Agriculture; ವೃತ್ತಿಪರ ಕೃಷಿಕರನ್ನು ರೂಪಿಸುವ ಯತ್ನ ಶ್ಲಾಘನೀಯ


Team Udayavani, Nov 14, 2023, 6:07 AM IST

1-saddsd

ನಮ್ಮ ಶಿಕ್ಷಣ ವ್ಯವಸ್ಥೆ, ಪಠ್ಯಕ್ರಮಗಳು ನಮ್ಮನ್ನು ದ್ವಿತೀಯ ಮತ್ತು ತೃತೀಯ ವಲಯದ ಔದ್ಯೋಗಿಕ ಪರಿಸರಕ್ಕೆ ತಳ್ಳುತ್ತಿವೆ, ಪ್ರಾಥಮಿಕ ವಲಯ ವಾಗಿರುವ ಕೃಷಿಯಿಂದ ದೂರ ಮಾಡುತ್ತಿವೆ ಎಂಬ ಸ್ಥಿತಿಯ ನಡುವೆಯೇ ಇದೀಗ ರಾಜ್ಯ ಸರ ಕಾ ರ ಪ್ರೌಢಶಾಲಾ ಮಕ್ಕಳಿಗೆ ಕೃಷಿ ಪಾಠ ಮಾಡಲು ಮುಂದಾಗಿ ಗಮನ ಸೆಳೆದಿದೆ. ಈ ನಿಟ್ಟಿನಲ್ಲಿ ಸರ ಕಾರದ ಹೆಜ್ಜೆ ನಿಜಕ್ಕೂ ಸ್ವಾಗತಾರ್ಹ.

ಶಿಕ್ಷಣದಿಂದ ಮೌಲ್ಯಗಳು, ವೈಜ್ಞಾನಿಕ ಮನೋಭಾವ, ಚಿಂತನಶೀಲತೆ, ಜ್ಞಾನ ಸೃಜಿಸಬೇಕು ಎಂಬ ಮೂಲ ಪರಿಕಲ್ಪನೆಗಳಿದ್ದರೂ ಸಹ ಉದ್ಯೋಗವೇ ನಮ್ಮಲ್ಲಿ ಶಿಕ್ಷಣದ ಮಹತ್ವ, ಪ್ರಭಾವ ಮತ್ತು ಯಶಸ್ಸನ್ನು ಅಳೆಯುವ ಮಾನದಂಡವಾಗಿ ಬದಲಾಗಿದೆ. ಕಳೆದ ಐದಾರು ದಶಕಗಳಿಂದ ಆಳವಾಗಿ ಬೇರೂರಿರುವ ಶಿಕ್ಷಣದ ಈ ಯಶಸ್ಸಿನ ಮಾಪಕದಲ್ಲಿ ಕೃಷಿಗೆ ಸ್ಥಾನವೇ ಇರಲಿಲ್ಲ. ಓದಿ ಕೃಷಿಕನಾಗುವುದು ಎಂದರೆ ಶಿಕ್ಷಣದ ವೈಫ‌ಲ್ಯ ಎಂಬ ರೀತಿಯ ಮೂಢನಂಬಿಕೆಯೇ ಸೃಷ್ಟಿಯಾಗಿದೆ. ಇಂತಹ ಕಾಲಘಟ್ಟ ದಲ್ಲಿ ಕೃಷಿಯನ್ನು ಶಿಕ್ಷಣದ ವ್ಯಾಪ್ತಿಗೆ ತರುವ ಮೂಲಕ ವೃತ್ತಿಪರ ಕೃಷಿಕರನ್ನು ರೂಪಿಸಲು ಸರಕಾರ ಮುಂದಾಗುತ್ತಿರುವುದು ಪ್ರಶಂಸನೀಯ.

ಹೇಗೆ ಸೇವಾ ಮತ್ತು ಉತ್ಪಾದನಾ ವಲಯದಲ್ಲಿ ವೃತ್ತಿಪರತೆ ತರುವಲ್ಲಿ ಶಿಕ್ಷಣ ಮಹತ್ವದ ಪಾತ್ರ ನಿರ್ವಹಿಸುತ್ತದೆಯೋ ಅದೇ ರೀತಿ ಕೃಷಿಯಲ್ಲಿಯೂ ವೃತ್ತಿಪರತೆ ಅಗತ್ಯವನ್ನು ಮನಗಂಡಿರುವ ಸರಕಾರ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನಿಡಲು ಸಿದ್ಧತೆ ನಡೆಸಿದೆ.

