ಮುಖ್ಯಮಂತ್ರಿ-ಶಾಸಕರ ನಡುವಿನ ಕಂದಕ ಮುಚ್ಚುವ ಕ್ರಮ


Team Udayavani, Oct 2, 2021, 6:00 AM IST

ಮುಖ್ಯಮಂತ್ರಿ-ಶಾಸಕರ ನಡುವಿನ ಕಂದಕ ಮುಚ್ಚುವ ಕ್ರಮ

ಸಾಮಾನ್ಯವಾಗಿ ಅಧಿಕಾರಕ್ಕೇರಿದ ಮೇಲೆ ಮುಖ್ಯಮಂತ್ರಿಗಳು ಶಾಸಕರಿಗೆ ಲಭ್ಯವಾಗುವುದಿಲ್ಲ ಎನ್ನುವ ಮಾತು ರಾಜಕೀಯ ಪಡಸಾಲೆ ಯಲ್ಲಿ ಆಗಿಂದಾಗ್ಗೆ ಕೇಳಿಬರುತ್ತದೆ. ಆದರೆ ಇಂಥದ್ದೊಂದು ಆರೋಪ ವನ್ನು ಹೊತ್ತುಕೊಳ್ಳದಿರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ ಹಾಗಿದೆ. ಹೀಗಾಗಿಯೇ ಶಾಸಕರ ಭಾವನೆಗಳನ್ನು ಅರಿತು ಅವರ ಭೇಟಿಗಾಗಿಯೇ ವಾರದಲ್ಲಿ ಒಂದು ದಿನ (ಪ್ರತೀ ಗುರುವಾರ) ಸಮಯ ಮೀಸಲಿಡುವ ಮೂಲಕ ತಾವು ಯಾರಿಂದಲೂ ಅಂತರ ಕಾಪಾಡಿಕೊಳ್ಳುತ್ತಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಇದು ಅತ್ಯಂತ ಅಗತ್ಯವಾದ ಕ್ರಮವಾಗಿದೆ. ರಾಜ ಕೀಯವಾಗಿಯೂ ಆಡಳಿತಾತ್ಮಕವಾಗಿಯೂ ಇಂಥದ್ದೊಂದು ಸಮನ್ವಯದ ಅಗತ್ಯವಿದೆ. ಈ ಕ್ರಮದ ಮೂಲಕ ಬೊಮ್ಮಾಯಿ ಅವರು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದಾರೆ. ಮೊದಲನೆಯದಾಗಿ ಆಡಳಿತಾತ್ಮಕವಾಗಿ ಶಾಸಕ ರನ್ನು ಮಾತನಾಡಿದರೆ, ಅವರವರ ಕ್ಷೇತ್ರದ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದು. ಇದರಿಂದ ಸರಕಾರ ಮತ್ತು ಶಾಸಕರ ನಡುವೆ ಉತ್ತಮ ಬಾಂಧವ್ಯ ಏರ್ಪಡುತ್ತದೆ. ರಾಜಕೀಯವಾಗಿಯೂ ಸಹ ಗುಂಪುಗಾರಿಕೆ ಆರಂಭವಾಗುವುದನ್ನು ತಪ್ಪಿಸಲು ಇಂಥ ಪರಸ್ಪರ ಮಾತುಕತೆ ನೆರವಾಗುತ್ತದೆ.

