ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಆರ್ಥಿಕತೆಗೆ ಬಲ ನೀಡಲಿ


Team Udayavani, Jun 22, 2020, 6:00 AM IST

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಆರ್ಥಿಕತೆಗೆ ಬಲ ನೀಡಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್‌-19ನಿಂದಾಗಿ ದೇಶದ ಆರ್ಥಿಕ ಸ್ಥಿತಿಯು ಬಿಕ್ಕಟ್ಟಿನಲ್ಲಿರುವ ಈ ಹೊತ್ತಿ ನಲ್ಲಿ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರು ದೇಶದ 41 ಕಲ್ಲಿದ್ದಲು ಬ್ಲಾಕ್‌ಗಳನ್ನು ವಾಣಿಜ್ಯ ಗಣಿಗಾರಿಕೆಗೆ ಮುಕ್ತವಾ ಗಿಸುವ ಎರಡು ಹಂತದ ಇ-ಹರಾಜು ಪ್ರಕ್ರಿಯೆಗೆ ಶುಕ್ರವಾರ ಚಾಲನೆ ನೀಡಿದ್ದಾರೆ.

ಅಲ್ಲದೇ ಇದು ದೇಶದ ಆರ್ಥಿಕ ಸ್ಥಿತಿ ಸುಧಾರಿಸಲು ಕೇಂದ್ರ ರೂಪಿಸಿರುವ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವೂ ಹೌದು.

ಕಳೆದ ಕೆಲವು ವರ್ಷಗಳಿಂದ ದೇಶದ ಕಲ್ಲಿದ್ದಲು ವಲಯ ತೀವ್ರ ಬಿಕ್ಕಟ್ಟನ್ನು ಎದುರಿಸಿದೆ. 1993ರಿಂದ 2010ರವರೆಗೆ ನಡೆದಿದ್ದು ಒಟ್ಟು 218 ಹರಾಜುಗಳಲ್ಲಿ ಕೇವಲ ನಾಲ್ಕನ್ನು ಹೊರತುಪಡಿಸಿ ಉಳಿದದನ್ನೆಲ್ಲ ರದ್ದುಗೊಳಿಸಿ ಆದೇಶ ಹೊರಡಿಸಿತ್ತು ಸುಪ್ರೀಂ ಕೋರ್ಟ್‌. ಈ ನಡೆಯ ಆರು ವರ್ಷಗಳ ಅನಂತರ ಈ ಪ್ರಕ್ರಿಯೆಗೆ ಚಾಲನೆ ದೊರಕಿದೆ.

ಕಲ್ಲಿದ್ದಲು ನಿಕ್ಷೇಪಗಳ ಈ ಹರಾಜಿನಿಂದ ಮುಂದಿನ 5ರಿಂದ 7 ವರ್ಷಗಳಲ್ಲಿ ದೇಶದಲ್ಲಿ 33 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ ಕೇಂದ್ರ ಸರಕಾರ. ಕಲ್ಲಿದ್ದಲು ನಿಕ್ಷೇಪಗಳು ಬಂಡವಾಳ ಆಕರ್ಷಣೆಯಲ್ಲಷ್ಟೇ ಅಲ್ಲದೇ, 2.8 ಲಕ್ಷ ಉದ್ಯೋಗಗಳನ್ನೂ ಸೃಷ್ಟಿಸಲಿವೆ ಎಂಬ ಭರವಸೆಯ ಮಾತನಾಡಿದ್ದಾರೆ ಪ್ರಧಾನಿಗಳು.

