ಬಹುಪಕ್ಷೀಯ ವ್ಯವಸ್ಥೆ ಚರ್ಚೆಯಾಗಲಿ ಲೋಪದೋಷ


Team Udayavani, Sep 19, 2019, 5:15 AM IST

Amith Shah

ಇನ್ನೂ ಬೆಳೆಯುತ್ತಿರುವ ಪ್ರಜಾತಂತ್ರ ವ್ಯವಸ್ಥೆಗೆ ದ್ವಿಪಕ್ಷೀಯ ಪದ್ಧತಿ ಸ್ವೀಕರಾರ್ಹ ಅಲ್ಲ. ಆದರೆ ಬಹುಪಕ್ಷೀಯ ಪದ್ಧತಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಇದು ಸಕಾಲ.

ದೇಶದ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯಿಂದಾಗಿರುವ ಲಾಭಗಳ ಕುರಿತು ಪ್ರಶ್ನೆಯನ್ನೆತ್ತುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತೂಮ್ಮೆ ಜೇನುಗೂಡಿಗೆ ಕಲ್ಲೆಸೆದಿದ್ದಾರೆ. ದಿಲ್ಲಿಯಲ್ಲಿ ಜರುಗಿದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ಸಂದರ್ಭದಲ್ಲಿ ಜನರಿಗೆ ಸಮಾನ ಹಕ್ಕುಗಳು ಸಿಗಬೇಕು ಮತ್ತು ಅಡಚಣೆ ರಹಿತ ಅಭಿವೃದ್ಧಿಯಾಗಬೇಕೆಂಬ ಆಶಯದಿಂದ ನಾವು ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದ ಬಳಿಕ ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಜನರ ಮನಸ್ಸಿನಲ್ಲಿ ಅನುಮಾನಗಳಿವೆ. ಇದರಿಂದ ಉದ್ದೇಶಿತ ಗುರಿಯನ್ನು ತಲುಪಲು ಸಾಧ್ಯವಾಗಿದೆಯೇ ಎಂದು ಅವರು ಕೇಳುತ್ತಿದ್ದಾರೆ. ಪ್ರಚಲಿತ ರಾಜಕೀಯ ವ್ಯವಸ್ಥೆಯಿಂದ ಜನರು ಭ್ರಮೆ ನಿರಸನಗೊಂಡಿದ್ದಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ ಶಾ.

ಇದಕ್ಕೆ ವಿವಿಧ ರಾಜಕೀಯ ಪಕ್ಷಗಳಿಂದ ಅಂತೆಯೇ ಬಿಜೆಪಿಯನ್ನು ಖಂಡಾ ತುಂಡವಾಗಿ ವಿರೋಧಿಸುವವರಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಒಂದು ದೇಶ, ಒಂದೇ ಪಕ್ಷ, ಒಂದು ಚುನಾವಣೆ , ಒಂದೇ ಭಾಷೆ… ಹೀಗೆ “ಏಕಚಕ್ರಾಧಿಪತ್ಯ’ದ ತನ್ನ ರಹಸ್ಯ ಕಾರ್ಯಸೂಚಿಯನ್ನು ಅನುಷ್ಠಾನಿಸುತ್ತಿದೆ ಎಂಬ ರಾಜಕೀಯ ಕಾರಣವುಳ್ಳ ಟೀಕೆಯನ್ನು ಪಕ್ಕಕ್ಕಿಟ್ಟರೂ ಈ ಬಗ್ಗೆ ಒಂದು ಮುಕ್ತವಾದ ಚರ್ಚೆ ಯಾಗಬೇಕು ಎನ್ನುವ ವಿಚಾರವನ್ನು ಒಪ್ಪಿಕೊಳ್ಳಬಹುದು.

