ಬದುಕು ಬದಲಾಗಿದೆ, ನಾವೂ ಬದಲಾಗೋಣ; ಬ್ಯಾಂಕ್‌ ವ್ಯವಹಾರ: ಏನು? ಹೇಗೆ?


Team Udayavani, May 29, 2020, 5:00 AM IST

ಬ್ಯಾಂಕ್‌ ವ್ಯವಹಾರ: ಏನು? ಹೇಗೆ?

ಸಾಂದರ್ಭಿಕ ಚಿತ್ರ.

ಬ್ಯಾಂಕಿಂಗ್‌ ಕ್ಷೇತ್ರ ಇಂದು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಹಣಕಾಸಿಗೆ ಸಂಬಂಧಿಸಿದ ಹೆಚ್ಚಿನ ಎಲ್ಲ ವ್ಯವಹಾರಗಳು ಬ್ಯಾಂಕ್‌ ಖಾತೆಯ ನೆರವಿನಿಂದಲೇ ನಡೆಯುತ್ತಿದೆ. ಕೋವಿಡ್‌-19 ಆತಂಕದ ನಡುವೆ ಇಲ್ಲಿ ಯಾವ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲಿದೆ ಮಾಹಿತಿ.

ವೇತನದಿಂದ ಪಿಂಚಣಿಯವರೆಗೆ, ಸಹಾಯಧನದಿಂದ ವಿವಿಧ ನೆರವಿನವರೆಗೆ ಎಲ್ಲವೂ ಈಗ ಬ್ಯಾಂಕ್‌ ಖಾತೆಗಳನ್ನೇ ಆಶ್ರಯಿಸಿದೆ. ಜನಧನ ಖಾತೆ ಆರಂಭವಾದ ಬಳಿಕವಂತೂ ಬಡವರೂ ಬ್ಯಾಂಕ್‌ ವ್ಯವಹಾರಗಳಿಗೆ ಒಗ್ಗಿಕೊಳ್ಳುವಂತಾಯಿತು. ಕೋವಿಡ್‌-19 ಸಂಕಷ್ಟ ಕಾಲದಲ್ಲಿ ಇಡೀ ದೇಶವೇ ಲಾಕ್‌ಡೌನ್‌ ಆಗಿ ಬಹುತೇಕ ಎಲ್ಲ ಕೆಲಸ ಕಾರ್ಯಗಳು ಸ್ಥಹಿತಗೊಂಡರೂ ಬ್ಯಾಂಕ್‌ ವ್ಯವಹಾರಗಳು ನಿರಾತಂಕವಾಗಿ ನಡೆದಿವೆ. ಜನಧನ ಖಾತೆಗೆ ಜಮಾ ಆಗಿರುವ ಹಣವನ್ನು ಜನರಿಗೆ ತಲುಪಿಸುವುದು ಸಹಿತ ಇತರ ಅಗತ್ಯಗಳನ್ನು ಪೂರೈಸಿವೆ. ಇದೇ ಸಂದರ್ಭ ವ್ಯವಹಾರದ ಸಂದರ್ಭ ಸಾಕಷ್ಟು ಮುನ್ನೆಚ್ಚರಿಕೆಗಳನ್ನೂ ತೆಗೆದುಕೊಳ್ಳಲಾಗಿದೆ. ಆರಂಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಅಲ್ಲಿನ ನಿಯಮಾವಳಿಗಳು ಸ್ವಲ್ಪ ಕಿರಿ ಕಿರಿ ಅನಿಸಿದರೂ ಈಗ ಜನರು ಅದಕ್ಕೆ ಹೊಂದಿಕೊಂಡಿದ್ದಾರೆ. ಮುಂದೆಯೂ ಮುಂಜಾಗ್ರತೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವ್ಯವಹಾರ ನಡೆಸುವುದು ಎಲ್ಲರ ಜವಾಬ್ದಾರಿಯೂ ಆಗಿರುತ್ತದೆ.

ಈಗ ಆನ್‌ಲೈನ್‌ ಬ್ಯಾಂಕಿಂಗ್‌, ಡಿಜಿಟಲ್‌
1. ಬ್ಯಾಂಕಿಂಗ್‌ ಮತ್ತಿತರ ಸೇವೆಗಳು ಇರುವುದರಿಂದ ಎಲ್ಲ ಬ್ಯಾಂಕ್‌ ವ್ಯವಹಾರಗಳಿಗಾಗಿ ಬ್ಯಾಂಕ್‌ಗೆ ಬರಬೇಕಾದ ಅಗತ್ಯವಿಲ್ಲ. ತೀರಾ ಅನಿವಾರ್ಯವೆನಿಸಿದರೆ ಮಾತ್ರ ಬ್ಯಾಂಕಿಗೆ ಬಂದು ಕೆಲಸ ಮಾಡಿಸಿಕೊಳ್ಳಬಹುದು.

