ಭದ್ರತೆ ಜತೆಗೆ ಗ್ರಾಮಗಳ ಅಭಿವೃದ್ಧಿ ಗಡಿಯಲ್ಲಿ ಕೇಂದ್ರದ ಹೊಸ ಕಾರ್ಯತಂತ್ರ


Team Udayavani, Feb 17, 2023, 6:00 AM IST

tdy-37

ಭಾರತ-ಚೀನ ನಡುವಣ ವಾಸ್ತವಿಕ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಕಾರ್ಯತಂತ್ರವೊಂದನ್ನು ರೂಪಿಸಿರುವ ಕೇಂದ್ರ ಸರಕಾರ ದೇಶದ ಭದ್ರತೆಯ ಜತೆಯಲ್ಲಿ ಗಡಿ ಪ್ರದೇಶದ ಗ್ರಾಮಗಳ ಅಭಿವೃದ್ಧಿಗೂ ಆದ್ಯತೆ ನೀಡಲು ತೀರ್ಮಾನಿಸಿದೆ. ಅಷ್ಟು ಮಾತ್ರವಲ್ಲದೆ ಇದಕ್ಕೆ ಪೂರಕವಾಗಿ ಗಡಿ ಪ್ರದೇಶದ ಎಲ್ಲ ಭಾಗಗಳನ್ನು ಸಂಪರ್ಕಿಸಲು ಸಾಧ್ಯವಾಗುವಂತೆ ಶಿನ್‌ಕುನ್‌-ಲಾ ಸುರಂಗ ನಿರ್ಮಾಣಕ್ಕೂ ತನ್ನ ಒಪ್ಪಿಗೆಯನ್ನು ನೀಡಿದೆ. ಈ ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಕೇಂದ್ರ ಸರಕಾರ ಎಲ್‌ಎಸಿಯಲ್ಲಿ ನಿರಂತರವಾಗಿ ತಗಾದೆ ತೆಗೆಯುತ್ತಲೇ ಬಂದಿರುವ ಚೀನಕ್ಕೆ ಸಡ್ಡು ಹೊಡೆಯಲು ಮುಂದಾಗಿದೆ.

ಕಳೆದ ಕೆಲವು ವರ್ಷಗಳಿಂದೀಚೆಗೆ ಚೀನ ಸರಕಾರ ಮತ್ತು ಅಲ್ಲಿನ ಸೇನೆ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳನ್ನು ನಡೆಸುವ ಮೂಲಕ ಪರೋಕ್ಷವಾಗಿ ಸೇನಾ ಚಟುವಟಿಕೆಗಳಿಗೆ ಅನುಕೂಲವಾಗುವ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಲೇ ಬಂದಿವೆ. ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರ, ಚೀನದೊಂದಿಗಿನ 3,488 ಕಿ. ಮೀ. ಗಳಷ್ಟು ವ್ಯಾಪ್ತಿಯನ್ನು ಹೊಂದಿರುವ ಎಲ್‌ಎಸಿಯುದ್ದಕ್ಕೂ ಹೊಸದಾಗಿ ಏಳು ಐಟಿಬಿಪಿ ಬೆಟಾಲಿಯನ್‌ಗಳನ್ನು ನಿಯೋಜಿಸಲು ತೀರ್ಮಾನಿಸಿದೆ. ಇದರಿಂದ ಗಡಿಯುದ್ದಕ್ಕೂ ಗಸ್ತು ನಡೆಸಲು ಮತ್ತು ಕಣ್ಗಾವಲು ಇಡಲು ಭಾರತೀಯ ಭದ್ರತಾ ಪಡೆಗೆ ಹೆಚ್ಚಿನ ಅನುಕೂಲವಾಗಲಿದೆ.

