ಟ್ರಂಪ್ ನಡೆಸಿದ 18 ಚುನಾವಣಾ ರ್ಯಾಲಿಯಿಂದ 30ಸಾವಿರ ಮಂದಿಗೆ ಕೋವಿಡ್ ಸೋಂಕು; 700 ಜನ ಸಾವು
Team Udayavani, Nov 1, 2020, 4:41 PM IST
ನ್ಯೂಯಾರ್ಕ್: ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಅವರ ಅಧ್ಯಕ್ಷೀಯ ಚುನಾವಣಾ ರ್ಯಾಲಿಯಿಂದಲೇ 30 ಸಾವಿರಕ್ಕಿಂತ ಹೆಚ್ಚು ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದು, ಸುಮಾರು 700 ಮಂದಿ ಮೃತಪಟ್ಟಿದ್ದಾರೆಂದು ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದ ಸಂಶೋಧನಾ ವರದಿ ತಿಳಿಸಿದೆ.
ಡೊನಾಲ್ಡ್ ಟ್ರಂಪ್ ಜೂನ್ 20, 2020ರಿಂದ ಸೆಪ್ಟೆಂಬರ್ 22ರವರೆಗೂ ಸುಮಾರು 18 ಚುನಾವಣಾ ರ್ಯಾಲಿಗಳನ್ನು ನಡೆಸಿದ್ದಾರೆ. ಇದರಿಂದ ಸೋಂಕಿಗೆ ತುತ್ತಾಗುವವರ ಸಂಖ್ಯೆ ಹೆಚ್ಚಿದ್ದರಿಂದ “ಕೋವಿಡ್ 19 ಪ್ರಸರಣದ ಮೇಲೆ ದೊಡ್ಡ ಗುಂಪು, ಸಭೆಗಳು ಬೀರುವ ಪರಿಣಾಮ: ಟ್ರಂಪ್ ರ್ಯಾಲಿಗಳ ಪ್ರಕರಣ” (The Effects of Large Group Meetings on the Spread of COVID-19: The Case of Trump Rallies) ಎಂಬ ಹೆಸರಿನಲ್ಲಿ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಸಂಶೋಧನೆ ನಡೆಸಿತ್ತು. ಇದರಿಂದ ಸುಮಾರು 30 ಸಾವಿರ ಜನರು ಸೋಂಕಿಗೆ ಒಳಗಾಗಿದ್ದು, ಮಾತ್ರವಲ್ಲದೆ 700 ಜನರು ಪ್ರಾಣತ್ಯೆಜಿಸಿದ್ದಾರೆಂದು ತಿಳಿದುಬಂದಿದೆ.
ಡೊನಾಲ್ಡ್ ಟ್ರಂಪ್ ಸಮಾವೇಶ ನಡೆಸಿದ ಸ್ಥಳಗಳಲ್ಲಿ ಕೋವಿಡ್ 19 ಪ್ರಸರಣದ ಸಂಖ್ಯೆ ಹೆಚ್ಚಾಗಿದೆ. ಭಾರೀ ಸಂಖ್ಯೆಯಲ್ಲಿ ಜನ ಗುಂಪುಗೂಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತದೆ ಎಂದು ವಿಶ್ವಸಂಸ್ಥೆ ತಿಳಿಸಿದ್ದರೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ವರದಿ ತಿಳಿಸಿದೆ.
ಸಮಾವೇಶದ ಸಂದರ್ಭದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ್ದರಿಂದ ಅಪಾಯದ ಪ್ರಮಾಣ ಹೆಚ್ಚಾಗಿದೆ. ಇದರಿಂದ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಕೂಡ ಹೆಚ್ಚಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ರಾಜ್ಯೋತ್ಸವದಂದು ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ, ಪುಂಡಾಟಿಕೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್, ಡೊನಾಲ್ಡ್ ಟ್ರಂಪ್ ಅವರಿಗೆ ಜನರ ಆರೋಗ್ಯದ ಕುರಿತಾಗಿ ಕಾಳಜಿಯಿಲ್ಲ. ತಮ್ಮ ಬೆಂಬಲಿಗರನ್ನೂ ಕೂಡ ನಿರ್ಲಕ್ಷಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಅಮೆರಿಕಾದಲ್ಲಿಯೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಈವರೆಗೂ ಸುಮಾರು 8.7 ಮಿಲಿಯನ್ ಜನರು ಸೋಂಕಿಗೆ ತುತ್ತಾಗಿದ್ದಾರೆ. ಹಾಗೂ 2,25,000 ಜನರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಉತ್ತರಪ್ರದೇಶದಂತೆ ಬಿಹಾರದಲ್ಲೂ ‘ಯುವರಾಜ’ರನ್ನು ಜನತೆ ಮನೆಗೆ ಕಳುಹಿಸುತ್ತಾರೆ: ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್