ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌


Team Udayavani, Oct 30, 2020, 12:09 AM IST

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

ಬೈಡೆನ್‌ ಹಾದಿ…
ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಯಾಗಿರುವ 77 ವರ್ಷದ ಜೋ ಬೈಡೆನ್‌, ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಆರು ಬಾರಿ ಸೆನೇಟರ್‌ ಆಗಿ(36 ವರ್ಷಗಳವರೆಗೆ) ಕಾರ್ಯನಿರ್ವಹಿಸಿದವರು. ಒಬಾಮಾ ಅವಧಿಯಲ್ಲಿ 8 ವರ್ಷ ಅಮೆರಿಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಹೆಸರು ಮಾಡಿದವರು. ಈ ಬಾರಿ ಚುನಾವಣೆಯಲ್ಲಿ ಗೆದ್ದರೆ ಅಮೆರಿಕದ ಇದುವರೆಗಿನ ಅತಿ ಹಿರಿಯ ಅಧ್ಯಕ್ಷರೆಂದು ಕರೆಸಿಕೊಳ್ಳಲಿದ್ದಾರೆ.

ಕೋವಿಡ್‌ ಸಮಯದಲ್ಲಿ ಸಕ್ರಿಯ
ಟ್ರಂಪ್‌ರ ಆರಂಭಿಕ ಅಸಡ್ಡೆಯೇ ರೋಗ ಪ್ರಸರಣ ಹೆಚ್ಚಲು ಕಾರಣ ಎಂದು ಬೈಡೆನ್‌ ಆರಂಭದಿಂದಲೂ ಆರೋಪಿಸುತ್ತಾ ಬಂದಿದ್ದಾರೆ. ಆದರೆ, ಇದೇ ವೇಳೆಯಲ್ಲೇ ಅವರು ತಮ್ಮ ಬೆಂಬಲಿಗರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿನಂತಿಸುತ್ತಾ, ಆರೋಗ್ಯ ಪರಿಣತರು ಹಾಗೂ ಆರ್ಥಿಕ ತಜ್ಞರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರಕಾರಕ್ಕೆ ಶಿಫಾರಸು ಮಾಡುತ್ತಾ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಬೆಂಬಲಿಗರಿಗೆ ಸೋಂಕು ಪ್ರಸರಣದ ಅಪಾಯ ಎದುರಾಗುತ್ತದೆಂಬ ಕಾರಣಕ್ಕಾಗಿ ಪಕ್ಷದ ರ್ಯಾಲಿಗಳನ್ನು, ಮನೆಮನೆ ಪ್ರಚಾರವನ್ನು ಕಡಿತಗೊಳಿಸಿದ್ದಾರೆ.

ಬರ್ನಿ ಬದಲು ಬೈಡೆನ್‌
ಬೈಡೆನ್‌ ಆಯ್ಕೆಗೂ ಮೊದಲು, ಹಿರಿಯ ರಾಜಕಾರಣಿ ಬರ್ನಿ ಸ್ಯಾಂಡರ್ಸ್‌ ಅವರೇ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಬಹುದೆಂಬ ನಿರೀಕ್ಷೆ ಯಿತ್ತು. ಆದರೆ, ತೀವ್ರ ಎಡಪಂಥೀಯ ಧೋರಣೆಯಿರುವ ಸ್ಯಾಂಡರ್ಸ್‌ರನ್ನು ಅಮೆರಿಕದ ಕಾರ್ಪೊರೇಟ್‌ ವಲಯ ದ್ವೇಷಿಸುತ್ತದೆ. ಈ ಕಾರಣಕ್ಕಾಗಿಯೇ ಎಲ್ಲ ವರ್ಗಗಳನ್ನೂ ತಲುಪಬಲ್ಲ, ಮೃದು ಮಾತಿನ ಸಮಾಜವಾದಿ ಬೈಡೆನ್‌ರನ್ನೇ ಡೆಮಾಕ್ರಟಿಕ್‌ ಪಕ್ಷ ಆಯ್ಕೆ ಮಾಡಿದೆ ಎನ್ನಲಾಗುತ್ತದೆ.

