ಬಳಕೆಯಲ್ಲಿ ಎಚ್ಚರಿಕೆಯಿರಲಿ ಸಾಮಾಜಿಕ ಮಾಧ್ಯಮಕ್ಕೆ ಆಧಾರ್‌ ಸಂಯೋಜನೆ


Team Udayavani, Aug 22, 2019, 5:58 AM IST

FACE-AD

ಫೇಸ್‌ಬುಕ್‌ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಆಧಾರ್‌ಗೆ ಲಿಂಕ್‌ ಮಾಡುವ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮದ್ರಾಸ್‌ ಹೈಕೋರ್ಟಿನಲ್ಲಿ ದಾಖಲಾಗಿರುವ ಫೇಸ್‌ಬುಕ್‌ಗೆ ಆಧಾರ್‌ ಸಂಯೋಜಿಸ ಬೇಕೆಂಬ ದೂರು ಹಾಗೂ ಇದೇ ಮಾದರಿಯ ಇತರ ದೂರುಗಳನ್ನು ಸುಪ್ರೀಂ ಕೋರ್ಟಿಗೆ ವರ್ಗಾಯಿಸಬೇಕೆಂದು ಫೇಸ್‌ಬುಕ್‌ ಮನವಿ ಮಾಡಿದ್ದು, ಇದರ ವಿಚಾರಣೆ ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಟ್ವಿಟ್ಟರ್‌, ವಾಟ್ಸ್‌ಆ Âಪ್‌ ಮತ್ತಿತರ ವಿಚಾರ ವಿನಿಮಯ ವೇದಿಕೆಗಳನ್ನು ಆಧಾರ್‌ ಅಥವಾ ಈ ಮಾದರಿಯ ಯಾವುದಾದರೊಂದು ಸರಕಾರಿ ದಾಖಲೆ ಜೊತೆಗೆ ಬೆಸೆದು ಈ ಖಾತೆಗಳಿಗೆ ಒಂದು ಉತ್ತರದಾಯಿತ್ವವನ್ನು ಕೊಡಬೇಕೆಂಬ ಪ್ರಯತ್ನ ಪ್ರಾರಂಭವಾಗಿ ಕೆಲ ಸಮಯವಾಗಿದೆ. ಎರಡು ವರ್ಷಗಳ ಹಿಂದೆ ಕೇಂದ್ರ ಸರಕಾರವೇ ಕಪ್ಪುಹಣ ಬಯಲಿಗೆಳೆಯುವ ಸಲುವಾಗಿ ಜನರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸರಕಾರಿ ದಾಖಲೆಗೆ ಸಂಯೋಜಿಸ ಬೇಕೆಂಬ ಪ್ರಸ್ತಾವ ಇಟ್ಟಿತ್ತು ಹಾಗೂ ಇದಕ್ಕೆ ಆ ಸಂದರ್ಭದಲ್ಲಿ ಬಲವಾದ ವಿರೋಧವೂ ವ್ಯಕ್ತವಾಗಿತ್ತು. ಇದಾದ ಬಳಿಕ ತಮಿಳುನಾಡು ಸರಕಾರ ಫೇಸ್‌ಬುಕ್‌ ಖಾತೆಗಳನ್ನು ಆಧಾರ್‌ಗೆ ಲಿಂಕ್‌ ಮಾಡ ಬೇ ಕೆಂದು ಅಧಿಕೃತವಾಗಿಯೇ ಆದೇಶ ಹೊರಡಿಸಿದ್ದು, ಇದರ ವಿರುದ್ಧ ಫೇಸ್‌ಬುಕ್‌ ನ್ಯಾಯಾಲಯದ ಮೆಟ್ಟಿಲೇರಿದೆ.

ಸುಳ್ಳು ಸುದ್ದಿ ಹರಡುವುದು, ಹಿಂಸೆಗೆ ಪ್ರಚೋದನೆ ನೀಡುವುದು, ತೇಜೋವಧೆ ಮಾಡುವುದು, ದ್ವೇಷ ಹರಡು ವುದು ಸೇರಿದಂತೆ ವಿವಿಧ ರೀತಿಯ ಸೈಬರ್‌ ಅಪರಾಧಗಳನ್ನು ತಡೆಯುವ ಸಲುವಾಗಿ ಜನರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಉತ್ತರದಾಯಿತ್ವ ಇರುವುದು ಅಗತ್ಯ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಕೆಲ ತಾಸುಗಳ ಮಟ್ಟಿಗೆ ಇಂಟರ್‌ನೆಟ್‌ ನಿರ್ಬಂಧವನ್ನು ಸಡಿಲಿಸಿದಾಗ ನಡೆದ ಹಿಂಸಾಚಾರಕ್ಕೆ ಸಾಮಾಜಿಕ ಮಾಧ್ಯಮ ಗಳಲ್ಲಿ ಹರಡಿದ ದ್ವೇಷ ಸಂದೇಶಗಳು ಕಾರಣವಾಗಿದ್ದವು. ಇದು ಪತ್ತೆಯಾ ಗುತ್ತಿದ್ದಂತೆಯೇ ಅಲ್ಲಿ ಮರಳಿ ಇಂಟರ್‌ನೆಟ್‌ಗೆ ನಿರ್ಬಂಧ ಹೇರಲಾಗಿದೆ. ಈ ಘಟನೆಯನ್ನು ಸರಕಾರ ತನ್ನ ವಾದಕ್ಕೆ ಸಮರ್ಥನೆಯಾಗಿ ಬಳಸಿಕೊಂಡಿದೆ.

