ಬದುಕು ಬದಲಾಗಿದೆ, ನಾವೂ ಬದಲಾಗೋಣ : ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿಯೇ ಇದೆ


Team Udayavani, May 29, 2020, 1:38 AM IST

Thermal-Screening

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ ಈಗ ಹಳೆಯ ಕಥೆ. ನಾವು ಏನಿದ್ದರೂ ಅದರೊಂದಿಗೆ ಎಚ್ಚರದಿಂದ ಬದುಕುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಅದು ಹೇಗೆ? ಇಲ್ಲಿದೆ ಮಾಹಿತಿ.

ಕೋವಿಡ್ ಕಾಣಿಸಿಕೊಂಡ ಬಳಿಕ ನಮ್ಮ ಜೀವನ ಶೈಲಿಯೇ ಬದಲಾಗುತ್ತಿದೆ. ಮನೆಯೊಳಗೇ ಕುಳಿತುಕೊಂಡು ಬದುಕು ಕಟ್ಟಿಕೊಳ್ಳಲು ಅಸಾಧ್ಯ. ವಿವಿಧ ಕೆಲಸ ಕಾರ್ಯಗಳಿಗಾಗಿ ಹೊರಗಡೆ ಹೋಗುವುದು ಅನಿವಾರ್ಯ.

ಉದ್ಯೋಗ ಸಹಿತ ವಿವಿಧ ಅನಿವಾರ್ಯ ಕಾರಣಗಳಿಗಾಗಿ ಹೊರಗೆ ಹೋಗುವಂತಹ ಸಂದರ್ಭ ದಲ್ಲಿ ನಾವು ಏನು ಮಾಡಬೇಕು. ಯಾವ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಯಾವೆಲ್ಲ ಕಡೆ ಯಾವ ಯಾವ ರೀತಿಯ ವ್ಯವಸ್ಥೆಗಳನ್ನು ಮಾಡಿರುತ್ತಾರೆ. ನಾವು ಏನೇನು ಕೊಂಡೊಯ್ಯಬೇಕು.

ಯಾವೆಲ್ಲ ಕೆಲಸಗಳನ್ನು ಫೋನ್‌ ಅಥವಾ ಮನೆಯಲ್ಲಿಯೇ ಕುಳಿತುಕೊಂಡು ಹೇಗೆ ಮಾಡಬಹುದು. ಯಾವ ಕೆಲಸ ಕಾರ್ಯಗಳನ್ನು ತುರ್ತಾಗಿ ಮಾಡಬೇಕು. ಯಾವೆಲ್ಲ ಕೆಲಸಗಳಿಗೆ ಅವಸರವಿಲ್ಲ ಎಂಬಿತ್ಯಾದಿ ಸಂಗತಿಗಳ ಮಾಹಿತಿಗಳನ್ನು ‘ಉದಯವಾಣಿ’ ಇಂದಿನಿಂದ ನೀಡುತ್ತಿದೆ. ನಾವು ಜವಾಬ್ದಾರಿಯುತವಾಗಿ ವರ್ತಿಸಿದರೆ ನಮಗೆ ಮಾತ್ರವಲ್ಲದೆ ಸಮಾಜದಲ್ಲೂ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಧ್ಯ. ಇದಕ್ಕೆ ಸರ್ವರ ಸಹಕಾರವೂ ಅಗತ್ಯ

1. ಮನೆಯಿಂದ ಹೊರಗೆ ಹೋಗಬೇಕಾದ ಸಂದರ್ಭ
ತಪ್ಪದೆ ಮಾಸ್ಕ್ ಧರಿಸಿರಬೇಕು. ಒಂದು ವೇಳೆ ಮಾಸ್ಕ್ ಇಲ್ಲದೇ ಇದ್ದರೆ ಕನಿಷ್ಠ ಕರ್ಚೀಫ್ ಅನ್ನು ಆದರೂ ಮುಖಕ್ಕೆ ಸುತ್ತಿಕೊಳ್ಳಲು ಮರೆಯದಿರೋಣ, ಮರೆತರೆ ದಂಡವೂ ಬೀಳುತ್ತದೆ.

