ಎಲ್ಲ ವರ್ಗದವರಿಗೂ ನೆರವು ಅಗತ್ಯ


Team Udayavani, Mar 28, 2020, 5:47 AM IST

ಎಲ್ಲ ವರ್ಗದವರಿಗೂ ನೆರವು ಅಗತ್ಯ

ಕೋವಿಡ್‌ 19 ವಿರುದ್ಧದ ಹೋರಾಟದಲ್ಲಿ ತಮ್ಮ ದೇಶವಾಸಿಗಳನ್ನು ಸಂಕಷ್ಟದಿಂದ ಪಾರುಮಾಡಲು ಅನೇಕ ದೇಶಗಳು ನಾನಾ ವಿಧದಲ್ಲಿ ಪ್ರಯತ್ನ ನಡೆಸಿವೆ. ಅದರಲ್ಲೂ ಮುಖ್ಯವಾಗಿ ಆರ್ಥಿಕ ಚೇತರಿಕೆಗಾಗಿ ವಿಶೇಷ ಪ್ಯಾಕೇಜುಗಳನ್ನು ಘೋಷಣೆ ಮಾಡುತ್ತಿವೆ. ಇಟಲಿ, ಜರ್ಮನಿ, ಚೀನಾ, ಫ್ರಾನ್ಸ್‌, ಸ್ವೀಡನ್‌, ಜಪಾನ್‌, ಬ್ರಿಟನ್‌ ಹಾಗೂ ಅಮೆರಿಕದ ನಂತರ ಈಗ ಭಾರತವೂ ತನ್ನ ದೇಶವಾಸಿಗಳ ಸಹಾಯಕ್ಕಾಗಿ 1.7 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್‌ ಘೋಷಿಸಿದೆ.

ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿಯಲ್ಲಿ ಈ ಬೃಹತ್‌ ಮೊತ್ತದ ಪರಿಹಾರ ಪ್ಯಾಕೇಜ್‌ ಘೋಷಿಸಲಾಗಿದ್ದು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ದೇಶದ ಕಡುಬಡವರನ್ನು ತಲುಪುವುದಕ್ಕಾಗಿ, ಯಾರೂ ಹಸಿವಿನಿಂದ ಇರಬಾರದು ಎಂಬ ಕಾರಣಕ್ಕಾಗಿ ಈ ಹೆಜ್ಜೆಗೆ ಮುಂದಾಗಿರುವುದಾಗಿ ಹೇಳಿದ್ದಾರೆ. ಮುಖ್ಯವಾಗಿ ಗ್ರಾಮೀಣರು ಹಾಗೂ ನಗರ ಪ್ರದೇಶದ ಬಡಜನರು ಸೇರಿದಂತೆ ಅನೇಕರ ಪಾಲಿಗೆ ಈ ರೀತಿಯ ಪ್ಯಾಕೇಜ್‌ ನಿಜಕ್ಕೂ ಅತ್ಯಗತ್ಯವಾಗಿತ್ತು.