ಆಧುನಿಕ ಕಾಲದಲ್ಲಿ “ಕೃಷಿಕ’ನ ವ್ಯಾಖ್ಯಾನ ಬದಲಾಗಿದೆ. ಓರ್ವ ಕೃಷಿಕನಿಗೆ ಸಾಂಪ್ರದಾಯಿಕ ಕೃಷಿಯ ಅನುಭವದ ಜತೆಗೆ ನೀರಿನ ನಿರ್ವಹಣೆ, ಮಣ್ಣಿನ ಪೌಷ್ಟಿಕಾಂಶ, ಯಂತ್ರೋಪಕರಣಗಳ ಬಳಕೆ, ಬಿತ್ತನೆ, ಗೊಬ್ಬರದ ಬಳಕೆ, ಹವಾಮಾನದ ಮಾಹಿತಿ ಮತ್ತು ಹವಾಮಾನ ವೈಪರೀತ್ಯದ ಆಗುಹೋಗುಗಳ ಜತೆಗೆ ಮಾರುಕಟ್ಟೆಯ ಅರಿವು ಅತಿ ಮುಖ್ಯವಾಗಿದೆ.

ಈ ಎಲ್ಲ ಅಂಶಗಳನ್ನು ಗಮನಿಸಿ ರಾಜ್ಯದ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ವೃತ್ತಿ ಶಿಕ್ಷಣ ಕೌಶಲ ಚೌಕಟ್ಟು (ಎನ್‌.ಎಸ್‌.ಕ್ಯೂ.ಎಫ್.) ನಡಿ ತೃತೀಯ ಭಾಷೆಯ ಬದಲು ಕೃಷಿಯನ್ನು ಒಂದು ವಿಷಯವನ್ನಾಗಿ ಕಲಿಸಲು ಮುಂದಾಗುವ ಮೂಲಕ ರಾಜ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಕೃಷಿ ಶಿಕ್ಷಣದ ಮೊದಲ ಬೀಜ ಬಿತ್ತುವ ಪ್ರಯತ್ನ ನಡೆದಿದೆ.

ಈ ಹಿನ್ನೆಲೆಯಲ್ಲಿ ಕೃಷಿ ಪಠ್ಯ ಕ್ರಮನ್ನು ಒಂಬತ್ತರಿಂದ ಹನ್ನೆರಡನೇ ತರಗತಿ ತನಕ ಅಂದರೆ ನಾಲ್ಕು ವರ್ಷಗಳ ಕಾಲ ಬೋಧಿಸಿ ಪ್ರಮಾಣ ಪತ್ರವನ್ನು ನೀಡುವ ಸರ ಕಾ ರದ ಪ್ರಯತ್ನಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ವಾಗಿ ಹೆಚ್ಚಿನ ಮಹತ್ವವಿದೆ.

ಆಸಕ್ತ ಮಕ್ಕಳಿಗೆ ಕೈತೋಟ, ಸಾಂಪ್ರದಾಯಿಕ ಕೃಷಿಯ ಜತೆಗೆ ಆಧುನಿಕ ಕೃಷಿ ಪದ್ಧತಿ, ಕೃಷಿ ಪರಿಸರದ ಸುತ್ತಲಿನ ಬೆಳವಣಿಗೆಗಳ ಶಿಕ್ಷಣವು ದೊರೆಯುವಂತೆ ಆಗಲಿ. ಜತೆಗೆ ಮುಂದಿನ ದಿನಗಳಲ್ಲಿ ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಣೆ, ಕೋಳಿಸಾಕಣೆ ಮುಂತಾದ ಗ್ರಾಮೀಣ ಪರಿಸರ ಆಧಾರಿತ ಜೀವನೋಪಾಯ ಸಾಧ್ಯತೆ, ಅವಕಾಶಗಳ ಬಗೆಗಿನ ಶಿಕ್ಷಣವು ಸಹ ದೊರೆಯುವಂತಹ ಪಠ್ಯಕ್ರಮವನ್ನು ರೂಪಿಸುವತ್ತ ಸರಕಾರ ಚಿಂತನೆ ನಡೆಸಬೇಕು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.