ಬಾಲಕಿಯರಿಗೆ ವಿಷಪ್ರಾಶನ: ಮುಸ್ಲಿಂ ಮೂಲಭೂತವಾದಿಗಳ ಪೈಶಾಚಿಕ ಕೃತ್ಯ


Team Udayavani, Feb 28, 2023, 6:00 AM IST

ಬಾಲಕಿಯರಿಗೆ ವಿಷಪ್ರಾಶನ: ಮುಸ್ಲಿಂ ಮೂಲಭೂತವಾದಿಗಳ ಪೈಶಾಚಿಕ ಕೃತ್ಯ

ಕಳೆದ ನಾಲ್ಕು ತಿಂಗಳುಗಳಿಂದೀಚೆಗೆ ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್‌ ವಿರೋಧಿ ಪ್ರತಿಭಟನೆಯನ್ನು ಮಣಿಸಲು ಅಲ್ಲಿನ ಸರಕಾರ ಶತಾಯಗತಾಯ ಪ್ರಯತ್ನ ನಡೆಸುತ್ತಿರುವಂತೆಯೇ ಇದೀಗ ಅಲ್ಲಿನ ಕಟ್ಟಾ ಮುಸ್ಲಿಂ ಮೂಲಭೂತವಾದಿಗಳು ಹೆಣ್ಣು ಮಕ್ಕಳನ್ನು ಭಯಭೀತರನ್ನಾಗಿಸುವ ಮೂಲಕ ಅವರನ್ನು ಶಾಲೆಗಳಿಂದ ದೂರವುಳಿಯುವಂತೆ ಮಾಡಲು ವಿಷ ಉಣಿಸುವಂತಹ ಅಮಾನವೀಯ ಮತ್ತು ಘನಘೋರ ಕೃತ್ಯಕ್ಕೆ ಕೈಹಾಕಿದ್ದಾರೆ. ಶಾಲೆಗಳಿಗೆ ತೆರಳುತ್ತಿರುವ ಬಾಲಕಿಯರಿಗೆ ಅವರ ಅರಿವಿಗೆ ಬಾರದಂತೆ ಅಲ್ಪಪ್ರಮಾಣದಲ್ಲಿ ವಿಷಪ್ರಾಶನ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದ್ದು ಇದರಿಂದ ನೂರಾರು ಸಂಖ್ಯೆಯಲ್ಲಿ ಬಾಲಕಿಯರು ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಮೂಲಭೂತವಾದಿಗಳ ಈ ಅಮಾನವೀಯ ನಡೆಗೆ ಇರಾನ್‌ ಮಾತ್ರವಲ್ಲದೆ ವಿಶ್ವಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಾಲಕಿಯರಿಗೆ ವಿಷಪ್ರಾಶನ ಮಾಡಲಾಗುತ್ತಿರುವ ಮಾಹಿತಿಯನ್ನು ಇರಾನ್‌ನ ಆರೋಗ್ಯ ಖಾತೆಯ ಉಪ ಸಚಿವರೇ ದೃಢಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ದೇಶದಲ್ಲಿ ಹೆಣ್ಣು ಮಕ್ಕಳಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ತೆರಳುವ ಹೆಣ್ಣುಮಕ್ಕಳು ಹಿಜಾಬ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ಕಳೆದ ವರ್ಷದ ನವೆಂಬರ್‌ನಿಂದೀಚೆಗೆ ದೇಶಾದ್ಯಂತ ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರ ಸಹಿತ ಹೆಣ್ಣುಮಕ್ಕಳು ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಜನರ ಪ್ರತಿಭಟನೆಯನ್ನು ಹತ್ತಿಕ್ಕಲು ಸರಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಪ್ರತಿಭಟನಕಾರರು ಮತ್ತು ಅವರ ಬೆಂಬಲಿಗರ ವಿರುದ್ಧ ನಿರ್ದಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವವರನ್ನು ಬಂಧಿಸಿ ಕಾರಾಗೃಹಗಳಲ್ಲಿ ಅವರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆಯಲ್ಲದೆ ಕೆಲವರು ಪೊಲೀಸರ ವಶದಲ್ಲಿರುವಾಗಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅಷ್ಟು ಮಾತ್ರವಲ್ಲದೆ ಇನ್ನೂ ಕೆಲವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ಮೂಲಕ ಸರಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಜನರು ಪಾಲ್ಗೊಳ್ಳದಂತೆ ಬೆದರಿಸುವ ತಂತ್ರವನ್ನೂ ಅನುಸರಿಸಲಾಗುತ್ತಿದೆ.