ಇದರ ಜತೆಯಲ್ಲಿ ಎಲ್‌ಎಸಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳನ್ನು ಸರ್ವಾಂಗೀಣವಾಗಿ ಅಭಿವೃದ್ಧಿ ಪಡಿಸಲು “ವೈಬ್ರೆಂಟ್‌ ವಿಲೇಜ್‌ ಪ್ರೋಗ್ರಾಂ’ ನಡಿಯಲ್ಲಿ ಬರೋಬ್ಬರಿ 4,800 ಕೋ. ರೂ. ಅನುದಾನ ಒದಗಿಸಲು ಕೂಡ ಕೇಂದ್ರ ಸಚಿವ ಸಂಪುಟ ತನ್ನ ಒಪ್ಪಿಗೆ ಸೂಚಿಸಿದೆ. ಇದರಂತೆ ಎಲ್‌ಎಸಿಯನ್ನು ಹೊಂದಿಕೊಂಡಿರುವ ರಾಜ್ಯಗಳ ಗಡಿ ಗ್ರಾಮಗಳಲ್ಲಿ 2,500 ಕೋ. ರೂ. ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಸಹಿತ ಅಗತ್ಯ ಮೂಲಸೌಕರ್ಯಗಳ ಒದಗಣೆಯ ಜತೆಯಲ್ಲಿ ಗ್ರಾಮಸ್ಥರ ಜೀವನಮಟ್ಟ ಸುಧಾರಣೆಯ ನಿಟ್ಟಿನಲ್ಲೂ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲು ಉದ್ದೇಶಿಸಲಾಗಿದೆ. ಇದರಿಂದ ಗಡಿ ಗ್ರಾಮಗಳ ಯುವಜನತೆ ಉದ್ಯೋಗವನ್ನರಸಿ ನಗರಗಳತ್ತ ವಲಸೆ ಹೋಗುವುದು ತಪ್ಪಲಿದೆ. ಗ್ರಾಮಗಳ ಅಭಿವೃದ್ಧಿ ಮತ್ತು ಹೆಚ್ಚುವರಿ ಐಟಿಬಿಪಿ ಸಿಬಂದಿಯ ನೇಮಕದ ಹಿನ್ನೆಲೆಯಲ್ಲಿ ಇಲ್ಲಿನ ಯುವಜನರನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ. 12,000 ಅಡಿಗಳಷ್ಟು ಎತ್ತರದ ಬೆಟ್ಟ-ಕಣಿವೆಗಳಿಂದ ಕೂಡಿದ ಮತ್ತು ಸಾಮಾನ್ಯವಾಗಿ ತಾಪಮಾನ ಶೂನ್ಯ ಡಿ.ಸೆ.ಗಿಂತಲೂ ಕಡಿಮೆಯಾಗಿರುವ ಪ್ರದೇಶಗಳಲ್ಲಿ ಐಟಿಬಿಪಿ ಸಿಬಂದಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ಸ್ಥಳೀಯ ಅರ್ಹ ಯುವಕರಿಗೆ ನೇಮಕಾತಿ ವೇಳೆ ಹೆಚ್ಚಿನ ಅವಕಾಶ ಲಭಿಸಲಿದೆ. ಅಷ್ಟು ಮಾತ್ರವಲ್ಲದೆ ಈ ಗ್ರಾಮಗಳ ಅಭಿವೃದ್ಧಿಯಿಂದ ಪ್ರವಾಸೋದ್ಯಮ ಕ್ಷೇತ್ರ ಚಿಗಿತುಕೊಳ್ಳಲಿದ್ದು ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳಲು ಸ್ಥಳೀಯರಿಗೆ ಅನುಕೂಲವಾಗಲಿದೆ.

ಇದೇ ವೇಳೆ ಲಡಾಖ್‌ನ ಗಡಿ ಪ್ರದೇಶಗಳಿಗೆ ಸರ್ವಋತುಗಳಲ್ಲೂ ಸಂಪರ್ಕ ಸಾಧಿಸಲು ಅನುಕೂಲವಾಗುವಂತೆ ಶಿನ್‌ಕುನ್‌-ಲಾ ಸುರಂಗ ನಿರ್ಮಾಣಕ್ಕೆ ಕೇಂದ್ರ ಸರಕಾರ ಸಮ್ಮತಿ ಸೂಚಿಸಿದೆ. ಅಂದಾಜು 1,681ಕೋ. ರೂ. ವೆಚ್ಚದ ಈ ಯೋಜನೆಯ ಕಾಮಗಾರಿಯನ್ನು ಮುಂದಿನ ಎರಡು ವರ್ಷಗಳ ಒಳಗಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಸುರಂಗ ಸಂಚಾರಕ್ಕೆ ಮುಕ್ತವಾದಲ್ಲಿ ಸೇನಾಪಡೆಗಳ ಸಂಚಾರ ಮತ್ತು ಕ್ಷಿಪ್ರ ಕಾರ್ಯಾಚರಣೆಗೆ ಅನುಕೂಲವಾಗಲಿದೆ.

ವ್ಯೂಹಾತ್ಮಕ ನೆಲೆಯಲ್ಲಿ ಕೇಂದ್ರದ ಈ ಮೂರೂ ತೀರ್ಮಾನಗಳು ಪರಸ್ಪರ ನಂಟು ಹೊಂದಿವೆ. ಈ ತ್ರಿಕೋನ ತಂತ್ರಗಾರಿಕೆ ದೇಶದ ಭದ್ರತೆಯ ದೃಷ್ಟಿಯಿಂದ ಐತಿಹಾಸಿಕವಾದುದಾಗಿದೆ. ಚೀನದ ಪ್ರತಿಯೊಂದು ಕುಟಿಲ ನೀತಿ, ತಂತ್ರಗಾರಿಕೆಗೆ ಕೇಂದ್ರ ಸರಕಾರ ಪ್ರತಿತಂತ್ರವನ್ನು ಅನುಸರಿಸುವ ಮೂಲಕ ಚೀನವನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ. ಕೇಂದ್ರ ಸಚಿವ ಸಂಪುಟ ಈ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಚೀನಕ್ಕೆ ಸ್ಪಷ್ಟ ಎಚ್ಚರಿಕೆಯನ್ನು ರವಾನಿಸಿದೆ ಮಾತ್ರವಲ್ಲದೆ ಗಡಿ ಗ್ರಾಮಗಳ ಜನರಿಗೆ ಅಭದ್ರತೆಯ ಭಾವ ಮೂಡದಂತೆ ಜಾಣ್ಮೆಯ ನಡೆ ಇರಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.