ಹೆಚ್ಚುವರಿ ಹುದ್ದೆ, ಅನಗತ್ಯ ವೆಚ್ಚಕ್ಕೆ ಬ್ರೇಕ್‌: ಸಮಯೋಚಿತ ನಿರ್ಧಾರ


Team Udayavani, Oct 12, 2022, 6:00 AM IST

ಹೆಚ್ಚುವರಿ ಹುದ್ದೆ, ಅನಗತ್ಯ ವೆಚ್ಚಕ್ಕೆ ಬ್ರೇಕ್‌: ಸಮಯೋಚಿತ ನಿರ್ಧಾರ

ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಅನಗತ್ಯ ಹುದ್ದೆ ಹಾಗೂ ವೆಚ್ಚ ಕಡಿತಕ್ಕಾಗಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ 2000 ಹುದ್ದೆ ರದ್ದುಗೊಳಿಸಲು ಸಂಪುಟ ಉಪ ಸಮಿತಿ ಕೈಗೊಂಡಿರುವ ತೀರ್ಮಾನ ಸ್ವಾಗತಾರ್ಹ.

ಮೂರು ಇಲಾಖೆಗಳಲ್ಲಿ ವರ್ಷಗಳ ಕಾಲ ಅನಗತ್ಯ ಹಾಗೂ ಹೆಚ್ಚುವರಿ ಹುದ್ದೆಗಳಿಂದ ಆರ್ಥಿಕವಾಗಿ ಸರಕಾರಕ್ಕೆ ದೊಡ್ಡ ಹೊರೆಯೇ ಆಗಿತ್ತು. ಸಂಪುಟ ಉಪ ಸಮಿತಿ ರಚಿಸಿ ಸಾಕಷ್ಟು ದಿನಗಳಾದರೂ ಹಲವು ಸಭೆಗಳ ಅನಂತರ ಅಂತಿಮವಾಗಿ ಉತ್ತಮ ತೀರ್ಮಾನ ಕೈಗೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಸರಕಾರಕ್ಕೆ ಹೊರೆಯಾಗಿ ಪರಿಣಮಿಸಿರುವ ಕೃಷಿ ಇಲಾಖೆ ವ್ಯಾಪ್ತಿಯ ಮೂರು ನಿಗಮಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆ.

ಅಧಿಕಾರಕ್ಕೆ ಬಂದವರು ರಾಜಕೀಯ ಕಾರಣಗಳಿಗೆ ನಿಗಮ -ಮಂಡಳಿ ರಚಿಸಿ ವಾರ್ಷಿಕವಾಗಿ ನೂರಾರು ಕೋ. ರೂ.ಗಳನ್ನು ಅವುಗಳ ನಿರ್ವಹಣೆಗಾಗಿಯೇ ವೆಚ್ಚ ಮಾಡಲಾಗುತ್ತಿದೆ. ಆದರೆ ಎಷ್ಟೋ ನಿಗಮಗಳಿಂದ ಸರಕಾರಕ್ಕೆ ಯಾವುದೇ ರೀತಿಯ ಪ್ರಯೋಜನ ಆಗುತ್ತಿಲ್ಲ. ಜತೆಗೆ ನಿಗಮ ರಚನೆಯ ಹಿಂದಿನ ಉದ್ದೇಶವೂ ಸಾಕಾರವಾಗುತ್ತಿಲ್ಲ. ಸಿಎಜಿ ವರದಿಯಲ್ಲೂ ಸಾಕಷ್ಟು ನಿಗಮ ಮಂಡಳಿಗಳು ಸರಕಾರಕ್ಕೆ ಆರ್ಥಿಕವಾಗಿ ಬಹುದೊಡ್ಡ ಹೊರೆಯಾಗಿರುವ ಬಗ್ಗೆ ಪ್ರಸ್ತಾವಿಸಲಾಗಿತ್ತು.

