ಭರವಸೆ ಮೂಡಿಸಿದ ಭರ್ಜರಿ ಬಂಡವಾಳ ಹೂಡಿಕೆ


Team Udayavani, Nov 5, 2022, 6:00 AM IST

ಭರವಸೆ ಮೂಡಿಸಿದ ಭರ್ಜರಿ ಬಂಡವಾಳ ಹೂಡಿಕೆ

ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರಕಾರದ ಗುರಿಯ ದುಪ್ಪಟ್ಟು ಸುಮಾರು 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದಗಳಾಗಿರುವುದು ಉತ್ತಮ ಬೆಳವಣಿಗೆ.
ರಾಜ್ಯದ ಆರ್ಥಿಕತೆ ಚೇತರಿಕೆ ದೃಷ್ಟಿಯಿಂದ ಹಾಗೂ ಉದ್ಯಮ ಮತ್ತು ಕೈಗಾರಿಕೆ ಬೆಳವಣಿಗೆ ಹಿನ್ನೆಲೆಯಲ್ಲಿ ಕೊರೊನಾ ಅನಂತರ ರಾಜ್ಯ ಸರಕಾರ ಇನ್ವೆಸ್ಟ್‌ ಕರ್ನಾಟಕ ಹೂಡಿಕೆ ಸಮಾವೇಶದ ಮೂಲಕ ಮೊದಲ ಹಂತದ ಯಶಸ್ಸು  ಗಳಿಸಿದೆ. ಹತ್ತು ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಿಂದ 10 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇರುವುದು ರಾಜ್ಯದ ಪಾಲಿಕೆ ಭರವಸೆ ಮೂಡಿಸಿದೆ. ಕೊರೊನಾ ಅನಂತರ ವಿಶ್ವದ ಬಹುತೇಕ ದೇಶ ಮತ್ತು ರಾಜ್ಯಗಳ ಆರ್ಥಿಕತೆ ಕುಸಿದು ನಲುಗುತ್ತಿವೆ. ಇಂತಹ ಸಂದರ್ಭದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದ ಮೊದಲ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಚಾರ.

ಇದೀಗ ರಾಜ್ಯ ಸರಕಾರ ಬಂಡವಾಳ ಹೂಡಿಕೆಗೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದೆ. ಒಪ್ಪಂದದ ಎರಡನೇ ಹಂತದಲ್ಲಿ ಇದು ಅತ್ಯಗತ್ಯ. ಜತೆಗೆ ಒಪ್ಪಂದಗಳ ಪೈಕಿ ಅನುಷ್ಠಾನದ ಪ್ರಮಾಣವೂ ಹೆಚ್ಚಳವಾಗಬೇಕಾಗಿದೆ. ಏಕೆಂದರೆ ಹಿಂದಿನ ನಾಲ್ಕು ಹೂಡಿಕೆದಾರರ ಸಮಾವೇಶದ ಪ್ರತಿಫ‌ಲ ನೋಡಿದಾಗ ಶೇ.15 ರಿಂದ ಶೇ.44 ರಷ್ಟು ಮಾತ್ರ ಅನುಷ್ಠಾನಗೊಂಡಿದೆ.

ಇದಕ್ಕೆ ಸಾಕಷ್ಟು ಕಾರಣಗಳು ಇರಬಹುದು, ಬೇರೆ ಬೇರೆ ಹಂತದಲ್ಲಿ ಅಡ್ಡಿಗಳು ಎದುರಾಗಿರಬಹುದು. ಆದರೆ ಪ್ರಸ್ತುತ ಕೈಗಾರಿಕೆ ಇಲಾಖೆ ಹಿಂದಿನ ನಿಯಮಾವಳಿಗಳಲ್ಲಿ ಸಾಕಷ್ಟು ಸರಳೀಕರಣ ಹಾಗೂ ಕೈಗಾರಿಕಾ ಸ್ನೇಹಿ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಈ ಬಾರಿಯ ಒಪ್ಪಂದಗಳಲ್ಲಿ ಹೆಚ್ಚಿನ ಪ್ರಮಾಣದ ಅನುಷ್ಠಾನಕ್ಕೆ ಒತ್ತು ನೀಡಬೇಕಾಗಿದೆ.

ಈವರೆಗಿನ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಗಳು ಬೆಂಗಳೂರು ಕೇಂದ್ರೀಕೃತವಾಗಿದ್ದವು. ಈ ಬಾರಿ ಬಿಯಾಂಡ್‌ ಬೆಂಗ ಳೂರು ಪರಿಕಲ್ಪನೆಯಲ್ಲಿ ಬೆಂಗಳೂರು ಹೊರತುಪಡಿಸಿ 2 ಮತ್ತು 3ನೇ ಹಂತದ ನಗರಗಳತ್ತ ಉದ್ಯಮಿಗಳು ಆಸಕ್ತಿ ತೋರಿರುವುದು ಉತ್ತಮ ಬೆಳ ವಣಿಗೆ. ಉದ್ಯಮಗಳು ರಾಜ್ಯ ಸರಕಾರದ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿ ಕೊಳ್ಳಲಾಗುವುದು. ಮೂರು ದಿನಗಳ ಸಮಾವೇಶದಲ್ಲಿನ ಒಪ್ಪಂದ  ಗಳನ್ನು ಮುಂದಿನ ಮೂರು ತಿಂಗಳೊಳಗಾಗಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹಾಗೂ ಕೈಗಾರಿಕೆ ಸಚಿ ವರು ಭರವಸೆ ನೀಡಿರುವುದು ಹೂಡಿಕೆದಾರರಲ್ಲಿÉ ಆಶಾಭಾವನೆ ಮೂಡಿಸಿದೆ. ಮುಂದಿನ ಜಾಗತಿಕ ಹೂಡಿಕೆದಾರರ ಸಮಾವೇಶ 2025ರಲ್ಲಿ ನಡೆಸುವುದಾಗಿ ಘೋಷಣೆ ಸಹ ಮಾಡಿರುವುದರಿಂದ ಅಷ್ಟರಲ್ಲಿ ಈಗಿನ ಸಮಾವೇಶದ ಎಲ್ಲ ಒಪ್ಪಂದ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಬೇಕಾಗಿದೆ.

ಈ ಬಾರಿಯ ಸಮಾವೇಶದಲ್ಲಿ ಇಂಧನ, ಉತ್ಪಾದನೆ, ನವೀಕರಿಸಬಹು ದಾದ ಇಂಧನ, ಮೂಲಸೌಕರ್ಯ ಸಹಿತ ಪ್ರಮುಖ ವಲಯಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಾಗಿರುವುದು ಗಮನಾರ್ಹ. ಐಟಿ-ಬಿಟಿ ಕೇಂದ್ರ ಆಗಿರುವ ಕರ್ನಾಟಕವನ್ನು ದೇಶದ ಆರ್ಥಿಕತೆಯ ಕೇಂದ್ರವನ್ನಾಗಿ ಸುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿಯವರು ಘೋಷಿಸಿರುವುದು ಮತ್ತು ಹೂಡಿಕೆದಾರರ ಸಮಾವೇಶವು ಕೇವಲ ಹೂಡಿಕೆಗೆ ಸೀಮಿತವಾಗದೆ ಯುವ ಜನರಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಿದೆ ಎಂದು ಹೇಳಿರುವುದು ಕರ್ನಾಟಕದ ದಿಟ್ಟ ಹೆಜ್ಜೆಗೆ ಸಾಕ್ಷಿ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.