ಅರೆ ಮನಸ್ಸಿನ ಚೀನಗೆ ಮಾತುಕತೆಯೇ ಬೇಕಾಗಿಲ್ಲ


Team Udayavani, Oct 12, 2021, 6:00 AM IST

ಅರೆ ಮನಸ್ಸಿನ ಚೀನಗೆ ಮಾತುಕತೆಯೇ ಬೇಕಾಗಿಲ್ಲ

ಚೀನದ ಕುತಂತ್ರಿ ಬುದ್ಧಿ ಇಂದಿನದ್ದೇನಲ್ಲ. ಅದು ಹಿಂದಿನಿಂದಲೂ ಸಾಬೀತಾಗಿದೆ. ಹಿಂದಿ-ಚೀನೀ ಭಾಯಿಭಾಯಿ ಎಂಬ ಭಾರತದ ಉದ್ಘೋಷ ಮತ್ತು ಇದಾದ ಅನಂತರದಲ್ಲಿ ಚೀನದ ಆಡಳಿತ ಭಾರತದ ಬೆನ್ನಿಗೆ ಇರಿದ ಇತಿಹಾಸ ದೇಶದ ಜನರಲ್ಲಿ ಅಳಿಯದಂತೆ ಹಾಗೆಯೇ ಉಳಿದುಕೊಂಡಿದೆ. ಈಗಲೂ ಅಷ್ಟೇ ಅಂತಾರಾಷ್ಟ್ರೀಯ ಸಮುದಾಯದ ಮುಂದೆ ತನ್ನ ಮಾತುಕತೆಯ ನಾಟಕವನ್ನು ಪ್ರದರ್ಶಿಸಿಕೊಂಡು, ವಿಸ್ತರಣಾವಾದವನ್ನು ಹಾಗೆಯೇ ಮುಂದುವರಿಸಿಕೊಂಡು ಬರುತ್ತಿದೆ.

ಗಾಲ್ವಾನ್‌ನಲ್ಲಿನ ಘರ್ಷಣೆ ಅನಂತರ ಭಾರತ ಮತ್ತು ಚೀನ ನಡುವೆ ಸೇನಾ ವಾಪಸಾತಿ ಸಂಬಂಧ ಈಗಾಗಲೇ 13 ಸುತ್ತಿನ ಮಾತುಕತೆಗಳು ಮುಗಿದಿವೆ. ರವಿವಾರ 13ನೇ ಸುತ್ತಿನ ಮಾತುಕತೆ ನಡೆದಿದ್ದು, ಚೀನದ ಹಠಮಾರಿ ಧೋರಣೆಯಿಂದಾಗಿ ಮಾತುಕತೆ ಮುರಿದುಬಿದ್ದಿದೆ. ದೌಲತ್‌ ಬೇಗ್‌, ಮತ್ತು ಹಾಟ್‌ಸ್ಪ್ರಿಂಗ್‌ ಪ್ರದೇಶಗಳಿಂದ ಸೇನೆಯನ್ನು ವಾಪಸ್‌ ಕರೆಸಿಕೊಳ್ಳಬೇಕು ಎಂಬ ಭಾರತದ ಕಮಾಂಡರ್‌ ಅಧಿಕಾರಿಗಳ ಸಲಹೆಗೆ ಚೀನ ಒಪ್ಪಿಗೆ ನೀಡಿಲ್ಲ. ಅಲ್ಲದೇ ಪದೇ ಪದೆ ಚೀನ ಸೇನೆ ಭಾರತದ ಗಡಿಯೊಳಗೆ ಅಕ್ರಮವಾಗಿ ಪ್ರವೇಶ ಮಾಡುತ್ತಿರುವ ಬಗ್ಗೆಯೂ ಸೇನಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಈ ಬಗ್ಗೆಯೂ ಚೀನ ತುಟಿ ಬಿಚ್ಚಿಲ್ಲ.

ರವಿವಾರದ ಮಾತುಕತೆ ವೇಳೆ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು, ಭಾರತದೊಳಗೆ ನುಸುಳುವ ಯಾವುದೇ ಹುಚ್ಚು ಸಾಹಸಗಳನ್ನು ಮಾಡಬಾರದು ಎಂದು ಕಮಾಂಡರ್‌ಗಳ ಮಟ್ಟದಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದ ಸೇನಾಧಿಕಾರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ, ಗಡಿಯಲ್ಲಿ ಉದ್ಧಟತನ ಸಲ್ಲದು ಎಂದೂ ಎಚ್ಚರಿಕೆ ನೀಡಿದ್ದಾರೆ. ಆದರೆ ಚೀನಗೆ ಈ ಮಾತುಗಳು ರುಚಿಸಿಯೇ ಇಲ್ಲ. ಇದಕ್ಕೆ ಬದಲಾಗಿ ಭಾರತ, ಅವಾಸ್ತವಿಕ ಮತ್ತು ಪಾಲಿಸಲು ಅಸಾಧ್ಯವಾದ ಬೇಡಿಕೆಗಳನ್ನು ಭಾರತ ಮುಂದಿಟ್ಟಿತು. ಹೀಗಾಗಿ ಸಭೆ ವಿಫ‌ಲವಾಗಿದೆ ಎಂದು ಚೀನ ಹೇಳಿಕೊಂಡಿದೆ. ಒಂದು ರೀತಿಯಲ್ಲಿ ಮತ್ತೆ ತನ್ನ ಭಂಡವಾದವನ್ನು ಮುಂದಿಟ್ಟಿದೆ.

ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ, ಚೀನಗೆ ಶಾಂತಿ ಮಾತುಕತೆ ಬೇಕಾಗಿಲ್ಲ. ಇನ್ನೂ ವಿಸ್ತರಣಾವಾದ ನಡೆಸಿಕೊಂಡು ಭಾರತದ ಜತೆ ಸಂಘರ್ಷ ಮುಂದುವರಿಸಿಕೊಂಡು ಹೋಗುವ ಎಲ್ಲ ಇರಾದೆಗಳೂ ಅದಕ್ಕಿದೆ. ಜತೆಗೆ ಇತ್ತೀಚೆಗಷ್ಟೇ ಅಕ್ರಮವಾಗಿ ಭಾರತದೊಳಗೆ ನುಗ್ಗಿದ್ದ 200 ಚೀನದ ಸೈನಿಕರನ್ನು ಭಾರತ ಬಂಧಿಸಿ ಬಳಿಕ ಬಿಟ್ಟು ಕಳಿಸಿದ ಅಪಮಾನವೂ ಚೀನಗೆ ಇದೆ. ಇದರಿಂದ ಕುಗ್ಗಿದಂತಿರುವ ಚೀನ  ರವಿವಾರ ಮಾತುಕತೆಯಲ್ಲಿ ಯಾವುದೇ ಆಸಕ್ತಿಯನ್ನೂ ತೋರಲಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ:ಹಣ ಕಂಡ್ರೆ ಬಾಯಿಬಿಡುವ ಕಿಮ್‌!  ಬಿಬಿಸಿ ಸಂದರ್ಶನದಲ್ಲಿ ಸೇನಾ ಕಮಾಂಡರ್‌ ಮಾಹಿತಿ

ಇದುವರೆಗೆ ಭಾರತ, ಚೀನದ ಗಡಿಯೊಳಗೆ ಪ್ರವೇಶಿಸಿಲ್ಲ, ಈ ಹಿಂದೆ ಆಗಿರುವಂಥ ಒಪ್ಪಂದಗಳನ್ನು ಪಾಲನೆ ಮಾಡಿಕೊಂಡೇ ಬರುತ್ತಿದೆ. ಆದರೆ ಚೀನ ಮಾತ್ರ ಪದೇ ಪದೆ ಹಿಂದಿನ ಒಪ್ಪಂದಗಳನ್ನು ಉಲ್ಲಂ ಸುತ್ತಾ ಕಾಲು ಕೆರೆದುಕೊಂಡೇ ಬರುತ್ತಿದೆ. ರಕ್ಷಣ ತಜ್ಞರ ಪ್ರಕಾರವೂ, ಚೀನಗೆ ಯಾವುದೇ ಮಾತುಕತೆಯಾಗಲಿ, ಶಾಂತಿಯಾಗಲಿ ಬೇಕಾಗಿಲ್ಲ. ಸದಾ ಕಾಲು ಕೆರೆದುಕೊಂಡು ಜಗಳವಾಡುವುದೇ ಆ ದೇಶದ ಮಾನಸಿಕ ಸ್ಥಿತಿಯಾಗಿದೆ ಎಂದು ಹೇಳುತ್ತಾರೆ. ಒಟ್ಟಾರೆಯಾಗಿ ಮಾತುಕತೆಯ ನಾಟಕವಾಡುವುದಕ್ಕಿಂತ, ನೈಜ ಉದ್ದೇಶದಿಂದ ಶಾಂತಿ ಸ್ಥಾಪನೆಗಾಗಿ ಚೀನ ಮುಂದೆ ಬರುವುದು ಮುಖ್ಯ. ಇದಕ್ಕೆ ಬದಲಾಗಿ ಕಾಟಾಚಾರದ ಸಭೆಗಳಿಂದ ಏನನ್ನೂ ಸಾಧಿಸಲು ಸಾಧ್ಯವಾಗಲ್ಲ ಎಂಬುದು ಚೀನದ ಗಮನದಲ್ಲಿ ಇರಬೇಕು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.