ಪ್ರಸ್ತುತ ದೇಶದಲ್ಲಿ ಎರಡು ಸಾವಿರಕ್ಕೂ ಅಧಿಕ ರಾಜಕೀಯ ಪಕ್ಷಗಳಿವೆ. ಈ ಪೈಕಿ ಎಂಟು ರಾಷ್ಟ್ರೀಯ ಪಕ್ಷಗಳು ಮತ್ತು ಐವತ್ತೂ ಚಿಲ್ಲರೆ ರಾಜ್ಯ ಮಟ್ಟದ ಪಕ್ಷಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಪಕ್ಷಗಳ ವ್ಯಾಪ್ತಿ ಬಹಳ ಸೀಮಿತ. ನಮ್ಮ ದೇಶದಲ್ಲಿ ರಾಜಕೀಯ ಪಕ್ಷಗಳನ್ನು ಸ್ಥಾಪಿಸುವುದು ದೊಡ್ಡ ಸಂಗತಿಯೇ ಅಲ್ಲ.ನಾಯಕನಿಗೊಂದು ಪಕ್ಷ, ಕುಟುಂಬಕ್ಕೊಂದು ಪಕ್ಷ, ಜಿಲ್ಲೆಗೊಂದು ಪಕ್ಷ…ಹೀಗೆ ಜನರು ತಮ್ಮ ಅಗತ್ಯಗಳಿಗೆ ತಕ್ಕಂತೆ ಪಕ್ಷಗಳನ್ನು ಸ್ಥಾಪಿಸಿಕೊಳ್ಳಬಹುದು. ಈ ಮಾದರಿಯ ಪಕ್ಷಗಳಿಗೆ ಗಟ್ಟಿಯಾದ ತಾತ್ವಿಕ ನೆಲೆಗಟ್ಟಾಗಲಿ, ಸೈದ್ಧಾಂತಿಕ ನಿಲುವುಗಳಾಗಲಿ ಇರುವುದಿಲ್ಲ. ಯಾರು ಆ ಪಕ್ಷದ ನಾಯಕ ಎಂಬುದರ ಮೇಲೆ ಅವುಗಳ ನೀತಿ-ಸಿದ್ಧಾಂತಗಳು ನಿರ್ಧಾರವಾಗುತ್ತವೆ. ಎಲ್ಲ ಪಕ್ಷಗಳ ಮೂಲ ಉದ್ದೇಶ

ಒಂದೇ ಆಗಿದ್ದರೂ ಅವುಗಳು ಚುನಾವಣೆಯಲ್ಲಿ ಭಿನ್ನ ಘಟಕಗಳಾಗಿ ಸ್ಪರ್ಧಿಸುತ್ತವೆ. ಸ್ಥಳೀಯ ಅಥವಾ ವಿಧಾನಸಭೆ ಚುನಾವಣೆಯಲ್ಲಾದರೆ ಪರವಾಗಿಲ್ಲ, ಆದರೆ ಸಮಸ್ಯೆ ಎದುರಾಗುವುದು ಸಾರ್ವತ್ರಿಕ ಚುನಾವಣೆ ನಡೆಯುವಾಗ. ಹಾಗೆಂದು ಭಾರತದಂಥ ನೂರಾರು ಭಾಷೆ, ಸಂಸ್ಕೃತಿ, ರೀತಿ ರಿವಾಜುಗಳಿರುವ ಬಹುತ್ವವನ್ನು ಪ್ರತಿನಿಧಿಸುವ ದೇಶವನ್ನು ಬರೀ ಎರಡು ಪಕ್ಷಗಳು ಪ್ರತಿನಿಧಿಸಿದರೆ ಸಾಕೇ ಎಂಬ ಪ್ರಶ್ನೆಯೂ ಸಮುಚಿತವಾದದ್ದೇ. ಸಂಸದೀಯ ಪ್ರಜಾಪ್ರಭುತ್ವದ ಸೊಗಸು ಇರುವುದೇ ಭಿನ್ನತೆಯಲ್ಲಿ. ಇಲ್ಲಿ ಪ್ರತಿಯೊಬ್ಬರ ಧ್ವನಿಯೂ ಕೇಳಿಸಬೇಕು. ದ್ವಿಪಕ್ಷೀಯ ಪದ್ಧತಿಯಲ್ಲಿ ಇಲ್ಲದ ಆಯ್ಕೆಯ ಸ್ವಾತಂತ್ರ್ಯ ಬಹುಪಕ್ಷೀಯ ವ್ಯವಸ್ಥೆಯಲ್ಲಿ ಸಿಗುತ್ತದೆ. ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯಲ್ಲಿ ಮತದಾರನಿಗೆ ತಾನು ನಂಬಿದ, ತನ್ನ ನಿಲುವನ್ನು ಪ್ರತಿಪಾದಿಸುವ ಪಕ್ಷಕ್ಕೆ ಮತ ಹಾಕುವ ಮುಕ್ತ ಆಯ್ಕೆ ಇದೆ. ಈ ಕಾರಣಕ್ಕಾಗಿ ನಮಗೆ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯೇ ಸೂಕ್ತ ಎನ್ನುವುದು ಈ ವಾದದ ಪರವಾಗಿರುವವರ ವಿಚಾರ.

