ಜಲಪ್ರಳಯದ ಕಂಟಕ, ನೆರವು ಪಡೆಯಲು ಸಾಂಘಿಕ ಪ್ರಯತ್ನ ಅಗತ್ಯ


Team Udayavani, Aug 9, 2019, 6:41 AM IST

jalapralaya

ರಾಜ್ಯದಲ್ಲಿ ಮುಂಗಾರು ವಕ್ರದೃಷ್ಟಿಗೆ ಅನೇಕ ಭಾಗ ಗಳು, ಅದ ರಲ್ಲೂ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಅತಿವೃಷ್ಟಿ, ಅನಾವೃಷ್ಟಿಗೆ ಮತ್ತೂಮ್ಮೆ ಮೂಕಸಾಕ್ಷಿಯಾಗಿದೆ. ಕಳೆದ ನಾಲ್ಕೈದು ವರ್ಷ ಬರಕ್ಕೆ ತತ್ತರಿಸಿದವರು ಈಗ ನೆರೆಗೆ ನಲುಗಿದ್ದಾರೆ. ಅವರ ಬದುಕು ಮೂರಾಬಟ್ಟೆಯಾಗಿದೆ. ಜಲಪ್ರಳಯಕ್ಕೆ ಜಾನುವಾರುಗಳು ಕಣ್ಮುಂದೆಯೇ ತೇಲಿ ಹೋಗಿವೆ. ನದಿ ಸೆಳೆವಿನಲ್ಲಿ ಸಿಕ್ಕವರು ನೆರವಿಗಾಗಿ ಅಂಗಲಾಚುತ್ತಿದ್ದಾರೆ. 2005ರ ಬಳಿಕ ಮತ್ತೂಮ್ಮೆ ಭೀಕರ ಪ್ರವಾಹ ಬಂದಿರುವುದು ಬದುಕನ್ನೇ ಕೊಚ್ಚಿಕೊಂಡು ಹೋಗಿದೆ.

ಇದುವರೆಗೂ ಮಳೆ ಅನಾಹುತಕ್ಕೆ 28 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಜಾನುವಾರುಗಳು ಮೃತಪಟ್ಟಿವೆ. ಸಾವಿರಾರು ಮನೆಗಳು ಕುಸಿದಿವೆ. ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಹತ್ತಾರು ಗ್ರಾಮಗಳು ನಡುಗಡ್ಡೆಯಾಗಿವೆ. ಕೃಷ್ಣಾ, ದೂಧಗಂಗಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ಅಘನಾಶಿನಿ, ಗಂಗಾವಳಿ ಸೇರಿದಂತೆ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರಕನ್ನಡ, ರಾಯಚೂರು, ಯಾದಗಿರಿ ಜಿಲ್ಲೆಯ ಜನರನ್ನು ಕಂಗಾಲಾಗಿಸಿದೆ. ಕೊಯ್ನಾ, ರಾಜಾಪೂರ ಬ್ಯಾರೇಜ್‌ ಸೇರಿದಂತೆ ವಿವಿಧೆಡೆಯಿಂದ ಕೃಷ್ಣಾ ನದಿಗೆ 6.78 ಲಕ್ಷ ಕ್ಯೂಸೆಕ್‌ ನೀರು ಹರಿದುಬರುತ್ತಿದೆ.

ಆಲಮಟ್ಟಿ, ನಾರಾಯಣಪುರದ ಬಸವಸಾಗರ, ಕದ್ರಾ, ಮಲಪ್ರಭಾ, ಹಿಡಕಲ್‌ ಹೀಗೆ ವಿವಿಧ ಜಲಾಶಯಗಳು ಭರ್ತಿಯಾಗಿ ಅಪಾರ ಪ್ರಮಾಣದ ನೀರನ್ನು ಹೊರಹರಿಸಲಾಗುತ್ತಿದೆ. ನದಿ ತೀರ ಪ್ರದೇಶದಲ್ಲಿ ಅಕ್ಷರಶಃ ಜಲಪ್ರಳಯವೇ ಉಂಟಾಗಿದೆ.

