108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ


Team Udayavani, Mar 22, 2024, 5:53 AM IST

1-aww

ರಾಜ್ಯದಲ್ಲಿ ಜಾರಿಯಲ್ಲಿರುವ ಉಚಿತ ಆ್ಯಂಬುಲೆನ್ಸ್‌ ಸೇವಾ ಯೋಜನೆಯಾದ 108 ಆರೋಗ್ಯ ಕವಚ ಯೋಜನೆಯ ಸಿಬಂದಿಗೆ ಕಳೆದ ಮೂರು ತಿಂಗಳುಗಳಿಂದ ಸಂಬಂಧಿತ ಗುತ್ತಿಗೆದಾರ ಸಂಸ್ಥೆ ವೇತನ ನೀಡದೆ ಸತಾಯಿಸುತ್ತಿರುವುದು ತೀರಾ ಖಂಡನೀಯ. ವೇತನ ಪಾವತಿ, ವಾರ್ಷಿಕ ವೇತನ ಪರಿಷ್ಕರಣೆ ಮತ್ತಿತರ ತಮ್ಮ ಬೇಡಿಕೆಗಳಿಗೆ ಮುಂದಿನ 10 ದಿನಗಳ ಒಳಗಾಗಿ ಸಂಸ್ಥೆ ಮತ್ತು ಸರಕಾರ ಸ್ಪಂದಿಸದೇ ಹೋದಲ್ಲಿ ಮುಷ್ಕರ ಕೈಗೊಳ್ಳುವುದಾಗಿ ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘ ಎಚ್ಚರಿಕೆ ನೀಡಿದೆ. ಈ ಬೆಳವಣಿಗೆ ಬಡಜನರಲ್ಲಿ ಆತಂಕ ಸೃಷ್ಟಿಸಿದೆ.

ಬಡವರ ಪಾಲಿಗೆ ಸಂಜೀವಿನಿಯಂತಿರುವ ಈ 108 ಆ್ಯಂಬುಲೆನ್ಸ್‌ಗಳ ಸಿಬಂದಿಗೆ ಗುತ್ತಿಗೆದಾರ ಸಂಸ್ಥೆ ಸೂಕ್ತ ಮತ್ತು ನ್ಯಾಯೋಚಿತ ವೇತನ, ಭತ್ತೆ ಇನ್ನಿತರ ಅಗತ್ಯ ಸೇವಾ ಸೌಲಭ್ಯಗಳನ್ನು ಒದಗಿಸಿಕೊಡುತ್ತಿಲ್ಲ ಎಂಬ ದೂರು ಇಂದು-ನಿನ್ನೆಯದೇನಲ್ಲ. ಜನರಿಗೆ ಅದರಲ್ಲೂ ಮುಖ್ಯವಾಗಿ ಬಡವರಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡು ತುರ್ತಾಗಿ ಆಸ್ಪತ್ರೆಗೆ ದಾಖಲಾಗಬೇಕಾದ ಸಂದರ್ಭದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅನುಕೂಲವಾಗುವಂತೆ ಸರಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಅದರಂತೆ ಈ ಆ್ಯಂಬುಲೆನ್ಸ್‌ ಸೇವೆಯ ನಿರ್ವಹಣೆಯ ಹೊಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಿಕೊಟ್ಟಿದೆ.

ಆದರೆ ಆ್ಯಂಬುಲೆನ್ಸ್‌ ನೌಕರರು ಮತ್ತು ಸಂಸ್ಥೆ ನಡುವೆ ಪದೇಪದೆ ಇಂತಹ ಸಮಸ್ಯೆಗಳು ತಲೆದೋರುತ್ತಲೇ ಇವೆ. ಆ್ಯಂಬುಲೆನ್ಸ್‌ ನೌಕರರು ತಮ್ಮ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಮುಷ್ಕರವನ್ನು ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ಕೆಲವು ದಿನಗಳ ಕಾಲ ಮುಷ್ಕರ ನಡೆಸಿ ಜನರ ಸಂಕಷ್ಟ ಮಿತಿಮೀರಿದ ಬಳಿಕ ಸರಕಾರ ಮಧ್ಯಪ್ರವೇಶಿಸಿ ಗುತ್ತಿಗೆದಾರ ಸಂಸ್ಥೆಯ ಮನವೊಲಿಸಿ, ನೌಕರರ ಬೇಡಿಕೆಗಳನ್ನು ಭಾಗಶಃ ಈಡೇರಿಸಿ, ಮತ್ತೂಂದಿಷ್ಟು ಭರವಸೆಗಳನ್ನು ನೀಡುವುದರೊಂದಿಗೆ ಮುಷ್ಕರ ಕೊನೆಗೊಳ್ಳುತ್ತದೆ. ಈಗ ಮತ್ತದೇ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾದಂತೆ ತೋರುತ್ತಿದೆ.

