ದೇವಾಲಯಗಳ ಸಮಗ್ರ ಸಮೀಕ್ಷೆ ಕಾಟಾಚಾರವಾಗದಿರಲಿ


Team Udayavani, Dec 29, 2022, 6:00 AM IST

ದೇವಾಲಯಗಳ ಸಮಗ್ರ ಸಮೀಕ್ಷೆ ಕಾಟಾಚಾರವಾಗದಿರಲಿ

ರಾಜ್ಯದ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲ ದೇವಸ್ಥಾನಗಳ ಸಮಗ್ರ ಸಮೀಕ್ಷೆ ನಡೆಸಲು ಇಲಾಖೆ ತೀರ್ಮಾನಿಸಿದೆ. ಈ ದೇವಸ್ಥಾನಗಳ ಆಸ್ತಿ ಸಂರಕ್ಷಣೆಯ ಜತೆಯಲ್ಲಿ ಇವುಗಳ ಬಗೆಗಿನ ಸಮಗ್ರ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ವಾಸ್ತವಿಕ ಸಮೀಕ್ಷೆಯನ್ನು ನಡೆಸಲು ರಾಜ್ಯ ಧಾರ್ಮಿಕ ಪರಿಷತ್‌ನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇಲಾಖೆಯ ಅಧೀನದಲ್ಲಿ ಎ, ಬಿ ಮತ್ತು ಸಿ ದರ್ಜೆ ಸಹಿತ 35,000ಕ್ಕೂ ಅಧಿಕ ದೇವಸ್ಥಾನಗಳಿವೆ. ಈ ಪೈಕಿ ಬಹುತೇಕ ದೇವಸ್ಥಾನಗಳ ಆಸ್ತಿ ಸಹಿತ ಅವುಗಳ ಸ್ಥಿತಿಗತಿಯ ಕುರಿತಂತೆ ಕನಿಷ್ಠ ಮಾಹಿತಿಯೂ ಇಲಾಖೆಗೆ ಇಲ್ಲವಾಗಿದೆ. ಈ ದೇವಸ್ಥಾನಗಳಿಗೆ ಸೇರಿದ ಆಸ್ತಿಗಳು ಅತಿಕ್ರಮಣಗೊಂಡಿರುವ ಅಥವಾ ಪರಾಭಾರೆಯಾಗಿರುವ ಆರೋಪಗಳೂ ಇವೆ. ಅಷ್ಟು ಮಾತ್ರವಲ್ಲದೆ ಈ ದೇವಸ್ಥಾನಗಳ ಮೇಲೆ ಹಕ್ಕು ಸ್ಥಾಪಿಸಲು ವೈಯಕ್ತಿಕವಾಗಿ ಪ್ರಯತ್ನಗಳೂ ನಡೆಯುತ್ತಿವೆ. ಇವೆಲ್ಲದರ ಹಿನ್ನೆಲೆಯಲ್ಲಿ ದೇವಸ್ಥಾನಗಳ ವಾಸ್ತವಿಕ ಸಮೀಕ್ಷೆ ನಡೆಸಲು ಇಲಾಖೆ ಮುಂದಾಗಿರುವುದು ಸ್ವಾಗತಾರ್ಹ.

ಇದೇ ವೇಳೆ ಈ ದೇವಸ್ಥಾನಗಳ ಸಮೀಕ್ಷೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಪರಿಷತ್‌ ಚಿಂತನೆ ನಡೆಸಿದೆ. ಇಲಾಖೆಯ ಅಡಿಯಲ್ಲಿ ಬರುವ ಪ್ರತಿಯೊಂದೂ ದೇವಸ್ಥಾನಗಳ ಬಗೆಗಿನ ಮಾಹಿತಿಯನ್ನು ಕಲೆಹಾಕಲಾಗುವುದು, ದೇವಸ್ಥಾನಕ್ಕೆ ಸೇರಿದ ಆಸ್ತಿ, ಅದರ ಫೋಟೋ, ಹಾಲಿ ಸ್ಥಿತಿಗತಿ, ನಿರ್ವಹಣ ವ್ಯವಸ್ಥೆ, ದೇಗುಲಕ್ಕೆ ಬರುವ ಆದಾಯ ಸಹಿತ ಪ್ರತಿಯೊಂದೂ ಮಾಹಿತಿಯನ್ನು ಕ್ರೋಡೀಕರಿಸಿ ಎಲ್ಲವನ್ನು ಡಿಜಿಟಲ್‌ ರೂಪದಲ್ಲಿ ದಾಖಲಿಸಲಾಗುವುದು. ಈ ದಾಖಲೆಗಳು ಸಾರ್ವಜನಿಕರಿಗೂ ಲಭಿಸುವ ವ್ಯವಸ್ಥೆಯನ್ನು ಮಾಡುವ ಪ್ರಸ್ತಾವವನ್ನು ಕೂಡ ಧಾರ್ಮಿಕ ಪರಿಷತ್‌ ಇಲಾಖೆಯ ಮುಂದಿಟ್ಟಿದೆ. ಸಮೀಕ್ಷೆಗಾಗಿ ಸೂಕ್ತ ಅನುದಾನ ನೀಡುವಂತೆ  ಸಿ ಎಂಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಧಾರ್ಮಿಕ ಪರಿಷತ್‌ ಕೈಗೊಂಡಿರುವ ಈ ನಿರ್ಧಾರಕ್ಕೆ ಸರಕಾರದಿಂದ ಒಪ್ಪಿಗೆ ಲಭಿಸುವ ನಿರೀಕ್ಷೆಯನ್ನು ಇಲಾಖೆಯ ಸಚಿವರು ವ್ಯಕ್ತಪಡಿಸಿ­ದ್ದಾರೆ.

