ಬದುಕು ಬದಲಾಗಿದೆ, ನಾವೂ ಬದಲಾಗೋಣ ; ಮಾರುಕಟ್ಟೆಗೆ ಪಯಣ…ಇರಲಿ ಕಟ್ಟೆಚ್ಚರ


Team Udayavani, May 29, 2020, 2:01 AM IST

ಬದುಕು ಬದಲಾಗಿದೆ, ನಾವೂ ಬದಲಾಗೋಣ ; ಮಾರುಕಟ್ಟೆಗೆ ಪಯಣ…ಇರಲಿ ಕಟ್ಟೆಚ್ಚರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದಿನಸಿ ಸಾಮಗ್ರಿ, ಹಣ್ಣು-ತರಕಾರಿಗಳು ನಮ್ಮ ದೈನಂದಿನ ಆಹಾರ ಕ್ರಮದ ಪ್ರಮುಖ ವಸ್ತುಗಳಾಗಿವೆ. ಇವುಗಳನ್ನು ಖರೀದಿಸಲೆಂದು ಅಂಗಡಿ ಯಾ ಮಾರುಕಟ್ಟೆಗೆ ಹೋಗಲೇಬೇಕು. ಈ ಸಂದರ್ಭ ಯಾವ ಮುನ್ನೆಚ್ಚರಿಕೆ ವಹಿಸಬೇಕು. ಮಾಹಿತಿ ಇಲ್ಲಿದೆ.

ಕೋವಿಡ್ ಲಾಕ್‌ಡೌನ್‌ ನಿಯಮಾವಳಿಗಳಲ್ಲಿ ಈಗಾಗಲೇ ಭಾರೀ ಸಡಿಲಿಕೆಗಳನ್ನು ಮಾಡಿದ್ದು ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ನಾವೂ ವಿವಿಧ ಕೆಲಸ ಕಾರ್ಯಗಳಿಗಾಗಿ ಮನೆಯಿಂದ ಹೊರಬರಲಾರಂಭಿಸಿದ್ದೇವೆ. ಆದರೆ ಈ ಹಿಂದಿನಂತೆ ರಾಜಾರೋಷವಾಗಿ ಗಲ್ಲಿಗಲ್ಲಿ ತಿರುಗಾಡಿದರೆ ನಮಗೆ ಅಪಾಯ ಕಟ್ಟಿಟ್ಟ ಬುತ್ತಿ. ಯಾವುದೇ ಉದ್ಯೋಗ ಅಥವಾ ತಮ್ಮ ದೈನಂದಿನ ವ್ಯವಹಾರಕ್ಕಾಗಿ ಹೊರ ಹೋಗುವಾಗ ಕೆಲವೊಂದು ನಿಯಮಗಳನ್ನು ಪಾಲಿಸುವುದು ನಮ್ಮ ಹಿತದೃಷ್ಟಿಯಿಂದ ಒಳಿತು.

ಅದರಲ್ಲೂ ದಿನಸಿ ಮತ್ತು ತರಕಾರಿ ಖರೀದಿಗಾಗಿ ಅಂಗಡಿ ಯಾ ಮಾರುಕಟ್ಟೆಗೆ ತೆರಳುವ ಸಂದರ್ಭದಲ್ಲಿ ಅತೀ ಹೆಚ್ಚಿನ ಮುನ್ನೆಚ್ಚರಿಕೆಯನ್ನು ವಹಿಸುವ ಅಗತ್ಯವಿದೆ. ಇಲ್ಲಿಗೆ ಎಲ್ಲ ವರ್ಗದ ಜನರು ಬರುವುದರಿಂದ ಪ್ರತಿಯೋರ್ವರು ತಮ್ಮ ಆರೋಗ್ಯದತ್ತ ಹೆಚ್ಚಿನ ನಿಗಾ ಇರಿಸುವುದು ಸೂಕ್ತ. ನಾವು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿ, ಮಾರುಕಟ್ಟೆಯತ್ತ ಹೆಜ್ಜೆ ಇರಿಸಿದಲ್ಲಿ ಅದು ಕೇವಲ ನಮ್ಮ ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲದೆ ಸ್ವಸ್ಥ ಸಮಾಜಕ್ಕೂ ಪೂರಕ.

