ಷೇರುಪೇಟೆ ಮಹಾಕುಸಿತ ಆಳುವವರಿಗೆ ಅಗ್ನಿಪರೀಕ್ಷೆ


Team Udayavani, Mar 10, 2020, 6:50 AM IST

ಷೇರುಪೇಟೆ ಮಹಾಕುಸಿತ ಆಳುವವರಿಗೆ ಅಗ್ನಿಪರೀಕ್ಷೆ

ಬಾಂಬೆ ಷೇರು ಮಾರುಕಟ್ಟೆ ದಾಖಲೆ ಕುಸಿತ ಕಂಡು, ಹೂಡಿಕೆದಾರರು ಸುಮಾರು 6 ಲಕ್ಷ ಕೋ. ರೂ. ಕಳೆದುಕೊಂಡಿದ್ದಾರೆ. ಈ ಮಾದರಿ ಕುಸಿತ ಇಡೀ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲ ಮಾಡಿಬಿಡುತ್ತದೆ. ಹಾಗೆಂದು ಈ ಮಹಾಕುಸಿತ ಭಾರತಕ್ಕೆ ಮಾತ್ರ ಸೀಮಿತವಲ್ಲ. ಬಹುತೇಕ ದೇಶಗಳು ಈ ಕುಸಿತವನ್ನು ಅನುಭವಿಸಿವೆ.

ಷೇರು ಪೇಟೆ ಪಾಲಿಗೆ ಸೋಮವಾರ ಕರಾಳ ದಿನ. ನಾಲ್ಕು ವರ್ಷಗಳ ಬಳಿಕ ಬಾಂಬೆ ಷೇರು ಮಾರುಕಟ್ಟೆ ದಾಖಲೆ ಕುಸಿತ ಕಂಡು, ಹೂಡಿಕೆದಾರರು ಸುಮಾರು 6 ಲಕ್ಷ ಕೋ. ರೂ. ಕಳೆದುಕೊಂಡಿದ್ದಾರೆ. ಇಂಥ ಮಹಾ ಕುಸಿತವನ್ನು ರಕ್ತದೋಕುಳಿ, ರಕ್ತಪಾತ ಎಂಬಿತ್ಯಾದಿಯಾಗಿ ವರ್ಣಿಸುವುದುಂಟು. ಷೇರು ವಹಿವಾಟಿನಲ್ಲಿ ಏರುಪೇರು ಇರುವುದು ಸಾಮಾನ್ಯವಾದರೂ ಈ ಮಾದರಿಯ ಕುಸಿತ ಮಾತ್ರ ಇಡೀ ಮಾರುಕಟ್ಟೆಯನ್ನು ಅಲ್ಲೋಲಕಲ್ಲೋಲ ಮಾಡಿ ಬಿಡುತ್ತದೆ. ಹಾಗೆಂದು ಈ ಮಹಾಕುಸಿತ ಭಾರತಕ್ಕೆ ಮಾತ್ರ ಸೀಮಿತವಲ್ಲ. ಬಹುತೇಕ ದೇಶಗಳು ಈ ಕುಸಿತವನ್ನು ಅನುಭವಿಸಿವೆ.
ಕುಸಿತಕ್ಕೆ ಮುಖ್ಯ ಕಾರಣ ಜಗತ್ತನ್ನು ಹೈರಾಣಾಗಿಸಿರುವ ಕೊರೊನಾ ವೈರಸ್‌ ಕಾಟ. ಜಾಗತಿಕವಾಗಿ 1 ಲಕ್ಷಕ್ಕೂ ಅಧಿಕ ಮಂದಿ ಕೊರೊನಾ ವೈರಸ್‌ ಬಾಧಿತರಾಗಿರುವುದು ದೃಢಪಟ್ಟಿದೆ ಹಾಗೂ ಸಾವಿನ ಸಂಖ್ಯೆ 4000 ಸಮೀಪಿಸಿದೆ. ಭಾರತದಲ್ಲೂ 40ಕ್ಕೂ ಹೆಚ್ಚು ಮಂದಿಗೆ ಕೊರೊನಾ ವೈರಸ್‌ ಸೋಂಕು ತಟ್ಟಿರುವುದು ದೃಢಪಟ್ಟಿದೆ. ಕೊರೊನಾದಿಂದಾಗಿ ಪ್ರವಾಸೋದ್ಯಮ, ವಾಣಿಜ್ಯ, ರಫ್ತು ಮತ್ತು ವಾಯುಯಾನ ಕ್ಷೇತ್ರಗಳು ಇನ್ನಿಲ್ಲದ ರೀತಿಯಲ್ಲಿ ಬಾಧಿತವಾಗಿವೆ. ಇದು ಜಾಗತಿಕ ಆರ್ಥಿಕತೆಯ ಮೇಲೆ ಭಾರೀ ಪ್ರತಿಕೂಲ ಪರಿಣಾಮಗಳನ್ನು ಬೀರಿದೆ. ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಪರಿಸ್ಥಿತಿ ಕೈಮೀರುವ ಮೊದಲೇ ಎಚ್ಚೆತ್ತುಕೊಂಡ ಕಾರಣ ತುಸು ನೆಮ್ಮದಿಯಿಂದಿವೆ. ಆದರೆ ಭಾರತದಂಥ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಮಾತ್ರ ಆರ್ಥಿಕ ಕ್ಷೇತ್ರವನ್ನು ನಿಯಂತ್ರಣಕ್ಕೆ ತರಲು ಪರದಾಡುತ್ತಿವೆ.
ಇದರ ಜೊತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ದಿಢೀರ್‌ ಎಂದು ಕುಸಿದಿರುವದು ಕೂಡ ಷೇರುಗಳ ಮೇಲೆ ಪರಿಣಾಮ ಬೀರಿದೆ. ಸೌದಿ ಅರೇಬಿಯ ಮತ್ತು ರಷ್ಯಾ ನಡುವಿನ ತೈಲದರ ಸಮರದ ಪರಿಣಾಮವಾಗಿ ಕಚ್ಚಾತೈಲ ಬೆಲೆ 1991ರ ಮಟ್ಟಕ್ಕೆ ತಲುಪಿದೆ. ಶೇ.85ರಷ್ಟು ತೈಲವನ್ನು ಆಮದುಗೊಳಿಸುತ್ತಿರುವ ನಮಗೆ ಇದು ಶುಭ ಸುದ್ದಿಯೇ ಆಗಿದ್ದರೂ ಅದರ ಜಾಗತಿಕ ಪರಿಣಾಮವನ್ನು ನಾವೂ ಅನುಭವಿಸಬೇಕಾಗಿದೆ. ದೀರ್ಘಾವಧಿಗೆ ಕಚ್ಚಾತೈಲ ಬೆಲೆ ಕುಸಿದರೆ ತೈಲ ಆಮದು ಮಾಡಿಕೊಳ್ಳುವ ದೇಶಗಳು ಅದರ ಭರಪೂರ ಲಾಭ ಎತ್ತಿಕೊಳ್ಳುತ್ತವೆ. ಧಾರಾಳ ತೈಲ ಆಮದು ಮಾಡಿಕೊಂಡು ದಾಸ್ತಾನು ಇಡಲು ಉತ್ತಮ ಅವಕಾಶ. ಆದರೆ ಇದೇ ವೇಳೆ ತೈಲ ಕಂಪೆನಿಗಳು ಬೆಲೆ ಕುಸಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ಕೆಲಸವನ್ನೂ ಮಾಡಬೇಕು.