2. ಹೊರಗೆ ಹೋಗುವಂತಹ ಸಂದರ್ಭದಲ್ಲಿ ಕೈಗೆ ಗ್ಲೌಸ್‌ ಹಾಕುವುದು ಉತ್ತಮ. ಸಣ್ಣದಾದರೂ ಒಂದು ಸ್ಯಾನಿಟೈಸರ್‌ ಬಾಟ್ಲಿ ಕೈಯಲ್ಲಿದ್ದರೆ ಉತ್ತಮ. ಹೊರಗಿನ ನಮ್ಮ ಕೆಲಸ ಆದ ಕೂಡಲೇ ಅಲ್ಲಿಯೇ ನಾವು ಒಮ್ಮೆ ಕೈಗೆ ಸ್ಯಾನಿಟೈಸರ್‌ ಹಾಕಿ ಸ್ವಚ್ಛಗೊಳಿಸಿಕೊಳ್ಳಬಹುದು.

3. ಕೋವಿಡ್ ವಿರುದ್ಧದ ಪ್ರಬಲ ಅಸ್ತ್ರವೇ ಸಾಮಾಜಿಕ ಅಂತರ. ಎಲ್ಲಿಗೆ ಹೋದರೂ ಇದನ್ನು ಮರೆಯದಿರೋಣ. ಜನ ಗುಂಪುಗೂಡಿದ್ದರೆ ಸಾಧ್ಯವಾದರೆ ಅವರಿಗೆ ತಿಳಿಹೇಳುವ ಅಥವಾ ನಾವು ದೂರವಿದ್ದು, ಗುಂಪು ತಿಳಿಯಾದ ಬಳಿಕ ಅಲ್ಲಿ ಹೋಗುವ ಕೆಲಸವನ್ನು ಮಾಡೋಣ.

4. ಹೊರಗಡೆ ಹೋದಾಗ ಕುರ್ಚಿ, ಟೇಬಲ್‌, ಇತರ ವಸ್ತುಗಳು ಸಹಿತ ಅನಗತ್ಯವಾಗಿ ಯಾವುದನ್ನೂ ಮುಟ್ಟದಿರುವುದು ಸುರಕ್ಷಿತ. ಆ ವಸ್ತುಗಳ ಮೇಲೆ ಸೋಂಕು ಇದ್ದರೆ ತಗಲುವ ಸಾಧ್ಯತೆ ಇರುತ್ತದೆ.

5. ಕೋವಿಡ್ ಸೋಂಕು ಅತೀ ಬೇಗನೆ ತಗಲಿ, ಅಪಾಯ ಎದುರಾಗುವುದು ಮಕ್ಕಳು, ಹಿರಿಯ ನಾಗರಿಕರಿಗೆ. ಆದುದರಿಂದ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗದಿರೋಣ. ಅನಿವಾರ್ಯವಾದರೆ ಗರಿಷ್ಠ ಸುರಕ್ಷತೆಯತ್ತ ಗಮನ ನೀಡಲು ಮರೆಯದಿರಿ.

6. ಮನೆಗೆ ವಾಪಸ್‌ ಬಂದ ಕೂಡಲೇ ಸೋಪ್‌ನಿಂದ ಸರಿಯಾಗಿ ಕೈ ತೊಳೆದುಕೊಳ್ಳೋಣ. ಬಟ್ಟೆ ಬರೆಗಳನ್ನು ಪ್ರತ್ಯೇಕವಾಗಿರಿಸಿ ಸೋಪ್‌ ಬಳಸಿ ತೊಳೆದು ಸರಿಯಾಗಿ ಒಣಗಿಸಿದ ಬಳಿಕ ಬಳಸೋಣ.

ನಿಮಗೆ ಏನಾದರೂ ಸಂಶಯ, ಪ್ರಶ್ನೆಗಳಿದ್ದರೆ ಈ ನಂಬರಿಗೆ ವಾಟ್ಸಪ್‌ ಮಾಡಿ.: 9148594259

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.