿಗೊಳಿಸಿರುವ ಆದೇಶದಲ್ಲಿ ಅಂತರ್ ರಾಜ್ಯ ಗಡಿಗಳಲ್ಲಿ ಯಾವುದೇ ವಾಹನಗಳಿಗೆ ತಡೆಯೊಡ್ಡಬಾರದು ಎಂದು ಸ್ಪಷ್ಟವಾಗಿ ತಿಳಿಸಿದೆ. ಆದರೆ ಕೇಂದ್ರದ ಆದೇಶವನ್ನು ರಾಜ್ಯ ಸರಕಾರ ಪಾಲಿಸದಿರುವುದು ದುರಾದೃಷ್ಟಕರ. ಈ ಆದೇಶವನ್ನು ಮುಂದಿಟ್ಟುಕೊಂಡು ನ್ಯಾಯಾಲಯದ ಮೆಟ್ಟಿಲು ಹತ್ತುತ್ತೇವೆ. ಭಾನುವಾರ ಉತ್ತರಪ್ರದೇಶದ ಮುಖ್ಯಮಂತ್ರಿ ಬರುವ ಸಂದರ್ಭದಲ್ಲಿ ಯಾವುದೇ ಕಾನೂನಗಳನ್ನು ಜಾರಿ ಮಾಡಿಸಿಲ್ಲ. ಇದೀಗ ಏಕಾಏಕಿ ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ರಾಜಕೀಯ ಷಡ್ಯಂತ್ರ ಎಂದು ಕಾಸರಗೋಡು ಜಿ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಆರೋಪಿಸಿದರು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.