ಈ ವಾದದಲ್ಲಿ ವಾಸ್ತವಾಂಶ ಇದೆ. ಡಿಜಿಟಲ್‌ ಮಾಧ್ಯಮಗಳ ಕ್ರಾಂತಿಯ ಬಳಿಕ ಇದಕ್ಕೆ ಸಂಬಂಧಿಸಿದ ಅಪರಾಧ ಕೃತ್ಯಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾ ಗಿವೆ. ಗೋ ಕಳ್ಳರು ಮತ್ತು ಮಕ್ಕಳ ಕಳ್ಳರೆಂದು ಭಾವಿಸಿ ಅಮಾಯಕ ಜನ ರನ್ನು ಉದ್ರಿಕ್ತ ಗುಂಪುಗಳು ಥಳಿಸಿ ಕೊಂದ ಹಲವು ಪ್ರಕರಣಗಳು ನಡೆದಿವೆ. ಫೇಸ್‌ಬುಕ್‌, ವಾಟ್ಸ್‌ಆ Âಪ್‌ನಂಥ ಮಾಧ್ಯಮಗಳು ಉಗ್ರ ರಿಗೆ ಸಂದೇಶ ರವಾನಿಸಲು ಸುಲಭ ದಾರಿಯಾಗಿವೆ. ತೇಜೋವಧೆ ಗಳಂಥ ಕೃತ್ಯ ನಡೆಸಲು ಸಾಮಾಜಿಕ ಮಾಧ್ಯಮ ಹೆಚ್ಚು ಬಳಕೆಯಾಗು ತ್ತಿರುವುದು ದುರದೃಷ್ಟಕರ ಬೆಳವಣಿಗೆ.

ಆದರೆ ಇದು ಸಾಮಾಜಿಕ ಮಾಧ್ಯಮಗಳ ಒಂದು ಮುಖ ಮಾತ್ರ. ಈ ಮಾಧ್ಯಮ ಅಭಿವ್ಯಕ್ತಿಯ ಮುಕ್ತ ವೇದಿಕೆಯಾಗಿದ್ದು, ಸಾಂಪ್ರದಾಯಿಕ ಮಾಧ್ಯಮಗಳಿರುವ ಮಿತಿಗಳು ಮತ್ತು ನಿರ್ಬಂಧಗಳು ಇದಕ್ಕಿಲ್ಲ. ಸಾಮಾಜಿಕ ಮಾಧ್ಯಮಗಳಿಂದಾಗಿ ಅನೇಕ ಹಗರಣಗಳನ್ನು ಬೆಳಕಿಗೆ ತರಲು ಸಾಧ್ಯವಾಗಿದೆ, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಲು ಇದು ನೆರವಾದ ಎಷ್ಟೋ ಪ್ರಕರಣಗಳಿವೆ. ಮುಖ್ಯವಾಗಿ ಅಧಿಕಾರದಲ್ಲಿರು ವವರನ್ನು ಪ್ರಶ್ನಿಸಲು ಸಾಮಾಜಿಕ ಮಾಧ್ಯಮಕ್ಕಿಂತ ಪ್ರಶಸ್ತವಾದ ವೇದಿಕೆ ಇನ್ನೊಂದಿಲ್ಲ. ಈ ಮಾಧ್ಯಮವನ್ನು ಸರಕಾರಿ ದಾಖಲೆ ಜತೆಗೆ ಸಂಯೋಜಿ ಸುವುದು ಎಂದರೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮೂಗುದಾರ ತೊಡಿಸಿದಂತೆಯೇ. ಸಾಮಾಜಿಕ ಮಾಧ್ಯಮವನ್ನು ಆಧಾರ್‌ಗೆ ಬೆಸೆದರೆ ಕಳೆದ ವರ್ಷ ಸುಪ್ರೀಂ ಕೋಟೇì ಎತ್ತಿ ಹಿಡಿದಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ  ಆಗುತ್ತದೆ. ಅಲ್ಲದೆ ಕೋಟ್ಯಂತರ ಜನರ ಗೌಪ್ಯ ಮಾಹಿತಿಗಳನ್ನೆಲ್ಲ ಖಾಸಗಿ ಕಂಪೆನಿಗಳ ಕೈಯಲ್ಲಿಟ್ಟಂತಾಗುತ್ತದೆ. ಈ ಡೇಟಾ ಬೇರೆ ಉದ್ದೇಶಗಳಿಗೆ ಬಳಕೆಯಾಗುವುದಿಲ್ಲ ಎನ್ನುವುದಕ್ಕೆ ಯಾವ ಖಾತರಿಯಿದೆ ಎಂಬ ವಾದದಲ್ಲೂ ತಥ್ಯವಿದೆ. ಇದು ಬಹಳ ಸಂಕೀರ್ಣ, ಸೂಕ್ಷ್ಮ ವಿಚಾರ. ಖಾಸಗಿತನದ ಹಕ್ಕು ಮತ್ತು ಶಾಸನಾತ್ಮಕ ಹಕ್ಕಿನ ನಡುವೆ ಸಮತೋಲನ ಕಾಪಾಡುವ ಗುರುತರ ಹೊಣೆ ನ್ಯಾಯಾಲಯದ ಮೇಲಿದೆ. ಜನರ ದಾಖಲೆಗಳನ್ನು ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಸಂಯೋಜನೆ ಮಾಡುವ ಬದಲು ಈ ಮಾದರಿಯ ಮಾಧ್ಯಮಗಳನ್ನು ವಿವೇಚನೆಯಿಂದಲೂ ಎಚ್ಚರಿಕೆಯಿಂದಲೂ ಬಳಸುವ ಅರಿವು ಮೂಡಿಸಲು ಯತ್ನಿಸುವುದು ಹೆಚ್ಚು ಸರಿಯಾದ ವಿಧಾನ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.