ಒಬಾಮಾ-ಬೈಡೆನ್‌ ಮೀಮ್ಸ್‌
ಬೈಡೆನ್‌ ಕಳೆದ ಮೂವತ್ತು ವರ್ಷಗಳಿಂದಲೂ ಅಧ್ಯಕ್ಷನಾಗಬೇಕೆಂಬ ಬಯಕೆ ಹೊಂದಿರುವವರು. ಒಬಾಮಾ ಮೊದಲ ಬಾರಿ ಸ್ಪರ್ಧಿಸಿದ್ದ ವೇಳೆಯಲ್ಲಿ ಡೆಮಾಕ್ರಟಿಕ್‌ ಪಕ್ಷದಲ್ಲಿ ಒಬಾಮಾ ಅವರಿಗೆ ಪರ್ಯಾಯವಾಗಲೂ ಪ್ರಯತ್ನಿಸಿ ವಿಫ‌ಲರಾಗಿ ದ್ದರು. ಆದರೆ, ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ನಂತರ, ಒಬಾಮಾರ ಅತ್ಯಾಪ್ತರಾಗಿ ಬದಲಾದರು. ಇವರಿಬ್ಬರ ದೋಸ್ತಿ ಯಾವ ಮಟ್ಟಕ್ಕೆ ಸದ್ದುಮಾಡುತ್ತಿತ್ತು ಎಂದರೆ, ಗೆಳೆತನ ಎಂದರೆ ಒಬಾಮಾ- ಬೈಡೆನ್‌ರದ್ದು ಎಂದು ಮೀಮ್‌ಗಳು ಹರಿದಾಡುತ್ತಿದ್ದವು. ಈಗ ಒಬಾಮಾ ಬೈಡೆನ್‌ ಪರ ಜೋರಾಗಿಯೇ ಪ್ರಚಾರ ಮಾಡುತ್ತಿದ್ದಾರೆ.

ಭಾಷಣ ಕದಿಯುತ್ತಾರೆಂಬ ಆರೋಪ
ಬೈಡೆನ್‌ರ ವಿರುದ್ಧ ಎದುರಾಳಿಗಳು ಮಾಡುವ ಪ್ರಮುಖ ಆರೋಪಗಳಲ್ಲಿ “ಅವರು ಭಾಷಣಗಳನ್ನು ಕದಿಯುತ್ತಾರೆ, ಸ್ವಂತ ವಿಚಾರವಿಲ್ಲದ ಮನುಷ್ಯ’ ಎನ್ನುವುದೂ ಒಂದು. 1988ರ ಚುನಾವಣೆಯ ಸಮಯದಲ್ಲಿ ಅಧ್ಯಕ್ಷೀಯ ಅಭ್ಯರ್ಥಿ ಸ್ಥಾನದ ಆಕಾಂಕ್ಷಿಯಾಗಿದ್ದ ಬೈಡೆನ್‌ ಕಾರ್ಯಕ್ರಮವೊಂದರಲ್ಲಿ ಮಾಡಿದ ಭಾಷಣ ಅವರ ಓಟಕ್ಕೆ ಮುಳುವಾಯಿತು. ಬ್ರಿಟನ್‌ನ ಲೇಬರ್‌ ಪಾರ್ಟಿಯ ನಾಯಕ ನೀಲ್‌ ಕಿನ್ನೋಕ್‌ ಮಾಡಿದ್ದ ಭಾಷಣದಲ್ಲಿನ ಕೆಲವು ಭಾಗಗಳನ್ನು ಬೈಡೆನ್‌ ಯಥಾವತ್ತಾಗಿ ಎತ್ತಿಕೊಂಡಿದ್ದಾರೆಂದು ವಿವಾದವಾಯಿತು. ಇದಷ್ಟೇ ಅಲ್ಲದೇ, ದಶಕಗಳ ಹಿಂದೆ ರಾಬರ್ಟ್‌. ಎಫ್. ಕೆನಡಿ ಹಾಗೂ ಹ್ಯೂಬರ್ಟ್‌ ಹಂಫ್ರಿಯವರು ಮಾಡಿದ್ದ ಭಾಷಣಗಳನ್ನೂ ಬೈಡೆನ್‌ ನಕಲಿಸಿದ್ದಾರೆ ಎನ್ನುವ ಆರೋಪವೂ ಎದುರಾಗಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.