ಮೂರು ಇಲಾಖೆ ಹೊರತುಪಡಿಸಿ ರಾಜ್ಯದ 20 ಕ್ಕೂ ಹೆಚ್ಚು ಇಲಾಖೆಗಳಲ್ಲಿ ಇದೇ ರೀತಿ ಅನಗತ್ಯ ಹಾಗೂ ಹೆಚ್ಚುವರಿ ಹುದ್ದೆಗಳನ್ನು ಸೃಜಿಸಲಾಗಿದೆ. ಆ ಬಗ್ಗೆಯೂ ಸರಕಾರ ತೀರ್ಮಾನ ಕೈಗೊಳ್ಳಬೇಕು. ಉಪ ಸಮಿತಿಯು ಕೆಲವೊಂದು ಇಲಾಖೆಗಳ ಹುದ್ದೆ ಕಡಿತದ ಬಗ್ಗೆ ಸಲಹೆ ಕೇಳಿದೆ. ಇದೇ ರೀತಿ ರಾಜ್ಯದ ಎಲ್ಲ ಇಲಾಖೆಗಳಲ್ಲಿಯೂ ಇರುವ ಅನಗತ್ಯ ಹಾಗೂ ಹೆಚ್ಚುವರಿ ಹುದ್ದೆ ರದ್ದು ಮಾಡುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ.

ಇದರ ಜತೆಗೆ ಇಲಾಖೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಾವಿರಾರು ಸಿಬ್ಬಂದಿ ನೇಮಿಸಿಕೊಳ್ಳುವ ಚಾಳಿ ಆರಂಭವಾಗಿದೆ. ವಿಧಾನಸೌಧ- ವಿಕಾಸಸೌಧ, ಬಹುಮಹಡಿ ಕಟ್ಟಡ, ಸಚಿವಾಲಯ, ವಿಧಾನಸಭೆ ಹಾಗೂ ವಿಧಾನಪರಿಷತ್‌ ಸಚಿವಾಲಯ, ಶಾಸಕರ ಭವನ ಇಲ್ಲಿ ಸಾವಿರಾರು ಮಂದಿ ಅನಗತ್ಯವಾಗಿ ಹೊರಗುತ್ತಿಗೆಯಲ್ಲಿ ನೇಮಕಗೊಂಡು ಮಾಡಲು ಕೆಲಸ ಇಲ್ಲದಂತಾಗಿದೆ. ಇದರ ಬಗ್ಗೆ ಸರಕಾರ ತತ್‌ಕ್ಷಣ ಗಮನಹರಿಸಬೇಕು.

ವಿಧಾನಸೌಧ- ವಿಕಾಸಸೌಧ, ಸಚಿವರ ನಿವಾಸ, ಶಾಸಕರ ಭವನ ನವೀಕರಣ, ಪೀಠೊಪಕರಣ ಬದಲಾವಣೆ, ಹೊರಗುತ್ತಿಗೆಯ ಸಿಬಂದಿ ವಾಹನ ಖರೀದಿ ಹಾಗೂ ಬಾಡಿಗೆಗೆ ವಾಹನ ಪಡೆಯುವುದು ಸರಕಾರಕ್ಕೆ ಅತೀ ದೊಡ್ಡ ಹೊರೆಯಾಗಿದೆ. ಕೋಟ್ಯಂತರ ರೂ. ವಾರ್ಷಿಕವಾಗಿ ಇದಕ್ಕೆ ವ್ಯಯಿಸಲಾಗುತ್ತಿದೆ. ಇದರ ಬಗ್ಗೆ ಸರಕಾರ ಅಗತ್ಯ ಗಮನಹರಿಸಬೇಕಾಗಿದೆ.

ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಿರುವ ಅನಗತ್ಯ ಹುದ್ದೆ ಹಾಗೂ ವೆಚ್ಚಕ್ಕೆ ಕಡಿವಾಣ ಹಾಕಲೇಬೇಕಾಗಿದೆ. ಇಲ್ಲದಿದ್ದರೆ ಆರ್ಥಿಕ ಪರಿಸ್ಥಿತಿ ಸುಧಾರಣೆ ಸಾಧ್ಯವೇ ಇಲ್ಲ. ಸಂಪುಟ ಉಪ ಸಮಿತಿ ಕೈಗೊಂಡಿರುವ ಮಹತ್ವದ ತೀರ್ಮಾನದ ಜತೆಗೆ ಮುಂದಿನ ದಿನಗಳಲ್ಲಿ ಇತರ ಇಲಾಖೆಗಳ ಬಗ್ಗೆಯೂ ವರದಿ ತರಿಸಿಕೊಂಡು ಹುದ್ದೆ ಕಡಿತ ಹಾಗೂ ಅನಗತ್ಯ ವೆಚ್ಚ ಕಡಿತಕ್ಕೆ ಕ್ರಮ ಕೈಗೊಳ್ಳಲೇಬೇಕಾಗಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.