ಒಂದೆಡೆಯಿಂದ ಜನರು ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೂಂದೆಡೆ ಮುಸ್ಲಿಂ ಮೂಲಭೂತವಾದಿಗಳು ಹೆಣ್ಣು ಮಕ್ಕಳನ್ನು ಶಿಕ್ಷಣವಂಚಿತರನ್ನಾ ಗಿಸುವ ತಮ್ಮ ಉದ್ದೇಶವನ್ನು ಸಾಧಿಸಲು ತಮ್ಮ ರಹಸ್ಯ ಅಜೆಂಡಾವನ್ನು ಜಾರಿಗೊಳಿಸುತ್ತಿದ್ದಾರೆ. ಇದರ ಭಾಗವಾಗಿಯೇ ಇರಾನ್‌ನ ರಾಜಧಾನಿ ಟೆಹ್ರಾನ್‌ನ ದಕ್ಷಿಣ ಭಾಗದಲ್ಲಿರುವ ಖೋಮ್‌ನಲ್ಲಿನ ಹಲವಾರು ಶಾಲೆಗಳ ಹೆಣ್ಣುಮಕ್ಕಳಿಗೆ ವಿಷಪ್ರಾಶನ ಮಾಡಿಸಲಾಗಿದೆ. ಈ ಮೂಲಕ ಪ್ರದೇಶದ ಶಾಲೆಗಳನ್ನು ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳು ಅಧಿಕವಾಗಿರುವ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಿಸಲು ಮೂಲಭೂತವಾದಿಗಳು ಈ ಷಡ್ಯಂತ್ರ ರೂಪಿಸಿರುವುದು ಖಚಿತವಾಗಿದೆ. ಬಾಲಕಿಯರು ಶಾಲೆಗಳಲ್ಲಿ ಅಸ್ವಸ್ಥರಾಗುತ್ತಿರುವುದರಿಂದ ಸಂಶಯಗೊಂಡಿರುವ ಸ್ಥಳೀಯರು ಸರಕಾರದ ಮೇಲೆ ಒತ್ತಡ ಹೇರಿದ್ದರಿಂದಾಗಿ ಸರಕಾರ ಹೆಣ್ಣುಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇನು? ಎಂಬ ಬಗೆಗೆ ಅಧ್ಯಯನ ನಡೆಸಲು ಮುಂದಾಗಿದೆ.

ಒಟ್ಟಾರೆ ಇರಾನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇಡೀ ವಿಶ್ವವನ್ನೇ ಕಂಗೆಡುವಂತೆ ಮಾಡಿವೆ. ಧರ್ಮ, ಮತ, ಜಾತಿ, ವರ್ಗ, ಲಿಂಗಗಳ ತಾರತಮ್ಯವಿಲ್ಲದೆ ಸಮ ಸಮಾಜದ ಕನಸನ್ನು ವಿಶ್ವ ಕಾಣುತ್ತಿರುವ ಸಂದರ್ಭದಲ್ಲಿ ಹೆಣ್ಣು ಮಕ್ಕಳನ್ನು ಧರ್ಮದ ಹೆಸರಿನಲ್ಲಿ ಶಿಕ್ಷಣದಿಂದ ಆ ಮೂಲಕ ಸಮಾಜದ ಮುಖ್ಯವಾಹಿನಿಯಿಂದ ದೂರವುಳಿಸುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ. ಅಲ್ಲದೆ ತಮ್ಮ ಈ ಕುತ್ಸಿತ ಉದ್ದೇಶವನ್ನು ಸಾಕಾರಗೊಳಿಸಲು ಮುಸ್ಲಿಂ ಮೂಲಭೂತವಾದಿಗಳು ಬಾಲಕಿಯರಿಗೆ ವಿಷವುಣಿಸುವಂಥ ಅತ್ಯಂತ ಪೈಶಾಚಿಕ ಕೃತ್ಯಕ್ಕೆ ಮುಂದಾಗಿರುವುದು ಅತ್ಯಂತ ಘೋರ ಮತ್ತು ಬೀಭತ್ಸ ಬೆಳವಣಿಗೆಯಾಗಿದೆ. ಇರಾನ್‌ ಸರಕಾರ ಇಂತಹ ಮೂಲಭೂತವಾದಿಗಳನ್ನು ಮಟ್ಟಹಾಕುವ ಬದಲಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ನಾಗರಿಕರ ವಿರುದ್ಧವೇ ನಿಷ್ಠುರ ಕ್ರಮ ಕೈಗೊಳ್ಳುತ್ತಿರುವುದು ತೀರಾ ನಾಚಿಕೆಗೇಡು. ಸರಕಾರ ತನ್ನ ಧೋರಣೆಯನ್ನು ಬದಲಾಯಿಸದೇ ಹೋದಲ್ಲಿ ವಿಶ್ವ ಸಮುದಾಯ ಅಲ್ಲಿನ ಪ್ರಜ್ಞಾವಂತ ಅದರಲ್ಲೂ ಹೆಣ್ಣುಮಕ್ಕಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಇಲ್ಲವಾದಲ್ಲಿ ಇರಾನ್‌ ಇನ್ನೊಂದು ಅಫ್ಘಾನಿಸ್ಥಾನವಾಗಿ ಇಡೀ ವಿಶ್ವವನ್ನು ಕಾಡಲಿರುವುದು ನಿಶ್ಚಿತ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.