ಇದುವರೆಗೂ ಎನ್‌ಡಿಆರ್‌ಎಫ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು 25 ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ. ಇತ್ತ ಕಲಬುರಗಿ ಜಿಲ್ಲೆಯಲ್ಲೂ ಮಹಾಪ್ರವಾಹ ಮಿತಿ ಮೀರಿದೆ. ಉಜಿನಿ ಹಾಗೂ ವೀರ ಜಲಾಶಯದಿಂದ ಭೀಮಾ ನದಿಗೆ ಹರಿವು ಹೆಚ್ಚಳವಾಗಿದೆ. ಇದು ಇಷ್ಟಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಇನ್ನೂ ಮೂರ್‍ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೆಚ್ಚುವರಿ ನೀರು ಹರಿದು ಬಂದರೆ ಜಲಗಂಡಾಂತರ ತಪ್ಪಿದ್ದಲ್ಲ. ಎಷ್ಟೇ ಮುನ್ನೆಚ್ಚರಿಕೆ ವಹಿಸಿದ್ದರೂ ಸಾಕಾಗುತ್ತಿಲ್ಲ. ಇಷ್ಟೆಲ್ಲಾ ಅನಾಹುತ ಸಂಭವಿಸಿದ್ದರೂ ಆಡಳಿತ ಯಂತ್ರ ಚುರುಕುಗೊಂಡಿಲ್ಲ. ಬದುಕು ಕಳೆದುಕೊಂಡು ಬೀದಿಗೆ ನಿಂತವರಿಗೆ ಆಸರೆಯಾಗುವವರಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬುವ ಕೆಲಸ ಆಗುತ್ತಿಲ್ಲ. ಅತಿ ಹೆಚ್ಚು ಪ್ರವಾಹ ಪೀಡಿತ ಚಿಕ್ಕೋಡಿ ತಾಲೂಕು ಬಾಹ್ಯ ಪ್ರಪಂಚದ ಸಂಪರ್ಕ ಭಾಗಶಃ ಕಡಿದುಕೊಂಡಿದೆ. ಸಂಕಷ್ಟಕ್ಕೆ ಸಿಲುಕಿದವರನ್ನು ಆದ್ಯತೆಯ ಮೇರೆಗೆ ಸ್ಥಳಾಂತರಿಸಬೇಕಿದೆ. ಇದಕ್ಕೆ ಸರ್ಕಾರ ತಕ್ಷಣವೇ ತುರ್ತು ಕ್ರಮ ಕೈಗೊಳ್ಳಬೇಕು. ನಾಲ್ಕು ತಂಡಗಳಲ್ಲಿ ಪರಿಸ್ಥಿತಿ ಅಧ್ಯಯನ ನಡೆಸಲು ಸಜ್ಜಾಗಿರುವುದು ಒಳ್ಳೆಯ ಬೆಳವಣಿಗೆ. ಇದರೊಂದಿಗೆ ಪರಿಹಾರ ಕ್ರಮವೂ ತುರ್ತಾಗಿದೆ. ಆರೋಪ-ಪ್ರತ್ಯಾರೋಪ ಪಕ್ಕಕ್ಕಿಟ್ಟು ಸಂತ್ರಸ್ತರ ನೆರವಿಗೆ ಕೈ ಜೋಡಿಸಬೇಕಿದೆ. ರಾಜ್ಯ ಸರ್ಕಾರದ ಜತೆಗೆ ಕೇಂದ್ರದ ನೆರವು ತರಲು ಸಾಂ ಕ ಪ್ರಯತ್ನ ನಡೆಸಬೇಕಿದೆ. ಇದರ ಜತೆಗೆ ಶಾಶ್ವತ ಪರಿಹಾರ ಕ್ರಮದತ್ತಲೂ ಗಮನ ಹರಿಸಬೇಕಿದೆ.

ಮಹಾರಾಷ್ಟ್ರದಿಂದ ಏಕಾಏಕಿ ಹರಿದು ಬರುವ ನೀರಲ್ಲಿ ಇಲ್ಲಿನ ಜನರ ಬದುಕನ್ನೇ ಕೊಚ್ಚಿಕೊಂಡು ಹೋಗುತ್ತಿದೆ. “ಕೊಯ್ನಾ ಕಣ್ಣೀರಿಗೆ’ ಉತ್ತರ ಕರ್ನಾಟಕದ ಜನಜೀವನವೇ ಹಾಳಾಗುತ್ತಿದೆ. ಇದಕ್ಕೆ ದೂರದೃಷ್ಟಿಯೊಂದಿಗೆ ಸಮಯೋಚಿತ ನಿರ್ಧಾರ ಕೈಕೊಳ್ಳಲೇಬೇಕಿದೆ. ನೆರೆ ನಿಂತ ಮೇಲೆ ಸಾಂಕ್ರಾಮಿಕ ರೋಗ ಭೀತಿಯೂ ಸವಾಲೇ ಸರಿ. ಅದನ್ನು ಎದುರಿಸಲು ಈಗಿನಿಂದಲೇ ಸಜ್ಜಾಗಬೇಕು. ಇದು ಉತ್ತರ ಕರ್ನಾಟಕಕ್ಕೆ ತುರ್ತು ಪರಿಸ್ಥಿತಿ ಎಂದರೂ ಅತಿಶಯೋಕ್ತಿ ಅಲ್ಲ. ಇದೆಲ್ಲವನ್ನೂ ಸಮರ್ಥವಾಗಿ ಎದುರಿಸಲು ಸರ್ಕಾರ ಮೈಕೊಡವಿ ಮೇಲೆದ್ದು ಸಜ್ಜಾಗಬೇಕಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.