ಪರಿಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಗೆ ಕ್ರಮ ಅಗತ್ಯ


Team Udayavani, Jul 12, 2023, 6:00 AM IST

ಪರಿಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಗೆ ಕ್ರಮ ಅಗತ್ಯ

ಕಳೆದ ನಾಲ್ಕೈದು ದಿನಗಳಿಂದ ಇಡೀ ಉತ್ತರ ಭಾರತ ವರುಣಾಕ್ರೋಶದಿಂದ ತತ್ತರಿಸಿಹೋಗಿದ್ದು, ಅಪಾರ ಪ್ರಮಾಣದ ಸಾವು ನೋವು, ಆಸ್ತಿ ಪಾಸ್ತಿ ನಷ್ಟವೂ ಉಂಟಾಗಿದೆ. ಹಿಮಾಚಲ ಪ್ರದೇಶ ಮತ್ತು ದಿಲ್ಲಿ ರಾಜ್ಯಗಳು ಹಿಂದೆಂದೂ ಕಾಣದಂತ ಮಳೆಯನ್ನು ಕಂಡಿದ್ದು, ಹಿಮಾಚಲ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಆಗಿರುವ ನಷ್ಟದ ಅಂದಾಜೇ ಸಿಗುತ್ತಿಲ್ಲ. ಯಮುನೆ, ಬಿಯಾಸ್‌ ಸಹಿತ ಉತ್ತರ ಭಾರತದಲ್ಲಿನ ಬಹುತೇಕ  ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಭೀತಿಯೂ ಎದುರಾಗಿದೆ.

ಕೇವಲ ಈ ಎರಡು ರಾಜ್ಯಗಳಷ್ಟೇ ಅಲ್ಲ, ಪಂಜಾಬ್‌, ಉತ್ತರಾಖಂಡ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳು ಕೂಡ ಮಳೆಯ ಅಬ್ಬರಕ್ಕೆ ತತ್ತರಿಸಿವೆ. ಜುಲೈ ತಿಂಗಳ ಆರಂಭದಲ್ಲಿ ಮುಂಗಾರು ಕೊರತೆಯ ಸ್ಥಿತಿ ಎದುರಾಗಿದ್ದು, 10 ದಿನಗಳಲ್ಲೇ ಮುಂಗಾರು ಮಳೆ ಅಗತ್ಯಕ್ಕಿಂತ ಹೆಚ್ಚೇ ಬಂದಿದೆ ಎಂಬಂಥ ಸ್ಥಿತಿ ಸೃಷ್ಟಿಯಾಗಿದೆ. ಈ ಮೂಲಕವೇ ಕಳೆದ ಐದು ದಿನಗಳಲ್ಲಿ ಸುರಿದ ಮಳೆಯ ಬಗ್ಗೆ ಲೆಕ್ಕ ಹಾಕಬಹುದು.

ಉಳಿದೆಲ್ಲ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಹಿಮಾಚಲ ಪ್ರದೇಶದಲ್ಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಈ ರಾಜ್ಯವೊಂದರಲ್ಲೇ ಸರಕಾರದ ಮೂಲಗಳ ಪ್ರಕಾರ, ಕಳೆದ ಮೂರು ದಿನಗಳಲ್ಲಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 3,000 ಕೋಟಿ ರೂ. ನಷ್ಟ ಸಂಭವಿಸಿದೆ. ಶಿಮ್ಲಾವೊಂದರಲ್ಲೇ ಹತ್ತಕ್ಕಿಂತಲೂ ಅಧಿಕ ಮಂದಿ ಮೃತರಾಗಿದ್ದಾರೆ. ಇಲ್ಲಿನ ಹಲವಾರು ಪ್ರವಾಸಿ ತಾಣಗಳಲ್ಲಿ 500ಕ್ಕೂ ಹೆಚ್ಚು ಮಂದಿ ಸಿಕ್ಕಿ ಹಾಕಿಕೊಂಡಿದ್ದು, ಇವರ ರಕ್ಷಣ ಕಾರ್ಯಾಚರಣೆಯೂ ಸಾಗಿದೆ. ಉನಾ ಜಿಲ್ಲೆಯ ಸ್ಲಂವೊಂದರಲ್ಲೇ 500ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಪ್ರವಾಹದಡಿ ಸಿಲುಕಿದ್ದಾರೆ. ಹಾಗೆಯೇ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲೆ ಮಟ್ಟದ 1,300 ರಸ್ತೆಗಳು ಹಾಳಾಗಿವೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ಇದೇ ರೀತಿ ಮಳೆ ಸುರಿಯಬಹುದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