ಅತಿ ಹೆಚ್ಚು ಕಲ್ಲಿದ್ದಲು ನಿಕ್ಷೇಪವನ್ನು ಹೊಂದಿರುವ ರಾಷ್ಟ್ರಗಳಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದ್ದರೂ, ಪ್ರಪಂಚದ ಎರಡನೇ ಅತೀ ದೊಡ್ಡ ಕಲ್ಲಿದ್ದಲು ಉತ್ಪಾದಕ ರಾಷ್ಟ್ರವಾಗಿದ್ದರೂ ಸಹ, ಭಾರತವು ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳುವಂಥ ಸ್ಥಿತಿಯಲ್ಲಿದೆ. ಈ ವಿಚಾರವನ್ನೇ ಪ್ರಧಾನಿಗಳೂ ಪ್ರಸ್ತಾವಿಸಿದ್ದು, ಪ್ರಪಂಚದ ರಫ್ತುದಾರ ಸಮೂಹದಲ್ಲಿ ಭಾರತವೂ ಒಂದಾಗಬೇಕು ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಇದನ್ನೆಲ್ಲ ಗಮನಿಸಿದರೆ ವರ್ಷಗಳಿಂದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಾ, ಜಟಿಲ ಜಾಲದಲ್ಲಿ ಸಿಲುಕಿಬಿದ್ದಿದ್ದ ಕಲ್ಲಿದ್ದಲು ವಲಯಕ್ಕೆ ಮರುವೇಗ ನೀಡಲು ಕೇಂದ್ರ ಸರ್ವಸನ್ನದ್ಧವಾಗಿರುವ ಲಕ್ಷಣ ಕಾಣಿಸುತ್ತಿದೆ. ಆದರೆ, ಕೆಲ ವರ್ಷಗಳಿಂದ ವಾತಾವರಣ ರಕ್ಷಣೆಯ ವಿಚಾರದಲ್ಲಿ ಜಗತ್ತಿನಾದ್ಯಂತ ಜಾಗೃತಿ ಹೆಚ್ಚಾಗುತ್ತಿದ್ದು, ಕಲ್ಲಿದ್ದಲು ಗಣಿಗಾರಿಕೆ ಅಥವಾ ಥರ್ಮಲ್‌ ಪವರ್‌ ಪ್ಲ್ರಾಂಟ್‌ಗಳನ್ನೆಲ್ಲ ಋಣಾತ್ಮಕವಾಗಿಯೇ ನೋಡಲಾಗುತ್ತಿದೆ.

ಇದೇನೇ ಇದ್ದರೂ ಭಾರತದ ಮುಂದೆ ಈಗಲೂ ಹಲವು ಸವಾಲುಗಳಿವೆ. ಮುಖ್ಯವಾಗಿ ದೇಶದಲ್ಲಿನ ಬಹುತೇಕ ಕಲ್ಲಿದ್ದಲು ನಿಕ್ಷೇಪಗಳು ಜನನಿಬಿಡ ಪ್ರದೇಶಗಳಲ್ಲಿ ಅಥವಾ ಅರಣ್ಯ ಪ್ರದೇಶಗಳಲ್ಲಿವೆ. ಹೀಗಾಗಿ, ಸ್ಥಳೀಯ ಜನರ ಹಾಗೂ ಪ್ರಕೃತಿಯ ಹಿತದೃಷ್ಟಿಯನ್ನು ತಲೆಯಲ್ಲಿಟ್ಟುಕೊಂಡು ಮುಂದಡಿಯಿಡಬೇಕಾದ ಸವಾಲೂ ಇದೆ. ಇದೆಲ್ಲವನ್ನೂ ಸಕ್ಷಮವಾಗಿ ಎದುರಿಸಿ ಮುಂದಡಿ ಇಟ್ಟರೆ ನಿಸ್ಸಂಶಯವಾಗಿಯೂ ಆತ್ಮನಿರ್ಭರತೆಯ ದೃಷ್ಟಿಯಿಂದ ಇದೊಂದು ಮಹತ್ತರ ಹೆಜ್ಜೆಯಾಗುವುದಷ್ಟೇ ಅಲ್ಲದೇ, ಅರ್ಥವ್ಯವಸ್ಥೆಗೆ ಅತ್ಯಗತ್ಯವಾಗಿರುವ ಬಲವೂ ದೊರೆತಂತಾಗುತ್ತದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.