ಇದನ್ನೂ ಓದಿ:ವೃದ್ಧಾಶ್ರಮಗಳಿಗೆ ನೀಡುವ ಅನುದಾನ 15 ಲಕ್ಷ ರೂ.ಗೆ ಏರಿಕೆ: ಸಿಎಂ

ತಮ್ಮದೇ ಪಕ್ಷದ ಶಾಸಕರು ತಮಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಸಿಗುವುದಿಲ್ಲ ಎಂದು ಬಹಳ ಸಮಯದಿಂದ ಹಲವು ಮುಖ್ಯಮಂತ್ರಿಗಳ ಕಾಲದಿಂದಲೂ ವ್ಯಕ್ತವಾದ ಆರೋಪಗಳು. ಶಾಸಕರು ಮತ್ತು ಮುಖ್ಯಮಂತ್ರಿಯ ನಡುವೆ ಸಾಕಷ್ಟು ಅಂತರ ಇದೆ ಎಂಬ ಸಂದೇಶದಿಂದಲೇ ಹಲವು ಸರಕಾರಗಳು ಅಸ್ಥಿರಗೊಂಡದ್ದಿದೆ. ಮುಖ್ಯಮಂತ್ರಿಯಾದವರು ತಮ್ಮದೇ ಪಕ್ಷದ ಶಾಸಕರ ಭೇಟಿಗೆ ಉದ್ದೇಶ ಪೂರ್ವಕವಾಗಿ ನಿರಾಕರಿಸುವ ಸಂದರ್ಭ ಇಲ್ಲದಿದ್ದರೂ ಕೆಲಸದ ಒತ್ತಡದಿಂದಲೋ ಇನ್ಯಾವುದೋ ಕಾರಣದಿಂದ ಪ್ರತಿಯೊಬ್ಬರಿಗೆ ವೈಯಕ್ತಿಕವಾಗಿ ಸ್ಪಂದಿಸಲು ಸಾಧ್ಯವಾಗದಿರಬಹುದು. ಆದರೆ ಅದು ಮುಖ್ಯಮಂತ್ರಿ ಮತ್ತು ಆಡಳಿತ ಪಕ್ಷದ ಶಾಸಕರ ನಡುವೆ ಅಂತರವನ್ನು ಹೆಚ್ಚಿಸುತ್ತದೆ. ನಾಯಕತ್ವದ ಬಗ್ಗೆ ಶಾಸಕರಿಗೆ ಅಸಮಾಧಾನವೂ ಹೆಚ್ಚಾ ಗಲು ಕಾರಣವಾಗುತ್ತದೆ. ಅದರ ಪರಿಣಾಮವೆ. ಗುಂಪುಗಾರಿಕೆ, ಬಂಡಾಯ, ಹೈಕಮಾಂಡ್‌ಗೆ ದೂರು ಎಲ್ಲವೂ ಆರಂಭವಾಗುತ್ತವೆ.

ಪ್ರಸ್ತುತ ಮುಖ್ಯಮಂತ್ರಿ ಕೈಗೊಂಡಿರುವ ಕ್ರಮ ಸ್ತುತ್ಯರ್ಹ. ವಿಶೇಷವಾಗಿ ಆಡಳಿತ ಪಕ್ಷದ ಶಾಸಕರಿಗೆ ಮುಕ್ತವಾಗಿ ಅವರ ಅಹ ವಾಲುಗಳನ್ನು ಹೇಳಿಕೊಳ್ಳಲು ಅವಕಾಶ ನೀಡಿ, ಸಾಧ್ಯವಾದರೆ ಸ್ಥಳ ದಲ್ಲಿಯೇ ಪರಿಹರಿಸುವ ಪ್ರಯತ್ನ ನಡೆಸಿ, ಈಗಿರುವ ಕೊರೊನಾ ಸಂಕಷ್ಟ ಕಾಲದ ಪರಿಸ್ಥಿತಿಯಲ್ಲಿ ತಮಗಿರುವ ಆರ್ಥಿಕ ಇತಿಮಿತಿಯಲ್ಲಿ ಶಾಸಕರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಈ ಮೂಲಕ ಶಾಸಕರ ವಿಶ್ವಾಸ ಗಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇವಲ ಆಡಳಿತ ಪಕ್ಷ ಮಾತ್ರವಲ್ಲ ಎಲ್ಲ ಪಕ್ಷಗಳ ಶಾಸಕರನ್ನು ಪರಿಗಣಿಸಿರುವುದು ಉತ್ತಮ ಬೆಳವಣಿಗೆ. ಮುುಖ್ಯಮಂತ್ರಿಗಳ ಈ ಕಾರ್ಯಕ್ರಮವನ್ನು ಶಾಸಕರು ಹಾಗೂ ಸಂಸದರು ಸದುಪಯೋಗ ಪಡಿಸಿಕೊಂಡು ತಮ್ಮ ಕ್ಷೇತ್ರಗಳ ಸಮಸ್ಯೆ ಗಳಿಗೆ ಪರಿಹಾರ ಕಂಡುಕೊಂಡು ನಾಡಿನ ಅಭಿವೃದ್ಧಿಗೆ ಶ್ರಮಿಸಿದಾಗ ಮಾತ್ರ ಈ ಪ್ರಯತ್ನಕ್ಕೆ ಅರ್ಥ ಬರುತ್ತದೆ. ಮುಖ್ಯಮಂತ್ರಿ ಸಹ ಈ ಕ್ರಮ ವನ್ನು ಪಕ್ಷಾತೀತವಾಗಿ ಹಾಗೂ ನಿರಂತರವಾಗಿ ಮುಂದುವರಿಸಬೇಕು.

 

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.