ಬದುಕು ಬದಲಾಗಿದೆ, ನಾವೂ ಬದಲಾಗೋಣ; ಬ್ಯಾಂಕ್‌ ವ್ಯವಹಾರ: ಏನು? ಹೇಗೆ?


Team Udayavani, May 29, 2020, 5:00 AM IST

ಬ್ಯಾಂಕ್‌ ವ್ಯವಹಾರ: ಏನು? ಹೇಗೆ?

ಸಾಂದರ್ಭಿಕ ಚಿತ್ರ.

ಬ್ಯಾಂಕಿಂಗ್‌ ಕ್ಷೇತ್ರ ಇಂದು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಹಣಕಾಸಿಗೆ ಸಂಬಂಧಿಸಿದ ಹೆಚ್ಚಿನ ಎಲ್ಲ ವ್ಯವಹಾರಗಳು ಬ್ಯಾಂಕ್‌ ಖಾತೆಯ ನೆರವಿನಿಂದಲೇ ನಡೆಯುತ್ತಿದೆ. ಕೋವಿಡ್‌-19 ಆತಂಕದ ನಡುವೆ ಇಲ್ಲಿ ಯಾವ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲಿದೆ ಮಾಹಿತಿ.

ವೇತನದಿಂದ ಪಿಂಚಣಿಯವರೆಗೆ, ಸಹಾಯಧನದಿಂದ ವಿವಿಧ ನೆರವಿನವರೆಗೆ ಎಲ್ಲವೂ ಈಗ ಬ್ಯಾಂಕ್‌ ಖಾತೆಗಳನ್ನೇ ಆಶ್ರಯಿಸಿದೆ. ಜನಧನ ಖಾತೆ ಆರಂಭವಾದ ಬಳಿಕವಂತೂ ಬಡವರೂ ಬ್ಯಾಂಕ್‌ ವ್ಯವಹಾರಗಳಿಗೆ ಒಗ್ಗಿಕೊಳ್ಳುವಂತಾಯಿತು. ಕೋವಿಡ್‌-19 ಸಂಕಷ್ಟ ಕಾಲದಲ್ಲಿ ಇಡೀ ದೇಶವೇ ಲಾಕ್‌ಡೌನ್‌ ಆಗಿ ಬಹುತೇಕ ಎಲ್ಲ ಕೆಲಸ ಕಾರ್ಯಗಳು ಸ್ಥಹಿತಗೊಂಡರೂ ಬ್ಯಾಂಕ್‌ ವ್ಯವಹಾರಗಳು ನಿರಾತಂಕವಾಗಿ ನಡೆದಿವೆ. ಜನಧನ ಖಾತೆಗೆ ಜಮಾ ಆಗಿರುವ ಹಣವನ್ನು ಜನರಿಗೆ ತಲುಪಿಸುವುದು ಸಹಿತ ಇತರ ಅಗತ್ಯಗಳನ್ನು ಪೂರೈಸಿವೆ. ಇದೇ ಸಂದರ್ಭ ವ್ಯವಹಾರದ ಸಂದರ್ಭ ಸಾಕಷ್ಟು ಮುನ್ನೆಚ್ಚರಿಕೆಗಳನ್ನೂ ತೆಗೆದುಕೊಳ್ಳಲಾಗಿದೆ. ಆರಂಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಅಲ್ಲಿನ ನಿಯಮಾವಳಿಗಳು ಸ್ವಲ್ಪ ಕಿರಿ ಕಿರಿ ಅನಿಸಿದರೂ ಈಗ ಜನರು ಅದಕ್ಕೆ ಹೊಂದಿಕೊಂಡಿದ್ದಾರೆ. ಮುಂದೆಯೂ ಮುಂಜಾಗ್ರತೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವ್ಯವಹಾರ ನಡೆಸುವುದು ಎಲ್ಲರ ಜವಾಬ್ದಾರಿಯೂ ಆಗಿರುತ್ತದೆ.

ಈಗ ಆನ್‌ಲೈನ್‌ ಬ್ಯಾಂಕಿಂಗ್‌, ಡಿಜಿಟಲ್‌
1. ಬ್ಯಾಂಕಿಂಗ್‌ ಮತ್ತಿತರ ಸೇವೆಗಳು ಇರುವುದರಿಂದ ಎಲ್ಲ ಬ್ಯಾಂಕ್‌ ವ್ಯವಹಾರಗಳಿಗಾಗಿ ಬ್ಯಾಂಕ್‌ಗೆ ಬರಬೇಕಾದ ಅಗತ್ಯವಿಲ್ಲ. ತೀರಾ ಅನಿವಾರ್ಯವೆನಿಸಿದರೆ ಮಾತ್ರ ಬ್ಯಾಂಕಿಗೆ ಬಂದು ಕೆಲಸ ಮಾಡಿಸಿಕೊಳ್ಳಬಹುದು.

