ವಿದೇಶ ಉದ್ಯೋಗ ಅಪಾಯ: ಮುನ್ನೆಚ್ಚರಿಕೆಯೇ ಉಪಾಯ


Team Udayavani, Apr 2, 2024, 6:30 AM IST

ವಿದೇಶ ಉದ್ಯೋಗ ಅಪಾಯ: ಮುನ್ನೆಚ್ಚರಿಕೆಯೇ ಉಪಾಯ

ಉದ್ಯೋಗದ ಆಮಿಷಕ್ಕೆ ಸಿಕ್ಕಿ ಕಾಂಬೋಡಿಯಾಗೆ ತೆರಳಿರುವ ಸುಮಾರು 5 ಸಾವಿರದಷ್ಟು ಭಾರತೀಯರು ಈಗ “ಸೈಬರ್‌ ಗುಲಾಮ’ರಾಗಿ ಆ ದೇಶದಲ್ಲಿ ಅತಂತ್ರರಾಗಿದ್ದಾರೆ. ಅಲ್ಲಿಂದ ಪಾರಾಗಲಾಗದೆ ಒದ್ದಾಡುತ್ತಿದ್ದಾರೆ. ಈ ಭಾರತೀ ಯರನ್ನು ಆನ್‌ಲೈನ್‌ನಲ್ಲಿ ಭಾರತೀಯರನ್ನೇ ವಂಚಿಸುವ ಕೆಲಸಕ್ಕೆ ನಿಯೋ ಜಿಸಿರುವುದು ಇನ್ನೂ ಕಳವಳಕಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ವಿದೇಶಿ ಉದ್ಯೋಗಗಳ ಆಮಿಷಕ್ಕೀಡಾಗಿ ತೆರಳುವ ಭಾರತೀಯರು ನಾನಾ ಸಂಕಷ್ಟಗಳಿಗೆ ಗುರಿಯಾಗುತ್ತಿರುವ ಬಗ್ಗೆ ಮೇಲಿಂದ ಮೇಲೆ ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕಾಂಬೋಡಿಯಾದಲ್ಲಿ ಅತಂತ್ರರಾಗಿರುವ ಭಾರತೀಯರ ಬಗ್ಗೆ ಮಾಹಿತಿ ಯಿದೆ. ಈಗಾಗಲೇ 250 ಭಾರತೀಯರನ್ನು ಪಾರು ಮಾಡಿದ್ದೇವೆ. ಕಳೆದ ಮೂರು ತಿಂಗಳಲ್ಲಿ 75 ಭಾರತೀಯರು ದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದ್ದು, ಆಶಾದಾಯಕವಾಗಿದೆ. ಹಾಗಿದ್ದೂ, ಅತಂತ್ರರಾಗಿರುವ ಎಲ್ಲ ಭಾರತೀ ಯರನ್ನು ವಾಪಸ್‌ ತವರಿಗೆ ಕರೆ ತರುವುದು ಸರಕಾರದ ಪ್ರಥಮ ಆದ್ಯತೆ ಯಾಗಬೇಕು. ಕೆಲವು ದಿನಗಳ ಹಿಂದೆಯಷ್ಟೇ ಕರ್ನಾಟಕದವರು ಸೇರಿದಂತೆ ಭಾರತದ ಯುವಕರು ರಷ್ಯಾದಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದರು. ಪಂಜಾಬ್‌, ಹರಿಯಾಣ, ದಿಲ್ಲಿ, ಮಹಾರಾಷ್ಟ್ರದಲ್ಲಿ ಕಾರ್ಯಾಚರಿಸುತ್ತಿದ್ದ ಏಜೆಂಟ್‌ ಕಂಪೆನಿಗಳ ಮೂಲಕ 180 ಭಾರತೀಯರು ರಷ್ಯಾಗೆ ಹೋಗಿ, ಅಪಾಯಕ್ಕೆ ಸಿಲುಕಿ ಕೊಂಡಿದ್ದರು. ಈ ವೇಳೆ, ಹೈದ್ರಾಬಾದ್‌ನ ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕ ಈ ಪ್ರಕರಣದ ಗಂಭೀರತೆಯು ಎಲ್ಲರಿಗೂ ಮನದಟ್ಟಾಗಿತ್ತು.

