ಅಫ್ಘಾನ್‌ ಬೆಳವಣಿಗೆ: ವಿಶ್ವಶಾಂತಿಗೆ ಅಪಾಯ ಕಟ್ಟಿಟ್ಟ ಬುತ್ತಿ


Team Udayavani, Sep 1, 2021, 6:10 AM IST

ಅಫ್ಘಾನ್‌ ಬೆಳವಣಿಗೆ: ವಿಶ್ವಶಾಂತಿಗೆ ಅಪಾಯ ಕಟ್ಟಿಟ್ಟ ಬುತ್ತಿ

ಅಫ್ಘಾನಿಸ್ಥಾನದಲ್ಲಿ ನೆಲೆಯೂರಿದ್ದ ಮೂಲಭೂತವಾದಿಗಳು ಮತ್ತು ಭಯೋತ್ಪಾದಕರನ್ನು ನಿಗ್ರಹಿಸಿ ದೇಶದಲ್ಲಿ ಶಾಂತಿ ಮತ್ತು ಪ್ರಜಾಸತ್ತಾತ್ಮಕ ಸ್ಥಿರ ಸರಕಾರವನ್ನು ಪ್ರತಿಷ್ಠಾಪಿಸುವ ಮೂಲಕ ಅಲ್ಲಿನ ಜನರನ್ನು ವಿಶ್ವದ ಮುಖ್ಯವಾಹಿನಿಗೆ ಕರೆತರುವ ಮಹಾನ್‌ ಸಂಕಲ್ಪದೊಂದಿಗೆ 20 ವರ್ಷ ಗಳ ಹಿಂದೆ ಅಫ್ಘಾನ್‌ ನೆಲದಲ್ಲಿ ಕಾಲೂರಿದ್ದ ಅಮೆರಿಕ ಪಡೆಗಳು ಇದೀಗ ಸಂಪೂರ್ಣವಾಗಿ ಸ್ವದೇಶಕ್ಕೆ ವಾಪಸಾಗಿವೆ. ಈ ವರ್ಷದ ಆರಂಭದಲ್ಲಿ ತಾಲಿಬಾನಿಗಳೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮಾಡಿಕೊಂ ಡಿದ್ದ ಒಪ್ಪಂದದಂತೆ ಅಮೆರಿಕ ಸೇನೆಯ ಕೊನೆಯ ತುಕಡಿ ಮಂಗಳ ವಾರ ಕಾಬೂಲ್‌ ವಿಮಾನ ನಿಲ್ದಾಣದಿಂದ ಸ್ವದೇಶದತ್ತ ಪ್ರಯಾಣ ಬೆಳೆಸುವುದರೊಂದಿಗೆ ಕಳೆದೆರಡು ದಶಕಗಳಿಂದ ಅಮೆರಿಕ ಸಹಿತ ನ್ಯಾಟೋ ಪಡೆಗಳು ಅಫ್ಘಾನಿಸ್ಥಾನದಲ್ಲಿ ಭಯೋತ್ಪಾದಕರ ವಿರುದ್ಧ ನಡೆ ಸಿದ ನಿರಂತರ ಯುದ್ಧ ಅಂತ್ಯಗೊಂಡಿದೆ. ಆದರೆ ಅಮೆರಿಕದ ಈ ನಡೆ ರಕ್ಷಣ ಮತ್ತು ವಿದೇಶಾಂಗ ಕಾರ್ಯತಂತ್ರದಲ್ಲಿನ ವೈಫ‌ಲ್ಯ ಎಂದು ಸಾರ್ವತ್ರಿಕ ಟೀಕೆಗೆ ತುತ್ತಾಗಿದೆ. ಇದು ಅಮೆರಿಕದ ಪ್ರತಿಷ್ಠೆಗೆ ಕುಂದು ಉಂಟುಮಾಡಿರುವುದೇ ಅಲ್ಲದೆ “ಜಾಗತಿಕ ದುರಂತ’ ಎಂಬ ಅಪ ಖ್ಯಾತಿಗೂ ಗುರಿಯಾಗಿದೆ. ಅಮೆರಿಕ ಪಡೆಗಳು ಅಫ್ಘಾನ್‌ನಿಂದ ಸಂಪೂ ರ್ಣವಾಗಿ ವಾಪಸಾಗುತ್ತಿರುವುದನ್ನು ಅಧ್ಯಕ್ಷ  ಬೈಡೆನ್‌ ಖಚಿತ ಪಡಿಸು ತ್ತಿದ್ದಂತೆಯೇ ದೇಶದ ಒಂದೊಂದೇ ಪ್ರಾಂತ್ಯಗಳನ್ನು ತನ್ನ ವಶಕ್ಕೆ ತೆಗೆದು ಕೊಳ್ಳಲಾರಂಭಿಸಿದ ತಾಲಿಬಾನಿ ಪಡೆಗಳು  ಕಾಬೂಲ್‌ ಪ್ರವೇಶಿಸಿದವು.