1. ತರಕಾರಿ ಅಥವಾ ದಿನಸಿ ಸಾಮಗ್ರಿಗಳ ಖರೀದಿಗಾಗಿ ನಾವು ಅಂಗಡಿ ಅಥವಾ ಮಾರುಕಟ್ಟೆಗೆ ತೆರಳುವ ಮುನ್ನ ಮಾಸ್ಕ್, ಗ್ಲೌಸ್‌ ಧರಿಸುವುದು ಅತ್ಯಗತ್ಯ. ಜತೆಯಲ್ಲಿ ಮನೆಯಿಂದ ಕೈಚೀಲ ಕೊಂಡೊಯ್ಯು ವುದನ್ನು ಮರೆಯದಿರಿ.

2. ಮಾರುಕಟ್ಟೆಗೆ ಹೋಗುವ ಮುನ್ನ ಅಗತ್ಯವಿರುವ ವಸ್ತುಗಳ ಪಟ್ಟಿಯನ್ನು ಮಾಡಿಕೊಳ್ಳಿ. ಇದರಿಂದ ಪದೇ ಪದೆ ಗಿರಕಿ ಹೊಡೆಯುವುದು ತಪ್ಪುತ್ತದೆ. ಈ ರೀತಿ ಮಾಡಿ ನೀವು ಚೀಟಿಯನ್ನು ಕೊಟ್ಟು ದೂರ ನಿಂತು ಮತ್ತೆ ಸಾಮಗ್ರಿಗಳನ್ನು ಪಡೆಯಲು ಸಾಧ್ಯ.

3. ನಗರದಲ್ಲಿ ಶಾಪಿಂಗ್‌ಗೆ ಹೋಗುವುದು ಎಂದರೆ ಮನೆ ಮಂದಿಯೆಲ್ಲ ಒಟ್ಟಾಗಿ ಹೋಗುವವರೇ ಹೆಚ್ಚು. ಆದರೆ ಈಗ ಪರಿಸ್ಥಿತಿ ಸರಿಯಾಗಿಲ್ಲ. ಮಕ್ಕಳು, ಹಿರಿಯ ನಾಗರಿಕರು ಸಾಧ್ಯವಾದಷ್ಟು ಈ ಕಾರ್ಯದಿಂದ ದೂರ ಉಳಿಯುವುದು ಒಳಿತು.

4. ನೀವು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುತ್ತೀರಿ ಎಂದಾದರೆ ನಿಮ್ಮ ಸುರಕ್ಷತೆಯ ಬಗೆಗೆ ಎಚ್ಚರ ಇರಲಿ. ಜನದಟ್ಟಣೆ ಇದ್ದರೆ ಒಂದಷ್ಟು ಸಮಯದ ಬಳಿಕ ಹೋಗಿ. ಸ್ನೇಹಿತರೊಂದಿಗೆ ಉಭಯಕುಶಲೋಪರಿಗೆ ಕಡಿವಾಣ ಹಾಕಿ.

5. ಯಾವುದೇ ವಸ್ತುಗಳನ್ನು ನೀವಾಗಿ ಸ್ಪರ್ಶಿಸಬೇಡಿ. ಗ್ಲೌಸ್‌ ಧರಿಸದೇ ಇದ್ದ ಸಂದರ್ಭ ಅನಿವಾರ್ಯವಾಗಿ ಸ್ಪರ್ಶಿಸಿದ್ದೇ ಆದಲ್ಲಿ ತತ್‌ಕ್ಷಣ ಸ್ಯಾನಿಟೈಸರ್‌ ಬಳಸಿ ಕೈಗಳನ್ನು ಉಜ್ಜಿಕೊಳ್ಳಿ. ಅಷ್ಟೇ ಅಲ್ಲದೆ ಅಲ್ಲಿನ ಇತರ ಯಾವುದೇ ವಸ್ತುಗಳನ್ನು ಅನಗತ್ಯವಾಗಿ ಮುಟ್ಟದಿರಿ.

6. ಅಂಗಡಿ/ಮಾರುಕಟ್ಟೆಯಿಂದ ಹಿಂದಿರುಗಿದಾಕ್ಷಣ ನಿಮ್ಮ ಸ್ವಚ್ಛತೆಯತ್ತ ಗಮನ ಹರಿಸಿ. ಸ್ನಾನ ಮಾಡಿ ಬಟ್ಟೆಗಳನ್ನು ತೊಳೆದು ಬಿಸಿಲಿನಲ್ಲಿ ಒಣಗಿಸಿ. ತರಕಾರಿಗಳನ್ನು ನೀರಿನಲ್ಲಿ ಅದರಲ್ಲೂ ಉಪ್ಪು ನೀರಿನಲ್ಲಿ ಚೆನ್ನಾಗಿ ತೊಳೆದು ಆ ಬಳಿಕ ಅಡುಗೆಗೆ ಬಳಸಿ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.