ಭಾರತದಲ್ಲಿನ ಉದ್ಯೋಗ ಸೃಷ್ಟಿಯ ಕೊರತೆ ಪರಿಣಾಮ ಬಹಳಷ್ಟು ಯುವಕರು ವಿದೇಶಗಳಲ್ಲಿನ ಉದ್ಯೋಗದಾಸೆಗೆ ಬಲಿಯಾಗುತ್ತಿದ್ದಾರೆ. ಇದೇ ಅವಕಾಶವನ್ನು ಬಳಸಿಕೊಳ್ಳುವ ಕೆಲವು ವಂಚಕ ಕಂಪೆನಿಗಳು ಮನಸೋ ಇಚ್ಛೆ ಹಣವನ್ನು ಪೀಕಿಸಿಕೊಂಡು, ವಿದೇಶಗಳಲ್ಲಿ ಅವರನ್ನು ಅತಂತ್ರರನ್ನಾಗಿಸುತ್ತಿವೆ. ವಿದೇಶಿ ಉದ್ಯೋಗ ನಂಬಿ ಸಾಕಷ್ಟು ಜನರು ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳಂತೂ ಕರ್ನಾಟಕವೂ ಸೇರಿದಂತೆ ದೇಶ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿವೆ. ಉದ್ಯೋಗಕ್ಕಾಗಿ ವಿದೇಶಗಳಿಗೆ ತೆರಳುವವರು ತೊಂದರೆಗೆ ಸಿಲುಕದಿರಲಿ ಎಂದೇ ಭಾರತೀಯ ವಿದೇಶಾಂಗ ಸಚಿವಾಲಯವು ಸಾಕಷ್ಟು ನಿಯಮಗಳನ್ನು ರೂಪಿಸಿದೆ. ಇದಕ್ಕಾಗಿ ನೇಮಕಾತಿ ಸಂಸ್ಥೆಗಳಿಗೆ ಮಾನ್ಯತೆ ಯನ್ನೂ ಕಲ್ಪಿಸುತ್ತದೆ. ಆದರೆ ಈ ಬಗೆಗಿನ ಜ್ಞಾನದ ಕೊರತೆಯಿಂದಾಗಿ ಸಾಕಷ್ಟು ಜನರು ನಕಲಿ ಏಜೆಂಟರಿಗೆ ಬಲಿ ಬಿದ್ದು, ಹಣವನ್ನೂ ಕಳೆದುಕೊಳ್ಳುವುದು ಮಾತ್ರ ವಲ್ಲದೇ, ತಮ್ಮ ಜೀವಕ್ಕೂ ಅಪಾಯವನ್ನು ತಂದುಕೊಳ್ಳುತ್ತಿದ್ದಾರೆ.

ಸಾಕಷ್ಟು ನಿಯಮಗಳು ಮತ್ತು ಕ್ರಮಗಳ ಹೊರತಾಗಿಯೂ ವಿದೇಶಿ ನೌಕರಿಯ ವಂಚನೆಯನ್ನು ತಡೆಯಲಾಗುತ್ತಿಲ್ಲ. ಅಂದರೆ ಈಗಿರುವ ಕಾನೂ ನಾತ್ಮಕ ಕ್ರಮಗಳು ಸಾಕಾಗುತ್ತಿಲ್ಲ. ಸರಕಾರಗಳು ಈ ನಿಟ್ಟಿನಲ್ಲಿ ಯೋಚಿಸಿ, ಪರಿಪೂರ್ಣವಾದ ವ್ಯವಸ್ಥೆಯನ್ನು ರೂಪಿಸಬೇಕು ಮತ್ತು ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ಸರಕಾರಿ ಅಧಿಕಾರಿಗಳ ಶಾಮೀಲು ಇಲ್ಲದೇ ಈ ವಂಚನೆಗಳು ನಡೆಯಲು ಸಾಧ್ಯವಿಲ್ಲ. ಹಾಗಾಗಿ, ಇಂಥ ಪ್ರಕರಣಗಳಲ್ಲಿನ ತಪ್ಪಿತಸ್ಥ ಸರಕಾರಿ ಸಿಬಂದಿಯನ್ನು ಕಠಿನ ಶಿಕ್ಷೆಗೆ ಗುರಿಯಾಗಿಸಬೇಕು.

ಎಲ್ಲಕ್ಕಿಂತ ಹೆಚ್ಚಾಗಿ, ಉದ್ಯೋಗಾಕಾಂಕ್ಷಿಗಳು ಹೆಚ್ಚು ಮುನ್ನೆಚ್ಚರಿಕೆಯನ್ನು ವಹಿಸಬೇಕು. ತಾವು ನಂಬಿರುವ ಏಜೆಂಟ್‌ ಕಂಪೆನಿಗಳು ನಕಲಿಯೋ, ಅಸಲಿಯೋ ಅಥವಾ ಹೋಗುತ್ತಿರುವ ದೇಶವು ವಿದೇಶಿಗರಿಗೆ ಪೂರಕವಾಗಿ ದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ವಿದೇಶಾಂಗ ಸಚಿವಾಲಯದಲ್ಲಿ ನೋಂದಾಯಿತ ಏಜೆಂಟ್‌ ಕಂಪೆನಿಗಳ ಮೂಲಕವೇ ವ್ಯವಹರಿಸಬೇಕು. ಇಲ್ಲದಿದ್ದರೆ, ನಮ್ಮದಲ್ಲದ ದೇಶದಲ್ಲಿ ಅತಂತ್ರರಾಗಿ, ಬದುಕನ್ನು ವಿನಾಶಕ್ಕೆ ನಾವೇ ದೂಡುತ್ತೇವೆ. ಈ ಬಗ್ಗೆ ಎಚ್ಚರ ವಹಿಸುವುದು ಅಗತ್ಯ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.