Israel-Hamas War ನಿರಾಶ್ರಿತರಿಗೆ ನೆರವು: ಜಗತ್ತು ಮಾನವೀಯತೆ ಮೆರೆಯಲಿ

120ಕ್ಕೂ ಅಧಿಕ ನವಜಾತ ಶಿಶುಗಳು ಜೀವನ್ಮರಣ ಸ್ಥಿತಿಯಲ್ಲಿ..!!!

Team Udayavani, Oct 23, 2023, 6:25 AM IST

1-sasad

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಹದಿನೈದು ದಿನಗಳನ್ನು ಮೀರಿ ಮುಂದುವರಿದಿದೆ. ಗಾಜಾ ಪಟ್ಟಿಯಲ್ಲಿ ಈಗ ಎಲ್ಲಿ ನೋಡಿದರೂ ನೀರು, ಆಹಾರ, ವೈದ್ಯಕೀಯ ಅಗತ್ಯಗಳಿಗಾಗಿ ಹಾಹಾಕಾರ ಎದ್ದಿದೆ. ಅದಕ್ಕಾಗಿ ಶನಿವಾರದಿಂದ ಆರಂಭಿಕ ಪ್ರಯತ್ನಗಳನ್ನು ಮಾಡಲಾಗಿದೆ. ಮೊದಲ ಹಂತದಲ್ಲಿ 20 ಟ್ರಕ್‌ಗಳಲ್ಲಿ ನೀರು, ಆಹಾರ, ವೈದ್ಯಕೀಯ ನೆರವಿನ ಸಾಮಗ್ರಿಗಳನ್ನು ರಾಫಾ ಗಡಿ ಮೂಲಕ ನೀಡುವ ಮೊದಲ ಪ್ರಯತ್ನಗಳನ್ನು ಮಾಡಲಾಗಿದೆ.

ಅದಕ್ಕೆ ಪೂರಕವಾಗಿ ದೇಶದಿಂದಲೂ ಗಾಜಾ ಪಟ್ಟಿಯಲ್ಲಿ ನೊಂದವರ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಭಾರತ ಸರಕಾರ‌ ವಿಶೇಷ ನೆರವು ಕಳುಹಿಸಿಕೊಟ್ಟಿದೆ. ಒಟ್ಟು 6.5 ಟನ್‌ ವೈದ್ಯಕೀಯ ನೆರವು, 32 ಟನ್‌ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಡಲಾಗಿದೆ. ಜಗತ್ತಿನಲ್ಲಿ ನೊಂದವರ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಭಾರತ ಯಾವತ್ತೂ ಮುಂದಾಗುತ್ತಿರುವುದು ಸ್ತುತ್ಯರ್ಹದ ಕೆಲಸವೇ ಆಗಿದೆ. ಹಮಾಸ್‌ ಉಗ್ರರ ದಾಳಿಗೆ ತುತ್ತಾಗಿ ರುವ ಇಸ್ರೇಲ್‌ನಿಂದ ಭಾರತೀಯರನ್ನು ಕರೆದು ತರುವ “ಆಪರೇಷನ್‌ ಅಜಯ್‌’ ಕಾರ್ಯಾಚರಣೆಯಲ್ಲಿ 12 ಮಂದಿ ನೇಪಾಲ ಪ್ರಜೆಗಳನ್ನೂ ಕರೆತರ ಲಾಗಿದೆ. ಇಸ್ರೇಲ್‌ ಗಾಜಾ ಪಟ್ಟಿಯಲ್ಲಿ, ನೆರೆಯ ಲೆಬನಾನ್‌ನಲ್ಲಿ ಉಗ್ರರ ವಿರುದ್ಧ ಕೈಗೊಂಡಿರುವ ವೈಮಾನಿಕ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಕೆಲವು ರಾಷ್ಟ್ರಗಳು ನಮ್ಮ ದೇಶದ ಕ್ರಮವನ್ನು ಅನುಸರಿಸಬೇಕಾಗಿದೆ.