ಯೆಸ್‌ ಬ್ಯಾಂಕ್‌ ದಿವಾಳಿಯಾಗಿರುವುದು ಕೂಡ ಷೇರು ಮಾರುಕಟ್ಟೆಯ ಕುಸಿತಕ್ಕೆ ಆಂಶಿಕವಾಗಿ ಕಾರಣವಾಗಿದೆ. ಬ್ಯಾಂಕ್‌ಗಳ ಹಣಕಾಸು ಸ್ಥಿರತೆಯ ಕುರಿತಾಗಿ ಹೂಡಿಕೆದಾರರಲ್ಲಿ ಆತಂಕವಿರುವ ಕಾರಣ ಷೇರುಗಳ ಮೇಲೆ ದೊಡ್ಡ ಮಟ್ಟದ ಹೂಡಿಕೆಗಳು ಆಗದೇ ಇರುವುದು ಕುಸಿತಕ್ಕೆ ತಮ್ಮದೇ ಪಾಲು ನೀಡಿವೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಷೇರು ಮಾರುಕಟ್ಟೆಯ ಕುಸಿತವನ್ನು ತಡೆಯುವ ಮಂತ್ರ ದಂಡ ಸರಕಾರದ ಕೈಯಲ್ಲಿ ಇಲ್ಲ ಎನ್ನುವುದು ನಿಜ. ಅಲ್ಲದೆ ಕುಸಿತ ಮತ್ತು ಏರಿಕೆಗಳು ಈ ವ್ಯವಹಾರದ ಅವಿಭಾಜ್ಯ ಅಂಶಗಳು. ಆದರೆ ಇಂಥ ಪರಿಸ್ಥಿತಿ ನಿರ್ಮಾಣವಾದಾಗೂ ಹೂಡಿಕೆದಾರರ ಆತ್ಮವಿಶ್ವಾಸ ವರ್ಧಿಸುವಂಥ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂದರ್ಭವನ್ನು ಹೇಗೆ ನಿಭಾಯಿಸುತ್ತದೆ ಎನ್ನುವುದು ಆಳುವವರ ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಾಮರ್ಥ್ಯವನ್ನು ನಿರೂಪಿಸುತ್ತದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.