ರಾಜ್ಯ ಸರಕಾರವೇನೋ ಆರೋಗ್ಯ ಕವಚ ಯೋಜನೆಯ 108 ಆ್ಯಂಬುಲೆನ್ಸ್‌ ಸೇವೆಯ ನಿರ್ವಹಣೆಯ ಹೊಣೆಗಾರಿಕೆಯನ್ನು ಖಾಸಗಿ ಸಂಸ್ಥೆಯ ಸುಪರ್ದಿಗೆ ಒಪ್ಪಿಸಿ ಕೈತೊಳೆದುಕೊಂಡು ಬಿಟ್ಟಿದೆ. ಯೋಜನೆಯ ನಿರೀಕ್ಷಿತ ಉದ್ದೇಶ ಈಡೇರುತ್ತಿದೆಯೇ, ಆ್ಯಂಬುಲೆನ್ಸ್‌ಗಳ ನಿರ್ವಹಣೆ ಸಮರ್ಪಕವಾಗಿದೆಯೇ, ಅದರ ಸಿಬಂದಿಗೆ ಸೂಕ್ತ ವೇತನ, ಸೇವಾಸೌಲಭ್ಯಗಳು ಲಭಿಸುತ್ತಿವೆಯೇ ಇವ್ಯಾವ ವಿಷಯಗಳ ಬಗೆಗೂ ತಲೆಕೆಡಿಸಿಕೊಳ್ಳುವ ಗೋಜಿಗೂ ಹೋಗುತ್ತಿಲ್ಲ. ಆ್ಯಂಬುಲೆನ್ಸ್‌ ನೌಕರರು ಮುಷ್ಕರ, ಪ್ರತಿಭಟನೆಯ ಹಾದಿ ಹಿಡಿದು ಸಮಸ್ಯೆ ಉಲ್ಬಣಿಸಿದ ಬಳಿಕ ಮಧ್ಯಪ್ರವೇಶಿಸುವುದಷ್ಟೆ ತನ್ನ ಹೊಣೆಗಾರಿಕೆ ಎಂದು ಭಾವಿಸಿದೆ. ಇನ್ನು ಗುತ್ತಿಗೆದಾರ ಸಂಸ್ಥೆಯಂತೂ ಸಿಬಂದಿಯ ಯಾವೊಂದೂ ಬೇಡಿಕೆ, ಕೂಗಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಅಷ್ಟು ಮಾತ್ರವಲ್ಲದೆ ಅಗತ್ಯ ಸಂಖ್ಯೆಯಲ್ಲಿ ಸಿಬಂದಿಯನ್ನೂ ನೇಮಿಸಿಕೊಳ್ಳದೆ ಲಭ್ಯವಿರುವ ಸಿಬಂದಿಯನ್ನು ಮನಸೋ ಇಚ್ಛೆ ದುಡಿಸಿಕೊಳ್ಳುತ್ತಿದೆ.

108 ಆ್ಯಂಬುಲೆನ್ಸ್‌ ಸಿಬಂದಿ ಮತ್ತು ಗುತ್ತಿಗೆದಾರ ಸಂಸ್ಥೆ ನಡುವಣ ಬಿಕ್ಕಟ್ಟನ್ನು ಶಾಶ್ವತವಾಗಿ ಬಗೆಹರಿಸಲು ಸರಕಾರ ಇನ್ನಾದರೂ ಮುಂದಾಗಬೇಕು. ಗುತ್ತಿಗೆದಾರ ಸಂಸ್ಥೆಗೆ ಸೂಕ್ತ ನಿರ್ದೇಶನ ನೀಡಿ ಅದನ್ನು ಪಾಲಿಸಲು ನಿರ್ದಿಷ್ಟ ಕಾಲಾವಕಾಶವನ್ನು ನೀಡಬೇಕು. ಇದೇ ವೇಳೆ 108 ಆ್ಯಂಬುಲೆನ್ಸ್‌ ಸಿಬಂದಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಪದೇಪದೆ ಮುಷ್ಕರದ ಹಾದಿ ತುಳಿಯುವುದನ್ನು ಬಿಟ್ಟು, ಗುತ್ತಿಗೆದಾರ ಸಂಸ್ಥೆ ಮತ್ತು ಸರಕಾರದ ಮಟ್ಟದಲ್ಲಿ ಸಮಾಲೋಚನೆಗಳನ್ನು ನಡೆಸಿ, ಒತ್ತಡವನ್ನು ಹೇರಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಖಾತರಿಪಡಿಸುವ ಹೊಣೆಗಾರಿಕೆ ಈ ಮೂವರ ಮೇಲಿದೆ ಎಂಬುದನ್ನು ಮಾತ್ರ ಮರೆಯಬಾರದು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.