ಅಮೆರಿಕ, ಬ್ರಿಟನ್‌, ಬೆಲ್ಜಿಯಂ ಮತ್ತಿತರ ದೇಶಗಳಲ್ಲಿರುವಂಥ ದ್ವಿಪಕ್ಷೀಯ ಪದ್ಧತಿ ಬಹುತ್ವವನ್ನು ಬದುಕಿನ ಜೀವಾಳವಾಗಿ ಮಾಡಿ ಕೊಂಡಿರುವ ಭಾರತದಂಥ ವೈವಿಧ್ಯತೆಯ ದೇಶಕ್ಕೆ ಸೂಕ್ತವಾದುದಲ್ಲ ಎನ್ನುವುದು ನಿಜ. ಹಾಗೆಂದು ಈಗಿರುವ ಸಾವಿರಾರು ಪಕ್ಷಗಳ ಪ್ರಜಾಪ್ರಭುತ್ವ ವ್ಯವಸ್ಥೆಯೂ ಸರಿಯಾಗಿಲ್ಲ ಎನ್ನುವುದೂ ಅಷ್ಟೇ ನಿಜ. ದೋಷ ನಮ್ಮ ಪ್ರಜಾತಂತ್ರ ವ್ಯವಸ್ಥೆಯನ್ನು ಯಾವ ರೀತಿ ಬಳಸಿಕೊಂಡಿದ್ದೇವೆ ಎಂಬುದರಲ್ಲಿದೆ. ಇನ್ನೂ ಬೆಳೆಯುತ್ತಲೇ ಇರುವ ಪ್ರಜಾತಂತ್ರ ವ್ಯವಸ್ಥೆಗೆ ದ್ವಿಪಕ್ಷೀಯ ಪದ್ಧತಿ ಸ್ವೀಕಾರಾರ್ಹ ಅಲ್ಲವೇ ಅಲ್ಲ. ಆದರೆ ಬಹುಪಕ್ಷೀಯ ಪದ್ಧತಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಇದು ಸಕಾಲ. ಅಮಿತ್‌ ಶಾ ಹೇಳಿಕೆ ಏಕಚಕ್ರಾಧಿಪತ್ಯವನ್ನು ಸ್ಥಾಪಿಸುವ ಹುನ್ನಾರ ಎಂದು ಷರಾ ಬರೆಯುವ ಮೊದಲು ಬಹುಪಕ್ಷೀಯ ವ್ಯವಸ್ಥೆಯಲ್ಲಿ ಎಲ್ಲಿ, ಏನು ಸುಧಾರಣೆಯಾಗಬೇಕು ಎಂಬುದರ ಬಗ್ಗೆ ಮುಕ್ತವಾದ ಚರ್ಚೆ ನಡೆಯಬೇಕಿರುವುದು ಇಂದಿನ ಅಗತ್ಯ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.