ಸಾಮಾನ್ಯವಾಗಿ ಭಾರೀ ಪ್ರಮಾಣದ ಮಳೆ ಸುರಿದಾಗ ಮೊದಲಿಗೆ ಹೆಚ್ಚು ಹಾನಿಯಾಗುವುದು ಗುಡ್ಡಗಾಡು ಪ್ರದೇಶಗಳಲ್ಲಿ. ಇದಕ್ಕೆ ಉದಾಹರಣೆ 2018ರಲ್ಲಿ ಕರ್ನಾಟಕದ ಕೊಡಗಿನಲ್ಲಿ ಭಾರೀ ಪ್ರಮಾಣದ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಆಗ ಗುಡ್ಡಗಳು ಕುಸಿದು ಮನೆಗಳ ಸಮೇತ ಎಲ್ಲವೂ ಮಳೆಯ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಈ ಹಿಂದೆ ಉತ್ತರಾಖಂಡದ ಕೇದಾರನಾಥದ ಬಳಿಯೂ ಇಂಥದ್ದೇ ಅನಾಹುತ ಸೃಷ್ಟಿಯಾಗಿತ್ತು. ಅಲ್ಲಿನ ರಸ್ತೆಗಳು, ಜನವಸತಿ ಪ್ರದೇಶಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದವು.

ಈಗ ಹಿಮಾಚಲ ಪ್ರದೇಶದ ಸರದಿ. ಅಲ್ಲಿಯೂ ಇಂಥದ್ದೇ ಪರಿಸ್ಥಿತಿ ತಲೆದೋರಿದೆ. ಗುಡ್ಡಗಾಡು ಪ್ರದೇಶಗಳಲ್ಲಿನ ಜನವಸತಿ ಕೇಂದ್ರಗಳೇ ಹೆಚ್ಚು ಹಾನಿಗೀಡಾಗಿವೆ. ಇದಕ್ಕೆ ಅಳತೆ ಮೀರಿ ಅಭಿವೃದ್ದಿ ಕೆಲಸ ಕೈಗೆತ್ತಿಕೊಂಡಿರುವುದೇ ಕಾರಣವೇ? ಅಥವಾ ಮಾನವನ ಅತಿಯಾಸೆಯಿಂದಾಗಿ ಇಂಥ ಅನಾಹುತಗಳು ಸಂಭವಿಸುತ್ತಿವೆಯೇ ಎಂಬ ಪ್ರಶ್ನೆಗಳೂ ಎದ್ದಿವೆ. ಸರಕಾರಗಳು ಪರಿಸರ ಸೂಕ್ಷ್ಮ ಪ್ರದೇಶಗಳ ಸುರಕ್ಷತೆ ಕುರಿತಂತೆ ನಿರ್ಲಕ್ಷ್ಯ ವಹಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಲಾದರೂ, ಕೇಂದ್ರ ಹಾಗೂ ಆಯಾ ರಾಜ್ಯ ಸರಕಾರಗಳು ಪರಿಸರ ಸೂಕ್ಷ್ಮ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಿ, ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು. ಗುಡ್ಡಗಳು ಜರುಗದಂಥ ವ್ಯವಸ್ಥೆಯೊಂದನ್ನು ಜಾರಿಗೆ ತರುವ ಕೆಲಸ ಮಾಡಬೇಕು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.