ಪಾರದರ್ಶಕವಾಗಿರಲಿ ಚುನಾವಣ ಆಯುಕ್ತರ ನೇಮಕ


Team Udayavani, Nov 25, 2022, 6:00 AM IST

ಪಾರದರ್ಶಕವಾಗಿರಲಿ ಚುನಾವಣ ಆಯುಕ್ತರ ನೇಮಕ

ಕೇಂದ್ರ ಚುನಾವಣ ಆಯೋಗದ ಮುಖ್ಯ ಆಯುಕ್ತರು ಮತ್ತು ಆಯುಕ್ತರ ನೇಮಕ ಸಂಬಂಧ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠದಲ್ಲಿ ವಿಚಾರಣೆ ನಡೆಸಿದ್ದು, ಇದರಲ್ಲಿ ಹಲವಾರು ವಿಚಾರಗಳು ಪ್ರಸ್ತಾವ ವಾಗಿವೆ. ಇದರಲ್ಲಿ ಪ್ರಮುಖವಾದದ್ದು, ಇವರ ಆಯ್ಕೆ ಪ್ರಕ್ರಿಯೆ. ಸಂವಿಧಾನದಲ್ಲಿ ಇದುವರೆಗೆ ಚುನಾವಣ ಆಯುಕ್ತರನ್ನು ಹೇಗೆ ನೇಮಕ ಮಾಡಬೇಕು ಎಂಬುದನ್ನು ಪ್ರಸ್ತಾವಿಸಿಲ್ಲ. ಹೀಗಾಗಿ ಸ್ವಾತಂತ್ರಾéನಂತರದಲ್ಲಿ ಎಲ್ಲ ಸರಕಾರಗಳು ತಮಗೆ ಬೇಕಾದ ಹಾಗೆ ಚುನಾವಣ ಆಯುಕ್ತರನ್ನು ನೇಮಕ ಮಾಡಿಕೊಂಡು ಬಂದಿವೆ ಎಂಬ ಅಭಿಪ್ರಾಯಗಳೂ ವಿಚಾರಣೆ ವೇಳೆ ವ್ಯಕ್ತವಾಗಿವೆ.

ಕೇಂದ್ರ ಚುನಾವಣ ಆಯೋಗವು ಒಂದು ಸ್ವಾಯತ್ತ, ಸಾಂವಿಧಾನಿಕ ಸಂಸ್ಥೆ. ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ನಡೆಸುವ ಹೊಣೆಗಾರಿಕೆಯನ್ನು ಹೊಂದಿರುವ ಇದು, ಎಲ್ಲರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗುತ್ತದೆ. ಇಂಥ ಸಂಸ್ಥೆಯು ಆಳುವ ಸರಕಾರದ ಪರವಾಗಿದೆ ಎಂಬ ಅಭಿಪ್ರಾಯ ಬಂದರೆ ಜನರಲ್ಲಿ ಇಡೀ ವ್ಯವಸ್ಥೆಯ ಮೇಲಿನ ವಿಶ್ವಾಸವೇ ಹೋಗಬಹುದು. ಇಂಥ ಸಂಸ್ಥೆಗಳು ಆದಷ್ಟು ಸ್ವತಂತ್ರವಾಗಿರಬೇಕು ಎಂಬುದು ಸುಪ್ರೀಂ ಕೋರ್ಟ್‌ನ  ನಿಲುವು ಕೂಡ ಆಗಿದೆ.

ಈಗ ನಡೆಯುತ್ತಿರುವ ವಿಚಾರಣೆಯ ತಿರುಳು ಕೂಡ ಅದೇ ಆಗಿದೆ. ಅಂದರೆ ಚುನಾವಣ ಆಯುಕ್ತರ ನೇಮಕ ವ್ಯವಸ್ಥೆ ಕುರಿತಂತೆ ಸುಪ್ರೀಂ ಕೋರ್ಟ್‌ ಪರಿಶೀಲನೆ ನಡೆಸುತ್ತಿದೆ. ಸಿಬಿಐ, ಸಿವಿಸಿ ಸಹಿತ ಇತರ ಸಾಂವಿಧಾನಿಕ ಸಂಸ್ಥೆಗಳ ಮುಖ್ಯಸ್ಥರನ್ನು ಪ್ರಧಾನಿ, ವಿಪಕ್ಷ ಅಥವಾ ವಿಪಕ್ಷಗಳಲ್ಲಿ ಅತೀ ಹೆಚ್ಚು ಸ್ಥಾನ ಪಡೆದ ಪಕ್ಷದ ನಾಯಕ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ. ಅದೇ ರೀತಿ ಚುನಾವಣ ಆಯೋಗದ ಆಯುಕ್ತರ ನೇಮಕಕ್ಕೆ ಇಂಥ ಒಂದು ವ್ಯವಸ್ಥಿತ ಸಮಿತಿ ಏಕಿಲ್ಲ ಎಂಬ ಬಗ್ಗೆ ಪ್ರಶ್ನಿಸಲಾಗಿದೆ.  ಸದ್ಯ ಸುಪ್ರೀಂ ಕೋರ್ಟ್‌ ಕೂಡ ಕೇಂದ್ರ ಸರಕಾರಕ್ಕೆ ಇಂಥ ಪ್ರಶ್ನೆ ಕೇಳಿದೆ. ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಿ, ಈ ಮೂಲಕ ಏಕೆ ಆಯೋಗಕ್ಕೆ ಆಯುಕ್ತರನ್ನು ನೇಮಕ ಮಾಡಬಾರದು ಎಂದು ಪ್ರಶ್ನಿಸಿದೆ. ಇದಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿಲ್ಲ.