ಇನ್ನು ಯುದ್ಧದ ವಿಚಾರಕ್ಕೆ ಬರುವುದಿದ್ದರೆ, ಯಾವುದೇ ವಿಚಾರವನ್ನು ಬಗೆಹರಿಸುವುದಿದ್ದರೆ ಸಂಘರ್ಷ ಮತ್ತು ಕಾಳಗದ ಮೂಲಕ ಅಲ್ಲ ಎನ್ನುವುದನ್ನು ಇಸ್ರೇಲ್‌ ಹಾಗೂ ಹಮಾಸ್‌ ಉಗ್ರ ಸಂಘಟನೆ ಅರಿತುಕೊಳ್ಳಬೇಕಾಗಿದೆ. ಅ.7ರ ಬಳಿಕ ಇಸ್ರೇಲ್‌, ಗಾಜಾ ಪಟ್ಟಿ ಮತ್ತು ಪಶ್ಚಿಮ ದಂಡೆ ಪ್ರದೇಶದಲ್ಲಿ ವೈಮಾನಿಕ ದಾಳಿ, ಗುಂಡಿನ ಕಾಳಗದಲ್ಲಿ ಅಸುನೀಗಿದವರ ಸಂಖ್ಯೆ ಸರಿಸುಮಾರು 6,500ನ್ನು ದಾಟಿದೆ. ನೆಗಡಿ ಬಂದಿದೆ ಎಂದ ಮಾತ್ರಕ್ಕೆ ಆ ಸಮಸ್ಯೆಯನ್ನು ಶಾಶ್ವತವಾಗಿ ನಿವಾ ರಿಸಿ ಕೊಳ್ಳಬೇಕು ಎನ್ನುವ ರಭಸದಲ್ಲಿ ಮೂಗನ್ನೇ ಕೊಯ್ದುಕೊಳ್ಳಬಾರದು. ಗಾಜಾ ಪಟ್ಟಿ, ಪಶ್ಚಿಮ ಏಷ್ಯಾದಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವ ವಿಚಾರದಲ್ಲಿ ಯಾರೂ ಕೂಡ ಅವಸರದ ತೀರ್ಮಾನ ಕೈಗೊಳ್ಳಲೇಬಾರದು. ಅ.7ರಂದು ಹಮಾಸ್‌ ಉಗ್ರರು ಇಸ್ರೇಲ್‌ ಮೇಲೆ ನುಗ್ಗಿ ದಾಳಿ ನಡೆಸಿದ್ದರಿಂದ ಸದರಿ ಅಲ್ಲಿ, ಸರಣಿ ದಾಳಿ, ಗುಂಡು ಹಾರಾಟ, ಅಮಾಯಕರ ಸಾವಿನ ಪ್ರಕರಣಗಳು ನಡೆಯುತ್ತಿವೆ.

ಹಮಾಸ್‌ ಉಗ್ರರಿಗೆ ಇಸ್ರೇಲ್‌ ಮೇಲಿನ ದಾಳಿಗೆ ತಾಂತ್ರಿಕ ನೆರವು, ಶಸ್ತ್ರಾಸ್ತ್ರ ನೀಡಿ ಕುಮ್ಮಕ್ಕು ನೀಡಿದ್ದು ಯಾರೇ ಆಗಿರಲಿ ಖಂಡನೀಯ. ಅದರ ಪ್ರತೀಕೂಲ ಪರಿಣಾಮವನ್ನು ಉಣ್ಣುವುದು ಪಶ್ಚಿಮ ದಂಡೆ, ಗಾಜಾ ಪಟ್ಟಿ, ಇಸ್ರೇಲ್‌ನಲ್ಲಿ ಇರುವ ಸಾಮಾನ್ಯ ಜನರು. ವಿಶ್ವಸಂಸ್ಥೆ ರವಿವಾರ ನೀಡಿರುವ ಹೊಸ ಮಾಹಿತಿ ಪ್ರಕಾರ ಗಾಜಾ ಪಟ್ಟಿಯಲ್ಲಿ ಇರುವ ಹಲವು ಆಸ್ಪತ್ರೆಗಳ ಇನ್‌ಕ್ಯುಬೇಟರ್‌ಗಳಲ್ಲಿ ಇರುವ 120ಕ್ಕೂ ಅಧಿಕ ನವಜಾತ ಶಿಶುಗಳು ಜೀವನ್ಮರಣ ಸ್ಥಿತಿಯಲ್ಲಿವೆ.

ಸದ್ಯದ ಅಗತ್ಯವೇನೆಂದರೆ, ಸಂಘರ್ಷದಲ್ಲಿ ನಿರತಾಗಿರುವವರೆಲ್ಲರೂ ಕೂಡ ತಮ್ಮ ತಮ್ಮ ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು ನೊಂದವರಿಗೆ ನೀರು, ಆಹಾರ, ಔಷಧ ಪೂರೈಕೆ ಮಾಡುವತ್ತ ಮನಸ್ಸು ಮಾಡಬೇಕಾಗಿದೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.