ಇಂತಹ ಒಂದು ಪ್ರಸ್ತಾವ ಕಳೆದ ಕೆಲವಾರು ವರ್ಷಗಳಿಂದ ಇಲಾಖೆಯ ಮುಂದಿತ್ತಾದರೂ ಈ ಬಗ್ಗೆ ಯಾವುದೇ ನಿರ್ಧಾರವನ್ನು ಕೈಗೊಳ್ಳಲು ಇಲಾಖೆಗಾಗಲೀ ಸರಕಾರಕ್ಕಾಗಲೀ ಸಾಧ್ಯವಾಗಿರಲಿಲ್ಲ. ಇದೀಗ ಧಾರ್ಮಿಕ ಪರಿಷತ್‌ ದೇವಸ್ಥಾನಗಳ ಸಮಗ್ರ ಮತ್ತು ವಾಸ್ತವಿಕ ಸಮೀಕ್ಷೆಗೆ ನಿರ್ಣಯ ಕೈಗೊಂಡಿರುವುದರಿಂದ ಇದನ್ನು ಕಾರ್ಯರೂಪಕ್ಕೆ ತರಲು ಸರಕಾರಕ್ಕೆ ಕಷ್ಟಸಾಧ್ಯವಾಗಲಾರದು. ಕೆಲವೊಂದಿಷ್ಟು ದೇವ ಸ್ಥಾನಗಳಲ್ಲಿ ದಿನನಿತ್ಯದ ಪೂಜೆಯೂ ನಡೆಯುತ್ತಿಲ್ಲ. ಮತ್ತೆ ಕೆಲವೆಡೆ ಅರ್ಚಕರನ್ನು ನೇಮಿಸಲಾಗಿದ್ದರೂ ಸಮರ್ಪಕವಾಗಿ ಪೂಜೆಗಳು ನಡೆಯುತ್ತಿಲ್ಲ. ಇವೆಲ್ಲವನ್ನು ಗಮನಿಸಿದಾಗ ಸರಕಾರ ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ಮುಂದಾಗಿರುವುದು ಸೂಕ್ತವೇ. ಆದರೆ ಸಮೀಕ್ಷೆ ಕಾಟಾಚಾರಕ್ಕೆ ಸೀಮಿತವಾಗದೆ ಬಲು ಪುರಾತನ ದೇವಾಲಯಗಳ ಸಂರಕ್ಷಣೆಯ ತನ್ನ ಉದ್ದೇಶವನ್ನು ಈಡೇರಿಸುವಂತಿರಬೇಕು. ಸಮೀಕ್ಷೆಯ ವೇಳೆ ದೇಗುಲದ ಪರಿಸರ, ವಿನ್ಯಾಸಕ್ಕೆ ಯಾವುದೇ ಭಂಗ ಬಾರದಂತೆ ಮತ್ತು ಅದೆಷ್ಟೋ ದಶಕಗಳಿಂದ ಆಯಾಯ ಊರಿನ ಭಕ್ತರು ಶ್ರದ್ಧಾಭಕ್ತಿಗಳಿಂದ ಆರಾಧಿಸಿಕೊಂಡು ಬಂದ ದೇಗುಲಗಳ ಪಾವಿತ್ರ್ಯತೆಗೆ ಚ್ಯುತಿಯಾಗದಂತೆಯೂ ಸರಕಾರ ಎಚ್ಚರಿಕೆ ವಹಿಸಬೇಕು.

ಟಾಪ್ ನ್ಯೂಸ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.