ಹಲವು ಪ್ರಥಮಗಳಿಗೆ ಸಾಕ್ಷಿಯಾದ ಭಾರತೀಯ ಮೂಲದ ಕಮಲಾ ಹ್ಯಾರಿಸ್


Team Udayavani, Nov 8, 2020, 8:49 AM IST

ಹಲವು ಪ್ರಥಮಗಳಿಗೆ ಸಾಕ್ಷಿಯಾದ ಭಾರತೀಯ ಮೂಲದ ಕಮಲಾ ಹ್ಯಾರಿಸ್

ವಾಷಿಂಗ್ಟನ್ ಡಿಸಿ: ಡೆಮಾಕ್ರೆಟಿಕ್‌ ಪಕ್ಷ ಶ್ವೇತಭವನವನ್ನು ಪ್ರವೇಶಿಸಲಿರುವ ಈ ಹೊತ್ತಲ್ಲೇ, ಬೈಡೆನ್‌ರ ಅನಂತರ ಬಹುಚರ್ಚೆಯಲ್ಲಿರುವ ಹೆಸರೆಂದರೆ ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಅವರದ್ದು.

ಡೆಮಾಕ್ರೆಟಿಕ್‌ ಪಕ್ಷ ಅಧಿಕಾರ ವಹಿಸಿಕೊಳ್ಳಲಿದ್ದು, ಕಮಲಾ ಹ್ಯಾರಿಸ್‌ ಹಲವು ವಿಧಗಳಲ್ಲಿ ಇತಿಹಾಸ ರಚಿಸಲಿದ್ದಾರೆ. ಜಮೈಕಾ ಮೂಲದ ತಂದೆ, ಭಾರತೀಯ ಮೂಲದ ತಾಯಿಯ ಸಂತಾನವಾದ ಕಮಲಾ ಹ್ಯಾರಿಸ್‌, ಅಮೆರಿಕದಲ್ಲಿನ ಮೊದಲ ಕಪ್ಪುವರ್ಣೀಯ, ಮೊದಲ ಭಾರತೀಯ ಅಮೆರಿಕನ್‌ ಹಾಗೂ ಮೊದಲ ದಕ್ಷಿಣ ಏಷ್ಯನ್‌ ಉಪಾಧ್ಯಕ್ಷೆಯಾಗಲಿದ್ದಾರೆ. ಅಲ್ಲದೇ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಿಯೂ ದಾಖಲೆ ಬರೆಯಲಿದ್ದಾರೆ.

ಉಪಾಧ್ಯಕ್ಷೆ ಸ್ಥಾನಕ್ಕೆ ಅಭ್ಯರ್ಥಿಯಾಗಿ ತಮ್ಮ ಹೆಸರು ಘೋಷಣೆಯಾದದ್ದೇ ಹ್ಯಾರಿಸ್‌ ಅವರು ಭಾರತೀಯ ಮೂಲದ ಮತದಾರರು, ಏಷ್ಯನ್ನರು ಹಾಗೂ ಕಪ್ಪುವರ್ಣೀಯರನ್ನು ಸೆಳೆಯುವ ಪ್ರಯತ್ನಕ್ಕೆ ಧುಮುಕಿದರು. ಅಮೆರಿಕದಲ್ಲಿ 45 ಲಕ್ಷ ಭಾರತೀಯರಿದ್ದು, ಇವರಲ್ಲಿ 19 ಲಕ್ಷ ಜನ ಮತದಾನಕ್ಕೆ ಅರ್ಹರು.

ಭಾರತೀಯ ಮೂಲದ ಮತದಾರರು ಎಲ್ಲಿ ಕಮಲಾ ಪರ ವಾಲುತ್ತಾರೋ ಎಂಬ ಎಚ್ಚರಿಕೆಯಿಂದ ಟ್ರಂಪ್‌, ಪ್ರಚಾರ ಕಾರ್ಯಗಳ ಆರಂಭದಿಂದಲೂ ಅವರನ್ನು ಟಾರ್ಗೆಟ್‌ ಮಾಡುತ್ತಾ ಬಂದರು. ಒಂದು ಸಮಯದಲ್ಲಂತೂ ಕಮಲಾರನ್ನು “ಕೆಟ್ಟ’ ಹಾಗೂ “ರಾಕ್ಷಸಿ’ ಗುಣದ ಮಹಿಳೆ ಎಂದೂ ಮೂದಲಿಸಿದ್ದರು ಟ್ರಂಪ್‌. ಇನ್ನು ಟ್ರಂಪ್‌ರ ತಂಡವು ಬೇಕಂತಲೇ ಕಮಲಾರ ಹೆಸರನ್ನು ತಪ್ಪುತಪ್ಪಾಗಿ ಉಚ್ಚರಿಸುತ್ತಾ ಬಂದಿತು ಎನ್ನಲಾಗುತ್ತದೆ.