2. ಖಾಸಗಿ ಆ್ಯಪ್‌ ಗಳಿಗಿಂತ ಭೀಮ್‌ನಂತಹ ಸರಕಾರಿ ಆ್ಯಪ್‌ಗ್ಳು ಅಥವಾ ನಿಮ್ಮ ಖಾತೆಯಿರುವ ಬ್ಯಾಂಕ್‌ಗಳ ಅಧಿಕೃತ ಆ್ಯಪ್‌ ಗಳನ್ನು ಬಳಸಿ. ಅದು ಹೆಚ್ಚು ಸುರಕ್ಷಿತ. ಅದೂ ಅಲ್ಲದೆ ಎಲ್ಲ ಬ್ಯಾಂಕ್‌ಗಳು ಸಹಾಯವಾಣಿ ಸಂಖ್ಯೆ ಹೊಂದಿದ್ದು, ಅಲ್ಲಿಂದಲೂ ಸಾಕಷ್ಟು ಮಾಹಿತಿಗಳನ್ನು ಪಡೆಯಬಹುದು.

3. ಎಲ್ಲ ಬ್ಯಾಂಕ್‌ಗಳು ಕೂಡ ಈಗ ತಮ್ಮದೇ ಪ್ರತ್ಯೇಕ ಆ್ಯಪ್‌ ಗಳನ್ನು ಹೊಂದಿದ್ದು, ಅದನ್ನು ಗ್ರಾಹಕರು ತಮ್ಮ ಮೊಬೈಲ್‌ಗ‌ಳಲ್ಲಿ ಅಳವಡಿಸಿಕೊಂಡರೆ ಖಾತೆಯಿಂದ ಖಾತೆಗೆ, ಬೇರೆ ಬ್ಯಾಂಕಿನ ಖಾತೆಗಳಿಗೆ ಹಣ ವರ್ಗಾವಣೆ ಮಾಡಬಹುದು. ಖಾತೆಯ ವ್ಯವಹಾರಗಳ ಮಾಹಿತಿಯನ್ನೂ ತಿಳಿದುಕೊಳ್ಳಬಹುದು.

4. ಕೆಲವು ಎಟಿಎಂ ಕೇಂದ್ರಗಳಲ್ಲಿ ನಗದು ಹಣವನ್ನು ಖಾತೆಗೆ ಜಮೆ ಮಾಡುವ ಸೌಲಭ್ಯವೂ ಇದೆ. ಇದರಿಂದ ಜಾಸ್ತಿ ಜನ ಸೇರುವ ಬ್ಯಾಂಕ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಬಹುದು. ಈ ಸೇವೆ ಬಳಸುವ ಸಂದರ್ಭ ಮುಖಕ್ಕೆ ಮಾಸ್ಕ್ ಬಳಕೆ, ಹ್ಯಾಂಡ್‌ ಸ್ಯಾನಿಟೈಸರ್‌ ಉಪಯೋಗ ಕಡ್ಡಾಯವಾಗಿ ಮಾಡಿ.

5. ಸಾಮಾನ್ಯವಾಗಿ ಬೆಳಗ್ಗೆ ಬ್ಯಾಂಕ್‌ಗಳಲ್ಲಿ ಜನಸಂದಣಿ ಜಾಸ್ತಿಯಿರುತ್ತದೆ. ಸಂಜೆ 4 ಗಂಟೆಯ ವರೆಗೂ ಎಲ್ಲ ರೀತಿಯ ಹಣದ ವಹಿವಾಟುಗಳು ನಡೆಯುವುದರಿಂದ ಮಧ್ಯಾಹ್ನದ ಅನಂತರ ಕೂಡ ಬ್ಯಾಂಕ್‌ಗಳಿಗೆ ತೆರಳಬಹುದು. ಇದರಿಂದ ಸಾಮಾಜಿಕ ಅಂತರ ಕಾಯುವುದು ಸುಲಭವಾಗುವುದು.

6. ಬ್ಯಾಂಕ್‌ ಎಟಿಎಂ ಕಾರ್ಡ್‌ಗಳ ಪಿನ್‌ ಸಂಖ್ಯೆಯನ್ನೂ ಯಾರು ಕೇಳಿದರೂ ಕೊಡಬೇಡಿ. ಬ್ಯಾಂಕ್‌ನವರಂತೂ ಕೇಳುವುದಿಲ್ಲ. ಬೇರೆಯವರಿಗೆ ಪಿನ್‌ ಸಂಖ್ಯೆ ಕೊಟ್ಟರೆ ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಲಪಟಾಯಿಸುವ ಸಾಧ್ಯತೆಯೇ ಹೆಚ್ಚು. ಅದನ್ನು ಸಾಧ್ಯವಾದಷ್ಟು ಗೌಪ್ಯವಾಗಿಯೂ ಇರಿಸಿ.

ನಿಮಗೆ ಏನಾದರೂ ಸಂಶಯ, ಪ್ರಶ್ನೆಗಳಿದ್ದರೆ ಈ ನಂಬರಿಗೆ ವಾಟ್ಸಪ್‌ ಮಾಡಿ. 9148594259

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.