2001ರ ಸೆ. 11ರಂದು ನ್ಯೂಯಾರ್ಕ್‌ನ ಅವಳಿ ಕಟ್ಟಡಗಳನ್ನು ಅಲ್‌ಕಾಯಿದಾ ಉಗ್ರರು ಧ್ವಂಸಗೊಳಿಸಿದ ಬಳಿಕ ಅಮೆರಿಕ ಈ ಉಗ್ರ ಸಂಘ ಟನೆಯ ವಿರುದ್ಧ ಸಮರ ಸಾರಿತು.ಈ ಉಗ್ರರಿಗೆ ತಾಲಿಬಾನಿಗಳು ಬೆಂಬಲ ನೀಡುತ್ತಿರುವುದನ್ನು ಖಚಿತಪಡಿಸಿಕೊಂಡ ಅಮೆರಿಕ  ಅಫ್ಘಾನಿಸ್ಥಾನದ ವಿರುದ್ಧ ಯುದ್ಧ ಘೋಷಿಸಿ ಅಲ್‌ ಕಾಯಿದಾ ಸಹಿತ ಉಗ್ರಗಾಮಿ ಸಂಘಟನೆಗಳನ್ನು ಮಟ್ಟ ಹಾಕುವಲ್ಲಿ ಯಶಸ್ವಿಯಾಗಿ ಅಫ್ಘಾನಿಸ್ಥಾನದಲ್ಲಿ ತನ್ನ ಬೆಂಬಲಿತ ಸ್ಥಳೀಯ ಸರಕಾರವನ್ನು ಪ್ರತಿಷ್ಠಾಪಿ ಸಿತು. ಇದಾದ ಬಳಿಕ ಕಳೆದ 20 ವರ್ಷಗಳ ಅವಧಿಯಲ್ಲಿ ಅಮೆರಿಕ ಸಹಿತ ನ್ಯಾಟೋ ಪಡೆಗಳನ್ನು ಅಲ್ಲಿನ ಭದ್ರತೆಗೆ ನಿಯೋಜಿಸಲಾಗಿತ್ತು. ಈ ಎಲ್ಲ ಹೋರಾಟದಲ್ಲಿ ನ್ಯಾಟೋ ಪಡೆಗಳ ಸೈನಿಕರು ಮತ್ತು ನಾಗರಿಕರ ಸಹಿತ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡರು. ಇದರ ನಡುವೆ  ಭಾರತ ಆದಿಯಾಗಿ ಹಲವು ದೇಶಗಳು ಹೂಡಿಕೆ ಮಾಡಿ ಅಫ್ಘಾನ್‌ನ ಪುನುರುತ್ಥಾನಕ್ಕೆ ನೆರವು ನೀಡಿದವು.

ಇನ್ನೇನು ಎಲ್ಲವೂ ಸಹಜ ಸ್ಥಿತಿಗೆ ಬರುತ್ತಿದೆ ಎನ್ನುವಷ್ಟರಲ್ಲಿ ಅಮೆರಿಕ ತಾಲಿಬಾನಿ ಮುಖಂಡರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿ ತನ್ನ ಪಡೆಗಳ ವಾಪಸಾತಿ ಘೋಷಿಸಿತು. ಪರಿಣಾಮ ತಾಲಿಬಾನಿಗಳು ಮತ್ತೆ ಅಫ್ಘಾನ್‌ನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಇದರೊಂದಿಗೆ ಅಫ್ಘಾನಿಸ್ಥಾನದ ಅಭಿವೃದ್ಧಿಗಾಗಿ ಕೈಗೊಂಡ ಕ್ರಮಗಳೆಲ್ಲವೂ  ನೀರ ಮೇಲಣ ಹೋಮ ದಂತಾಗಿದೆ. ರಕ್ತದೋಕುಳಿ ಹರಿಯುತ್ತಿದ್ದರೂ ವಿಶ್ವ ಸಂಸ್ಥೆ ಮಾತ್ರ ಹೇಳಿಕೆ ಗಳಿಗೆ ಸೀಮಿತವಾಗಿದೆ. ಸದ್ಯದ ಸ್ಥಿತಿಯಲ್ಲಿ ಯಾವುದೇ ದೇಶ ಅಪಾಯ ವನ್ನು ಆಹ್ವಾನಿಸದಿರುವ ತಾತ್ಕಾಲಿಕ ಪರಿಹಾರ ಕ್ರಮಕ್ಕೆ ಜೋತು ಬಿದ್ದಿ ದೆಯೇ ಹೊರತು ದೂರಗಾಮಿ ಪರಿಣಾಮದ ಬಗೆಗೆ ಚಿಂತಿಸುತ್ತಿಲ್ಲ. ತಾಲಿಬಾನಿಗಳ ಸಹಿತ ಎಲ್ಲ ಮೂಲಭೂತವಾದಿಗಳ ನಿಗ್ರಹಕ್ಕೆ ಇನ್ನಾ ದರೂ ಜಾಗತಿಕ ಸಮುದಾಯ ಕೈಜೋಡಿಸಲೇಬೇಕಿದೆ. ಇಲ್ಲವಾದಲ್ಲಿ ಇಂದಲ್ಲ ನಾಳೆ ಜಾಗತಿಕ ಶಾಂತಿಗೆ ಉಗ್ರರು ಭಂಗ ತರುವುದು ನಿಶ್ಚಿತ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.