2. ಖಾಸಗಿ ಆ್ಯಪ್‌ ಗಳಿಗಿಂತ ಭೀಮ್‌ನಂತಹ ಸರಕಾರಿ ಆ್ಯಪ್‌ಗ್ಳು ಅಥವಾ ನಿಮ್ಮ ಖಾತೆಯಿರುವ ಬ್ಯಾಂಕ್‌ಗಳ ಅಧಿಕೃತ ಆ್ಯಪ್‌ ಗಳನ್ನು ಬಳಸಿ. ಅದು ಹೆಚ್ಚು ಸುರಕ್ಷಿತ. ಅದೂ ಅಲ್ಲದೆ ಎಲ್ಲ ಬ್ಯಾಂಕ್‌ಗಳು ಸಹಾಯವಾಣಿ ಸಂಖ್ಯೆ ಹೊಂದಿದ್ದು, ಅಲ್ಲಿಂದಲೂ ಸಾಕಷ್ಟು ಮಾಹಿತಿಗಳನ್ನು ಪಡೆಯಬಹುದು.

3. ಎಲ್ಲ ಬ್ಯಾಂಕ್‌ಗಳು ಕೂಡ ಈಗ ತಮ್ಮದೇ ಪ್ರತ್ಯೇಕ ಆ್ಯಪ್‌ ಗಳನ್ನು ಹೊಂದಿದ್ದು, ಅದನ್ನು ಗ್ರಾಹಕರು ತಮ್ಮ ಮೊಬೈಲ್‌ಗ‌ಳಲ್ಲಿ ಅಳವಡಿಸಿಕೊಂಡರೆ ಖಾತೆಯಿಂದ ಖಾತೆಗೆ, ಬೇರೆ ಬ್ಯಾಂಕಿನ ಖಾತೆಗಳಿಗೆ ಹಣ ವರ್ಗಾವಣೆ ಮಾಡಬಹುದು. ಖಾತೆಯ ವ್ಯವಹಾರಗಳ ಮಾಹಿತಿಯನ್ನೂ ತಿಳಿದುಕೊಳ್ಳಬಹುದು.

4. ಕೆಲವು ಎಟಿಎಂ ಕೇಂದ್ರಗಳಲ್ಲಿ ನಗದು ಹಣವನ್ನು ಖಾತೆಗೆ ಜಮೆ ಮಾಡುವ ಸೌಲಭ್ಯವೂ ಇದೆ. ಇದರಿಂದ ಜಾಸ್ತಿ ಜನ ಸೇರುವ ಬ್ಯಾಂಕ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಬಹುದು. ಈ ಸೇವೆ ಬಳಸುವ ಸಂದರ್ಭ ಮುಖಕ್ಕೆ ಮಾಸ್ಕ್ ಬಳಕೆ, ಹ್ಯಾಂಡ್‌ ಸ್ಯಾನಿಟೈಸರ್‌ ಉಪಯೋಗ ಕಡ್ಡಾಯವಾಗಿ ಮಾಡಿ.

5. ಸಾಮಾನ್ಯವಾಗಿ ಬೆಳಗ್ಗೆ ಬ್ಯಾಂಕ್‌ಗಳಲ್ಲಿ ಜನಸಂದಣಿ ಜಾಸ್ತಿಯಿರುತ್ತದೆ. ಸಂಜೆ 4 ಗಂಟೆಯ ವರೆಗೂ ಎಲ್ಲ ರೀತಿಯ ಹಣದ ವಹಿವಾಟುಗಳು ನಡೆಯುವುದರಿಂದ ಮಧ್ಯಾಹ್ನದ ಅನಂತರ ಕೂಡ ಬ್ಯಾಂಕ್‌ಗಳಿಗೆ ತೆರಳಬಹುದು. ಇದರಿಂದ ಸಾಮಾಜಿಕ ಅಂತರ ಕಾಯುವುದು ಸುಲಭವಾಗುವುದು.

6. ಬ್ಯಾಂಕ್‌ ಎಟಿಎಂ ಕಾರ್ಡ್‌ಗಳ ಪಿನ್‌ ಸಂಖ್ಯೆಯನ್ನೂ ಯಾರು ಕೇಳಿದರೂ ಕೊಡಬೇಡಿ. ಬ್ಯಾಂಕ್‌ನವರಂತೂ ಕೇಳುವುದಿಲ್ಲ. ಬೇರೆಯವರಿಗೆ ಪಿನ್‌ ಸಂಖ್ಯೆ ಕೊಟ್ಟರೆ ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಲಪಟಾಯಿಸುವ ಸಾಧ್ಯತೆಯೇ ಹೆಚ್ಚು. ಅದನ್ನು ಸಾಧ್ಯವಾದಷ್ಟು ಗೌಪ್ಯವಾಗಿಯೂ ಇರಿಸಿ.

ನಿಮಗೆ ಏನಾದರೂ ಸಂಶಯ, ಪ್ರಶ್ನೆಗಳಿದ್ದರೆ ಈ ನಂಬರಿಗೆ ವಾಟ್ಸಪ್‌ ಮಾಡಿ. 9148594259

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.