ಕೋವಿಡ್‌ 19 ಸೋಂಕಿನಿಂದ ದೇಶವು ಸಂಪೂರ್ಣ ಮುಕ್ತವಾಗುವವರೆಗೂ ಬಹುತೇಕ ಆರ್ಥಿಕ ಗತಿವಿಧಿಗಳು ಚಲನೆ ಪಡೆಯುವುದಿಲ್ಲ. ಹೀಗಾಗಿ, ಈ ಪರಿಹಾರ ಪ್ಯಾಕೇಜ್‌ ಸ್ವಾಗತಾರ್ಹವಾದದ್ದು. ಆದರೆ, ಇದೇ ವೇಳೆಯಲ್ಲೇ ಸರ್ಕಾರ ಮಧ್ಯಮ ವರ್ಗ, ಮೇಲ್ಮಧ್ಯಮ ವರ್ಗದ ಸಹಾಯಕ್ಕೂ ಬೃಹತ್‌ ಪ್ಯಾಕೇಜ್‌ ಬಿಡುಗಡೆಗೊಳಿಸುವ ಅಗತ್ಯವಿದೆ. ಏಕೆಂದರೆ, ಕೋವಿಡ್‌ 19ದಿಂದ ಈ ವರ್ಗವೂ ತೀರಾ ಸಂಕಷ್ಟಕ್ಕೆ ಈಡಾಗಿದೆ. ಇನ್ನು ಉದ್ಯಮಿಗಳಿಗೂ ಅಪಾರ ನೆರವಿನ ಅಗತ್ಯವಿದೆ. ತೀರಾ ಆಗರ್ಭ ಶ್ರೀಮಂತರಿಗೆ ಮಾತ್ರ ಈ ಲಾಕ್‌ಡೌನ್‌ನಿಂದಾಗಿ ತೊಂದರೆ ಆಗಿಲ್ಲ ಎನ್ನುವುದು ಬಿಟ್ಟರೆ, ಎಲ್ಲಾ ವರ್ಗದ ಜನರೂ ಸಂಕಷ್ಟಕ್ಕೆ ಈಡಾಗಿದ್ದು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಆದಾಗ್ಯೂ, ಕಳೆದ ಕೆಲವು ಸಮಯದಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದೇಶಕ್ಕೆ, ಕೋವಿಡ್‌ 19ದಿಂದ ಬಲವಾದ ಪೆಟ್ಟು ಬೀಳಲಿರುವುದಂತೂ ನಿಜ. ಈ ಪರಿಸ್ಥಿತಿಯಲ್ಲಿ ಅತಿದೊಡ್ಡ ಪ್ರಮಾಣದ ಜನರ ಚಿಕಿತ್ಸೆಯನ್ನು ಸುನಿಶ್ಚಿತಗೊಳಿಸುವ ತುರ್ತೂ ಇರುವುದರಿಂದ ಸರ್ಕಾರದ ಖಜಾನೆಯ ಮೇಲೂ ಹೊರೆ ಬೀಳಲಿದೆ. ಆದರೆ, ಅನ್ಯ ದಾರಿಯಿಲ್ಲ. ಆಧುನಿಕ ಇತಿಹಾಸದಲ್ಲೇ ಅತಿದೊಡ್ಡ ಆರ್ಥಿಕ ಕುಸಿತ ಎಂದು ಕರೆಸಿಕೊಳ್ಳುವ 2008ರ ಆರ್ಥಿಕ ಬಿಕ್ಕಟ್ಟು ಹಾಗೂ 1929ರ ಮಹಾ ಆರ್ಥಿಕ ಪತನಕ್ಕಿಂತಲೂ ಅಧಿಕವಾಗಿ ಪತರಗುಟ್ಟಿಸುತ್ತಿರುವ ಈ ದೊಡ್ಡ ಬಿಕ್ಕಟ್ಟಿನ್ನಿಂದ ಆದಷ್ಟು ಬೇಗನೇ ಹೊರಗೆದ್ದು ಬರುವ ಸವಾಲು ಜಗತ್ತಿನ ಮುಂದೆ ಇದೆ.

ಬಹುತೇಕ ಎಲ್ಲಾ ದೇಶಗಳ ಸರ್ಕಾರಗಳೂ ಈ ಮೇಲ್ಕಂಡ ಅಂಶಗಳನ್ನು ಪರಿಗಣಿಸಿ ಪ್ಯಾಕೇಜ್‌ಗಳನ್ನು ಘೋಷಿಸಲಾರಂಭಿಸಿವೆ, ಗಮನಿಸಬೇಕಾದ ಸಂಗತಿಯೆಂದರೆ, ಅಲ್ಲೆ
ಲ್ಲ ಎಲ್ಲಾ ವರ್ಗದ ಜನರ ಚೇತರಿಕೆಯನ್ನೂ ಗಮನದಲ್ಲಿಟ್ಟುಕೊಂಡು ಪರಿಹಾರ ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತಿದೆ. ಭಾರತ ಕೂಡ ಈ ನಿಟ್ಟಿನಲ್ಲಿ ಶೀಘ್ರವೇ ನಿರ್ಣಯ ಕೈಗೊಳ್ಳಲಿ ಎಂದು ಆಶಿಸೋಣ.

ಇನ್ನು, ಇದೇ ವೇಳೆಯಲ್ಲೇ ನಮ್ಮ ಜನಪ್ರತಿನಿಧಿಗಳ ಜವಾಬ್ದಾರಿಯೂ ಅಧಿಕವಾಗಿದೆ. ಆದರೆ, ಬೆರಳೆಣಿಕೆಯ ಜನಪ್ರತಿನಿಧಿಗಳನ್ನು ಹೊರತುಪಡಿಸಿ ನಮ್ಮ ಬಹುತೇಕ ಶಾಸಕರು, ಸಚಿವರು, ಸಂಸದರುತಮಗೂ ಈ ಸಂಕಷ್ಟಕ್ಕೂ ಸಂಬಂಧವೇ ಇಲ್ಲವೇನೋ ಎಂಬಂತೆ ಇದ್ದುಬಿಟ್ಟಿದ್ದಾರೆ. ಗ್ರಾಮಪಂಚಾಯಿತಿ ಅಧ್ಯಕ್ಷರಿಂದ ಹಿಡಿದು, ಸಚಿವರವರೆಗೆ ಎಲ್ಲರೂ ಕರ್ತವ್ಯಪರರಾಗಲೇಬೇಕಾದ ಸಮಯವಿದು.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.