ಇತಿಹಾಸಕ್ಕೆ ಹೋದರೆ ಯಾವುದೇ ಪಕ್ಷಗಳೂ ಚುನಾವಣೆ ಆಯುಕ್ತರ ವಿಚಾರದಲ್ಲಿ ಪಾರದರ್ಶಕವಾಗಿ ನಡೆದುಕೊಂಡಿಲ್ಲ. 6 ವರ್ಷದ ಅಧಿಕಾರಾವಧಿ ಪೂರೈಸಿದ ಕೊನೆಯ ಆಯುಕ್ತ ಟಿ.ಎನ್‌.ಶೇಷನ್‌. ಅಂದರೆ 1996ರಿಂದ ಇಲ್ಲಿವರೆಗೆ ಬಹುತೇಕ ಆಯುಕ್ತರ ಅವಧಿ ಕೇವಲ 2 ವರ್ಷದ ಆಸುಪಾಸಲ್ಲಿದೆ. ಅಂದರೆ 1950ರಿಂದ 1996ರ ವರೆಗೆ ದೇಶದಲ್ಲಿ 10 ಸಿಇಸಿಗಳು ಇದ್ದರೆ 1996ರಿಂದ ಇಲ್ಲಿವರೆಗೆ 15 ಮಂದಿ ಸಿಇಸಿಗಳನ್ನು ನೇಮಕ ಮಾಡಲಾಗಿದೆ. ಯುಪಿಎ ಸರಕಾರದ 10 ವರ್ಷಅವಧಿಯಲ್ಲಿ 6, ಎನ್‌ಡಿಎ ಅವಧಿಯಲ್ಲಿ 8 ಮಂದಿ ಸಿಇಸಿಗಳ ನೇಮಕವಾಗಿದೆ. ಈಗ ಪ್ರತಿವಾದಿ ನ್ಯಾಯವಾದಿಗಳು ಕೇಳುತ್ತಿರುವ ಪ್ರಶ್ನೆಯೂ ಇದೇ ಆಗಿದೆ.

6 ವರ್ಷಗಳ ಪೂರ್ಣಾವಧಿ ಪೂರೈಸುವಂಥವರನ್ನು ಏಕೆ ಸಿಇಸಿಗೆ ನೇಮಕ ಮಾಡುತ್ತಿಲ್ಲ? ಅಲ್ಪ ಅವಧಿಗೆ ಏಕೆ ಸಿಇಸಿಗಳನ್ನು ನೇಮಕ ಮಾಡಲಾಗುತ್ತಿದೆ? ಈ ಪ್ರಶ್ನೆಗೆ ಸರಿಯಾದ ಉತ್ತರ ಸಿಗುತ್ತಿಲ್ಲ. ಕೇಂದ್ರದ ಪ್ರಕಾರ, ಅಧಿಕಾರಿಗಳ ಮಟ್ಟದಲ್ಲಿ ಹಿರಿಯರನ್ನು ನೋಡಿ ಈ ಸ್ಥಾನಕ್ಕೆ ಆರಿಸುತ್ತಿದ್ದೇವೆ. ಹೀಗಾಗಿ ಅರ್ಹರು ಸಿಗುತ್ತಿಲ್ಲ ಎಂದು ಹೇಳಿದೆ. ಏನೇ ಆಗಲಿ, ಚುನಾವಣ ಆಯುಕ್ತರ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿ, ನಿಷ್ಪಕ್ಷಪಾತವಾಗಿರಬೇಕು ಎಂಬುದು ಎಲ್ಲರ ಅಭಿಪ್ರಾಯ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.