ಕಮಲಾ

ಕಮಲಾ ಹೊರಗಿನವರು ಎಂದು ಬಿಂಬಿಸುವುದಕ್ಕಾಗಿ ಹೀಗೆ ಹೆಸರನ್ನು ತಪ್ಪಾಗಿ ಉಚ್ಚರಿಸಲಾಗುತ್ತಿದೆ ಎಂದು ಡೆಮಾಕ್ರಾಟ್‌ಗಳು ದೂರಿದರು. ಕಾರ್ನೆಗಿ ವರದಿಯ ಪ್ರಕಾರ, ಭಾರತೀಯ ಮೂಲದ ಮತದಾರರನ್ನು ಹಾಗೂ ಮುಖ್ಯವಾಗಿ ಡೆಮಾಕ್ರಾಟ್ ಗಳ ಮನಗೆಲ್ಲುವಲ್ಲಿ ಕಮಲಾ ಯಶಸ್ವಿಯಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಾಗ ಕಮಲಾ ತಮ್ಮ ತಾಯಿಯನ್ನು ನೆನಪಿಸಿಕೊಂಡಿದ್ದರು- “ಅಂದು ಕ್ಯಾಲಿಫೋರ್ನಿಯಾದ ಆಸ್ಪತ್ರೆಯೊಂದರಲ್ಲಿ 25ರ ಹರೆಯದ ಅಮ್ಮ ನನಗೆ ಜನ್ಮ ನೀಡಿದಾಗ, ಮುಂದೊಂದು ದಿನ ತನ್ನ ಮಗಳು ಉಪಾಧ್ಯಕ್ಷೆ ಸ್ಥಾನಕ್ಕೆ ಅಭ್ಯರ್ಥಿಯಾಗುತ್ತಾಳೆ, ಈ ರೀತಿ ನಿಮ್ಮೆದುರಲ್ಲಿ ನಿಂತು ಭಾಷಣ ಮಾಡುತ್ತಾಳೆ ಎಂದು ಕನಸು ಮನಸಲ್ಲೂ ಎಣಿಸಿರಲಿಕ್ಕಿಲ್ಲ. ಆಕೆಯ ನೆನಪು ನನ್ನನ್ನು ಬಹಳ ಕಾಡುತ್ತದೆ. ಆದರೆ ಆಕೆ ಮೇಲಿಂದ ಎಲ್ಲವನ್ನೂ ಗಮನಿಸುತ್ತಿದ್ದಾಳೆ ಎನ್ನುವುದು ಬಲ್ಲೆ’ ಎಂದಿದ್ದರು.

ಇದನ್ನೂ ಓದಿ:ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಭರ್ಜರಿ ಗೆಲುವು! 46ನೇ ಅಧ್ಯಕ್ಷರಾಗಿ ಆಯ್ಕೆ

ಆದರೆ ಕೆಲವು ವಿಚಾರಗಳಲ್ಲಿ ಕಮಲಾ ಬಗ್ಗೆ ಭಾರತೀಯ ಅಮೆರಿಕನ್ನರಿಗೆ ಅಸಮಧಾನವೂ ಇದೆ. ಮೊದಲಿನಿಂದಲೂ ಕಮಲಾ ತಮ್ಮನ್ನು ಕಪ್ಪುವರ್ಣೀಯ ಮಹಿಳೆ ಎಂದೇ ಗುರುತಿಸಿಕೊಳ್ಳಲು ಇಷ್ಟಪಡುತ್ತಿದ್ದರು, ಆದರೆ ಚುನಾವಣೆ ಎದುರಾದದ್ದೇ ಅವರು ತಮ್ಮ ಭಾರತೀಯ ಮೂಲವನ್ನು ನೆನಪಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವಿದೆ. ಇನ್ನು ಜಮ್ಮು-ಕಾಶ್ಮೀರದ ವಿಚಾರದಲ್ಲಿ ಕಮಲಾ ಹ್ಯಾರಿಸ್‌ ಪಾಕಿಸ್ಥಾನ ಪರ ಲಾಬಿಗಳ ಮಾತು ಕೇಳಿಕೊಂಡು ಭಾರತ ವಿರೋಧಿ ಹೇಳಿಕೆಗಳನ್ನು ನೀಡುತ್ತಾ ಬಂದವರು ಎನ್ನುವುದು ಟೀಕಾಕಾರರವಾದ.

ಆದರೂ, ಕ್ಯಾಲಿಫೋರ್ನಿಯಾದ ಆಕ್ಲಂಡ್‌ ನಲ್ಲಿ ಸರಕಾರಿ ವಕೀಲರಾಗಿದ್ದ ಕಮಲಾ ಹ್ಯಾರಿಸ್‌, 2016ರಲ್ಲಿ ಸೆನೆಟ್‌ಗೆ ಆಯ್ಕೆಯಾದಾಗಲೂ ಕೂಡ ಮುಂದೆ ಅವರು ಉಪಾಧ್ಯಕ್ಷ ಪದವಿಯತ್ತ ದಾಪುಗಾಲಿಡಲಿದ್ದಾರೆ ಎಂದು ಯಾರೂ ಅಂದಾಜಿಸಿರಲಿಲ್ಲ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.